Category: ಚಿಕ್ಕಮಗಳೂರು ನಗರ

  • ಕೇಂದ್ರದ ಬಜೆಟ್ ಅಭಿವೃದ್ಧಿ ಪಥದಲ್ಲಿನ ಮೈಲಿಗಲ್ಲು

    ಕೇಂದ್ರದ ಬಜೆಟ್ ಅಭಿವೃದ್ಧಿ ಪಥದಲ್ಲಿನ ಮೈಲಿಗಲ್ಲು

    ಚಿಕ್ಕಮಗಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಕೇಂದ್ರ ಬಜೆಟ್  ಸರ್ವಜನ ಸ್ನೇಹಿ ಹಾಗೂ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಪಥದಲ್ಲಿನ ಮೈಲಿಗಲ್ಲಾಗಿದೆ ಎಂದು ಆರ್ಥಿಕ ತಜ್ಞ ವಿಶ್ವನಾಥ್ ಭಟ್ ಹೇಳಿದರು.

    ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕೇಂದ್ರ ಬಜೆಟ್ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮತನಾಡಿದ ಅವರು ನಂರೇದ್ರ ಮೋದಿಯವರು ಬಜೆಟ್ ಮಂಡನೆಯಾದ ನಂತರದಲ್ಲೆ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲು ಬಜೆಟ್ ಕುರಿತು ಉದ್ಯಮದಾರರು, ಚಾರ್ಟೆಡ್ ಅಕೌಂಟ್, ಇಂಜಿನಿಯರ್‌ಗಳು, ಸಮಾಜ ಚಿಂತಕರನ್ನು ಒಳಗೊಂಡಂತೆ ವಿವಿಧ ಜನ ಸಾಮಾನ್ಯರೊಂದಿಗೆ ಹಿಂದಿನ  ಬಜೆಟ್ ಹಾಗೂ ಮುಂದೆ ಕೈಗೊಳ್ಳಬಹುದಾದ ಕ್ರಮಗಳು, ತೆರಿಗೆ, ಹೂಡಿಕೆ ಸೇರಿದಂತೆ ಹಲವಾರು ವಿಷಯಗಳನ್ನು ಸಂವಾದ ನಡೆಸುವ ಮಹತ್ವದ ಉದ್ದೇಶವನ್ನು ಹೊಂದಿದ್ದಾರೆ. ಆದರೆ ೫೭ ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈ ಉತ್ತಮ ಕಾರ್ಯವನ್ನು ನಿರ್ವಹಿಸುವ ಯೋಚನೆ ಕೂಡ ಬಂದಿಲ್ಲ. ಸರ್ಕಾರದ ಕರ್ತವ್ಯವನ್ನೇ ಮರೆತಿದ್ದರೂ ಅಥವಾ ಅವರ ಬಜೆಟ್ ಮಂಡನೆ ವಿಷಯದಲ್ಲಿ ಅವರಿಗೆ ಸ್ವತಹ ವಿಶ್ವಾಸವಿಲ್ಲದಿರುವುದನ್ನು ಸೂಚಿಸುತ್ತದೆ ಎಂದರು.

    ರಷ್ಯಾ ಮತ್ತು ಉಕ್ರೇನ್, ಇಸ್ರೇಲ್ ಮತ್ತು ಹಾಮಾಸ ನಡುವಿನ ಭೌಗೋಳಿಕ ರಾಜಕೀಯ ಸಂಘರ್ಷ ಜಗತ್ತಿನಾದ್ಯಂತ ಅಂತರಾಷ್ಟ್ರೀಯ ವ್ಯಾಪರ ವಹಿವಾಟು ತೀವ್ರವಾಗಿ ಕುಸಿದು ಆಹಾರ ಪಾದಾರ್ಥಗಳು ಸೇರಿದಂತೆ ವಿವಿಧ ವಸ್ತುಗಳ ಬೆಲೆ ಗಗನಕ್ಕೇರಿ ಅನೇಕ ರಾಷ್ಟ್ರಗಳು ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಸಮಾಜದಲ್ಲಿ ತಪ್ಪು ಮಾಹಿತಿಯನ್ನು ಅರಿಬಿಡುವ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದರು.

    ದೇಶದ ಬಹುತೇಕ ರಾಜ್ಯಗಳು ಸಬ್ಸಿಡಿ ಹಣವನ್ನು ವಿಪರೀತವಾಗಿ ನೀಡಿ ಮೂಲ ಸೌಕರ್ಯಗಳ ಹೂಡಿಕೆಗೆ ಹಣವಿಲ್ಲದಂತಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ಪ್ರಕಾರ ಕಳೆದ ಹತ್ತು ವರ್ಷಗಳಲ್ಲಿ ಭಾರತದ ಗ್ರಾಮೀಣಾ ಹಾಗೂ ನಗರ ಪ್ರದೇಶಗಳಲ್ಲಿ ಬಹು ಆಯಾಮದ ಬಡತನ ರೇಖೆಯೂ ಶೇಕಡಾ ೫ ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿಸಿದೆ.

    ದೇಶದಲ್ಲಿ ಖಾಸಗಿ ಹಾಗೂ ಸಾರ್ವಜನಿಕ ವಲಯಗಳಲ್ಲಿ ೨೦೦೪ ರಿಂದ ೨೦೧೪ರ ವರೆಗೆ ಕಾಂಗ್ರೆಸ್ ನೇತೃತ್ವದ ಯುಪಿಐ ಸರ್ಕಾರದಲ್ಲಿ ೨ ಕೋಟಿ ೯೦ ಲಕ್ಷ ಉದ್ಯೋಗ ಸೃಷ್ಠಿಯಾಗಿತ್ತು ಆದರೆ ೨೦೧೪ ರಿಂದ ೨೦೨೪ ರವರೆಗೆ ೧೭.೯ ಕೋಟಿ ಹೊಸ ಉದ್ಯೋಗಗಳು ನಿರ್ಮಾಣವಾಗಿದೆ ಹಾಗೂ  ನರೆಂದ್ರ ಮೋದಿಯವರಿಗೆ ಅಧಿಕಾರವನ್ನು ಹಸ್ತಾಂತರ ಮಾಡುವಾಗ ಸಾಲದ ಶೇಕಡ ೧೪.೫೮ ರಷ್ಠಿದ್ದ ೨೦೨೪ ರಲ್ಲಿ  ಅಂತ್ಯಗೊಂಡ ತ್ರೈ ಮಾಸಿಕದಲ್ಲಿ ಭಾರತದ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಮಗ್ರ ಕೆಟ್ಟ ಸಾಲವು(ಜಿಎಂಪಿ) ಯು ೩.೧೨ ಕ್ಕೆ ಇಳಿದು ಬ್ಯಾಂಕ್‌ಗಳು ಲಾಭದಾಯಕವಾಗಿವೆ ಈ ರೀತಿಯಲ್ಲಿ ದೇಶದ ಸಮಗ್ರ ಅಭಿವೃದ್ಧಿಯನ್ನು ಏರಿಕೆ ಧರದಲ್ಲಿ ಕೊಂಡೊಯ್ಯುತ್ತಿದೆ ಎಂದರು.

    ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ೩ನೇ ಅವಧಿಯ ೨ನೇ ಬಜೆಟ್‌ನಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕೇಂದ್ರವಾಗಿರಿಸಿಕೊಂಡು ಉತ್ಪಾದನಾ ವಲಯದಲ್ಲಿ ಕ್ರಾಂತಿಯನ್ನು ತರಿಸಿ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವುದರ ಜೊತೆಗೆ ದೇಶದಲ್ಲಿ ಅಭಿವೃದ್ಧಿಯ ಪರ್ವವನ್ನು ಪ್ರಾರಂಭಿಸುವ ಯೋಜನೆ ಇದಾಗಿದೆ ಎಂದರು ಅವರು ಕೇಂದ್ರದ ಬಜೆಟ್ ಸರ್ವ ವ್ಯಾಪಿಯಾಗಿದೆ ಎಂದರು

    ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿನ ರಾಷ್ಟ್ರೀಯ ಸಮಸ್ಯೆಗಳ ಜೊತೆಗೆ ಹಸಿವು, ಬಡತನ, ನಿರುದ್ಯೋಗ ಸಮಸ್ಯೆಗಳಂತ ಹಲವಾರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಈ ಬಾರಿಯ ಬಜೆಟ್‌ನಲ್ಲು ನಿರುದ್ಯೋಗ ಸಮಸ್ಯೆಯನ್ನು ಬುಡದಿಂದ ಕಿತ್ತೊಗೆದು ಅಭಿವೃದ್ಧಿ ಹೋಂದಿದ ಭಾರತವನ್ನು ನಿರ್ಮಿಸಲು ಶ್ರಮವಹಿಸುತಿದ್ದಾರೆ. ಹೂಡಿಕೆ, ಮಹಿಳಾ ಸಬಲೀಕರಣ, ಮಧ್ಯಮ ವರ್ಗದವರ ಆರ್ಥಿಕ ಸುಧಾರಿಕೆ ಒಳಗೊಂಡಂತೆ ಸಾಮಾಜದ ಎಲ್ಲಾ ವರ್ಗದ ಜನರಿಗೆ ಬಜೆಟ್ ಸ್ನೇಹ ಮಾಯವಾಗಿದೆ ಎಂದ ಅವರು ವಿರೋಧಿಸುವವರ ಮಾತಿಗೆ ತಲೆದೂರದೇ ಬಜೆಟ್‌ನ ಹಿಂದಿನ ಉದ್ದೇಶವನ್ನು ಅರಿತು ಸಾರ ಸತ್ಯತೆಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ತಲುಪಿಸುವ ಜವಬ್ದಾರಿ ನಮ್ಮದು ಎಂದರು

    ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಡಾ. ನರೇಂದ್ರ, ಕಲ್ಮರುಡಪ್ಪ, ಬಸವರಾಜ್, ಸೇರಿದಂತೆ ಉದ್ಯಮಿಗಳು, ವಿವಿಧ ಸಂಘದ ಪದಾಧಿಕಾರಿಗಳು, ವೈದ್ಯರು, ಕಾಲಜು ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    Union Budget Dialogue Program organized at BJP office

  • ನಕ್ಷಾ ಯೋಜನೆ ಮೂಲಕ ನಗರ ಸರ್ವೆಕಾರ್ಯ ಸರಳ

    ನಕ್ಷಾ ಯೋಜನೆ ಮೂಲಕ ನಗರ ಸರ್ವೆಕಾರ್ಯ ಸರಳ

    ಚಿಕ್ಕಮಗಳೂರು:  ಡಿಜಿಟಲೀಕೃತ ಭೂ ನಕ್ಷೆಯಿಂದ ಭೂ ಅಕ್ರಮವನ್ನು ತಡೆಗಟ್ಟುವುದರ ಜೊತೆಗೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಸರ್ವೆ ನಡೆಸಿ ಸ್ಪ?ವಾದ ಮಾಲೀಕತ್ವದ ಮಾಹಿತಿ ಪಡೆಯಲು ಸಹಕಾರಿಯಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

    ಕಂದಾಯ ಇಲಾಖೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಪೌರಾಡಳಿತ ಇಲಾಖೆ ವತಿಯಿಂದ ಇಂದು ನಗರ ಸಭೆ ಕಾರ್ಯಾಲಯದಲ್ಲಿ ಆಯೋಜಿಸಿದ್ದ ನಗರ ಪ್ರದೇಶಗಳಲ್ಲಿ ಆಸ್ತಿಗಳ ಭೂ ದಾಖಲೆಗಳ ರಚನೆ ನಕ್ಷಾ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಯೋಜನೆ ಅಡಿಯಲ್ಲಿ ಪ್ರಾಯೋಗಿಕವಾಗಿ ರಾಜ್ಯದ ೧೦ ನಗರ, ಪಟ್ಟಣಗಳನ್ನು ಆಯ್ಕೆಮಾಡಲಾಗಿದೆ. ಇದರಲ್ಲಿ ಜಿಲ್ಲೆಯ ನಗರ ಸಭೆಯನ್ನು ಆಯ್ಕೆ ಮಾಡಲಾಗಿದ್ದು ಯೋಜನೆಯೂ ನಗರ ಸಭೆ ವ್ಯಾಪ್ತಿಯ ಎಲ್ಲಾ ಸ್ಥಳಿಯ ಸಂಸ್ಥೆಗಳ ಸರಳ ಸರ್ವೆ ಕಾರ್ಯಗಳ ಜೊತೆಗೆ ನಾಗರೀಕರು ಸಾಲ ಮತ್ತು ಇತರ ಪ್ರಯೋಜನಗಳನ್ನು ಬ್ಯಾಂಕ್ ಮತ್ತು ಇನ್ನಿತರ ಹಣಕಾಸು ಸಂಸ್ಥೆಗಳಿಂದ ಪಡೆಯುವ ಸುಲಭ ಪ್ರಕ್ರಿಯೆಗೆ ಸಹಕಾರಿಯಾಗಲಿದೆ ಎಂದರು.

    ನಕ್ಷಾ ಯೋಜನೆಯನ್ನು ಭಾರತ ಸರ್ಕಾರದ ಭೂಸಂಪನ್ಮೂಲ ಇಲಾಖೆಯು ಆರಂಭಿಸಿದ್ದು, ಕೇಂದ್ರ ಬಜೆಟ್‌ನಲ್ಲಿ ನಗರ ಪ್ರದೇಶಗಳಲ್ಲಿ ಭೂ-ಸಂಬಂಧಿತ ಸುಧಾರಣೆಗಳು ಮತ್ತು ಕ್ರಮಗಳನ್ನು ಸೂಕ್ತ ಹಣಕಾಸಿನ ಬೆಂಬಲದ ಮೂಲಕ ಮುಂದಿನ ೩ ವ?ಗಳಲ್ಲಿ ಪೂರ್ಣಗೊಳಿಸಲು ಪ್ರೋತ್ಸಾಹಿಸಲಾಗುವುದು. ಪ್ರಾಯೋಗಿಕವಾಗಿ ದೇಶದ ೧೫೨ ನಗರ/ಪಟ್ಟಣ ಗಳಲ್ಲಿ ಈ ಯೋಜನೆ ಅನು?ನಗೊಳಿಸಲು ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಮಾಡ್ರನೈಸೇ?ನ್ ಪ್ರೋಗ್ರಾಮ್ ಅಡಿಯಲ್ಲಿ ಯೋಜನೆಯನ್ನು ಅನು?ನಗೊಳಿಸಲು ಆಯ್ಕೆಮಾಡಲಾಗಿದೆ ಎಂದ ಅವರು ಯೋಜನೆ ಮೂಲಕ ನಾಗರೀಕರು ಕೆರೆ ಪ್ರದೇಶ, ಸರ್ಕಾರಿ ಆಸ್ತಿ, ಅಥವಾ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಆಸ್ತಿಗಳನ್ನು ಸೃಜಿಸಿ ಮಾರಾಟ ಮಾಡುವ ಪ್ರಕ್ರಿಯೆಯಂತಹ ಅಕ್ರಮಗಳಿಗೆ ಒಳಗಾಗುವುದು ತಪ್ಪುತ್ತದೆ ಎಂದು ಹೇಳಿದರು.

    ಶಾಸಕ ಹೆಚ್.ಡಿ ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ನಕ್ಷಾ ಯೋಜನೆಯನ್ನು ನಗರ ಸ್ಥಳೀಯ ಸಂಸ್ಥೆಗಳ ಭೂ ಸಮೀಕ್ಷೆ ಸರಳೀಕರಣದ ಉದ್ದೇಶದಿಂದ ಜಾರಿ ಮಾಡಲಾಗಿದೆ. ಇದರಿಂದ ಆಸ್ತಿಗಳ ವಿಭಜನೆ, ಅನುವಂಶಿಕ ಬದಲಾವಣೆ, ಉತ್ತರಾಧಿತ್ವ ಪ್ರಕ್ರಿಯೆಗಳು ಸುಲಭವಾಗುತ್ತದೆ. ಕಾರ್ಡ್ ಮೂಲಕ ಲಭ್ಯವಾಗುವ ಗಣಕೀಕೃತ ಭೌಗೋಳಿಕ ಉಲ್ಲೇಖಿತ ನಕ್ಷೆಗಳು ನಾಗರೀಕರಿಗೆ ತಮ್ಮ ಆಸ್ತಿಗಳ ವಿಭಜನೆ ಪ್ರಕ್ರಿಯೆಯನ್ನು ಸ್ವಯಂ ನಿರ್ವಹಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ನಾಗರೀಕರಿಗೆ ಮೊದಲ ಬಾರಿಗೆ ತನ್ನ ಆಸ್ತಿಯ ಮಾಲೀಕತ್ವ ಪ್ರಮಾಣಪತ್ರವನ್ನು ಸರ್ಕಾರದಿಂದ ನೀಡಲಾಗುತ್ತದೆ, ಇದು ಪ್ರತಿ ಆಸ್ತಿಯ ಪಾರದರ್ಶಕ ಮತ್ತು ಸ್ಪ?ವಾದ ಮಾಲೀಕತ್ವದ ಪ್ರಮಾಣಪತ್ರವಾಗಿದೆ. ಆಸ್ತಿಯ ನಕ್ಷೆ, ಮಾಲೀಕತ್ವದ ವಿವರಗಳು ಮತ್ತು ಅದರ ಹಕ್ಕುಗಳು ಮತ್ತು ಆಸ್ತಿಯ ಮೇಲಿನ ವಿವರಗಳನ್ನು ಕಾರ್ಡ್ ಒಳಗೊಂಡಿರುತ್ತದೆ. ಆದ್ದರಿಂದ ನಾಗರೀಕರು ಕಂದಾಯ ಇಲಾಖೆಗೆ ಮನವಿ ಸಲ್ಲಿಸಿ ತಮ್ಮ ಆಸ್ತಿಯ ಗಡಿಗಳನ್ನು ಸ್ಥಳದಲ್ಲಿರುವಂತೆ ಗುರುತಿಸಿಕೊಳ್ಳಬಹುದಾಗಿದೆ ಎಂದ ಅವರು ನಗರ ಪ್ರದೇಶದಲ್ಲಿನ ಭೂ ವಿವಾಧಗಳ ಪರಿಹಾರಕ್ಕೆ ನಕ್ಷಾ ಯೋಜನೆಯೂ ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.

    ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ನಗರ ಪ್ರದೇಶದ.. ಪ್ರತಿಯೊಂದು ಆಸ್ತಿಯ ಹಕ್ಕು ಅಥವಾ ಮಾಲೀಕತ್ವದ ದಾಖಲೆಯನ್ನು ಕಾನೂನಿನ ಅಡಿಯಲ್ಲಿ ಆಸ್ತಿ ಮಾಲೀಕತ್ವದ ಪುರಾವೆ ಅಥವಾ ಮಾಲೀಕತ್ವದ ಪ್ರಮಾಣಪತ್ರವನ್ನು ಸಿದ್ಧಪಡಿಸುವುದೇ ರಾಷ್ಟ್ರೀಯ ಜಿಯೋಸೋಷಿಯಲ್ ಫಾನ ಆಧಾರಿತ ನಗರ ವಸತಿಗಳ ಭೂ ಸಮೀಕ್ಷೆ (ನಕ್ಷಾ) ಯೋಜನೆಯಾಗಿದೆ. ಈ ಯೋಜನೆಯನ್ನು ಭಾರತ ಸರ್ಕಾರದ ಭೂಸಂಪನ್ಮೂಲ ಇಲಾಖೆಯು ಆರಂಭಿಸಿದ್ದು, ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಪೌರಾಡಳಿತ ಇಲಾಖೆ ಮತ್ತು ಸರ್ವೆ ಆಫ್ ಇಂಡಿಯಾ ಇವರ ಸಹಭಾಗಿತ್ವದಿಂದ ಯೋಜನೆಯನ್ನು ಅನು?ನಗೊಳಿಸಲಾಗುತ್ತಿದೆ ಎಂದರು.

    ನಗರದಲ್ಲಿ ರಸ್ತೆ, ಒಳಚರಂಡಿ, ನೀರು ಪೂರೈಕೆ ಯೋಜನೆಗಳನ್ನು ರೂಪಿಸಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಲು ಯೋಜನೆಯು ಅತ್ಯಂತ ಸಹಾಯಕಾರಿಯಾಗಿದೆ. ಜಿಲ್ಲೆಯೂ ಭೌಗೋಳಿಕವಾಗಿ ಉತ್ತಮ ಪರಿಸರವನ್ನು ಹೊಂದಿದ್ದು ಯೋಜನೆ ಮೂಲಕ ಹಲವಾರು ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸಿ ಅಭಿವೃದ್ಧಿ ಹೊಂದಿದ ನಗರ ನಿರ್ಮಾಣ ಮಾಡಬಹುದು. ಎಂದ ಅವರು ಯೋಜನೆಯಲ್ಲಿ ಡೋನ್ ಫೆಯಿಂಗ್ ನಿಂದ ಜೆಯೋ ರೆಫರೆನೈಡ್ ನಕ್ಷೆಯನ್ನು ತಯಾರಿಸಲಾಗುವುದು. ವಿಚಾರಣಾಧಿಕಾರಿಗಳು ನೀಡಿದ ದಾಖಲೆಗಳ ಮೇಲೆ ಕರಡು ಆಸ್ತಿ ಪತ್ರ ನೀಡಲಾಗುವುದು.  ತಕರಾರು ಸಲ್ಲಿಸಿದಲ್ಲಿ, ವಿಚಾರಣೆ ಮಾಡಿ ಅಂತಿಮ ಆಸ್ತಿ ಪತ್ರವನ್ನು ನೀಡಲಾಗುತ್ತದೆ. ಸಾರ್ವಜನಿಕರ ಸಹಕಾರವಿದ್ದಲ್ಲಿ ಸರ್ವೇ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಿ ಭೂ ಸಂಬಂಧ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ತಿಳಿಸಿದರು.

    ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ ನಗರ ಸಭೆ ವ್ಯಾಪ್ತಿಯ ಎಲ್ಲಾ ಖಾಸಗಿ ಆಸ್ತಿಗಳು, ಖಾಲಿ ನಿವೇಶನಗಳು, ಸಾರ್ವಜನಿಕ ಆಸ್ತಿಗಳು, ನಗರ ಸಭೆ ಆಸ್ತಿಗಳು, ದೇವಸ್ಥಾನ, ಬಸ್ ನಿಲ್ದಾಣ, ರಸ್ತೆ, ಹಳ್ಳ, ಕೆರೆ, ಕಟ್ಟೆ, ಸ್ಮಶಾನ ಮತ್ತು ಇತರೆ ಸರ್ಕಾರಿ ಆಸ್ತಿಗಳನ್ನು ಒಳಗೊಂಡಂತೆ ನೀರಿನ ಪೈಪ್ ಲೈನ್, ವಿದ್ಯುತ್ ಲೈನ್, ಯು.ಜಿ.ಡಿ ಲೈನ್, ಟೆಲೆಪೋನ್ ಲೈನ್ ಮತ್ತು ಸ್ಥಳದಲ್ಲಿ ದೊರೆಯುವ ಇತರೆ ಆಸ್ತಿಗಳನ್ನು ಅಳತೆಗೆ ಒಳಪಡಿಸಿ ನಿಖರವದ ಸರ್ವೆಕಾರ್ಯ ನಡೆಸಲು ಸಹಕರಿಯಾಗಲಿದ್ದು ತೆರಿಗೆ ವಸೂಲಿಗೂ ಅನುಕೂಲವಾಗಲಿದೆ ಎಂದರು.

    ಕಾರ್ಯಕ್ರಮದಲ್ಲಿ ನಗರ ಸಭೆ ಆಯುಕ್ತ ಬಿ.ಸಿ ಬಸವರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನ ನಿರ್ದೇಶಕಿ ನಾಗರತ್ನ, ಭೂ ದಾಖಲೆಗಳ ಉಪನಿರ್ದೇಶಕ ಲೋಹಿತ್.ಟಿ.ಕೆ. ಸಹಾಯಕ ನಿರ್ದೇಶಕ ರುದ್ರೇಶ್, ಸರ್ವೇ ಸೂಪರ್‌ವೈಸರ್ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

    Inauguration of the mapping project for the creation of land records of properties in urban areas

  • ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು

    ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು

    ಚಿಕ್ಕಮಗಳೂರು: ತಾಲೂಕಿನ ಹೆಸರಾಂತ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ.

    ಸೋಮವಾರ ಸಂಜೆ ವೇಳೆ ಕಿಡಿಗೇಡಿಗಳು ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತಗಳ ಸಾಲಿನ ಬೆಟ್ಟಕ್ಕೆ ಬೆಂಕಿ ಹಾಕಿದ್ದಾರೆಂದು ಹೇಳಲಾಗುತ್ತಿದ್ದು, ಕಿಡಿಗೇಡಿಗಳ ಕೃತ್ಯದಿಂದಾಗಿ ಮುಳ್ಳಯ್ಯನಗಿರಿ ಸಮೀಪದಲ್ಲಿ ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ.

    ಸುದ್ದಿ ತಿಳಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದು, ಗಿರಿ ಭಾಗದಲ್ಲಿ ಭಾರೀ ಗಾಳಿ ಇರುವ ಕಾರಣದಿಂದಾಗಿ ಬೆಂಕಿಯ ತೀವ್ರತೆ ಹೆಚ್ಚುತ್ತಿರುವುದರಿಂದ ಬೆಂಕಿನAದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

    ಮುಳ್ಳಯ್ಯನಗಿರಿ ಭಾಗದಲ್ಲಿ ಅಪರೂಪದ ಶೋಲಾ ಕಾಡುಗಳು, ವನ್ಯಜೀವಿಗಳು ಬೆಂಕಿಗೆ ಆಹುತಿಯಾಗುತ್ತಿದ್ದು, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ರಾತ್ರಿಯೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರು ಸಿಬ್ಬಂದಿಯೊAದಿಗೆ ಸೇರಿ ಬೆಂಕಿನಿಂದಿಸಲು ಶ್ರಮಿಸುತ್ತಿದ್ದಾರೆ.

    Forest fire in a forested hill near Mullayanagiri

  • ಮಳಲೂರು ಏತ ನೀರಾವರಿ ಯೋಜನೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ

    ಮಳಲೂರು ಏತ ನೀರಾವರಿ ಯೋಜನೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ

    ಚಿಕ್ಕಮಗಳೂರು: ಕಳೆದ ೨೫ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ ರೈತರ ಭೂಮಿಗೆ ನೀರು ಹರಿಸದಿದ್ದರೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮನೆಯ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಚಳುವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನಿರ್ಧರಿಸಿದೆ.

