Category: ಚಿಕ್ಕಮಗಳೂರು ನಗರ

  • ದೇವಾಲಯಗಳಲ್ಲಿ ಕಳವು ವ್ಯಕ್ತಿ ಸೆರೆ: ೧ ಲಕ್ಷ ರೂ.ವಶ

    ದೇವಾಲಯಗಳಲ್ಲಿ ಕಳವು ವ್ಯಕ್ತಿ ಸೆರೆ: ೧ ಲಕ್ಷ ರೂ.ವಶ

    ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂಟು ಪ್ರಕರಣಗಳಲ್ಲಿಆರೋಪಿಯನ್ನು ಬಂಧಿಸಿರುವ ಪೊಲೀಸರು ಒಂದು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ

    ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಹೆಚ್.ಎಂ.ಶೈಲೇಂದ್ರ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ವಿ.ಎಸ್.ಹಾಲಮೂರ್ತಿರಾವ್ ಇವರುಗಳ ಮಾರ್ಗದರ್ಶನದಲ್ಲಿ ಕಡೂರು ವೃತ್ತನಿರೀಕ್ಷಕ ರಫೀಕ್ ನೇತೃತ್ವದಲ್ಲಿ ಜಿಲ್ಲಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ತಂಡವನ್ನು ರಚಿಸಲಾಗಿತ್ತು.

    ಕಾರ್ಯಪ್ರವೃತ್ತವಾದ ತಂಡವು ವಿವಿಧ ಆಯಾಮಗಳಿಂದ ಮಾಹಿತಿ ಕಲೆ ಹಾಕಿ ವೈಜ್ಞಾನಿಕ ತನಿಖೆ ನಡೆಸಿ ಆರೋಪಿ ಬಳ್ಳಾರಿ ನಗರ ಈಗ ಚಿಕ್ಕಮಗಳೂರು ನಗರದ ಟಿಪ್ಪುನಗರದಲ್ಲಿ ವಾಸವಾಗಿದ್ದ ಮೊಹಮ್ಮದ್ ಸಾಂ ಸದ್ದಾಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈತನ ಮೇಲೆ ಈ ಹಿಂದೆ ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ಕಂಡುಬಂದಿರುತ್ತದೆ.

    ಈ ವ್ಯಕ್ತಿಯ ತನ್ನ ಸಹಚರನೊಂದಿಗೆ ಕಡೂರು, ಯಗಟಿ, ಬೀರೂರು, ಸಖರಾಯಪಟ್ಟಣ, ಅಜ್ಜಂಪುರ, ಚಿಕ್ಕಮಗಳೂರು ನಗರ, ಬಸವನಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಲವಾರು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್, ಕಳ್ಳತನ ಮಾಡಿದ್ದ ಕಾಣಿಕೆ ಹುಂಡಿ ಮತ್ತು ವಿವಿಧ ಮುಖಬೆಲೆಯ ಚಿಲ್ಲರೆ ಹಣವನ್ನು ವಶಕ್ಕೆ ಪಡೆಯಲಾಗಿದೆ.

    ಇವುಗಳ ಒಟ್ಟು ಮೌಲ್ಯ ಸುಮಾರು ೧ ಲಕ್ಷ, ರೂ.ಗಳಾಗಿದೆ. ಈತನ ಬಂಧನದಿಂದ ಕಡೂರು ಠಾಣೆಯಲ್ಲಿ ೧ ಕಳ್ಳತನ ಪ್ರಕರಣ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿದ ಪೊಲೀಸ್ ಠಾಣೆಗ ಲ್ಲಿ ದಾಖಲಾಗಿದ್ದ ೭ ಪ್ರಕರಣಗಳು ಸೇರಿದಂತೆ ಒಟ್ಟು ೮ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.

    ಆರೋಪಿ ಪತ್ತೆಕಾರ್ಯದಲ್ಲಿ ಕಡೂರು ಪೊಲೀಸ್ ಠಾಣೆಯ ಪಿಎಸ್‌ಐ ಸಿ.ಸಿ.ಪವನ್‌ಕುಮಾರ್, ಡಿ.ಹೆಚ್.ಧನಂಜಯ್, ಲೀಲಾವತಿ ಮತ್ತು ಸಿಬ್ಬಂದಿಗಳಾದ, ಕುಚೇಲ, ಮಧುಕುಮಾರ್, ಬಿ.ಸಿ. ಹರೀಶ್, ಧನಪಾಲ್ ನಾಯ್ಕ, ಸ್ವಾಮಿ, ಪರಮೇಶ್, ರಬ್ಬಾನಿ ಮತ್ತು ನಯಾಜ್ ತಾಂತ್ರಿಕ ವಿಭಾಗದ ಡಿ ಪಿ ಓ. ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿರುತ್ತಾರೆ.

    ಪ್ರಕರಣಗಳಲ್ಲಿ ಯಶಸ್ವಿಯಾಗಿ ಆರೋಪಿಯನ್ನು ಪತ್ತೆ ಮಾಡಿ ಕದ್ದ ಮಾಲನ್ನು ವಶಕ್ಕೆ ಪಡೆದು ಜಿಲ್ಲೆಯ ಒಟ್ಟು ೦೮ ಪ್ರಕರಣಗಳನ್ನು ಭೇದಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಶ್ರಮಿಸಿದ ಅಪರಾಧ ಪತ್ತೆ ತಂಡದ ಅಧಿಕಾರಿ ಸಿಬ್ಬಂದಿಯವರನ್ನು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಚಿಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.

    Man arrested for stealing from temples: Rs 1 lakh seized

  • ಕಳ್ಳತನದ ಪ್ರಕರಣ ಆರೋಪಿ ಬಂಧನ-೮.೫೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

    ಕಳ್ಳತನದ ಪ್ರಕರಣ ಆರೋಪಿ ಬಂಧನ-೮.೫೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

    ಚಿಕ್ಕಮಗಳೂರು: ಕಳ್ಳತನದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ೮.೫೦ ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

    ನಗರದ ಅಯ್ಯಪ್ಪನಗರದ ೧ನೇ ತಿರುವಿನಲ್ಲಿರುವ ಹಸ್ಟೈನ್ ಅಹಮದ್ ಅವರ ಮನೆಯಲ್ಲಿ ಮಾರ್ಚ್ ೨ರಂದು ಸುಮಾರು ೬೭ ಗ್ರಾಂ ಚಿನ್ನದ ಒಡವೆಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಕಳ್ಳರನ್ನು ಪತ್ತೆಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    ಆರೋಪಿಯ ಶೀಘ್ರ ಪತ್ತೆಗಾಗಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಡಾ.ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಶೈಲೇಂದ್ರ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ಉಪನಿರೀಕ್ಷ ಬಾಬುದ್ದೀನ್, ಸಿಬ್ಬಂದಿಗಳಾದ ದಿನೇಶ್, ನಂಜಪ್ಪ,ಪ್ರದೀಪ. ನವೀನ, ಮಂಜುನಾಥ್‌ನಾಯ್ಕ, ಮಹಮ್ಮದ್ ರಫೀಕ್ ಘಾಟಿ, ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.

