Category: ಜಿಲ್ಲಾ ಸುದ್ದಿ

  • ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ದೇವೀರಮ್ಮ ಉತ್ಸವ ಆರಂಭ

    ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ದೇವೀರಮ್ಮ ಉತ್ಸವ ಆರಂಭ

    ಚಿಕ್ಕಮಗಳೂರು:  ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ದೇವೀರಮ್ಮ ಉತ್ಸವ ಆರಂಭವಾಗಿದ್ದು, ಮೊದಲ ದಿನ ಭಕ್ತರು ಮಳೆ, ಚಳಿ, ಬಿಸಿಲು ಲೆಕ್ಕಿಸದೆ ಬೆಟ್ಟ ಏರಿ ದೇವಿಯ ದರ್ಶನ ಪಡೆದರು. ಬೆಳಿಗ್ಗೆ 6ರಿಂದಲೇ ದೇವೀರಮ್ಮ ಬೆಟ್ಟಕ್ಕೆ ಬರಿಗಾಲಿನಲ್ಲಿ ಭಕ್ತರು ಏರಲು ಆರಂಭಿಸಿದರು. ಇಡೀ ರಾತ್ರಿ ಮಳೆ ಸುರಿದಿದ್ದರಿಂದ ಹಾದಿ ಜಾರುತ್ತಿತ್ತು.

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಬಿಂಡಿಗ ದೇವಿರಮ್ಮ ದೇವಿಯನ್ನು ಕಣ್ತುಂಬಿಕೊಂಡು ಆಶೀರ್ವಾದ ಪಡೆಯಲು ಭಾನುವಾರ ಭಕ್ತ ಸಾಗರವೇ ಹರಿದಿತ್ತು. ಇಡೀ ದೇವೀರಮ್ಮ ಗುಡ್ಡ ಭಕ್ತರಿಂದ ತುಂಬಿಕೊಂಡಿತ್ತು. ಬೆಳಿಗ್ಗೆ ಮಳೆ ಬಿಡುವು ನೀಡಿದ್ದರೂ ಮೋಡ ಕವಿದ ವಾತಾವರಣ ಇತ್ತು. ಚಿಕ್ಕಮಗಳೂರು ನಗರದ ಬಸ್‌‍ ನಿಲ್ದಾಣದಿಂದ ಪ್ರತಿ ಐದು ನಿಮಿಷಕ್ಕೆ ಒಂದರಂತೆ ಮಲ್ಲೇನಹಳ್ಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಲ್ಲೇನಹಳ್ಳಿ ಕಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಏರಿದರೆ, ಮಾಣಿಕ್ಯಧಾರ ಜಲಪಾತ ಕಡೆಯಿಂದಲೂ ಭಕ್ತರು ಬಂದರು. ಇನ್ನೊಂದೆಡೆ ಅರಿಶಿನಗುಪ್ಪೆ ಕಡೆಯಿಂದಲೂ ಭಕ್ತರು ಬೆಟ್ಟ ಏರಿದರು.

    ಭಾನುವಾರ ಬೆಳಿಗ್ಗೆ ವಿಗ್ರಹವನ್ನು ಬೆಟ್ಟದ ಮೇಲಕ್ಕೆ ಹೊತ್ತೊಯ್ದು ಪ್ರತಿಷ್ಠಾಪಿಸಲಾಗಿತ್ತು. ಕಟ್ಟಿಗೆ ಹೊತ್ತು ತಂದವರು ಕೊಂಡಕ್ಕೆ ಹಾಕಿ ಹರಕೆ ಒಪ್ಪಿಸಿದರು. ಬೆಣ್ಣೆಬಟ್ಟೆ ಸುಡುವ ಕೈಂಕರ್ಯಕ್ಕೆ ಈ ಕಟ್ಟಿಗೆಗಳನ್ನು ಬಳಸಲಾಗುತ್ತದೆ. ಕಾಡುಮೇಡು, ತಗ್ಗುದಿಣ್ಣೆ, ಮೊನಚು, ಬೆಣಚು ಕಲ್ಲು, ಜಲ್ಲಿಕಲ್ಲು, ಕಡಿದಾದ ಬೆಟ್ಟದ ಹಾದಿಯಲ್ಲಿ ಭಕ್ತರು ಸಾಗಿದರು. ಹಾದಿಯುದ್ದಕ್ಕೂ ಒಬ್ಬರಿಗೊಬ್ಬರು ಆಸರೆಯಾಗಿ ಕೈಹಿಡಿದುಕೊಂಡು ನಡೆದರು. ಜಾರಿದವರ ಕೈಹಿಡಿದು ಎತ್ತಿ, ಹಿಂದೆ ಉಳಿದವರನ್ನು ಎಳೆದುಕೊಂಡು ಮುಂದೆ ಸಾಗಿದರು. ಕೆಲವರು ಬೆಟ್ಟದಲ್ಲಿನ ಹುಲ್ಲುಹಾಸಿನಲ್ಲಿ ಮಲಗಿ ವಿರಮಿಸಿದರು.

    ಬೆಟ್ಟ ಏರಿದವರ ಪೈಕಿ ಮೊಬೈಲ್‌ ಕ್ಯಾಮೆರಾಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳದವರೇ ಇಲ್ಲ. ಸವಿ ನೆನಪುಗಳನ್ನು ಹಿಡಿದಿಟ್ಟುಕೊಂಡರು. ವಾಟ್ಸಆ್ಯಪ್‌, ಫೆಸ್‌ಬುಕ್‌ ಸಾಮಾಜಿಕ ಮಾಧ್ಯಮಗಳಿಗೆ ಫೋಟೊಗಳನ್ನು ಅಪ್‌ಲೋಡ್‌ ಮಾಡಿ ಖುಷಿಪಟ್ಟರು. ಈ ಸಂಭ್ರಮದಲ್ಲಿ ಬೆಟ್ಟ ಹತ್ತಿದ ಪ್ರಯಾಸ ಮರೆಯಾಗಿತ್ತು. ಜಾತ್ರಾ ಮಹೋತ್ಸವದ ಅಂಗವಾಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿತ್ತು. ಮಳೆ, ಚಳಿ, ಗಾಳಿಯ ನಡುವೆ ರಕ್ಷಣಾ ತಂಡ ಕಾರ್ಯನಿರ್ವಹಿಸಿತು. ಕಡಿದಾದ ಜಾಗದಲ್ಲಿ ಬೆಟ್ಟ ಏರಲು ಆಗದವರಿಗೆ ರಕ್ಷಣಾ ತಂಡ ಹಗ್ಗದ ಸಹಾಯದಲ್ಲಿ ನೆರವಾಯಿತು.

    ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಸ್ವಯಂ ಸೇವಕರ ತಂಡದ ಈ ಕಾರ್ಯಕ್ಕೆ ಎಲ್ಲರಿಂದ ಶ್ಲಾಘನೆ ವ್ಯಕ್ತವಾಯಿತು. ಮಲ್ಲೇನಹಳ್ಳಿ ಬಳಿ ವಾಹನ ದಟ್ಟಣೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿತ್ತು. ಕೈಮರ ಚೆಕ್‌ಪೋಸ್ಟ್ ಬಳಿಯ ವಾಹನಗಳನ್ನು ತಡೆದು ಬೇರೆಡೆಗೆ ಕಳುಹಿಸಲಾಯಿತು. ಇದೇ ಮೊದಲ ಬಾರಿಗೆ ಬೆಟ್ಟ ಏರಿ ದೇವಿಯ ದರ್ಶನ ಪಡೆಯಲು ಎರಡು ದಿನ ಅವಕಾಶ ನೀಡಲಾಗಿದೆ.

    ಸಾಮಾನ್ಯವಾಗಿ ನರಕ ಚತುರ್ದಶಿಯ ದಿನ ಬೆಟ್ಟದ ಮೇಲೆ ದೇವಿಯ ದರ್ಶನಕ್ಕೆ ಅವಕಾಶ ಇತ್ತು. ಮಳೆ ಮುನ್ಸೂಚನೆ ಇರುವುದರಿಂದ ರಾತ್ರಿ ವೇಳೆ ಬೆಟ್ಟ ಏರಲು ಅವಕಾಶ ನೀಡದೆ ಮುನ್ನ ದಿನವೇ ದೇವಿಯ ಉತ್ಸವ ಮೂರ್ತಿಯನ್ನು ಬೆಟ್ಟದ ತುದಿಗೆ ಕೊಂಡೊಯ್ದು ಪೂಜೆ ಸಲ್ಲಿಸಲಾಯಿತು. ಭಾನುವಾರ ಇಡೀ ದಿನ ಬೆಟ್ಟ ಏರಿದ ಭಕ್ತರು ದೇವಿಯನ್ನು ಕಣ್ತುಂಬಿಕೊಂಡರು. ಸೋಮವಾರ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆ ಇದೆ.

    ಮಲ್ಲೇನಹಳ್ಳಿ ಕಡೆಯಿಂದ ದೇವೀರಮ್ಮ ಬೆಟ್ಟ ಹತ್ತಲು ಬರುವ ಭಕ್ತರು, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಬರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಮನವಿ ಮಾಡಿದ್ದಾರೆ. ಮಲ್ಲೇನಹಳ್ಳಿ ಪ್ರೌಢಶಾಲೆ ಆವರಣದಲ್ಲಿ ವಾಹನ ನಿಲುಗಡೆ ಅವಕಾಶ ಮಾಡಲಾಗಿತ್ತು. ವಿಪರೀತ ಮಳೆಯಿಂದ ನಿಲುಗಡೆ ಸಾಧ್ಯವಾಗುತ್ತಿಲ್ಲ. ವಾಹನಗಳ ನಿಲುಗಡೆ ಬೇರೆ ಜಾಗ ಇಲ್ಲದ ಕಾರಣ ಭಕ್ತರು ಚಿಕ್ಕಮಗಳೂರು ನಗರದಲ್ಲಿ ವಾಹನ ನಿಲ್ಲಿಸಿ ಬಸ್‌ಗಳಲ್ಲಿ ಬರುವುದು ಸೂಕ್ತ ಎಂದು ತಿಳಿಸಿದ್ದಾರೆ.

    ಕಡೂರು, ಸಖರಾಯಪಟ್ಟಣ, ಬಾಣಾವರ ಕಡೆಯಿಂದ ಬರುವ ಭಕ್ತರು ಐಡಿಎಸ್‌ಜಿ ಕಾಲೇಜು ಆವರಣದಲ್ಲೇ ತಮ್ಮ ವಾಹನಗಳನ್ನು ನಿಲ್ಲಿಸಬೇಕು. ಅಲ್ಲಿಂದ ಮಲ್ಲೇನಹಳ್ಳಿಗೆ ಹೋಗಿ ಬರಲು ಕೆಎಸ್ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

    ಬೆಂಗಳೂರು, ಹಾಸನ, ಬೇಲೂರು, ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಕಡಗಳಿಂದ ಚಿಕ್ಕಮಗಳೂರು ನಗರ ಮಾರ್ಗವಾಗಿ ಮಲ್ಲೇನಹಳ್ಳಿಗೆ ಬರುವ ಭಕ್ತರಿಗೆ ಐ.ಜಿ. ರಸ್ತೆ, ಎಂ.ಜಿ. ರಸ್ತೆ, ಡಿಎಸಿಜಿ ಪಾಲಿಟೆಕ್ನಿಕ್ ಆವರಣದಲ್ಲಿ ಖಾಸಗಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಬಸ್ ನಿಲ್ದಾಣ ಮತ್ತು ಟೌನ್‌ ಕ್ಯಾಂಟೀನ್ ವೃತ್ತದಿಂದ ಬಸ್ ವ್ಯವಸ್ಥೆ ಇದೆ ಎಂದು ವಿವರಿಸಿದ್ದಾರೆ. ತರೀಕೆರೆ ಹಾಗೂ ಲಿಂಗದಹಳ್ಳಿ ಕಡೆಗಳಿಂದ ಬರುವವರಿಗೆ ಕುಮಾರಗಿರಿಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ದೇವಸ್ಥಾನಕ್ಕೆ ಬಸ್ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದ್ದಾರೆ.

    Bindiga Deviramma festival begins in Mallenahalli village

  • ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ

    ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ

    ಚಿಕ್ಕಮಗಳೂರು:  ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ. ಆದಿಯಿಂದ ಅಂತ್ಯದವರೆಗೆ ಬಿದಿರನ್ನು ಪೂರೈಕೆ ಮಾಡುತ್ತಾ ಬಂದಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

    ಅವರು ನಗರದ ಅಂಬೇಡ್ಕರ್ ರಸ್ತೆಯ ನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಗರಸಭೆ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಮೇದ ಸಮುದಾಯಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಸಮಾಜದ ಮುಖಂಡರುಗಳಾದ ಪಿ.ರಾಜೇಶ್, ಕುಮಾರ್ ಮತ್ತಿತರರು ಇಲ್ಲಿ ಮೇದ ಸಮುದಾಯ ಭವನ ನಿರ್ಮಿಸಬೇಕು ಎಂದು ಕನಸು ಕಂಡಿದ್ದರು. ಅದಕ್ಕೆ ಹಿಂದಿದ್ದ ಶಾಸಕರು, ನಗರಸಭೆ ಆಡಳಿತ, ಜಿಲ್ಲಾಧಿಕಾರಿಗಳು ನೀರೆರೆದ ಪರಿಣಾಮ ಇಂದು ಭವನ ನಿರ್ಮಾಣ ಕಾಮಗಾರಿ ಆರಂಭವಾಗುತ್ತಿದೆ. ಅವರೆಲ್ಲರಿಗೂ ಧನ್ಯವಾದ ಸಲ್ಲಿಸುತ್ತೇವೆ ಎಂದರು.

    ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ನಾವು ಶಾಸಕರಾದ ನಂತರ ನಗರೋತ್ಥಾನ ಯೋಜನೆಯಡಿ ಅನುದಾನ ಮಂಜೂರಾಗಿದ್ದರೂ ಹಣಕಾಸಿನ ಸಮಸ್ಯೆಯಿಂದ ಮೂರು ಬಾರಿ ಟೆಂಡರ್ ಮುಂದೂಡಲ್ಪಟ್ಟಿತ್ತು. ಇದೀಗ ಹಣ ಬಿಡುಗಡೆ ಮಾಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಮೇದ ಜನಾಂಗದ ಕೃಷ್ಣಪ್ಪ ಇತರರು ಇಲ್ಲಿ ಗರಡಿ ಮನೆಯನ್ನು ನಡೆಸಿಕೊಂಡು ಬಂದಿದ್ದರು. ಗರಡಿ ಮನೆಯನ್ನು ಇಂದಿಗೂ ಮುಂದುವರಿಸುವುದಾದರೆ ಅದಕ್ಕೆ ಅವಕಾಶ ಮಾಡಿಕೊಡಲು ಸಿದ್ದರಿದ್ದೇವೆ ಎಂದರು.

    ೨೦೨೨-೨೩ರಲ್ಲೇ ನಗರೋತ್ಥಾನದಡಿ ಈ ಸಮುದಾಯ ಭವನಕ್ಕೆ ಅನುದಾನ ಮಂಜೂರಾಗಿತ್ತು. ಬೇರೆ ಬೇರೆ ಕಾರಣಕ್ಕೆ ಟೆಂಡರ್ ಮುಂದೂಡಲ್ಪಟ್ಟಿತ್ತು. ಜನಮೆಚ್ಚುವಂತೆ ಗುಣಮಟ್ಟದ ಕೆಲಸ ಮಾಡಬೇಕು ಎಂದು ಸೂಚಿಸಿದರು.

    ಹಲವು ದೇಶಗಳು ಬಿದಿರನ್ನೇ ಉದ್ಯಮವನ್ನಾಗಿ ಮಾಡಿಕೊಂಡಿವೆ. ಬೆಂಗಳೂರಿನ ಏರ್‌ಪೋರ್ಟ್‌ನ ಟರ್ಮಿನಲ್-೨ ಗೆ ಹೋಗಿ ನೋಡಿದರೆ ಬಿದಿರಿನ ಸುಂದರ ಉಪಯೋಗ ಹೇಗೆ ಮಾಡಿಕೊಳ್ಳಬಹುದು ಎನ್ನುವುದನ್ನು ಕಾಣಬಹುದು ಎಂದರು.