    ಪತ್ರಿಕಾಗೋಷ್ಠಿಯಲ್ಲಿ ಸೊಮವಾರ ಈ ವಿಷಯ ತಿಳಿಸಿದ ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೈ.ಎಸ್ ಸುನೀಲ್ ಕುಮಾರ್ ಕಳೆದ ೨೫ ವರ್ಷಗಳಿಂದ ಮಳಲೂರು ಏತ ನೀರಾವರಿ ಯೋಜನೆ ಸ್ಥಗಿತಗೊಂಡಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಕಾಮಗಾರಿಯನ್ನು ಪ್ರಾರಂಭಿಸಿ ರೈತರ ಜಮೀನಿಗೆ ನೀರು ಹರಿಸಬೇಕೆಂದು ಒತ್ತಾಯಿಸಿದರು.

    ಸದಾ ಕಾಲ ಬರಗಾಲಕ್ಕೆ ತುತ್ತಾಗುವ ಮಲೆನಾಡಿಗೆ ಹೊಂದಿಕೊಂಡಿರುವ ಗ್ರಾಮಗಳಾದ ಮಳಲೂರು,ಕಲ್ಲಹಳ್ಳಿ, ಸಿರಗಾಪುರ, ಕಂಬೀಹಳ್ಳಿ, ಬಿಗ್ಗನಹಳ್ಳಿ, ತಗಡೂರು, ಕದ್ರಿಮಿದ್ರಿ, ಬಿಕ್ಕೇಮನೆ ಈ ಗ್ರಾಮಗಳ ಸುಮಾರು ೧೬೦೦ ಎಕರೆ ಪ್ರದೇಶದ ರೈತರ ಜಮೀನುಗಳಿಗೆ ನೀರು ಒದಗಿಸುವ ಉದ್ದೇಶದಿಂದ ಹಿಂದೆ ಆರಂಭಗೊಂಡ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳ್ಳದೆ ಈ ಭಾಗದ ರೈತರು ತೊಂದರೆ ಅನುಭವಿಸುತ್ತಿದ್ದಾರೆಂದು ದೂರಿದರು.

    ಅಂಬಳೆ ಹೋಬಳಿ ಮತ್ತಿಕೆರೆ ಗ್ರಾಮದ ಬಳಿ ಯಗಚಿ ಉಪನದಿ ಬಿರಂಜಿ ಹಳ್ಳಿದಿಂದ ಮಳೆಗಾಲದಲ್ಲಿ ಹೆಚ್ಚುವರಿಯಾಗಿ ಹರಿಯುವ ನೀರನ್ನು ಏತ ನೀರಾವರಿ ಮೂಲಕ ಮಳಲೂರು ಹಾಗೂ ಕೆ.ಆರ್. ಪೇಟೆ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳ ಜಮೀನಿಗೆ ನೀರೊದಗಿಸುವ ಯೋಜನೆ ೧೯೯೮ ರಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತು ೨೦೦೦ ನೇ ಇಸವಿಯಲ್ಲಿ ಶಂಕುಸ್ಥಾಪನೆಗೊಂಡು ೨.೫೮ ಕೋಟಿ ರೂ ಅನುದಾನದೊಂದಿಗೆ ಪ್ರಾರಂಭಿಸಲಾಗಿತ್ತು ಎಂದು ತಿಳಿಸಿದರು.

    ನಂತರ ಆಮೆ ಗತಿಯಲ್ಲಿ ಸಾಗಿದ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಆಗ್ರಹಿಸಿ ರೈತಸಂಘ ಅಂದಿನ ಶಾಸಕರು ಹಾಗೂ ಸಚಿವರಾಗಿದ್ದ ಸಿ.ಆರ್. ಸಗೀರ್ ಅಹಮದ್ ಅವರ ಮನೆ ಮುಂದೆ ಅಹೋರಾತ್ರಿ ಚಳುವಳಿ ನಡೆಸಿದ್ದ ಪರಿಣಾಮ ಜಾಕ್‌ವೆಲ್, ಇಂಟಕ್ ವೆಲ್ ಪಂಪ್‌ಹೌಸ್ ಹಾಗೂ ಕಂಬೀಹಳ್ಳಿವರೆಗೆ ಪೈಪ್‌ಲೈನ್ ಕಾಮಗಾರಿ ಪ್ರಾರಂಭವಾಯಿತು ಎಂದರು.

    ಬದಲಾದ ರಾಜಕೀಯ ಸನ್ನಿವೇಶದಿಂದ ಯೋಜನಾ ವೆಚ್ಚ ಹೆಚ್ಚುವರಿಯಾಗಿ ೩.೫೦ ಕೋಟಿಗೆ ಮರು ಅಂದಾಜು ಮಾಡಿದ್ದು ಹೊರತುಪಡಿಸಿದರೆ ಕಾಮಗಾರಿಗೆ ಯಾವುದೇ ಚಾಲನೆ ದೊರೆಯಲಿಲ್ಲ. ಇದನ್ನು ವಿರೋಧಿಸಿ ಜನಪ್ರತಿನಿಧಿಗಳ ಮನೆಯ ಮುಂದೆ ಚಳುವಳಿ ನಡೆಸಿದಾಗ ೭.೫೦ ಕೋಟಿ ರೂ ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ದೊರೆತು ಸಣ್ಣ ನೀರಾವರಿ ಇಲಾಖೆ ನಿರ್ವಹಿಸುತ್ತಿದ್ದ ಕಾಮಗಾರಿಯನ್ನು ಕಾವೇರಿ ನೀರಾವರಿ ನಿಗಮಕ್ಕೆ ವರ್ಗಾಯಿಸಲಾಯಿತು ಎಂದು ಮಾಹಿತಿ ನೀಡಿದರು.

    ಈ ಸಂಬಂಧ ನಾಲಾ ಕಾಮಗಾರಿಗೆ ಭೂಮಿ ವಶಪಡಿಸಿಕೊಂಡ ರೈತರಿಗೆ ಅಲ್ಪಸ್ವಲ್ಪ ಪರಿಹಾರ ಕೊಟ್ಟು ಪ್ರಾರಂಭಗೊಂಡ ಕಾಮಗಾರಿ ವಿದ್ಯುತ್ ಪಂಪ್ ಅಳವಡಿಕೆ ಕಾರ್ಯಕ್ಕೆ ಸೀಮಿತವಾಯಿತು. ಭೂಮಿ ವಶಪಡಿಸಿಕೊಂಡ ರೈತರಿಗೆ ಪರಿಹಾರ ಕೊಡಲು ವಿಳಂಭ ಮಾಡಿದ ಪರಿಣಾಮ ಕಾಮಗಾರಿ ವೆಚ್ಚ ಏರುತ್ತಲೇ ಹೋಯಿತೇ ವಿನಾಃ ಕಾಮಗಾರಿ ಮಾತ್ರ ಪೂರ್ಣಗೊಳ್ಳಲಿಲ್ಲ ಎಂದು ಆರೋಪಿಸಿದರು.

    ಸದರಿ ಕಾಮಗಾರಿ ಪೂರ್ಣಗೊಂಡಿದ್ದರೆ ರೈತರ ಭೂಮಿಗೆ ನೀರೊದಗಿಸುವ ಜೊತೆಗೆ ಈ ಭಾಗದ ಹಳ್ಳಿಗಳಿಗೆ ಕುಡಿಯುವ ನೀರಿನ ಭವಣೆಯನ್ನು ತಪ್ಪಿಸಬಹುದಿತ್ತು. ಇದರಲ್ಲಿ ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆ ಯೋಜನೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಲಿಲ್ಲ ಎಂದು ದೂರಿದ ಅವರು, ಈಗ ಕಾವೇರಿ ನೀರಾವರಿ ನಿಗಮದಲ್ಲಿ ೬.೫೦ ಕೋಟಿ ರೂ ಇದ್ದು, ಅವಶ್ಯಕತೆ ಇರುವ ೮.೫೦ ಕೋಟಿ ರೂ ಹಣವನ್ನು ಈ ಬಾರಿಯ ಬಜೆಟ್‌ನಲ್ಲಿ ಮೀಸಲಿರಿಸಿ ನಿಗಮಕ್ಕೆ ಹಣ ಮಂಜೂರು ಮಾಡುವಂತೆ ಆಗ್ರಹಿಸಿದರು.