    ಕಳವು ಆರೋಪಿತ ಕಡೂರು ಪಟ್ಟಣದ ತ್ಯಾಗರಾಜನಗವರದ ಕಾರ್ಪೆಂಟರ್ ವಿರುಪಾಕ್ಷನನ್ನು ಪ್ರಕರಣ ದಾಖಲಾದ ೨೪ ಗಂಟೆಯೊಳಗೆ ಆಕದ್ದಮಾಲು ಪತ್ತೆ ಮಾಡಿ ಆತನನ್ನು ಬಂಧಿಸಿ ಚಿನ್ನ ಮತ್ತು ವಜ್ರ ಖಚಿತ ೩ ಬಳೆಗಳು,ಒಂದು ಚಿನ್ನದ ಉಂಗುರ,ಒಂದು ಚಿನ್ನದ ಸರ ಮತ್ತು ವಜ್ರದ ಲಾಕೆಟ್ ಒಟ್ಟು ೬೩ ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ ೮.೫೦ ಲಕ್ಷ ರೂ.ಗಳಾಗಿರುತ್ತದೆ. ಕಳವು ವ್ಯಕ್ತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Accused in theft case arrested – gold ornaments worth Rs 8.50 lakh seized

  • ಎಂ.ಕೆ.ಪ್ರಾಣೇಶ್-ಗಾಯತ್ರಿ ಶಾಂತೇಗೌಡರ ಚುನಾವಣಾ ಅರ್ಜಿ ಮುಂದೂಡಿಕೆ

    ಎಂ.ಕೆ.ಪ್ರಾಣೇಶ್-ಗಾಯತ್ರಿ ಶಾಂತೇಗೌಡರ ಚುನಾವಣಾ ಅರ್ಜಿ ಮುಂದೂಡಿಕೆ

    ಚಿಕ್ಕಮಗಳೂರು  ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮತ್ತು ಗಾಯತ್ರಿ ಶಾಂತೇಗೌಡರ ನಡುವಿನ ಚುನಾವಣಾ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಹಿಂದಿನ ಆದೇಶದಂತೆ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆದ ಮತ ಮರುಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನ್ಯಾಯಾಲಯಕ್ಕೆ ಸಲ್ಲಿಸಿದರು.

    ಈ ವೇಳೆ ಸುಪ್ರೀಂಕೋರ್ಟ್, ಪ್ರಕರಣದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿಯ 12 ಮಂದಿ ನಾಮನಿರ್ದೇಶನ ಸದಸ್ಯರು ಮತಗಳನ್ನು ಪರಿಗಣಿಸುವ ಬಗ್ಗೆ ಆಯೋಗದಿಂದ ಮಾಹಿತಿ ಕೇಳಿತು. ಬಳಿಕ ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 25ರಂದು ವಿಚಾರಣೆ ಮುಂದೂವರಿಸುವುದಾಗಿ ಪೀಠ ಹೇಳಿದೆ.

    2021ರ ಡಿಸೆಂಬರ್ 10ರಂದು ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆದಿತ್ತು. ಆರು ಮತಗಳಿಂದ ಬಿಜೆಪಿ. ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಗೆಲುವು ಸಾಧಿಸಿದ್ದರು. ಮತ ಎಣಿಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮರು ಮತ ಎಣಿಕೆಗೆ ಮನವಿ ಸಲ್ಲಿಸಿದ್ದರು. ಆದರೆ, ಮರು ಮತ ಎಣಿಕೆಗೆ ಅವಕಾಶ ನೀಡದೆ ಫಲಿತಾಂಶ ಘೋಷಣೆ ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ಗಾಯತ್ರಿ ಶಾಂತೇಗೌಡ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.

    ಈ ವೇಳೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಮನಿರ್ದೇಶನ ಸದಸ್ಯರ ಮತಗಳನ್ನು ಹೊರತುಪಡಿಸಿ ಮರು ಮತ ಎಣಿಕೆ ನಡೆಸುವಂತೆ ಆದೇಶ ನೀಡಿತ್ತು. ಮಾರ್ಚ್ 4ರ ಒಳಗೆ ಮರು ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅಂತೆಯೇ ಇಂದು ಮತ ಎಣಿಕೆ ನಡೆಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ.

    M.K. Pranesh-Gayatri Shantegowda’s election petition postponed

  • ಎಸ್‌ಸಿಎಸ್‌ಟಿ/ಟಿಎಸ್‌ಪಿ ಹಣ ದಲಿತರ ಅಭಿವೃದ್ಧಿಗೆ ಬಳಸುವಂತೆ ಆಗ್ರಹಿಸಿ ಪ್ರತಿಭಟನೆ

    ಎಸ್‌ಸಿಎಸ್‌ಟಿ/ಟಿಎಸ್‌ಪಿ ಹಣ ದಲಿತರ ಅಭಿವೃದ್ಧಿಗೆ ಬಳಸುವಂತೆ ಆಗ್ರಹಿಸಿ ಪ್ರತಿಭಟನೆ

    ಚಿಕ್ಕಮಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಬಳಸಲು ಹಿಂದಿರುಗಿಸಬೇಕೆಂದು ಆಗ್ರಹಿಸಿ ಇಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.

    ಇಂದು ಬೆಳಗ್ಗೆ ನಗರದ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ೨೦೧೩-೧೪ ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಕಾಯಿದೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿದ ಯೋಜನೆ ಎಂದರು.

    ಅಭಿವೃದ್ಧಿಯ ಅಂತರ ಅಂದರೆ ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎಂದು ವ್ಯಾಖ್ಯಾನಿಸಲಾಗಿದ್ದು, ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ ಎಂದು ಹೇಳಿದ್ದಾರೆ.