    ಮೇದ ಸಮಾಜದ ಮುಖಂಡ, ಪತ್ರಕರ್ತ ಪಿ.ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಸಮಾಜದವರು ಆರ್ಥಿಕ ಮತ್ತು ಶೈಕ್ಷಣಿಕವಾಗಿ ಈಗ ಮುಂದುವರೆಯುತ್ತಿದ್ದಾರೆ, ನಮ್ಮ ಸಮುದಾಯಕ್ಕೆ ಸಮುದಾಯ ಬೇಕೆಂದು ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ರಮೇಶ್, ಶಾಸಕ ಸಿ.ಟಿ ರವಿ ಮತ್ತು ನಗರಸಭೆ ಆಯುಕ್ತರಾದ ಬಸವರಾಜ್ ಅವರಿಗೆ ಮನವಿ ಮಾಡಿದ್ದೆವು ಅವರ ಶ್ರಮ ಮತ್ತು ಈಗಿನ ಶಾಸಕರಾದ ಹೆಚ್.ಡಿ ತಮ್ಮಯ್ಯ ರವರ ನೇತೃತ್ವದಲ್ಲಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರೆವೇರಿಸಿರುವುದು ಅತ್ಯಂತ ಸಂತೋಷದ ವಿಷಯ ಎಂದರು.

    ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ನಾಸೀರ್, ಗುರುಮಲ್ಲಪ್ಪ, ಕವಿತಾ ಶೇಖರ್, ಮಾಜಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಪೌರಾಯುಕ್ತ ಬಸವರಾಜ್, ಮೇದಾ ಸಜಾಜದ ಅಧ್ಯಕ್ಷ ಪಟೇಲ್ ಕುಮಾರ್, ಸಮಾಜದ ಮುಖಂಡರುಗಳಾದ ಶೋಭಾ, ಜಗದೀಶ್, ಮಲ್ಲೇನಹಳ್ಳಿ ಶಂಕರ್, ಸುಮಾ, ಶೋಭಾ ಮಂಜುನಾಥ್, ಗುತ್ತಿಗೆದಾರರಾದ ಸಂತೋಷ್ ಕುಮಾರ್, ಪವನ್, ರವಿಶಂಕರ್, ಮತ್ತಿತರರು ಉಪಸ್ಥಿತರಿದ್ದರು.

    The Meda community has always remained strong with society

  • ಪೌರಕಾರ್ಮಿಕರ ಆರೋಗ್ಯ ಸದೃಢವಾಗಲು ಯೋಗಾಭ್ಯಾಸ ಅಗತ್ಯ

    ಪೌರಕಾರ್ಮಿಕರ ಆರೋಗ್ಯ ಸದೃಢವಾಗಲು ಯೋಗಾಭ್ಯಾಸ ಅಗತ್ಯ

    ಚಿಕ್ಕಮಗಳೂರು: ಪೌರಕಾರ್ಮಿಕರ ಆರೋಗ್ಯ ಮಾನಸಿಕ ಸದೃಢವಾಗಲು ದಿನದ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡುವ ಅಗತ್ಯ ಇದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ಅವರು ಇಂದು ನಗರಸಭೆ ಸಭಾಂಗಣದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

    ಪೌರಕಾರ್ಮಿಕರು ದುಶ್ಚಟಗಳಾದ ಮಾದಕ ವ್ಯಸನಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಆರೋಗ್ಯವಾಗಿದ್ದಾಗ ಮಾತ್ರ ಎಲ್ಲಾ ನಾಗರಿಕರು ಆರೋಗ್ಯವಾಗಿರಲು ಸಾಧ್ಯ ಎಂದು ಹೇಳಿದರು.

    ಕೆಲವು ಪೌರಕಾರ್ಮಿಕರನ್ನು ಸರ್ಕಾರ ಖಾಯಂಗೊಳಿಸಿರುವ ಮಾದರಿಯಲ್ಲಿ ನೀರುಗಂಟಿಗಳನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಿ ಖಾಯಂಗೊಳಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.

    ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯದಂತೆ ಸಮಸಮಾಜ ನಿರ್ಮಾಣವಾಗಬೇಕೆಂಬ ಅವರ ಕನಸು ಇಂದು ಒಂದೇ ವೇದಿಕೆಯಲ್ಲಿ ಆಸೀನರಾಗಲು ಕಾರಣ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಶರಣರ ಆಶಯ ಕಾರಣ ಎಂದು ಹೇಳಿದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕಾಯಕ ಸಂಸ್ಕೃತಿಗೆ ಗೌರವ ಕೋಡುವ ಉದ್ದೇಶವೇ ಪೌರಕಾರ್ಮಿಕ ದಿನಾಚರಣೆಯ ಉದ್ದೇಶ ಎಂದು ಹೇಳಿದ ಅವರು, ಸ್ವಚ್ಚ ಕಾಯಕ ಮಾಡುವ ಪೌರಕಾರ್ಮಿಕರನ್ನು ಗೌರವದಿಂದ ಕಂಡಾಗ ಮಾತ್ರ ಸಮಾನತೆ, ಆರೋಗ್ಯ ಲಭಿಸುತ್ತದೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿಯವರು ಜಾತಿ, ಭೇದಕ್ಕೆ ಆಸ್ಪದವಿಲ್ಲದೆ ದುಡಿಯುವ ವರ್ಗಕ್ಕೆ ಗೌರವ ನೀಡಬೇಕೆಂಬ ಉದ್ದೇಶದೊಂದಿಗೆ ಪೌರಕಾರ್ಮಿಕರ ಪಾದಪೂಜೆ ಮಾಡಿ ಕಾಯಕ ಸಂಸ್ಕೃತಿ ಎತ್ತಿ ಹಿಡಿದಿದ್ದಾರೆಂದು ಶ್ಲಾಘಿಸಿದರು.

    ೭೪ ಮನೆಗಳಲ್ಲಿ ೨೪ ಬಾಕಿ ಇದ್ದು, ಉಳಿದ ಕಾರ್ಮಿಕರಿಗೂ ಮನೆಗಳನ್ನು ನಿರ್ಮಿಸಿಕೊಡಬೇಕು, ೩೫ ನೌಕರರು ಖಾಯಂ ಮಾಡಿದ್ದು, ಉಳಿದವರನ್ನು ಮಾಡಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ಕೂಡಲೇ ಇದನ್ನು ನಿವಾರಿಸಿ ಖಾಯಂಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

    ಪೌರಾಯುಕ್ತ ಬಿ.ಸಿ ಬಸವರಾಜ್ ಸ್ವಾಗತಿಸಿ ಮಾತನಾಡಿ, ಪೌರಕಾರ್ಮಿಕರ ಬೆಳಗಿನ ಉಪಹಾರಕ್ಕೆ ೩೫ ರೂ ಗೌರವಧನ ಸಂಕಷ್ಟ ಭತ್ಯೆ, ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ ಮುಂತಾದ ಸೌಲಭ್ಯಗಳನ್ನು ಹಂತ ಹಂತವಾಗಿ ನೀಡುವುದಾಗಿ ಹೇಳಿದರು.

    ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪಾಧ್ಯಕ್ಷೆ ಲಲಿತಾ ನಾಯ್ಕ್, ಮಾಜಿ ಅಧ್ಯಕ್ಷರುಗಳಾದ ಕವಿತಾ ಶೇಖರ್, ವರಸಿದ್ದಿ ವೇಣುಗೋಪಾಲ್ ಮಾತನಾಡಿದರು.

    ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಎ.ಸಿ ಕುಮಾರ್‌ಗೌಡ, ಲಕ್ಷ್ಮಣ್, ಗುರುಮಲ್ಲಪ್ಪ, ಪರಮೇಶ್ ರಾಜ್ ಅರಸ್, ಸಿ.ಪಿ ಲಕ್ಷ್ಮಣ, ಅರುಣ್‌ಕುಮಾರ್, ಗೋಪಿ, ರೂಪಾ ಕುಮಾರ್, ಶಧಾಬ್ ಅಲಂ ಖಾನ್, ವಿಫುಲ್ ಕುಮಾರ್ ಜೈನ್, ಹುಣಸೇಮಕ್ಕಿ ಲಕ್ಷ್ಮಣ, ಪ್ರಕಾಶ್ ರೈ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಅಣ್ಣಯ್ಯ, ಶಾಖಾ ಅಧ್ಯಕ್ಷ ಶ್ರೀನಿವಾಸ್, ಗೌರವಾಧ್ಯಕ್ಷ ನಾಗರಾಜ್, ಮತ್ತಿತರರು ಉಪಸ್ಥಿತರಿದ್ದರು.