    ನಿಕಟಪೂರ್ವ ಗುರುಶಾಂತಪ್ಪ ಮಾತನಾಡಿ, ಜಿಲ್ಲೆಯ ಎಲ್ಲಾ ನೀರಾವರಿ ಯೋಜನೆಗಳನ್ನು ಹಾಗೂ ಕೆರೆ ತುಂಬಿಸುವ ಯೋಜನೆ ಪೂರ್ಣಗೊಳಿಸುವ ಯೋಜನೆ ಸಮಗ್ರ ಕುಡಿಯುವ ನೀರು ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಅವರು, ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸಿ ರೈತರ ಭೂಮಿಗೆ ನೀರೊದಗಿಸಬೇಕು. ಇಲ್ಲದಿದ್ದರೆ ಆಹಾರದ ಅಭಾವ ತಲೆದೋರಲಿದೆ ಎಂದು ಎಚ್ಚರಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್.ಡಿ, ಪ್ರಧಾನ ಕಾರ್ಯದರ್ಶಿ ಎಂ.ಬಿ ಚಂದ್ರಶೇಖರ್, ರಾಜ್ಯ ಸಮಿತಿ ವರಿಷ್ಠ ಕೆ.ಕೆ. ಕೃಷ್ಣೇಗೌಡ, ಮುಖಂಡರಾದ ಹೆಚ್.ಡಿ. ಉಮೇಶ್, ದಯಾನಂದ್, ರಾಮೇಗೌಡ, ಸೋಮೇಗೌಡ ಮತ್ತಿತರರು ಉಪಸ್ಥಿತರಿದ್ದರು

    Farmers’ union protests demanding Malaur lift irrigation project

  • ಪೊಲೀಸರಿಗೆ ಸಾರ್ವಜನಿಕರ ಸಹಕಾರವಿದ್ದಲ್ಲಿ ಸಾಮಾಜ ಸುಸ್ಥಿರ

    ಪೊಲೀಸರಿಗೆ ಸಾರ್ವಜನಿಕರ ಸಹಕಾರವಿದ್ದಲ್ಲಿ ಸಾಮಾಜ ಸುಸ್ಥಿರ

    ಚಿಕ್ಕಮಗಳೂರು:  ಸಾಮಾಜದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗಾಗಿ ಕಾರ್ಯನಿರ್ವಹಿಸುವ ಪೊಲೀಸರೊಂದಿಗೆ ಸಾರ್ವಜನಿಕರು ಉತ್ತಮ ಭಾಂದವ್ಯವನ್ನಿರಿಸಿಕೊಂಡು ಅವರ ಕರ್ತವ್ಯಕ್ಕೆ ಸಹಕಾರ ನೀಡಿದರೆ ಸುಸ್ಥಿರ ಸಮಾಜ ನಿರ್ಮಾಣ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.

    ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಂದು ನಗರದ ರಾಮನಹಳ್ಳಿ ಪೊಲೀಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ನಾಗರೀಕ ಬಂದೂಕು ಶಿಬಿರದ ಸಮಾರೋಪ ಸಮಾರಂಭ ಮತ್ತು ಯಶಸ್ವಿಯಾಗಿ ಬಂದೂಕು ತರಬೇತಿ ಪೂರ್ಣಗೊಳಿಸಿದ ನಾಗರೀಕರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಲಾಖೆಯು ಭದ್ರತೆ ಹಾಗೂ ರಕ್ಷಣೆ ಜೊತೆಗೆ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ನಿಷ್ಠೆಯಿಂದ ಕರ್ತವ್ಯದಲ್ಲಿ ತೊಡಗಿಕೊಂಡಿದೆ ಪ್ರತಿಯೊಬ್ಬ ನಾಗರೀಕನೂ ಕಾನೂನು ಅರಿತು ಪಾಲಿಸಿದಲ್ಲಿ ಅಪರಾಧ ಸಂಖ್ಯೆ ಕ್ಷೀಣಿಸುವುದರೊಂದಿಗೆ ಸ್ವಾಸ್ಥ್ಯ ಸಮಾಜವು ನಿರ್ಮಾಣವಾಗುತ್ತದೆ ಎಂದರು.

    ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸಮಾಜದ ಎಲ್ಲಾ ಸ್ಥಿತಿಗತಿಗಳು, ಆಗು-ಹೋಗುಗಳನ್ನು ಸ್ಫಷ್ಟವಾಗಿ ಅರಿತ ವಿದ್ಯಾವಂತರೇ ಸೈಬರ್ ಕ್ರೈಂನಿಂದ ತಮ್ಮ ಹಣ ಕಳೆದುಕೊಂದು ವಂಚಿತರಾಗಿದ್ದಾರೆ. ಯಾವುದೇ ಅಪರಿಚಿತ ಸಂಖ್ಯೆಯಿಂದ ಕರೆಗಳು ಬಂದಲ್ಲಿ ಸೈಬರ್ ಕ್ರೈಂ ಸಹಾಯವಾಣಿ ಸಂಖ್ಯೆ ೧೯೩೦ಗೆ ಕರೆ ಮಾಡಿ ಮಾಹಿತಿ ನೀಡಿ ಅವುಗಳಿಂದ ತಪ್ಪಿಸಿಕೊಳ್ಳಬಹುದಾಗಿದೆ ಎಂದರು.

    ಜಿಲ್ಲೆಯೂ ಕಾಫಿ ಬೆಳೆಗೆ ಪ್ರಸಿದ್ಧಿಯಾಗಿದ್ದು ಇದು ಉದ್ಯೋಗ ಸೃಷ್ಠಿಗೂ ಸಹಕಾರಿಯಾಗಿದೆ. ಜಿಲ್ಲೆಯಲ್ಲಿರುವ ವಿವಿಧ ಕಾಫಿ ಎಸ್ಟೇಟ್‌ಗಳಿಗೆ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದಲೂ ಕೂಲಿ ಕಾರ್ಮಿಕರು ಉದ್ಯೋಗ ಅರಿಸಿ ಬರುತ್ತಾರೆ. ಕಾಫಿ ಎಸ್ಟೇಟ್ ಮಾಲೀಕರುಗಳು ತಮ್ಮಲ್ಲಿಗೆ ಬರುವ ಹೊರ ರಾಜ್ಯಗಳ ಕೂಲಿ ಕಾರ್ಮಿಕರ ಮಾಹಿತಿಯನ್ನು ಸಂಗ್ರಹಿಸಿ ಹತ್ತಿರದ ಪೊಲೀಸ್ ಠಾಣೆಗೆ ನೀಡಬೇಕು. ಇದರಿಂದ ಕಾರ್ಮಿಕರ ಹಿನ್ನೆಲೆಯನ್ನು ಗುರುತಿಸಿ ಸಂಭವಿಸಬಹುದಾದ ಅಪರಾಧಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದರು.

    ಅಕ್ರಮ ಗಾಂಜ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಗಾಂಜ ಸೇವನೆ ಹಾಗೂ ಮಾರಾಟ ಕಂಡುಬಂದಲ್ಲಿ ಸಾರ್ವಜನಿಕರು ಕರ್ನಾಟಕ ಡ್ರಗ್ ಫಿ ಆಪ್ ಮೂಲಕ ದೂರು ನೀಡಬೇಕು. ಇದರಲ್ಲಿ ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡಲಾಗುತ್ತದೆ ಮತ್ತು ಅಕ್ರಮ ವೆಸಗುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ತುರ್ತು ಕಾರ್ಯಗಳಿಗೆ ೧೧೨ ಗೆ ಕರೆ ಮಾಡಿ ತಿಳಿಸಿದಲ್ಲಿ ಕರೆ ಮಾಡಿದ ೨೦ ನಿಮಿಷದೊಳಗಾಗಿ ತುರ್ತು ಪೊಲೀಸ್ ಸಿಬ್ಬಂಧಿಗಳು ಸ್ಫಂಧಿಸುತ್ತಾರೆ ಎಂದರು.

    ಜಿಲ್ಲೆಯೂ ಭೌಗೋಳಿಕವಾಗಿ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿದ್ದು ವನ್ಯ ಜೀವಿಗಳಿಂದ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಹಾಗೂ ತಮ್ಮ ರಕ್ಷಣೆಯ ಉದ್ದೇಶದಿಂದ ಇಲಾಖೆ ವತಿಯಿಂದ ಬಂದೂಕು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿ ತರಬೇತಿ ನೀಡಲಾಗುತ್ತಿದೆ. ಬಂದೂಕುದಾರರು ತಮಗೆ ನೀಡಿರುವ ಬಂದೂಕು ಪರವಾನಗಿಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಬಂದೂಕು ಸುರಕ್ಷತೆ ಹಾಗೂ ನಿರ್ವಹಣೆಗಳ ಕುರಿತು ಹೆಚ್ಚು ಎಚ್ಚರವಾಗಿರಬೇಕು. ತರಬೇತಿ ಸಮಯದಲ್ಲಿ ನೀಡಿರುವ ಎಲ್ಲಾ ಮಾಹಿತಿಗಳನ್ನು ಚಾಚು ತಪ್ಪದೆ ಪಾಲಿಸಿ ಸಂದಿಗ್ಧ ಸ್ಥಿತಿಯಲ್ಲಿ ಸ್ವಯಂ ಪ್ರೇರಿತರಾಗಿ ಇಲಾಖೆಯೊಂದಿಗೆ ಕೈ ಜೋಡಿಸಿದಲ್ಲಿ ಭಾಂದವ್ಯದ ಜೊತೆ ಆರೋಗ್ಯಯುತ ಸಮಾಜವು ಸ್ಥಾಪನೆಯಾಗುತ್ತದೆ ಎಂದು ಹೇಳಿದರು.

    ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಶ್‌ಪಾಲ್ ಕ್ಷಿರಸಾಗರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ. ಇಲ್ಲಿ ತರಬೇತಿಯೊಂದಿಗೆ ಪರವಾನಗಿಯನ್ನು ಪಡೆದು ಬಂದೂಕುಗಳನ್ನು ಬಳಕೆ ಮಾಡುವ ಪ್ರತಿಯೊಬ್ಬರು ಅದರ ಸುರಕ್ಷತೆ ಬಗ್ಗೆ ಹೆಚ್ಚು ಗಮನ ವಹಿಸಬೇಕು. ಬಂದೂಕುಗಳನ್ನು ಕೇವಲ ತಮ್ಮ ರಕ್ಷಣೆಗೆ ಮಾತ್ರ ಬಳಸಿಕೊಳ್ಳಿ ಯಾವುದೇ ಕಾನೂನು ಬಾಹಿರ ಕಾರ್ಯಗಳಲ್ಲಿ ತೊಡಗಿಕೊಳ್ಳದೇ ಹಾಗೂ ತಮ್ಮ ಬಂದೂಕುಗಳನ್ನು ಇತರರು ಬಳಕೆ ಮಾಡದಂತೆ ಎಚ್ಚರವಹಿಸಬೇಕು ಎಂದರು.

    ಪ್ರಾಣಿಗಳಿಂದ ಯಾವುದೇ ಪ್ರಾಣ ಹಾನಿಯಾದ ಪ್ರಕರಣಗಳಿಗೆ ಸಕಾಲದಲ್ಲಿ ಪರಿಹಾರ ನೀಡಲಾಗುತ್ತಿದೆ. ಬೆಳೆ ನಾಶ ಹಾಗೂ ಪ್ರಕರಣಳಿಗೆ ಸಮೀಕ್ಷೆ ನಡೆಸಿ ಅತಿ ಶೀಘ್ರವಾಗಿ ಪರಿಹಾರ ಒದಗಿಸಿಕೊಡುವ ನಮ್ಮ ಪ್ರಯತ್ನ ಪ್ರಾಮಾಣಿಕವಾಗಿದೆ. ಜಿಲ್ಲೆಯಲ್ಲಿ ಆನೆ ದಾಮ ನಿರ್ಮಿಸಲು ಅರಣ್ಯ ಸಚಿವರೊಂದಿಗೆ ಚರ್ಚಿಸಿ ಯೋಜನೆ ರೂಪಿಸಲಾಗಿದೆ ಇದರಿಂದ ಆನೆಗಳ ಸ್ಥಳಾಂತರ ಕಾರ್ಯಗಳು ವೇಗಗತಿಯಲ್ಲಿ ಸಾಗುತ್ತವೆ ಎಂದ ಅವರು ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಬುದ್ಧಿ ಜೀವಿಗಳಾದ ನಾವುಗಳು ಪರಿಸರ ಕಾಳಜಿ ಹೊಂದಿರಬೇಕು. ಅರಣ್ಯ ಉಳಿದರೆ ಪ್ರತಿಯೊಂದು ಜೀವಿಯೂ ಸುರಕ್ಷಿತವಾಗಿರಬಹುದು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಡಾ.ಸುಮಂತ್. ಡಿ.ಐ.ಆರ್ ಸಹದೇವ್ ಎಸ್.ವೈ, ಬಂದೂಕು ತರಬೇತಿದಾರರಾದ ಅಬ್ದುಲ್‌ರೆಹಮಾನ್, ಸತೀಶ್, ಪ್ರಸನ್ನ ಜಿ.ಕೆ., ಗಂಗಾಧರ್ ಸೇರಿದಂತೆ ಶಿಬಿರಾರ್ಥಿಗಳು ಹಾಗೂ ಪೊಲೀಸ್ ಇಲಾಖೆ ಸಿಬ್ಬಂಧಿಗಳು ಉಪಸ್ಥಿತರಿದ್ದರು.

    Closing ceremony of the Civilian Firearms Camp

  • ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

    ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

    ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಿಂದ ಕಾರ್ಮಿಕರು, ತೋಟಗಳ ಮಾಲೀಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಳಸ ತಾಲೂಕು ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದ ರಘುಪತಿ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ತಿವಿದು ಮೃತಪಟ್ಟ ಬೆನ್ನಲ್ಲೆ ತಣಗೆಬೈಲು ವನ್ಯಜೀವಿ ವ್ಯಾಪ್ತಿಯ ಕತ್ಲೆಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಯಲು ತೆರಳುತ್ತಿದ್ದ ವಿನೋಬ ಬಾಯಿ (೪೦) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ್ದು ಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

    ನರಸಿಂಹರಾಜಪುರ ತಾಲೂಕು ತರೀಕೆರೆ ಅರಣ್ಯ ವ್ಯಾಪ್ತಿಯಲ್ಲಿನ ಭದ್ರಾ ಅರಣ್ಯ ವಲಯಕ್ಕೆ ಸೇರಿದ ಕತ್ಲೇಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಲು ಮಾಡಲು ತೆರಳುತ್ತಿದ್ದ ವಿನೋಬ ಬಾಯಿ ಅವರ ಮೇಲೆ ಕಾಡಾನೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಕಾರ್ಮಿಕ ಮಹಿಳೆ ಜತೆ ಇಬ್ಬರು ಮಹಿಳೆಯರಿದ್ದು, ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮೃತ ಮಹಿಳೆ ವಿನೋಬ ಬಾಯಿ ಹರಪನಹಳ್ಳಿ ತಾಲೂಕಿನ ಶಿವಪುರ ಗ್ರಾಮಕ್ಕೆ ಸೇರಿದವರಾಗಿದ್ದು, ಉದ್ಯೋಗ ಅರಸಿ ಚಿಕ್ಕಮ ಗಳೂರು ಜಿಲ್ಲೆಗೆ ಬಂದಿದ್ದರು. ಶನಿವಾರ ಬೆಳಿಗ್ಗೆ ನಡೆದ ಘಟನೆಯಿಂದ ಕಾರ್ಮಿಕ ಮಹಿಳೆ ಮೃತಪಟ್ಟಿದ್ದಾಳೆ. ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಿಂದ ಕಾರ್ಮಿಕರು, ತೋಟಗಳ ಮಾಲೀಕರು ಪ್ರಾಣಕಳೆದುಕೊಳ್ಳುತ್ತಿದ್ದು, ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತೀಚಿನ ವರ್ಷಗಳಲ್ಲಿ ಕಾಡಾನೆ ದಾಳಿಯಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ೨೦೧೮ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ೧೮ ಜನ ಕಾಡಾನೆ ದಾಳಿಗೆ ಸಲುಕಿ ಮೃತಪಟ್ಟಿದ್ದಾರೆ. ಇನ್ನೂ ಅನೇಕರು ವನ್ಯಜೀವಿಗಳ ದಾಳಿಗೆ ಸಿಲುಕಿ ಅಂಗಾಂಗಳನ್ನು ಕಳೆದುಕೊಂಡು ನರಕ ಸದೃಶ್ಯ ಜೀವನ ನಡೆಸುತ್ತಿದ್ದಾರೆ. ಘಟನೆ ನಡೆಸದ ಸಂದರ್ಭದಲ್ಲಿ ಅರಣ್ಯ ಇಲಾಖೆ ಮೃತ ಕುಟುಂಬಕ್ಕೆ ಪರಿಹಾರ ನೀಡಿ ಕೈ ತೊಳೆದುಕೊಳ್ಳುತ್ತದೆ ಹೊರತು ವನ್ಯಜೀವಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗುತ್ತಿಲ್ಲವೆಂಬ ಆರೋಪ ಪದೇ ಪದೇ ಕೇಳಿ ಬರುತ್ತಿದೆ.

    ಪರಿಹಾರದ ಚಕ್ ವಿತರಣೆ: ಕತ್ಲೆಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಯಲು ತೆರಳುತ್ತಿದ್ದ ವಿನೋಬ ಬಾಯಿ (೪೦) ಎಂಬುವರ ಮೇಲೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾಳೆ ಕಾರ್ಮಿಕ ಮಹಿಳೆಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ಶಾಸಕರಾದ ಟಿ.ಡಿ.ರಾಜೇಗೌಡ ಹಾಗೂ ಜಿ.ಎಚ್.ಶ್ರೀನಿವಾಸ್ ೧೫ ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿ ಸಂತ್ವಾನ ಹೇಳಿದರು.