    ೨೦೧೫ ರ ಮಾನವ ಅಭಿವೃದ್ಧಿ ವರದಿ ಪ್ರಕಾರ ಇತರ ಸಮುದಾಯಗಳಿಗೆ ಹೋಲಿಸಿದರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅಭಿವೃದ್ಧಿಗಿಂತಲು ದಲಿತರು ಕಡಿಮೆ ಅಭಿವೃದ್ಧಿ ಹೊಂದಿರುವುದು, ಹೀಗಿರುವಾಗ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅಸಮಾನತೆಯ ಅಂತರವನ್ನು ಕಡಿಮೆ ಮಾಡುವ ಯೋಜನೆಗಳಲ್ಲಿ ವಿನಿಯೋಗಿಸಬೇಕೆಂದು ಒತ್ತಾಯಿಸಿದರು.

    ರಾಜ್ಯಸರ್ಕಾರ ೨೫ ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ, ೧೫ ಸಾವಿರ ಕೋಟಿಯನ್ನು ಅನ್ಯ ಉದ್ದೇಶಕ್ಕೆ ಬಳಸಿರುವುದು ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನು ಸರ್ಕಾರ ಮಾಡಿದೆ ಎಂದು ದೂರಿದರು.

    ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡಿರುವುದು ದಲಿತ ಸಮುದಾಯಗಳಿಗೆ ಬಗೆದ ಮಹಾ ದ್ರೋಹ ಎಂದು ದೂರಿದ ಅವರು, ಸರ್ಕಾರದ ಈ ನೀತಿಯನ್ನು ಖಂಡಿಸಿದ್ದಾರೆ.

    ಕೂಡಲೇ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಮೀಸಲಿಟ್ಟು, ದಲಿತರ ಅಭಿವೃದ್ಧಿಗೆ ಬಳಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಮರ್ಲೆ ಅಣ್ಣಯ್ಯ, ರಘು, ಕೃಷ್ಣಮೂರ್ತಿ, ಪುಟ್ಟಸ್ವಾಮಿ, ವಿರೂಪಾಕ್ಷ, ಮಂಜೇಗೌಡ ಮತ್ತಿತರರು ಭಾಗವಹಿಸಿದ್ದರು.

    Protest demanding SCST/TSP funds be used for Dalit development

  • ನೆಲ್ಲೂರು ಮಠದ ವಿವಾದ ಸ್ಥಳದ ಕಟ್ಟಡ ತೆರವು – ಬಿಗುವಿನ ವಾತಾವರಣ

    ನೆಲ್ಲೂರು ಮಠದ ವಿವಾದ ಸ್ಥಳದ ಕಟ್ಟಡ ತೆರವು – ಬಿಗುವಿನ ವಾತಾವರಣ

    ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಜಾಗಕ್ಕೆ ನೆಲ್ಲೂರು ಮಠದ ಮನೆ ಮತ್ತು ಜಾಮಿಯಾ ಮಸೀದಿ ನಡುವೆ ಹಗ್ಗಜಗ್ಗಾಟ ನಡೆದಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾಗದ ವಿಚಾರವಾಗಿ ಜಾಮಿಯಾ ಮಸೀದಿ ಮತ್ತು ನೆಲ್ಲೂ ಮಠದ ನಡುವೆ ಕಳೆದ ಎರಡು ದಶಕಗಳಿಂದ ಕಾನೂನು ಹೋರಾಟ ನಡೆಯುತ್ತಿದೆ.

    ಆದರೆ ಇದರ‌ ನಡುವೆ ಹೈಕೋರ್ಟ್ ನಲ್ಲಿ ತಮ್ಮ ಪರವಾಗಿ ಆದೇಶ ಬಂದಿದೆ ಎಂದು ಹೇಳಿಕೊಂಡು ಬೆಳ್ಳಂಬೆಳಗ್ಗೆ ಜಾಮಿಯಾ ಮಸೀದಿ ಕಮಿಟಿ ಸುಮಾರು 200 ಹೆಚ್ಚು ಯುವಕರೊಂದಿಗೆ ಬಂದು ಏಕಾಏಕಿ ವಿವಾದಿತ ಮಠದ ಮನೆಯ ಜಾಗದಲ್ಲಿದ್ದ ಮನೆ ಮತ್ತು ಅಂಗಡಿಯನ್ನ ನೆಲಸಮ ಮಾಡಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಆಕ್ರೊಶಕ್ಕೆ ಕಾರಣವಾಗಿದೆ‌.

    ವಿವಾದಿತ ಜಾಗ ಸೇರಿದಂತೆ‌ ನಗರದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತೆಯನ್ನ‌ ಕೈಗೊಂಡಿದ್ದು. ಎಸ್ಪಿ ವಿಕ್ರಮ್ ಅಮಟೆ ನೆಲೂರು ಮಠದ ಮನೆಯವರು, ಹಿಂದೂಪರ ಸಂಘಟನೆಗಳ ಮುಖಂಡರು, ಬಿಜೆಪಿ ಮುಖಂಡರು ಹಾಗೂ ಜಾಮಿಯಾ ಮಸೀದಿ‌ ಕಮಿಟಿಯೊಂದಿಗೆ‌ ಸುಧೀರ್ಘ ಸಭೆ ನಡೆಸಿ ಎರಡೂ ಕಡೆಯವರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸರ ಅನುಮತಿ, ನಗರಸಭೆಯ ಅನುಮತಿಯನ್ನೂ ಪಡೆದುಕೊಳ್ಳದೆ ತೆರವು ಕಾರ್ಯಾಚರಣೆಗೆ ಮುಂದಗಿದ್ದಕ್ಕೆ ಜಾಮಿಯಾ ಮಸೀದಿ ಕಮಿಟಿಯವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಜಾಮಿಯಾ‌ ಮಸೀದಿಯ ಆತುರದ ನಿರ್ಧಾರ ಬಿಜೆಪಿ, ಹಿಂದೂಪರ ಸಂಘಟನೆಗಳಷ್ಟೇ ಅಲ್ಲದೆ ಪೊಲೀಸ್ ಇಲಾಖೆಯ ಕೆಂಗಣ್ಣಿಗೂ ಗುರಿಯಾಗಿದೆ‌. ಸದ್ಯ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ 5 KSRP ತುಕಡಿ ನಿಯೋಜನೆ ಮಾಡಲಾಗಿದ್ದು. ಮಠದ ಕುಟುಂಬಸ್ಥರು ,ಹಿಂದೂ ಸಂಘಟನೆ, ಜಾಮಿಯಾ ಕಮಿಟಿ ,ವಕ್ಫ್ ಅಧಿಕಾರಿಗಳ ಜೊತೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮ್ಟೆ ಸಭೆ ಮಾಡಿ ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.