    ಇದಕ್ಕೂ ಮುನ್ನ ತಾಲ್ಲೂಕು ಕಚೇರಿ ಆವರಣದಿಂದ ಡಾ. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ರವರ ಭಾವಚಿತ್ರದೊಂದಿಗೆ ಜಾನಪದ ಕಲಾತಂಡಗಳ ಮೂಲಕ ಮೆರವಣಿಗೆ ಹೊರಟ ಪೌರ ಕಾರ್ಮಿಕರು ಹಾಗೂ ನಗರಸಭೆ ಸಿಬ್ಬಂದಿ ಎಂ.ಜಿ ರಸ್ತೆ ಮೂಲಕ ಸಾಗಿ ನಗರಸಭೆ ಆವರಣವನ್ನು ತಲುಪಿದರು.

    Yoga is essential for the health of civil servants

  • ರಕ್ತದಾನ ಜೀವ ಉಳಿಸುವ ಮಹತ್ವಾದಾನ

    ರಕ್ತದಾನ ಜೀವ ಉಳಿಸುವ ಮಹತ್ವಾದಾನ

    ಚಿಕ್ಕಮಗಳೂರು: ರಕ್ತದಾನ ಜೀವ ಉಳಿಸುವ ಮಹತ್ವಾದಾನ. ರಕ್ತದಾನ ಮಾಡು ವವರ ಆರೋಗ್ಯ ಸುಧಾರಿಸುವ ಜೊತೆಗೆ ದೈಹಿಕ, ಮಾನಸಿಕ ಹಾಗೂ ಶಾರೀರಿಕವಾಗಿ ಆರೋಗ್ಯವಾಗಿರಲು ಸಹಕಾರಿ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಹೇಳಿದರು.

    ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಹೋಲಿಕ್ರಾಸ್ ಆಸ್ಪತ್ರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಸಹಯೋಗದಲ್ಲಿ ವಕೀಲರಿಗೆ ಹಮ್ಮಿಕೊಂಡಿದ್ಧ ರಕ್ತದಾನ ಶಿಬಿರ ಹಾಗೂ ಉಚಿ ತ ಕಣ್ಣಿನ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ರಕ್ತದಾನದಲ್ಲಿ ಹೆಚ್ಚು ಯುವವಕೀಲರು ಪಾಲ್ಗೊಂಡು ಶಿಬಿರ ಯಶಸ್ವಿಗೊಳಿಸಬೇಕು. ಪ್ರಕೃತಿ ಮನುಷ್ಯನಿ ಗಾಗಿ ಸಾಕಷ್ಟು ಕೊಡುಗೆಯನ್ನು ನೀಡಿದೆ, ಆದರೆ ಮನುಷ್ಯ ಅಲ್ಪಮಾನವನಾಗದೇ, ಮತ್ತೊಬ್ಬರ ಜೀವ ಉಳಿ ಸುವ ರೀತಿಯಲ್ಲಿ ರಕ್ತದಾನದಲ್ಲಿ ತೊಡಗಿಸಿಕೊಂಡರೆ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದರು.

    ತುರ್ತು ಚಿಕಿತ್ಸೆ ಅಥವಾ ಅಪಘಾತ ವೇಳೆಯಲ್ಲಿ ರಕ್ತವು ಬಹಳಷ್ಟು ಅವಶ್ಯಕತೆಯಿದೆ. ಹೀಗಾಗಿ ವಕೀಲ ರು ಸೇರಿದಂತೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮುಂದಾಗಬೇಕು. ಓರ್ವನ ರಕ್ತದಾನದಿಂದ ಕನಿಷ್ಟ ಮೂರು ಮಂದಿ ಜೀವ ಉಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

    ಹೋಲಿಕ್ರಾಸ್ ಆಸ್ಪತ್ರೆ ರಕ್ತನಿಧಿ ಅಧಿಕಾರಿ ಡಾ|| ಅನೀತ್‌ಕುಮಾರ್ ಮಾತನಾಡಿ ಮೊದಲು ಅನ್ನದಾನ ವು ಸರ್ವಶ್ರೇಷ್ಟವಾಗಿತ್ತು. ಇತ್ತೀಚೆಗೆ ಅನ್ನದಾನಕ್ಕೆ ಹೆಚ್ಚು ದಾನಿಗಳು ಹೆಚ್ಚು ತೊಡಗಿಸಿಕೊಂಡಿರುವ ಕಾರಣ, ರಕ್ತದಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಲ್ಲದೇ ದೇಹದಲ್ಲಿನ ಕೊಲೆಸ್ಟ್ರಾಲ್ ಹಾಗೂ ಮಧುಮೇಹ ಕಾಯಿ ಲೆಗಳನ್ನು ಪತ್ತೆಹಚ್ಚಬಹುದು ಎಂದು ತಿಳಿಸಿದರು.

    ದೇಶದಲ್ಲಿ ರಕ್ತದ ಕೊರತೆಯಿಂದ ಅನೇಕರು ಜೀವ ಕಳೆದುಕೊಂಡು ಕುಟುಂಬವು ಬೀದಿಪಾಲಾಗುತ್ತಿದೆ. ರಕ್ತದಾನಕ್ಕಿಂತ ಹೆಚ್ಚು ಮನುಷ್ಯನ ಪ್ರಾಣ ಹಾರಿಹೋಗುತ್ತಿದೆ. ಹಾಗಾಗಿ ಯುವಜನತೆ ಎಚ್ಚೆತ್ತುಕೊಂಡು ಕನಿಷ್ಟ ಮೂರು ಹಾಗೂ ಮಹಿಳೆಯರು ಐದು ತಿಂಗಳಿಗೊಮ್ಮೆ ರಕ್ತದಾನ ಮಾಡಿದರೆ ಅಮೂಲ್ಯ ಜೀವ ಉಳಿಸಲು ಸಾಧ್ಯ ಎಂದರು.

    ಡೆಂಗ್ಯೂ, ಅಪಘಾತಗಳಂಥ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಬಹಳಷ್ಟಿದೆ. ಆ ನಿಟ್ಟಿನಲ್ಲಿ ಶಾಲಾ-ಕಾ ಲೇಜು, ಸಾರ್ವಜನಿಕರಲ್ಲಿ ರಕ್ತದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅದರಂತೆ ಇಂದು ವಕೀ ಲರಿಗಾಗಿ ರಕ್ತದಾನ ಹಾಗೂ ಕಣ್ಣಿನ ತಪಾಸಣೆ ಆಯೋಜಿಸಿ ಪೂರಕವಾಗಿ ಆಸ್ಪತ್ರೆ ಕೆಲಸ ಮಾಡುತ್ತಿದೆ ಎಂ ದು ಹೇಳಿದರು.

    ಶಿಬಿರದಲ್ಲಿ ವಕೀಲರಿಗೆ ಕಣ್ಣಿನ ಸಮಸ್ಯೆ ಕಂಡುಬಂದಲ್ಲಿ ಆಸ್ಪತ್ರೆ ವತಿಯಿಂದ ಶಸ್ತ್ರಚಿಕಿತ್ಸೆ, ವೈದ್ಯರ ಸಲಹೆ ಯನ್ನು ಸಂಪೂರ್ಣ ಉಚಿತವಾಗಿ ನೀಡುತ್ತಿದ್ದು, ಕೇವಲ ಲೆನ್ಸ್‌ಗಳಿಗೆ ಮಾತ್ರ ಆರ್ಥಿಕ ವೆಚ್ಚವನ್ನು ರೋಗಿ ಗಳು ಭರಿಸಬೇಕಾಗಿದ್ದು, ಒಟ್ಟಾರೆ ಸಾಮಾಜಿಕ ಕಾರ್ಯಕ್ರಮದಡಿ ಆಸ್ಪತ್ರೆ ತೊಡಗಿಸಿಕೊಂಡಿದೆ ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತ ಪ್ಪ, ಕೌಟುಂಬಿಕ ನ್ಯಾಯಾಲಯ ನ್ಯಾಯಾಧೀಶ ಪ್ರಕಾಶ್, ವಕೀಲರ ಸಂಘದ ಖಜಾಂಚಿ ಡಿ.ಬಿ.ದೀಪಕ್, ವಕೀಲರುಗಳಾದ ರಮೇಶ್, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