    Woman worker killed in wild attack

     

     

  • ದೆಹಲಿವಿಧಾನಸಭೆ ಬಿಜೆಪಿಗೆ ಜಯ: ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

    ದೆಹಲಿವಿಧಾನಸಭೆ ಬಿಜೆಪಿಗೆ ಜಯ: ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

    ಚಿಕ್ಕಮಗಳೂರು: : ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶವು ಹೊಸ ವಿಶ್ವಾಸ ಜೊತೆಗೆ ಸಂತೋಷ ತಂದಿದೆ. ಇದರೊಂದಿಗೆ ದೆಹಲಿ ವಿಧಾನ ಸಭೆಯಲ್ಲಿ ಸತತ ಮೂರನೇ ಬಾರಿಗೆ ಶೂನ್ಯ ಸಾಂಪಾದನೆ ಮೂಲಕ ಸೋಲನುಭವಿಸಿ ದಿಕ್ಕಾಪಾಲಾಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕು ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆಂದು ಕಾರ್ಕಳಾ ಶಾಸಕ ಸುನಿಲ್ ಕುಮಾರ್ ಹೇಳಿದರು.

    ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ನಗರದ ಬಿಜೆಪಿ ಕಚೇರಿಯಿಂದ ಆಜಾದ್ ವೃತ್ತದ ವರೆಗೆ ಮೋದಿ ಕಟೌಟ್ ಹಿಡಿದು ಮೆರವಣಿಗೆ ಮಾಡಿ ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿ ನಂತರ ಮಾತನಾಡಿದ ಅವರು.ದೇಶದ ರಾಜಧಾನಿಯಲ್ಲಿ ಕೇಸರಿ ಆಡಳಿತ ಮುಂದುವರಿಯುತ್ತಿದೆ. ಇನ್ನು ಐದು ವರ್ಷ ಡಬಲ್ ಇಂಜೀನ್ ಸರ್ಕಾರದ ಮೂಲಕ ವಿಶ್ವಾಸದ ಆಡಳಿತ ನೀಡಲು ಬಿಜೆಪಿ ಸರ್ಕಾರ ಮುಂದಾಗಿದೆ. ನರೇಂದ್ರ ಮೋದಿ ಯವರ ಜನಪ್ರೀಯತೆಗೆ ದೆಹಲಿಯ ಮತದಾರರು ದೊಡ್ಡ ಪ್ರಮಾಣದ ಗೆಲುವನ್ನು ನೀಡಿದ್ದಾರೆ ಎಂದರು.

    ದೇಶದ ಅಖಂಡತೆ ವಿರುದ್ಧ ಸಧಾ ಕಾಲಾ ಮಾತನಾಡುತಿದ್ದ ಕೇಜ್ರಿವಾಲ್‌ರವರನ್ನು ಜನ ತಿರಸ್ಕರಿಸಿದ್ದಾರೆ. ಭಾಷಣಗಳಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡಿ ಆಡಳಿತದಲ್ಲಿ ಭ್ರಷ್ಟಾಚಾರವನ್ನೆ ಅಸ್ತ್ರವಾಗಿರಿಸಿ, ಅಣ್ಣ ಅಜಾರೆಯವರ ಹೋರಾಟವನ್ನು ದುರುಪಯೋಗೊಳಿಸಿಕೊಂಡು ದೇಶದ ಜನತೆಗೆ ನಿರಂತರ ಸುಳ್ಳುಗಳನ್ನು ಹೇಳಿ ಆಡಳಿತ ನಡೆಸುತ್ತಿದ್ದ ಹತ್ತು ವರ್ಷಗಳ ಅವರ ಅಧಿಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಉತ್ತಮ ಆಡಳಿತ ನೀಡಿ ದೆಹಲಿಯ ವಿಜಯ ಯಾತ್ರೆ ಕರ್ನಾಟಕದಲ್ಲು ಮುಂದುವರೆಯುವಂತೆ ಮಾಡಲಾಗುತ್ತದೆ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಮಾತನಾಡಿ ದೆಹಲಿ ವಿಧಾನ ಚುನಾವಣೆಯಲ್ಲಿ ಬಹುಮತ ಪಡೆದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೂಲಕ ಕೇಜ್ರಿವಾಲ್‌ರವರ ದುಷ್ಟ ಆಡಳಿತಕ್ಕೆ ಅಂತ್ಯವಾಡಿದೆ. ದೇಶದ ಜನತೆಗೆ ದೆಹಲಿ ಚುನಾವಣಾ ಫಲಿತಾಂಶವು ಉತ್ತಮ ಸಂದೇಶವನ್ನು ನೀಡಿದೆ ಎಂದ ಅವರು ದೇಶದಲ್ಲಿ ಕೇವಲ ಬೆರಳೆಣಿಕೆ ರಾಜ್ಯಗಳಲ್ಲಿರುವ ಕಾಂಗ್ರೆಸ್ ಸರ್ಕಾರವು ಪತನಗೊಳ್ಳುವ ಕಾಲ ಹತ್ತಿರದಲ್ಲಿದೆ ಎಂದರು.

    ವಿಜಯೋತ್ಸವದಲ್ಲಿ ನಗರ ಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಮುಖಂಡರಾದ ಕಲ್ಮರುಡಪ್ಪ, ಕೋಟೆ ರಂಗನಾಥ್, ಬಿ.ರಾಜಪ್ಪ, ಪ್ರೇಮ್‌ಕುಮಾರ್, ಪುಷ್ವರಾಜ್, ಜದಂತಾ ಅನಿಲ್ ಕುಮಾರ್, ಜಯವರ್ಧನ್, ಸಂತೋಷ್ ಕೋಟ್ಯಾನ್, ಕೆ.ಪಿ.ವೆಂಕಟೇಶ್, ಕವೀಶ್, ಪುಟ್ಟಸ್ವಾಮಿ ಜಯ್ಯಣ್ಣ, ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.

    Delhi Assembly victory for BJP: BJP workers celebrate in the city

  • ನಗರದಲ್ಲಿ ಜಂಬೂ ಸರ್ಕಸ್-ಸಾಹಸ ಚಟುವಟಿಕೆಗಳ ಪ್ರದರ್ಶನ

    ನಗರದಲ್ಲಿ ಜಂಬೂ ಸರ್ಕಸ್-ಸಾಹಸ ಚಟುವಟಿಕೆಗಳ ಪ್ರದರ್ಶನ

    ಚಿಕ್ಕಮಗಳೂರು:  ಏಷ್ಯ ಖಂಡದಲ್ಲೇ ಅತಿ ದೊಡ್ಡ ಸರ್ಕಸ್ ತಂಡವಾದ ಜಂಬೂ ಸರ್ಕಸ್‌ರವರಿಂದ ನಗರದ ಬೈಪಾಸ್ ರಸ್ತೆ, ಕಲ್ಯಾಣ ನಗರದಲ್ಲಿ ಅತ್ಯದ್ಭುತ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು ಕಲಾಭಿಮಾನಿಗಳೂ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಸರ್ಕಸ್ ಫ್ಯಾನ್ಸ್ ಫೇರ್‌ವೆಲ್ ಅಸೋಷಿಯೇಷನ್ ಅಧ್ಯಕ್ಷ ನಾಗೇಶ್ ಹೇಳಿದರು

    ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜಂಬೂ ಸರ್ಕಸ್ ತಂಡವೂ ೧೯೭೭ರ ಅಕ್ಟೋಬರ್ ೨ರಂದು ಎಂ.ವಿ ಶಂಕರನ್ ಅವರ ಮಾಲೀಕತ್ವದಲ್ಲಿ ಬಿಹಾರಿನ ದಾನಪುರದಲ್ಲಿ ಪ್ರಾರಂಭವಾಗಿದ್ದು. ಪ್ರಸ್ತುತ ಅವರ ಮಕ್ಕಳಾದ ಅಜಯ್‌ಶಂಕರ್ ಹಾಗೂ ಅಶೋಕ್‌ಶಂಕರ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈ ತಂಡದಲ್ಲಿ ನೂರು ಜನ ಕಲಾವಿದರು, ಮಹಿಳೆಯರು, ಪುರು?ರು, ಕಚೇರಿ ನೌಕರರು ಇತರ ಸಹಾಯಕ ನೌಕರರು ಸೇರಿದಂತೆ ಒಟ್ಟು ೩೦೦ಕ್ಕೂ ಹೆಚ್ಚು ಜನ ಸರ್ಕಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

    ಸರ್ಕಸ್ಸಿನಲ್ಲಿ ಆಫ್ರಿಕಾ, ರಷ್ಯಾದ ವಿದೇಶಿ ಕಲಾವಿದರು ಒಳಗೊಂಡಂತೆ ದೇಶದ ವಿವಿದ ರಾಜ್ಯಗಳ ಕಲಾವಿದರು ಮೈ ಜುಮ್ ಎನಿಸುವಂತಹ ಸಾಹಸಗಳು, ಅಮೆರಿಕನ್ ಸ್ಪೀಡ್ ವೀಲ್, ಡಬಲ್ ರಿಂಗ್ ಅಕ್ರೋಬ್ಯಾಟ್, ಪೀಕಾಕ್ ಡ್ಯಾನ್ಸ್, ಗ್ಲೋಬಲ್ ಡೆತ್ ಇನ್ ಡಾರ್ಕ್‌ನೆಸ್ ಹಾಗೂ ರೊಮ್ಯಾಂಟಿಕ್ ಸ್ಯಾರಿ ಡ್ಯಾನ್ ಸೇರಿದಂತೆ ವಿವಿದ ಸಾಹಸಮಯ ಚಟುಚಟಿಕೆಗಳನ್ನು ಪ್ರದರ್ಶಿಸುತ್ತಾರೆ,