    ಎರಡು ದಶಕಗಳಿಂದ ನೆಲ್ಲೂರು ಮಠ ಹಾಗೂ ಜಾಮಿಯಾ ಮಸೀದಿ ನಡುವೆ ವಿವಾದಕ್ಕೆ ಕಾರಣಾವಾಗಿದ್ದ ಜಾಗ ಇಂದು ಅಕ್ಷರಶಃ ರಣಭೂಮಿಯಾಗಿ ಮಾರ್ಪಟ್ಟಿದೆ. ಪೊಲೀಸರ ಜಾಣ್ಮೆ ಮತ್ತು ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಮಹಾ ದುರಂತವೊಂದು ತಪ್ಪಿದಂತಾಗಿದ್ದು, ನಗರದಾದ್ಯಂತ ಖಾಕಿ ಹದ್ದಿನ ಕಣ್ಣಿಟ್ಟಿದ್ರೂ ಕೂಡಾ ಯಾವ ಸಮಯದಲ್ಲಿ ಏನಾಗುತ್ತೆ ಅನ್ನೋದೆ ಗೊತ್ತಾಗದಂತಾಗಿದೆ. ಕೋಮುಸೂಕ್ಷ್ಮ ಜಿಲ್ಲೆ ಕಾಫಿನಾಡು ಬೂದಿ ಮುಚ್ಚಿದ ಕೆಂಡದಂತಿದೆ.

    Nellore Mutt controversial site building evacuated

  • ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

    ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

    ಕೊಟ್ಟಿಗೆಹಾರ : ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಬಂಧಿಸಲಾಗಿದೆ.
    ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ, ಇವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕರು, ಮೂಡಿಗೆರೆ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಜೀರ್ ಅಹ್ಮದ್ ಅಲಿಯಾಸ್ ಶೇಕ್ ಅಬ್ದುಲ್ಲ ಬಿನ್ ಲೇಟ್ ಅಲಿಜಾನ್ (27), ಜೆಎಂ ರಸ್ತೆ, ಮೂಡಿಗೆರೆ ಎಂಬುವವನು ತನ್ನ ವ್ಯಾಗನಾರ್ ಕಾರು (ನಂ. ಕೆಎ 19 ಎನ್ 5049) ನಲ್ಲಿ 1.975 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.
    ಆರೋಪಿಯನ್ನು ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕರಾದ ಶೇಖರ್ ಎಂ.ಆರ್, ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಸಿಬ್ಬಂದಿಗಳಾದ ರಮೇಶ್ ತುಳಜಣ್ಣನವರ್, ಶಂಕರ ಗುರವ ಹಾಗೂ ವಾಹನ ಚಾಲಕರಾದ ಪ್ರವೀಣ್ ಅವರು ಭಾಗವಹಿಸಿದ್ದರು. ಪ್ರಕರಣವನ್ನು ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಮೂಡಿಗೆರೆ ಉಪ ವಿಭಾಗ ಇವರು ದಾಖಲಿಸಿದ್ದಾರೆ.
    Illegal marijuana trafficking – Youth arrested in Mudigere
  • ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪಂಗುನಿ ಉತ್ತಿರ ಜಾತ್ರೆ

    ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪಂಗುನಿ ಉತ್ತಿರ ಜಾತ್ರೆ

    ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕುಮರಗಿರಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಏ. 9ರಿಂದ 11ರವರೆಗೆ ಪಂಗುನಿ ಉತ್ತಿರ ಜಾತ್ರೆ ಹಾಗೂ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ್ ಕುಮಾರ್ ತಿಳಿಸಿದರು‌.

    ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 9ರಂದು ಬೆಳಗ್ಗೆ 6ಗಂಟೆಯಿಂದ 7.30ರವರೆಗೆ ಧ್ವಜಾರೋಹಣ ಹಾಗೂ ಕಂಕಣಧಾರಣೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

    ಏ. 10ರಂದು ಬೆಳಗ್ಗೆ 9ಗಂಟೆಯಿಂದ 10.30ರವರೆಗೆ ಶ್ರೀಅವರಿಗೆ ಅಭಿಷೇಕ, ಅಲಂಕಾರ ಹಾಗೂ ಬೆಳಗ್ಗೆ 10.30ಕ್ಕೆ ಶ್ರೀಸ್ವಾಮಿಯವರ ಉತ್ಸವ ಮೂರ್ತಿಯು ದೇವಾಲಯದಿಂದ ಹೊರಟು ಮಲ್ಲೇನಹಳ್ಳಿ, ಬಾವಿಕಟ್ಟೆ, ಹೆಬ್ಬಳ್ಳಿ, ಮಾವಿನಹಳ್ಳ, ಅರಿಶಿನಗುಪ್ಪೆ, ದಾಸರಹಳ್ಳಿ, ಕೈಮರದಿಂದ ಅತ್ತಿಗಿರಿ ತಲುಪಿ ಪುನಃ ಕಂಬಿಹಳ್ಳ, ಶಾಂತಿಪುರ, ಕಬ್ಬಿಣ ಸೇತುವೆ, ಹೊಸಪೇಟೆ, ಗುಡ್ಡೇನಹಳ್ಳಿ, ಅರವಿಂದ ನಗರ, ನೀರುಗುಂಡಿ, ಎಮ್ಮೇಖಾನ್, ಭಕ್ತರಹಳ್ಳಿಯ ಮೂಲಕ ಸ್ವಾಮಿಯ ಸನ್ನಿಧಿ ತಲುಪಲಿದೆ ಎಂದು ಮಾಹಿತಿ ನೀಡಿದರು.