    The life-saving importance of blood donation

  • ದೇವಿರಮ್ಮ ಜಾತ್ರೋತ್ಸವದಲ್ಲಿ ವಾಹನ ನಿಲುಗಡೆಗೆ ಮಾರ್ಗಸೂಚಿ 

    ದೇವಿರಮ್ಮ ಜಾತ್ರೋತ್ಸವದಲ್ಲಿ ವಾಹನ ನಿಲುಗಡೆಗೆ ಮಾರ್ಗಸೂಚಿ 

    ಚಿಕ್ಕಮಗಳೂರು: ಬಿಂಡಿಗಾ ಆದಿಶಕ್ತಿ ಶ್ರೀ ದೇವೀರಮ್ಮ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹಾಗೂ ನಿಲುಗಡೆ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಿ ಆದೇಶ ಹೊರಡಿಸಿರುವ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಸಿ.ಎನ್.ಮೀನಾ ನಾಗರಾಜ್ ಅವರು ಅಕ್ಟೋಬರ್ ೧೯ರ ಬೆಳಿಗ್ಗೆ ೬ ಗಂಟೆಯಿಂದ ೨೦ರ ರಾತ್ರಿ ೧೦ ಗಂಟೆಯವರೆಗೆ ಸ್ಥಳೀಯರು ಹಾಗೂ ಭಕ್ತಾದಿಗಳ ವಾಹನಗಳನ್ನು ಹೊರತುಪಡಿಸಿ ತರೀಕೆರೆಯಿಂದ ಚಿಕ್ಕಮಗಳೂರು ಕಡೆಗೆ ಬರುವ ಇತರ ಎಲ್ಲಾ ವಾಹನಗಳು ಕಡ್ಡಾಯವಾಗಿ ಕಡೂರು ಮಾರ್ಗವಾಗಿ ಚಲಿಸುವಂತೆ ಸೂಚಿಸಿದ್ದಾರೆ.

    ಬಿಂಡಿಗಾ ಹಾಗೂ ಮಲ್ಲೇನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ ೧೯ ರಿಂದ ೨೩ರವರೆಗೆ ನಡೆಯಲಿರುವ ಶ್ರೀ ದೇವೀರಮ್ಮನವರ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ವರದಿಯನ್ನು ಆಧರಿಸಿ ಅವರು ವಾಹನ ಸಂಚಾರ ಹಾಗೂ ನಿಲುಗಡೆ ಬಗ್ಗೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

    ಅಕ್ಟೋಬರ್ ೧೯ ಮತ್ತು ೨೦ ರಂದು ಚಿಕ್ಕಮಗಳೂರು-ಮಲ್ಲೇನಹಳ್ಳಿ ಮತ್ತು ತರೀಕೆರೆ-ಲಿಂಗದಹಳ್ಳಿ-ಮಲ್ಲೇನಹಳ್ಳಿ ಮಾರ್ಗದಲ್ಲಿ ಅನುಮತಿ ಇಲ್ಲದೆ ಸಂಚರಿಸುವ ಖಾಸಗಿ ಬಸ್‌ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅ.೧೯ ಮತ್ತು ೨೦ ರಂದು ತರೀಕೆರೆ-ಲಿಂಗದಹಳ್ಳಿ-ಸಂತವೇರಿ ಮಾರ್ಗವಾಗಿ ಬರುವ ಭಕ್ತಾದಿಗಳ ವಾಹನಗಳನ್ನು ಕುಮಾರಗಿರಿಯಲ್ಲಿ ಪಾರ್ಕಿಂಗ್ ಮಾಡುವುದು ಹಾಗೂ ಚಿಕ್ಕಮಗಳೂರು-ಕೈಮರಾ ಮಾರ್ಗವಾಗಿ ಬಿಂಡಿಗ ಮಲ್ಲೇನಹಳ್ಳಿಗೆ ಬರುವ ವಾಹನಗಳನ್ನು ನಿಗದಿಪಡಿಸಿರುವ ಮಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾತ್ರ ಪಾರ್ಕಿಂಗ್ ಮಾಡುವುದು ಹಾಗೂ ಯಾವುದೇ ಕಾರಣಕ್ಕೂ ರಸ್ತೆಯ ಬದಿಯಲ್ಲಿ ವಾಹನ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಮಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗೇಟ್‌ನಿಂದ ಕುಮಾರಗಿರಿ ಗೋಪುರದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ದೇವಿ ದರ್ಶನಕ್ಕೆ ಸಮಯ ನಿಗದಿ: ಪ್ರತೀ ವರ್ಷ ದೀಪಾವಳಿ ಹಬ್ಬದ ಮುನ್ನಾದಿನ (ನರಕ ಚತುರ್ದಶಿ) ಬೆಟ್ಟಕ್ಕೆ ತೆರಳಿ ದರ್ಶನ ಪಡೆಯುತ್ತಿದ್ದು, ಈ ವರ್ಷದಿಂದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಮತ್ತು ಜನಸಮೂಹ ನಿಯಂತ್ರಣ ಮಾಡುವ ದೃಷ್ಟಿಯಿಂದ ಅಕ್ಟೋಬರ್ ೧೯ರ ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಾಗೂ ೨೦ ರಂದು ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಮಾತ್ರ ದೇವಿಯ ದರ್ಶನಕ್ಕೆ ಸಮಯ ನಿಗದಿಪಡಿಸಿದ್ದು, ಈ ಸಂದರ್ಭದಲ್ಲಿ ಶ್ರೀ ದೇವೀರಮ್ಮ ಬೆಟ್ಟದಲ್ಲಿ ಅಭಿಷೇಕ, ನಂತರ ಪೂಜಾ ವಿಧಿ-ವಿಧಾನಗಳು ನೆರವೇರಲಿವೆ.

    ಈ ಎರಡು ದಿವಸಗಳಲ್ಲಿ ಸುಮಾರು ೮೦,೦೦೦ ದಿಂದ ೯೦,೦೦೦ ಭಕ್ತಾದಿಗಳು ವಿವಿಧ ಮಾರ್ಗಗಳಿಂದ ಬೆಟ್ಟ ಹತ್ತಿ ಶ್ರೀ ದೇವೀರಮ್ಮನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದೆ. ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಅನಿವಾರ್ಯ ssಎಂದು ಅವರು ಮಾಹಿತಿ ನೀಡಿದ್ದಾರೆ.

    Guidelines for vehicle parking during Deviramma Jatrotsav

  • ಬ್ಯಾಂಕಿನ ಸಾಲಸೌಲಭ್ಯ ಪಡೆದು ಉದ್ದಿಮೆ ಸ್ಥಾಪಿಸಿ

    ಬ್ಯಾಂಕಿನ ಸಾಲಸೌಲಭ್ಯ ಪಡೆದು ಉದ್ದಿಮೆ ಸ್ಥಾಪಿಸಿ

    ಚಿಕ್ಕಮಗಳೂರು:  ಸರಿಯಾದ ಹಣಕಾಸಿನ ವ್ಯವಸ್ಥೆ ಇದ್ದಾಗ ಮಾತ್ರ ಉದ್ಯಮ ಸ್ಥಾಪಿಸಲು ಸಾಧ್ಯ. ಈ ನಿಟ್ಟಿನಲ್ಲಿ ಬ್ಯಾಂಕಿನಲ್ಲಿ ದೊರೆಯುವ ಸಾಲಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಉದ್ಯಮಿ ಮುನೀರ್ ಅಹಮದ್ ಹೇಳಿದರು.

    ಅವರು ಇಂದು ಡಿಐಸಿಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ವಾಣಿಜ್ಯ ಇಲಾಖೆ, ಸರ್ಕಾರಿ ಪಾಲಿಟೆಕ್ನಿಕ್ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಒಂದು ದಿನದ ಅರಿವು ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿ ಕಾಪರ್ ಸಲ್ಫೇಟ್ ಕೇರಳದಿಂದ ರಾಜ್ಯಕ್ಕೆ ಬರುತ್ತಿತ್ತು. ಇದು ದುಬಾರಿಯಾಗಿದ್ದನ್ನು ಮನಗಂಡು ಉದ್ಯಮವನ್ನು ಸ್ಥಾಪಿಸಿ ಟನ್‌ಗೆ ೫ ಸಾವಿರ ರೂ ಕಡಿಮೆ ದರದಲ್ಲಿ ಗ್ರಾಹಕರಿಗೆ ನೀಡಿದ ಪರಿಣಾಮ ಉದ್ಯಮ ಲಾಭದಾಯಕವಾಗಿ ನಡೆಯುತ್ತಿದೆ ಎಂದು ಹೇಳಿದರು.

    ಪ್ರತಿಯೊಬ್ಬರೂ ಇಂತಹ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಎಂದು ಸಲಹೆ ನೀಡಿದರು.

    ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶಾಂತರಾಂ ಹೆಗಡೆ ಮಾತನಾಡಿ, ಹೇಳಿದರೆ ಕೇಳಿದವರಿಗೆ ಲಾಭ ಎಂಬಂತೆ ಇಂದಿನ ಕಾರ್ಯಾಗಾರದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದು, ಅವರ ಉಪಯುಕ್ತವಾದ ಮಾಹಿತಿಗಳನ್ನು ಪಡೆದು ಉದ್ಯಮಶೀಲರಾಗಿ ಎಂದು ಹೇಳಿದರು.

    ಕಾಫಿ ಡೇ ಸಿದ್ಧಾರ್ಥ ಹೆಗ್ಡೆ ಅವರು ದೇಶಾದ್ಯಂತ ಉದ್ಯೋಗ ಕಲ್ಪಿಸುವಲ್ಲಿ ಹೆಸರು ಮಾಡಿದ್ದು, ಈ ಸಭೆಯಲ್ಲಿ ಬ್ಯಾಂಕಿನ ಉದ್ಯೋಗಿಗಳು ಮತ್ತು ಉದ್ಯಮಿಗಳು ಭಾಗವಹಿಸಿದ್ದು, ಹಿಂದೆ ವ್ಯಾಪಾರ ಪರವಾನಗಿ, ಸಾಲಕ್ಕೆ ವರ್ಷಾನುಗಟ್ಟಲೆ ಸುತ್ತಾಡಬೇಕಿತ್ತು, ಇಂದು ಸೌಲಭ್ಯ ನೀಡಲು ಅವರೇ ಆಗಮಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು.

    ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹೇಶ್ ಕುಮಾರ್ ಮಾತನಾಡಿ, ಕೇಂದ್ರಸರ್ಕಾರ ರ್‍ಯಾಂಪ್ ಯೋಜನೆಯಡಿ ಹಲವಾರು ಉದ್ಯೋಗಗಳನ್ನು ಸೃಷ್ಟಿಸಿದ್ದು, ಅಂತಿಮ ವರ್ಷದ ತಾಂತ್ರಿಕ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದ್ದು, ಸ್ವ-ಉದ್ಯೋಗ ಸ್ಥಾಪನೆಗೆ ಬೇಕಾದ ಜ್ಞಾನವನ್ನು ಕೊಡಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದರು.

    ಈ ಸಂದರ್ಭದಲ್ಲಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಮೂರ್ತಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಹೇಶ್, ಕುಮಾರ್, ರಘು ಪ್ರಸಾದ್, ಚಿಕ್ಕಪ್ಪ ಲಕ್ಷ್ಮೀ ನಾರಾಯಣ್ ಉಪಸ್ಥಿತರಿದ್ದರು.

    Get a bank loan and start a business

  • ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ

    ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ

    ಮೈಸೂರು:  ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

    ಅವರು ಇಂದು ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಮತ್ತು ವಿಶ್ವಮೇತ್ರಿ ಬುದ್ಧ ವಿಹಾರ ಇವರ ಸಂಯುಕ್ತಶ್ರಯದಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025 ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಎಲ್ಲರಿಗೂ ಸಮಾನ ಅವಕಾಶಗಳು ಇಲ್ಲದ ಕಾರಣ ಅಸಮಾನತೆ ನಿರ್ಮಾಣವಾಗಿದೆ. ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಹೊಂದಿದರೆ ಮಾತ್ರ ಸಮಾನತೆ ಸಾಧ್ಯವಾಗುತ್ತದೆ ಎಂದು ಅಂಬೇಡ್ಕರ್ ಅವರು ಪ್ರತಿಪಾದಿಸಿದರು. ಪರಧರ್ಮ ಸಹಿಷ್ಣುತೆ ಸಹಬಾಳ್ವೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಮಾತ್ರ ದೇಶದಲ್ಲಿ ಶಾಂತಿ, ಅಹಿಂಸೆ ಸತ್ಯ ನೆಲೆಗೊಳ್ಳಲು ಸಾಧ್ಯ ಎಂದು ಹೇಳಿದರು ಎಂದರು.

    ಎಸ್ ಸಿಎಸ್ ಪಿ /ಟಿಎಸ್ ಪಿ ಯೋಜನೆಗಾಗಿ 42 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಸಮಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಬರಲೇಬೇಕು. ನಮ್ಮ ಸರ್ಕಾರ ಗುತ್ತಿಗೆಗಳಲ್ಲಿ ಮೀಸಲಾತಿಯನ್ನು ತಂದಿದೆ. ಬಡ್ತಿಯಲ್ಲಿ ಮೀಸಲಾತಿಯನ್ನು ಸರ್ವೋಚ್ಛ ನ್ಯಾಯಾಲಯ ಕೊಡದಿದ್ದರೂ ಸಮಿತಿ ರಚಿಸಿ, ಅದರ ವರದಿಯ ಆಧಾರದ ಮೇಲೆ ಬಡ್ತಿಯಲ್ಲಿ ಮೀಸಲಾತಿಯನ್ನು ಜಾರಿಗೆ ತರಲಾಯಿತು ಎಂದರು.

    ಸಮಾನತೆಯ ಜಾಗೃತಿಯ ಜೊತೆಗೆ ಪೂರಕ ಕಾರ್ಯಕ್ರಮಗಳಿದ್ದರೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಭಾಗ್ಯಗಳು ಮತ್ತು ಗ್ಯಾರಂಟಿ ಯೋಜನೆಗಳನ್ನು ನಮ್ಮ ಅಧಿಕಾರದ ಅವಧಿಯಲ್ಲಿ ನೀಡಲಾಗಿದೆ ಎಂದು ಪ್ರತಿಪಾದಿಸಿದರು.

    ಶಕ್ತಿ ಯೋಜನೆಯಿಂದಾಗಿ ಒಂದು ದಿನದಲ್ಲಿ ಹಾಸನಾಂಬೆ ದರ್ಶನಕ್ಕೆ ಭೇಟಿ ನೀಡಿದ ಒಟ್ಟು 9 ಲಕ್ಷ ಜನರಲ್ಲಿ ಪೈಕಿ ಶೇ 70 ರಷ್ಟು ಮಹಿಳೆಯರೇ ಇದ್ದಾರೆ. ದೇವಸ್ಥಾನ, ಕೆಲಸದ ಸ್ಥಳಗಳಿಗೆ ಮಹಿಳೆಯರು ಓಡಾಡುವಂತಾಗಿ ಸ್ವಾವಲಂಬಿಗಳಾಗಿದ್ದಾರೆ ಎಂದರು. ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ.ಗಳು ದೊರೆಯುತ್ತಿವೆ ಎಂದು ತಿಳಿಸಿದರು.

    ಸಮಾಜದ ಅಸಮಾನತೆ ತೊಲಗಿಸಲು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಶಕ್ತಿಯನ್ನು ಜನರಲ್ಲಿ ತುಂಬಬೇಕು. ಬುದ್ಧ , ಬಸವಣ್ಣ ಹಾಗೂ ಅಂಬೇಡ್ಕರ್ ರಂತಹ ಮಹಾನ್ ಚೇತನರು ಈ ನಿಟ್ಟಿನಲ್ಲಿ ಪ್ರಯತ್ನಿಸಿದರು. ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಕೆಲವು ಮನುವಾದಿಗಳ ಸಂಚಿನಿಂದ ಇಂದಿಗೂ ಬದಲಾವಣೆ ಸಾಧ್ಯವಾಗಿಲ್ಲ. ಸಚಿವ ಪ್ರಿಯಾಂಕ ಖರ್ಗೆಯವರು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘಸಂಸ್ಥೆಗಳು ತಮ್ಮ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಪತ್ರ ಬರೆದಿದ್ದರು. ತಮಿಳುನಾಡಿನಲ್ಲಿ ಈ ದಿಸೆಯಲ್ಲಿ ತೆಗೆದುಕೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    ಸಮಾಜದಲ್ಲಿ ಬದಲಾವಣೆ ತರುವ ನಮ್ಮ ಪ್ರಯತ್ನಕ್ಕೆ ಹಲವು ತೊಡಕು ಎದುರಾಗುತ್ತವೆ. ಮೌಢ್ಯಗಳು, ಕಂದಾಚಾರಗಳ ನಿಗ್ರಹಕ್ಕೆ ನಮ್ಮ ಸರ್ಕಾರ ಕಾನೂನು ರೂಪಿಸಿದೆ ಎಂದರು.