    ಬಹು ಭಾಷಾ ಚಿತ್ರಗಳಲ್ಲಿ ಈ ಸರ್ಕಸ್‌ನ ಬಳಸಿ ಹಲವಾರು ಚಿತ್ರಗಳನ್ನು ಚಿತ್ರಿಸಲಾಗಿದೆ. ನೆಹರು, ಇಂದಿರಾಗಾಂಧಿ, ವಿದೇಶಿ ಗಣ್ಯರು, ಅಮಿತಾ ಬಚ್ಚನ್, ಧಮೇಂದ್ರ ರಾಜೇಶ್ ಖನ್ನ, ಹೇಮಮಾಲಿನಿ ಸೇರಿದಂತೆ ಇನ್ನೂ ಅನೇಕ ಚಲನಚಿತ್ರ ನಟ-ನಟಿಯರು ಸರ್ಕಸ್ ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿ ಹೆಮ್ಮೆಯಿಂದ ಬೆನ್ನು ತಟ್ಟಿದ್ದಾರೆ ಎಂದರು.

    ಸರ್ಕಸ್‌ನ ಕಲಾವಿದರು ವ?ವಿಡಿ ಭಾರತದ ಉದ್ದಗಲಕ್ಕು ಸಂಚರಿಸಿ ಜನರನ್ನು ರಂಜಿಸಿ ಮೆಚ್ಚಿಸಿದ್ದಾರೆ. ಇದೀಗ ಚಿಕ್ಕಮಗಳೂರಿನಲ್ಲಿ ಪ್ರಾರಂಭಿಸಿದ್ದು ಮಧ್ಯಾಹ್ನ ೧ ಗಂಟೆ, ಸಂಜೆ ೪ ಗಂಟೆ ಹಾಗೂ ರಾತ್ರಿ ೭ ಗಂಟೆಗೆ ಪ್ರತಿ ದಿನ ೩ ಆಟಗಳು ಪ್ರದರ್ಶಿಸಲಾಗುತ್ತಿದೆ ಎಂದು ತಿಳಿಸಿದರು.

    ಪದರ್ಶನಕ್ಕೆ ಮುಂಗಡ ಬುಕಿಂಗ್ ಸೌಲಭ್ಯವಿದ್ದು  ದೂ.ಸಂ ೬೨೩೮೩೪೭೦೦೬, ೮೨೮೧೬೦೬೮೯೨ ಅಥವಾ ೮೮೦೯೦೦೦೧೭೫.ಗೆ ಕರೆ ಮಾಡಿ ಬುಕಿಂಗ್ ಮಾಡಿಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ರಾಜೀವ್, ವರ್ಗೀಸ್, ಅಂಥೋಣಿ, ಮೂರ್ತಿ ಉಪಸ್ಥಿತರಿದ್ದರು.

    Jumbo Circus-Adventure activities show in the city

  • ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಜಿಲ್ಲೆಗೆ ನಾಲ್ಕು ಪ್ರಶಸ್ತಿ

    ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಜಿಲ್ಲೆಗೆ ನಾಲ್ಕು ಪ್ರಶಸ್ತಿ

    ಚಿಕ್ಕಮಗಳೂರು: ೨೦೨೩-೨೪ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ತರೀಕೆರೆ ತಾಲ್ಲೂಕು ಪಂಚಾಯಿತಿ, ಬರಗೇನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಬಿಂತ್ರವಳ್ಳಿ ಗ್ರಾಮ ಪಂಚಾಯಿತಿಯ ವೈಯಕ್ತಿಕ ಫಲಾನುಭವಿ ಹೊನ್ನಮ್ಮ ಅವರಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಫೆ.೫ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ರಿಜ್ವಾನ್ ಅರ್ಷದ್, ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

    ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೀರ್ತನಾ ಎಚ್.ಎಸ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೃಷ್ಣ ನಾಯ್ಕ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರವಿ ಕುಮಾರ್, ತರೀಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೇವೇಂದ್ರಪ್ಪ, ಸಹಾಯಕ ನಿರ್ದೇಶಕ ಯೋಗೇಶ್ ಇದ್ದರು.

    Four awards for the district under the Mahatma Gandhi Narega scheme

  • ಹುಲಗಾರುಬೈಲು ಅರಣ್ಯದಲ್ಲಿ ನಾಡ ಬಂದೂಕು ಪತ್ತೆ

    ಹುಲಗಾರುಬೈಲು ಅರಣ್ಯದಲ್ಲಿ ನಾಡ ಬಂದೂಕು ಪತ್ತೆ

    ಚಿಕ್ಕಮಗಳೂರು: ಹುಲಗಾರುಬೈಲು ಅರಣ್ಯದಲ್ಲಿ ಬಂದೂಕು ಪತ್ತೆಯಾಗಿದ್ದು, ಶರಣಾದ ನಕ್ಸಲರು ಎಸೆದಿರುವ ಶಂಕೆ ವ್ಯಕ್ತವಾಗಿದೆ.

    ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಗಾರುಬೈಲು ಅರಣ್ಯದ ನಡುವೆ ಒಂದು ನಾಡ ಬಂದೂಕು, ೧೮ ಖಾಲಿ ಕಾಟ್ರೇಜ್ ಪತ್ತೆಯಾಗಿದ್ದು, ಇದರ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಕ್ಸಲರ ಶರಣಾಗತಿ ಬೆನ್ನಲ್ಲೇ ಕಾಡಿನಲ್ಲಿ ಬಂದೂಕು ಪತ್ತೆಯಾಗಿದೆ.

    ಫೆಬ್ರವರಿ ೧ ರಂದು ನಕ್ಸಲ್ ಕೋಟೆಹೊಂಡ ರವೀಂದ್ರ ಶಸ್ತ್ರ ರಹಿತವಾಗಿ ಶರಣಾಗತಿಯಾಗಿದ್ದ. ರವೀಂದ್ರ ಬಳಿ ಇದ್ದ ಶಸ್ತ್ರ ಇದೀಗ ಪತ್ತೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶರಣಾಗತಿ ಮುನ್ನ ರವೀಂದ್ರ ಕಾಡಿನಲ್ಲಿ ಎಸೆದಿರಬಹುದು ಎನ್ನಲಾಗುತ್ತಿದೆ.

    ಶೃಂಗೇರಿ ಪೊಲೀಸರು ನಾಡ ಬಂದೂಕು ಸೇರಿದಂತೆ ೧೮ ಖಾಲಿ ಕಾಟ್ರೇಜ್ ವಶಕ್ಕೆ ಪಡೆದಿದ್ದಾರೆ. ನರಸಿಂಹ ರಾಜಪುರ ಠಾಣಾ ವ್ಯಾಪ್ತಿಯಲ್ಲೂ ಈ ಹಿಂದೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಕಾಡಿನ ನಡುವೆ ಭೂಮಿಯೊಳಗೆ ಹೂತುಹಾಕಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು.

    ಈ ವೇಳೆ ಎಕೆ ೫೬ ಸೇರಿದಂತೆ ೬ ಬಂದೂಕು ಜೀವಂತ ಮದ್ದುಗುಂಡು ಪತ್ತೆಯಾಗಿದ್ದವು.

    ಹುಲುಗಾರು ಬೈಲಿನ ಕಾಡಿನಲ್ಲಿ ಪತ್ತೆಯಾಗಿರುವ ಒಂಟಿನಳಿಕೆ ಬಂದೂಕು ಶಿಕಾರಿಗೆಂದು ಬಂದವರು ಬಿಟ್ಟುಹೋಗಿದ್ದಾರೆಯೋ ಅಥವಾ ಇತ್ತೀಚೆಗೆ ಶಸ್ತ್ರರಹಿತವಾಗಿ ಶರಣಾಗಿರುವ ನಕ್ಸಲ್ ರವೀಂದ್ರ ಎಸೆದಿರುವ ಬಂದೂಕು ಎಂಬುದು ತನಿಖೆಯಿಂದ ತಿಳಿಯಬೇಕಿದೆ.

    ಶರಣಾಗತಿಯಾದ ರವೀಂದ್ರ ಹೇಳಿದ್ದು, ನನ್ನ ಬಳಿ ಶಸ್ತ್ರ ಇಲ್ಲವೆಂದು ಇದು ಯಾರಿಗೆ ಸೇರಿರಬಹುದೆಂಬುದು ತಿಳಿಯದಾಗಿದೆ.

    Gun found in Hulagarubailu forest