    ಏ. 11ರಂದು ಉತ್ತಿರಾ ನಕ್ಷತ್ರ ಶುಭಯೋಗ ಕೂಡಿದ ಶುಭದಿನದಲ್ಲಿ ಬೆಳಗ್ಗೆ 6ಗಂಟೆಯಿಂದ ಶ್ರೀಯಎಂದರು ಅಭಿಷೇಕ, ಅಲಂಕಾರದೊಂದಿಗೆ ಮಹಾಮಂಗಳಾರತಿ ನಡೆಯಲಿದೆ. ಬಳಿಕ ಪಂಗುನಿ ಉತ್ತಿರ ಜಾತ್ರೆಯ ಕಾವಡಿ ಸಮರ್ಪಣೆ ನಡೆಯಲಿದೆ. ಇದಾದನಂತರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಹಾಗುಇ ವಳ್ಳಿ ದೇವಯಾನೆಯರ ಕಲ್ಯಾಣೋತ್ಸವ ನಡೆಯಲಿದೆ ಎಂದರು.

    ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 12 ಗಂಟೆಗೆ ಸರಳ ಸಾಮೂಹಿಕ ಕಾರ್ಯಕ್ರಮ ನಡೆಯಲಿದೆ. ಇಲ್ಲಿ ಹತ್ತಕ್ಕೂ ಹೆಚ್ಚು ಜೋಡಿಗಳು ನವ ಜೀವನಕ್ಕೆ ಕಾಲಿಡಲಿದ್ದಾರೆ. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವವರು 15 ದಿನಗಳ ಮೊದಲೇ ಹೆಸರು ನೋಂದಣೆ ಮಾಡಿಕೊಳ್ಳಬೇಕು. ವರನಿಗೆ ಕಡ್ಡಾಯವಾಗಿ 21 ವರ್ಷ ಹಾಗೂ ಮಧುವಿಗೆ 18 ವರ್ಷ ತುಂಬಿರಬೇಕು. ಮಧುವಿಗೆ ತಾಳಿ, ಕಾಲುಂಗುರ ಬಟ್ಟೆ ಹಾಗೂ ವರನಿಗೆ ಬಟ್ಟೆಯನ್ನು ಉಚಿತವಾಗಿ ನೀಡಲಾಗುವುದು. ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ವಿವರಿಸಿದರು.

    ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಸಿಪಿಐ ರಾಜ್ಯ ಮಂಡಳಿ ಸದಸ್ಯ ಎಚ್.ಎಂ.ರೇಣುಕಾರಾಧ್ಯ, ಮಲ್ಲೇನಹಳ್ಳಿ ಗ್ರಾಪಂ ಅಧ್ಯಕ್ಷೆ ಲಲಿತಾ ಲೋಕೇಶ್, ಉಪಾಧ್ಯಕ್ಷೆ ಕಾವ್ಯ ಮೋಹನ್ ಕುಮಾರ್ ಉಪಸ್ಥಿತರಿರಲಿದ್ದಾರೆ ಎಂದರು.

    ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ವಿ. ಗುಣಶೇಖರ್, ಉಪಾಧ್ಯಕ್ಷರಾದ ಎ.ಮಹಾಲಿಂಗಂ, ಜಿ.ರಮೇಶ್, ಸಹಕಾರ್ಯದರ್ಶಿ ಅರಿವಳಗನ್, ಖಜಾಂಚಿ ಕೆ.ಕೃಷ್ಣರಾಜ್, ನಿರ್ದೇಶಕರಾದ ಜಿ.ರಘು, ಮುರುಗನ್, ಪುವೆಂದಿರನ್, ಸಿ.ವೆಂಕಟೇಶ್ ಮತ್ತಿತರರಿದ್ದರು.

    Panguni Uthira Jatra at Sri Subrahmanya Swamy Temple

  • ಕಾಳ್ಗಿಚ್ಚಿನಿಂದ ಬೆಲೆಬಾಳುವ ಮರಗಳು ನಾಶ : ಪರಿಹಾರಕ್ಕೆ ಒತ್ತಾಯ

    ಕಾಳ್ಗಿಚ್ಚಿನಿಂದ ಬೆಲೆಬಾಳುವ ಮರಗಳು ನಾಶ : ಪರಿಹಾರಕ್ಕೆ ಒತ್ತಾಯ

    ಚಿಕ್ಕಮಗಳೂರು: ಕಾಳ್ಗಿಚ್ಚು, ನೆರೆ, ಪ್ರವಾಹ ಹಾಗೂ ವನ್ಯಮೃಗಗಳ ಹಾವಳಿಯಿಂದ ರೈತರು ಬೆಳೆದ ಶ್ರೀಗಂಧದ ಸಸಿ, ಮರ ದ್ವಂಸಗೊಂಡರೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘವು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.

    ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದ ಮಾತನಾಡಿದ ಸಂಘದ ಅಧ್ಯಕ್ಷ ಡಾ|| ಕೆ.ಸುಂದರಗೌಡ ತರೀಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ವಿಶುಕುಮಾರ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಬೆಲೆಬಾಳುವ ಶ್ರೀಗಂಧ, ಗಾಳಿಮರ, ಮಾವು, ತೆಂಗು, ನುಗ್ಗೆಯ ತೋಟಕ್ಕೆ ಕಾಳ್ಗಿಚ್ಚು ತಗುಲಿ ಮರ ಗಳು ಹೊತ್ತಿ ಉರಿದು ಲಕ್ಷಾಂತರ ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದರು.

    ಕೆಲವೇ ವರ್ಷಗಳಲ್ಲಿ ಉತ್ತಮ ಫಸಲನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ರೈತನ ಸ್ಥಿತಿ ಕಂಗಾಲಾಗಿದೆ. ಈ ಕುರಿತಾಗಿ ಶೀಘ್ರವೇ ನ್ಯಾಯಯುತವಾದ ಪರಿಹಾರವನ್ನು ನೊಂದ ರೈತನಿಗೆ ನೀಡಬೇಕು. ಜೊತೆಗೆ ಈ ರೀತಿಯ ಘಟನೆಗಳು ರಾಜ್ಯದ ಯಾವ ಮೂಲೆಗಳಲ್ಲಿ ಸಂಭವಿಸಿದರೂ ಸರ್ಕಾರ ಕೂಡಲೇ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಹೇಳಿದರು.