    ಅಂಬೇಡ್ಕರ್ ರವರು ಯಾವುದೇ ಜಾತಿಯ ಪರವಾಗಿಯೂ ನಿಂತವರಲ್ಲ. ಎಲ್ಲಾ ಜಾತಿವರ್ಗಗಳನ್ನು ಒಂದೇ ಎಂದು ಪರಿಗಣಿಸುವ ಸಮಾನತೆ ಹಾಗೂ ಸಮಸಮಾಜ ನಿರ್ಮಾಣವಾಗಬೇಕೆಂದು ಬಯಸಿದವರು. ಚಲನೆಯಿಲ್ಲದ ಸಮಾಜಕ್ಕೆ ಆರ್ಥಿಕ ಶಕ್ತಿ ತುಂಬುವ ಮೂಲಕ ಚಲನೆಯನ್ನು ನೀಡಬೇಕಾಗಿದೆ. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಂತ್ರವನ್ನು ಪಠಿಸಿದ್ದ ಅಂಬೇಡ್ಕರ್ ರವರು ಇದರ ಮೂಲಕ ಸಮಾಜದ ಬದಲಾವಣೆಯನ್ನು ಬಯಸಿದ್ದರು. ಈ ಹಿಂದೆ ಶೂದ್ರರಿಗೆ, ಮಹಿಳೆಯರನ್ನು ಶಿಕ್ಷಣದಿಂದ ದೂರವಿಡಲಾಗುತ್ತಿತ್ತು. ತನ್ನ ವಿದ್ಯಾರ್ಥಿದೆಸೆಯ ಘಟನೆಯನ್ನು ಸ್ಮರಿಸಿಕೊಂಡರು.
    ಸಮಾಜದಲ್ಲಿನ ಜಾತಿವ್ಯವಸ್ಥೆಯೂ ಸಹ, ಬದಲಾವಣೆಯ ಪ್ರಯತ್ನಗಳ ನಡುವೆಯೂ ಮತ್ತೆ ಮರುಕಳಿಸುತ್ತಿದೆ ಎಂದು ತಮ್ಮ ಅನುಭವವನ್ನು ಮುಖ್ಯಮಂತ್ರಿಗಳು ಹಂಚಿಕೊಂಡರು.

    ಎಸ್ ಸಿ ಪಿ/ ಟಿಎಸ್ ಪಿ ಕಾಯ್ದೆಯನ್ನು ಜಾರಿಗೆ ತಂದ ಹೆಗ್ಗಳಿಕೆ ಕಾಂಗ್ರೆಸ್ ಸರ್ಕಾರಕ್ಕಿದೆ. ಆಂಧ್ರ, ತೆಲಂಗಾಣ ಮತ್ತು ಕರ್ನಾಟಕವನ್ನು ಹೊರತುಪಡಿಸಿ, ಯಾವುದೇ ರಾಜ್ಯಗಳು ಈ ಕಾಯ್ದೆಯನ್ನು ಜಾರಿಗೆ ತಂದಿಲ್ಲ. ಪ್ರತಿ ಬಡವರಿಗೆ ಆರ್ಥಿಕ ಶಕ್ತಿಯನ್ನು ತುಂಬಬೇಕು.ನಮ್ಮಲ್ಲಿರುವ ಗುಲಾಮಗಿರಿಯ ಮನಸ್ಥಿತಿಯನ್ನು ಕಿತ್ತೊಗೆಯಬೇಕು, ತನ್ಮೂಲಕ ಎಲ್ಲರೂ ಮನುಷ್ಯರಾಗಬೇಕು. ಪ್ರೀತಿಯಿಂದ ದ್ವೇಷವನ್ನು ಗೆಲ್ಲಬೇಕು. ಬುದ್ಧ ಬಸವಣ್ಣನವರ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕಿದೆ ಎಂದರು.

    Everyone needs economic power to build an equal society.

  • ಸ್ವಚ್ಚತೆ ಕಾಯಕ ಮಾಡುವ ಪೌರ ಕಾರ್ಮಿಕರು ಆರೋಗ್ಯಕ್ಕೆ ಆದ್ಯತೆ ನೀಡಬೇಕು

    ಸ್ವಚ್ಚತೆ ಕಾಯಕ ಮಾಡುವ ಪೌರ ಕಾರ್ಮಿಕರು ಆರೋಗ್ಯಕ್ಕೆ ಆದ್ಯತೆ ನೀಡಬೇಕು

    ಚಿಕ್ಕಮಗಳೂರು: ನಗರದ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿದಿನ ಸ್ವಚ್ಚತೆ ಕಾಯಕ ಮಾಡುವ ಪೌರ ಕಾರ್ಮಿಕರು ಮತ್ತು ಪೌರ ನೌಕರರ ಆರೋಗ್ಯ ಕಾಪಾಡಲು ರಾಜ್ಯಸರ್ಕಾರ ಕ್ರೀಡಾಕೂಟ ಆಯೋಜನೆ ಮಾಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ಅವರು ಇಂದು ಜಿಲ್ಲಾ ಆಟದ ಮೈದಾನದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಪೌರ ಕಾರ್ಮಿಕರು ತಮ್ಮ ಕುಟುಂಬವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಸರ್ಕಾರ ಗ್ಲೌಸ್, ಶೂ, ಸಮವಸ್ತ್ರ ಮುಂತಾದ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು, ಜೊತೆಗೆ ವಿಮಾ ಸೌಲಭ್ಯವನ್ನು ನೀಡಲಾಗಿದೆ ಎಂದರು.

    ವಾರ್ಷಿಕವಾಗಿ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಚಿಕಿತ್ಸೆ ನೀಡಲಾಗುತ್ತಿದೆ. ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು ಎಂದು ಹೇಳಿದರು. ಸ್ವಾರ್ಥವಿಲ್ಲದೆ ನಿಸ್ವಾರ್ಥವಾಗಿ ಬದುಕುವ ಸಂದರ್ಭದಲ್ಲಿ ತಮ್ಮ ಕುಟುಂಬಕ್ಕಾಗಿ ಪೌರ ಕಾರ್ಮಿಕರು ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಈ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ಮನಸ್ಸು ಹಗುರವಾಗುತ್ತದೆ, ಸದೃಢ ದೇಹ ಹೊಂದಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮಾತನಾಡಿ, ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಚತೆ ಮಾಡಿ ನಗರದ ನಾಗರಿಕರ ಆರೋಗ್ಯಕ್ಕೆ ಪೂರಕವಾಗಿ ಕೆಲಸ ಮಾಡುವ ನೀವು ನಿಮ್ಮ ಅರೋಗ್ಯಕ್ಕೆ ಹೆಚ್ಚಿನ ಕಾಳಜಿ ಮತ್ತು ಆದ್ಯತೆ ನೀಡಬೇಕೆಂದು ವಿನಂತಿಸಿದರು.

    ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಅವರ ಕುಟುಂಬದವರಿಗಾಗಿ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳನ್ನು ಆಯೋಜಿಸಿ ಕುಟುಂಬದವರ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮ ನಡೆಸಬೇಕೆಂದು ಹೇಳಿದರು. ಇನ್ನು ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ರಾಜ್ಯಸರ್ಕಾರ ಶೀಘ್ರವೇ ಕಾಯಂಗೊಳಿಸಬೇಕು ಹಾಗೂ ನಿವೃತ್ತಿ ವೇತನ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

    ನಗರಸಭೆ ಪೌರ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಕೊಡಬೇಕು ಆ ನಿಟ್ಟಿನಲ್ಲಿ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ಸದೃಢ ಆರೋಗ್ಯಕ್ಕಾಗಿ ಪೌರ ಕಾರ್ಮಿಕರು ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ ಎಂದು ಶುಭ ಕೋರಿದರು.