    ಹವಾಮಾನ ವೈಪರೀತ್ಯ, ತಾಪಮಾನ ಏರಿಕೆಯಿಂದ ಎಲ್ಲೆಂದರಲ್ಲಿ ಬೆಂಕಿಯ ಅವಘಡಗಳು ಸಂಭ ವಿಸುತ್ತಿದೆ. ಹತ್ತಾರು ವರ್ಷಗಳ ಬೆಳೆಸಿದ ಶ್ರೀಗಂಧ, ತೇಗ, ಮಹಾಘೋನಿ, ಬೀಟೆ, ರಕ್ತಚಂದನ ವೃಕ್ಷಗಳು ಬೆಂಕಿಗೆ ಆಹುತಿಯಾಗಲಿವೆ. ಇದು ಕಷ್ಟಪಟ್ಟು ಬೆಳೆಸಿದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಿಮಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಪ್ರಸ್ತುತ ರೈತ ಸಮುದಾಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿವೆ. ಹನಿ ನೀರಿಗೂ ತತ್ಪಾರವಿರು ವ ಈ ವಿಷಮ ಸಮಯದಲ್ಲಿ ರೈತರ ಕಂಬನಿ ಒರೆಸುವ ಕೆಲಸವು ಸರ್ಕಾರ ಮಾಡಬೇಕಿದೆ. ಶ್ರೀಗಂಧ ಅರ ಣ್ಯ ಇಲಾಖೆಯಡಿಯಲ್ಲಿ ಇರುವುದರಿಂದ ನೈಸರ್ಗಿಕ ವಿಕೋಪಗಳಿಂದ ಉಂಟಾದ ಬದಲಾವಣೆಗೂ ಉತ್ತ ರದಾಯಿತ್ವ ಅರಣ್ಯ ಇಲಾಖೆಯಾಗಿದೆ ಎಂದರು.

    ಆದ್ದರಿಂದ ಆಕಸ್ಮಿಕ ಬೆಂಕಿಗಾಹುತಿ ಅಥವಾ ಪ್ರವಾಹ ಪರಿಸ್ಥಿತಿ ಎದುರಾದರೆ ಪರಿಹಾರ ಕುರಿತಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಶ್ರೀಗಂಧ ಬೆಳೆಗಾರರ ಬವಣೆ ಪರಿಹರಿಸಲು ಕೋರಿ ದೆ. ಈ ಅಪರೂಪದ ಪ್ರಕರಣಗಳನ್ನು ಪರಿಹರಿಸಲು ಅವಕಾಶವಿದ್ದರೆ ಪರಿಹಾರ ಘೋಷಣೆ ಮಾಡಲು ಸಹ ಸಂಘವು ಒತ್ತಾಯಿಸುತ್ತದೆ.

    ಈ ಸಂದರ್ಭದಲ್ಲಿ ಸಂಘದ ರಾಜ್ಯ ಸಂಚಾಲಕ ವಿಶುಕುಮಾರ್ ಹಾಗೂ ಕುಟುಂಬಸ್ಥರು, ಪರಿಹಾರ ಕಾಂಕ್ಷಿಗಳು ಹಾಜರಿದ್ದರು.

    Valuable trees destroyed by forest fire: Demand for compensation

     

  • ಭಾರ್ಗವಿ LL.B.’ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ತಪ್ಪದೆ ನೋಡಿ!

    ಭಾರ್ಗವಿ LL.B.’ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ತಪ್ಪದೆ ನೋಡಿ!

    ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ
    ಮಾರ್ಚ್ 3 ರಿಂದ ಸೋಮವಾರದಿಂದ – ಶುಕ್ರವಾರ ರಾತ್ರಿ 8.30ಕ್ಕೆ

    ‘ಭಾರ್ಗವಿ LL. B.’, ತನ್ನ ತಂದೆಯ ಘನತೆಯನ್ನು ಮರಳಿ ಗಳಿಸಲು ಕಾನೂನಿನ ಪ್ರಪಂಚದಲ್ಲಿ ಎಲ್ಲ ಅಡೆತಡೆಗಳನ್ನು ಮೀರಿ
    ಬಲಿಷ್ಠ ಪ್ರಭಾವಶಾಲಿಗಳ ವಿರುದ್ಧ ಹೋರಾಡುವ ಧೀರ ಯುವತಿಯ ಸ್ಫೂರ್ತಿದಾಯಕ ಕತೆ.

    ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ “ ‘ಭಾರ್ಗವಿ LL. B.’ ಅನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹುನಿರೀಕ್ಷಿತ ಧಾರಾವಾಹಿ ಮಾರ್ಚ್ 3 ರಿಂದ ಸೋಮವಾರದಿಂದ – ಶುಕ್ರವಾರ ರಾತ್ರಿ 8.30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.

    ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು ಬಲಿಷ್ಠ ವಕೀಲ ಜಯಪ್ರಕಾಶ್ ಪಾಟೀಲ್ ನಡುವಿನ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ಹೇಳುತ್ತದೆ. ಭಾರ್ಗವಿಯ ಲಾಯರ್ ತಂದೆಯನ್ನು ಕೋರ್ಟಿನಲ್ಲಿ ಹೀನಾಯವಾಗಿ ಅವಮಾನಿಸಿ ತಲೆ ತಗ್ಗಿಸುವ ಹಾಗೆ ಮಾಡಿ ವಕೀಲಿಕೆಯನ್ನೇ ತ್ಯಜಿಸುವಂತೆ ಮಾಡಿದವನು ಜೆ.ಪಿ. ಪಾಟೀಲ್. ತನ್ನ ವೃತ್ತಿಜೀವನದಲ್ಲಿ ಒಂದೇ ಒಂದು ಸೋಲು ಕಾಣದ, ಗೆಲ್ಲಲು ಯಾವುದೇ ಕಾನೂನನ್ನು ಮುರಿಯುವ ಅವನಿಗೆ ವಕೀಲಿಕೆ ಎಂದರೆ ಅಧಿಕಾರ, ಪ್ರಭಾವ ಮತ್ತು ನಿಯಂತ್ರಕ ಶಕ್ತಿ. ಇದರ ತದ್ವಿರುದ್ಧ ಭಾರ್ಗವಿ. ನ್ಯಾಯ ದೊರಕಿಸಿ ಕೊಡಬೇಕಾದ ಸಂಧರ್ಭ ಬಂದಾಗ ಅವಳು ಯಾರನ್ನಾದರೂ ಎದುರಿಸಬಲ್ಲವಳು. ಅಧಿಕಾರ, ಹಣ, ಪ್ರಭಾವ ಇದ್ಯಾವುದಕ್ಕೂ ಕಿಂಚಿತ್ತೂ ಬೆಲೆ ಕೊಡದ ಅವಳು ನ್ಯಾಯಪರ, ಯಾರಿಗೂ ಹೆದರದ ದಿಟ್ಟ ಯುವತಿ. ತನ್ನ ಪ್ರೀತಿಯ ಅಪ್ಪ ಅಮ್ಮ ಮತ್ತು ತನ್ನ ಪುಟ್ಟ ಕುಟುಂಬವೇ ಅವಳ ಜೀವನ. ಭಾರ್ಗವಿಯ ಅಪ್ಪ ರವೀಂದ್ರ ಭಟ್ಕಳ್ ಕೂಡಾ ವಕೀಲನಾಗಿದ್ದು ವೃತ್ತಿಯಲ್ಲಿ ಯಶಸ್ಸು ಕಂಡಿರುವುದಿಲ್ಲ. ಮಗಳ ಕನಸಿಗೆ ತಂದೆ ಪೂರ್ತಿಯಾಗಿ ಬೆಂಬಲ ನೀಡಿದರೂ ಅಮ್ಮನಿಗೆ ಮಾತ್ರ ಲಾಯರ್ ವೃತ್ತಿ ಅನಗತ್ಯ ತೊಂದರೆಗಳನ್ನು ತರಬಹುದು ಎಂಬ ಆತಂಕ. ಮದುವೆಯಾಗಿ ಅವಳು ಸುಖವಾಗಿದ್ದರೆ ಸಾಕು ಅನ್ನುವುದು ಅಮ್ಮನ ಬಯಕೆ.

    ಭಾರ್ಗವಿಯ ಜೀವನ ಅನಿರೀಕ್ಷಿತ ತಿರುವು ಪಡೆಯುವುದು ಅವಳು, ಜೆಪಿ ಪಾಟೀಲ್ ನ ಮಗ ಅರ್ಜುನ್ ಪಾಟೀಲ್ ನನ್ನು ಭೇಟಿ ಮಾಡಿದಾಗ. ಶ್ರೀಮಂತ ಕುಟುಂಬದಲ್ಲಿ ಬೆಳೆದರೂ ಸಹೃದಯಿಯಾಗಿರುವ ಅರ್ಜುನ್ ಭಾರ್ಗವಿಯನ್ನು ಮೊದಲ ನೋಟದಲ್ಲೇ ಪ್ರೀತಿಸುತ್ತಾನೆ. ತನ್ನ ತಂದೆ ವಿರುದ್ಧ ಹೋರಾಟ ಮಾಡುತ್ತಿರುವ ವಕೀಲೆ ಎಂಬ ಅರಿವಿರದ ಅರ್ಜುನ್ ಭಾರ್ಗವಿಗೆ ಹತ್ತಿರವಾಗುತ್ತಾನೆ.

    ಇಂಥ ಸನ್ನಿವೇಶದಲ್ಲಿ ತನ್ನ ತಂದೆಯ ಗೌರವವನ್ನು ಮರಳಿ ಗಳಿಸಲು ಮತ್ತು ಅನ್ಯಾಯದ ವಿರುದ್ಧ ಹೋರಾಡಿ ಗೆಲ್ಲಲು ಭಾರ್ಗವಿ ಯಶಸ್ವಿಯಾಗುತ್ತಾಳಾ ಎನ್ನುವುದು ‘ಭಾರ್ಗವಿ LL.B.’ಯ ಮುಖ್ಯ ಕಥಾಹಂದರವಾಗಿದೆ. ‘ಭಾರ್ಗವಿ LL. B.’ -ಸಾಮಾಜಿಕ ಸಂಘರ್ಷ ಮತ್ತು ಕೌಟುಂಬಿಕ ಕಥನ ಹೊಂದಿರುವ ಅತ್ಯಂತ ಶಕ್ತಿಶಾಲಿಯಾಗಿ ನಿರೂಪಿತವಾಗಿರುವ ಎಲ್ಲರೂ ನೋಡಲೇಬೇಕಾದ ಧಾರಾವಾಹಿಯಾಗಿದೆ.

    ದಿಟ್ಟ ಭಾರ್ಗವಿ ಪಾತ್ರದಲ್ಲಿ ರಾಧಾ ಭಗವತಿ, ಅರ್ಜುನ್ ಪಾಟೀಲ್ ಪಾತ್ರದಲ್ಲಿ ಮನೋಜ್ ಕುಮಾರ್ ಕನ್ನಡ ಟೆಲಿವಿಶನ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೆಪಿ ಪಾಟೀಲ್ ಪಾತ್ರದಲ್ಲಿ ರಂಗಭೂಮಿಯ ಪ್ರಸಿದ್ಧ ಕಲಾವಿದ ಕೀರ್ತಿ ಭಾನು, ಹಾಗೂ ಕನ್ನಡದ ಖ್ಯಾತ ಕಲಾವಿದರಾದ ಅರುಣಾ ಬಾಲರಾಜ್, ಹನುಮಂತೇ ಗೌಡ, ಸುಜಾತಾ ಅಕ್ಷಯ, ‘ಮಾಯಾಬಜಾರ್’ ಖಾತಿಯ ಚೈತ್ರಾ ರಾವ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

    ‘ಅಂತರಪಟ’ ಧಾರಾವಾಹಿ ಮೂಲಕ ಶಕ್ತಿಶಾಲಿ ಮಹಿಳಾ ಪಾತ್ರ ಗಳನ್ನು ತೆರೆಗೆ ತಂದವರು ನಿರ್ಮಾಪಕಿ ಸ್ವಪ್ನ ಕೃಷ್ಣ, ‘ಭಾರ್ಗವಿ LL.B.’ ಮೂಲಕ ಮತ್ತೊಂದು ಮಹಿಳಾ ಪ್ರಧಾನ ಧಾರಾವಾಹಿಯನ್ನು ಮುಂದಿಡುತ್ತಿದ್ದಾರೆ “ಮುಂಗಾರು ಮಳೆ” ಕೃಷ್ಣ ಈ ಶೋಗೆ ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಸಂಗೀತ ರಚನೆ ಮತ್ತು ಗಾಯನ ಶಶಾಂಕ್ ಶೇಷಗಿರಿ ಅವರದು, ಹಾಗೂ ಪ್ರಮೋದ ಮರವಂತೆ ಮನಸಿಗೆ ಮುಟ್ಟುವಂತಹ ಸಾಹಿತ್ಯ ರಚಿಸಿದ್ದಾರೆ.

    ಯಾರಿಗೂ ಹೆದರದ, ಅನ್ಯಾಯಕ್ಕೆ ತಲೆ ಬಾಗದ, ನ್ಯಾಯದ ಹಾದಿಯಲ್ಲಿ ತನ್ನ ತಂದೆಯ ಗೌರವ ಮರಳಿಗಳಿಸಲು ತನ್ನದೇ ಛಾಪು ಮೂಡಿಸಬೇಕು ಅನ್ನುವ ಭಾರ್ಗವಿ LL.B.’ ಯು ಅತ್ಯಂತ ಬಿಗಿಯಾದ ನಿರೂಪಣೆ ಮತ್ತು ಪ್ರಬಲ ತಾರಾಗಣದಿಂದ ಜನರಿಗೆ ಅತ್ಯಂತ ಆಪ್ತವಾಗುವ ಧಾರಾವಾಹಿ.

    ಮಾರ್ಚ್ 3 ರಿಂದ ಸೋಮವಾರ-ಶುಕ್ರವಾರ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡದಲ್ಲಿ ನ್ಯಾಯಕ್ಕಾಗಿ ಹೋರಾಡುವ ದಿಟ್ಟ ‘ಭಾರ್ಗವಿ ‘LL.B.’ಯ ಸ್ವಾಭಿಮಾನದ ಸಂಘರ್ಷದ ಕತೆ  ತಪ್ಪದೆ ನೋಡಿ!

    Bhargavi LL.B

  • ನಮ್ಮ ದೇಶದ ಭವಿಷ್ಯ ಯುವ ಜನತೆ ಕೈಯಲ್ಲಿದೆ

    ನಮ್ಮ ದೇಶದ ಭವಿಷ್ಯ ಯುವ ಜನತೆ ಕೈಯಲ್ಲಿದೆ

    ಚಿಕ್ಕಮಗಳೂರು: ನಮ್ಮ ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನಾವು ಈ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದೇವೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ನಗರದ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಭಾನುವಾರ ಸಂಕಲ್ಪ ಯೋಜನೆಯ ಸರ್ವರಿಗೂ ಉದ್ಯೋಗ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್ ಗಾರ್ ಉದ್ಯೋಗ ಮೇಳ-೨೦೨೫ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿರುವ ನಿರುದ್ಯೋಗ ಯುವಕ ಯುವತಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು.

    ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಯಾವುದೇ ಪದವಿ, ಡಿಪ್ಲೋಮಾ ಪೂರೈಸಿರುವಂತಹ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಇಂದು ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದರು.

    ಅವರಿಗೆ ಮುಂದೆ ತಮ್ಮ ಕಾಲಮೇಲೆ ತಾವು ನಿಂತುಕೊಳ್ಳಲು ನಾವು ತಯಾರು ಮಾಡುತ್ತಿದ್ದೇವೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು. ಬಂದಿರುವಂತಹ ಎಲ್ಲಾ ನಿರುದ್ಯೋಗ ಯುವಕ ಯುವತಿಯರಿಗೆ ಈ ಉದ್ಯೋಗ ಮೇಳದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಸಿಗಲೆಂದು ಹಾರೈಸುತ್ತೇನೆ ಎಂದು ಹೇಳಿದರು.

    ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಮಾತನಾಡಿ ನಾವು ಮಾಡುವ ಕೆಲಸದ ಮೇಲೆ ನಮಗೆ ಮೊದಲು ಗೌರವವಿರಬೇಕು. ಸಣ್ಣ ಕೆಲಸವೇ ಇರಲಿ , ದೊಡ್ಡ ಕೆಲಸವೇ ಇರಲಿ ಅದನ್ನು ಶ್ರಧ್ದೆಯಿಂದ ಮಾಡಿದರೆ ಯಶಸ್ಸು ಕಾಣಲು ಸಾಧ್ಯ. ಜಿಲ್ಲೆಯನ್ನು ಸಂಪೂರ್ಣವಾಗಿ ನಿರುದ್ಯೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಿಂದ ಎಲ್ಲರಿಗೂ ಉದ್ಯೋಗ ಅವಕಾಶ ಸಿಗಲಿ ಎಂದು ಹೇಳಿದರು.

    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಸಿ. ಶಿವಾನಂದ ಸ್ವಾಮಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಇಂತಹ ಉದ್ಯೋಗ ಮೇಳದಿಂದ ಅವರಿಗೆ ಉದ್ಯೋಗದ ಅವಕಾಶ ದೊರಕುವಂತಾಗುತ್ತದೆ ಎಂದು ಹೇಳಿದರು.

    ಕ. ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷರಾದ ಬಿ.ಹೆಚ್. ಹರೀಶ್ ಮಾತನಾಡಿ ತಮ್ಮ ಪದವಿಗೆ ತಕ್ಕಂತೆ ಉದ್ಯೋಗ ನಿಮಗೆ ಈ ಕಾರ್ಯಕ್ರಮದಿಂದ ಸಿಗಲಿ ಹಾಗೂ ಇದನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಗುರಿಯನ್ನು ಸಾಧಿಸಿಕೊಳ್ಳಿ ಎಂದು ಹೇಳಿದರು.

    ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ದೇವೇಂದ್ರ ಅವರು ಮಾತನಾಡಿ ಎಲ್ಲರೂ ತಮ್ಮದೇ ಆದ ಕೌಶಲ್ಯ ಹೊಂದಿರುತ್ತಾರೆ. ಆ ಕೌಶಲ್ಯಕ್ಕೆ ತಕ್ಕ ವೇದಿಕೆ ಸಿಗದೇ ನಿರುದ್ಯೋಗಿಗಳಾಗಿರುತ್ತಾರೆ. ಅಂತವರಿಗೆ ಇದೊಂದು ಒಳ್ಳೆಯ ವೇದಿಕೆಯಾಗಿದೆ ಇದರ ಪ್ರಯೋಜನ ಪಡೆದುಕೊಂಡು ತಮ್ಮ ಕನಸ್ಸನ್ನು ನನಸಾಗಿಸಿಕೊಳ್ಳಿ ಎಂದು ಹೇಳಿದರು.

    ಜಿಲ್ಲಾ ಕೌಶಲ್ಯಾಭಿವೃಧ್ಧಿ ಇಲಾಖೆ ಅಧಿಕಾರಿ ಪ್ರಶಾಂತ್ ಹೆಚ್.ಸಿ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಐ.ಡಿ.ಎಸ್.ಜಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪುಷ್ಪಭಾರತಿ ಆರ್.ಎ, ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

    District Level Skill Roj Gar Job Fair-2025