    ಪೌರಾಯುಕ್ತ ಬಿ.ಸಿ. ಬಸವರಾಜ್ ಸ್ವಾಗತಿಸಿ ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕಳೆದ ೪ ವರ್ಷಗಳಿಂದ ಗುಂಪು ವಿಮೆಯನ್ನು ಮಾಡಿಸಿದ್ದೇವೆ ಎಂದ ಅವರು, ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪೌರಕಾರ್ಮಿಕರ ಅರೋಗ್ಯ ತಪಾಸಣೆ ನಡೆಸಿ ಅವರ ಆರೋಗ್ಯಕ್ಕಾಗಿ ಶೂ, ಗ್ಲೌಸ್, ಸಮವಸ್ತ್ರ ಮುಂತಾದ ಸೌಲಭ್ಯಗಳನ್ನು ನೀಡಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷ ಲಲಿತಾನಾಯ್ಕ್, ಸದಸ್ಯರಾದ ವರಸಿದ್ದಿ ವೇಣುಗೋಪಾಲ್, ಗುರುಮಲ್ಲಪ್ಪ, ಗೋಪಿ, ರೂಪ ಕುಮಾರ್, ಜಾವಿದ್, ಎ.ಸಿ. ಕುಮಾರಗೌಡ, ಅಣ್ಣಯ್ಯ, ಶ್ರೀನಿವಾಸ್, ದಿನೇಶ್, ಪ್ರಕಾಶ್ ರೈ, ಉಪ ವಿಭಾಗಾಧಿಕಾರಿ ಸುದರ್ಶನ್, ಮ್ಯಾನೇಜರ್ ರವಿ, ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ಈಶ್ವರ್, ನಾಗಪ್ಪ, ರಂಗಪ್ಪ, ಚಂದ್ರಶೇಖರ್, ಮತ್ತಿತರರು ಉಪಸ್ಥಿತರಿದ್ದರು.

    Civic workers involved in sanitation work should prioritize health

  • ಗೋಹಂತಕರನ್ನು ಹದ್ದುಬಸ್ತಿನಲ್ಲಿಡುವ ಕೆಲಸವ ಹಿಂದೂ ಸಮಾಜ ಬರುತ್ತದೆ

    ಗೋಹಂತಕರನ್ನು ಹದ್ದುಬಸ್ತಿನಲ್ಲಿಡುವ ಕೆಲಸವ ಹಿಂದೂ ಸಮಾಜ ಬರುತ್ತದೆ

    ಚಿಕ್ಕಮಗಳೂರು: ಸಂಪೂರ್ಣ ಗೋಹತ್ಯೆ ಕಾಯ್ದೆ ಜಾರಿಯಲ್ಲಿದೆ. ಗೋಹಂತಕರನ್ನು ಪೊಲೀಸರು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಮಾಡದೇ ಇದ್ದರೆ ನಾವೇ ಆ ಕೆಲಸವನ್ನು ಮಾಡುತ್ತೇವೆ. ಹಿಂದೂ ಸಮಾಜಕ್ಕೆ ಆ ತಾಕತ್ತು ಇದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

    ಇತ್ತಿಚೆಗೆ ನಗರದಲ್ಲಿ ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಸೇರಿದಂತೆ ಗೋಹತ್ಯೆ, ಲವ್‌ಜಿಹಾದ್ ನಂತಹ ಪ್ರಕರಣಗಳನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಆಜಾದ್ ಪಾರ್ಕ್ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

    ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸಿದರೆ ಗೋರಕ್ಷಣೆಯಂತಹ ಕಾರ್ಯಕ್ಕೆ ಬಜರಂಗದಳದ ಕಾರ್ಯಕರ್ತರು ಮುಂದಾಗುವುದಿಲ್ಲ. ಗೋಹಂತಕರಿಂದ ಹಫ್ತಾ ವಸೂಲಿ ಮಾಡಿ ಸುಮ್ಮನಾದರೆ ನಿಮ್ಮ ಹೆಂಡತಿ, ಮಕ್ಕಳು ಸುಖವಾಗಿರಲು ಸಾಧ್ಯವಿಲ್ಲ ಎಂದರು.

    ಉಪ್ಪಳ್ಳಿ ಬಳಿ ಅಕ್ರಮವಾದ ಮಸೀದಿ ನಿರ್ಮಾಣವಾಗುತ್ತಿದೆ. ಇಂದಿಗೂ ನ್ಯಾಯಬದ್ಧವಾದ ಅನುಮತಿ ಪಡೆದಿಲ್ಲ. ಜಿಲ್ಲಾಡಳಿತ ನಿಲ್ಲಿಸದೇ ಇದಲ್ಲಿ ನಾವೇ ನಿಲ್ಲಿಸಬೇಕಾಗಬಹುದು. ಜಿಲ್ಲಾಡಳಿತ ಕಾನೂನು ಪಾಲಿಸುವಂತೆ ನೋಡಿಕೊಂಡರೆ ಕೋಮು ಗಲಭೆ ಆಗುವುದಿಲ್ಲ ಎಂದು ಹೇಳಿದರು.

    ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಗೋಹತ್ಯೆಯನ್ನು ನಿಷೇಧ ಮಾಡಿದ್ದರೂ, ಅಕ್ರಮ ಕಸಾಯಿಖಾನೆಗಳು ನಡೆಯುತ್ತಿವೆ ಎಂದರೆ ಅದು ಸಂವಿಧಾನ ವಿರೋಧಿ ಕೃತ್ಯ. ಅದನ್ನು ಮಾಡುತ್ತಿರುವವರಿಗೆ ಬುದ್ಧಿ ಕಲಿಸಬೇಕು ಎಂದು ಒತ್ತಾಯತಿಸುವುದು ಅಪರಾಧವೇ ಎಂದು ಪ್ರಶ್ನಿಸಿದರು.

    ನನ್ನದು ಬಸವ ಧರ್ಮ, ಅಂಬೇಡ್ಕರ್ ವಾದ, ಗಾಂಧಿ ಮಾರ್ಗ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ ಬಸವಣ್ಣನವರು ಕಳಬೇಡ, ಕೊಲಬೇಡ ಎಂದು ಹೇಳಿದ್ದಾರೆ. ಹಾಗಿದ್ದರೆ ಗೋಹತ್ಯೆಯನ್ನು ಮುಖ್ಯಮಂತ್ರಿ ಹೇಗೆ ಸಮರ್ಥನೆ ಮಾಡುತ್ತಾರೆ. ದಯೆ ಇರಬೇಕು ಸಕಲ ಜೀವಾತ್ಮರಿಗೂ ಎಂದು ಬಸವಣ್ಣ ಹೇಳಿದ್ದಾರೆ. ಆದರೆ ಬೆಂಗಳೂರಿನಲ್ಲಿ ಗೋವಿನ ಕೆಚ್ಚಲು ಕತ್ತರಿಸಿ ರಕ್ತ ಹರಿಸಿದರು ಆದರೆ ಬಸವ ಧರ್ಮ ಪಾಲಿಸುವ ಮುಖ್ಯಮಂತ್ರಿಗಳಿಗೆ ಕಣ್ಣೀರು ಬರಲಿಲ್ಲ ಎಂದರು.

    ಭಟ್ಕಳದಲ್ಲಿ ಗಬ್ಬದ ಹಸುವಿಗೆ ಚೂರಿ ಹಾಕಿ ಭ್ರೂಣವನ್ನು ಹೊರತೆಗೆದರು ಮುಖ್ಯಮಂತ್ರಿಗಳಿಗೆ ಸಂಕಟವಾಗಲಿಲ್ಲ. ಜಿಲ್ಲೆಯ ಕಡೂರಿನ ಕಲ್ಕೆರೆ, ಚೌಳಹಿರಿಯೂರು, ಕಳಸ, ಕೊಟ್ಟಿಗೆಹಾರ, ಶೃಂಗೇರಿ, ಚಿಕ್ಕಮಗಳೂರು, ಕಳಸಗಳಲ್ಲಿ ಅಕ್ರಮ ಗೋಸಾಗಣೆ, ಗೋಹತ್ಯೆ ನಿರಂತರವಾಗಿ ನಡೆಯುತ್ತಿದೆ. ಇದನ್ನೆಲ್ಲ ಮಾಡಿದ್ದು ಮುಖ್ಯಮಂತ್ರಿಗಳು ಶಾಂತಿಧೂತರು ಎಂದು ಕರೆದ ಜನರೇ ಆಗಿದ್ದಾರೆ ಎಂದರು.

    ಮುಖ್ಯಮಂತ್ರಿಗಳು ಹೇಳಿದ ಶಾಂತಿಧೂತರೇ ಗೋಹಂತಕರು, ಗೋವಿನ ಕೆಚ್ಚಲು ಕತ್ತರಿಸಿದವರು. ದಯೆ ಇಲ್ಲದವರನ್ನು ನೋಡಿಕೊಂಡು ಸುಮ್ಮನಿದ್ದು, ಅದನ್ನು ತಡೆದವರ ಮೇಲೆ ಕೇಸು ದಾಖಲಿಸಿದ್ದೀರಿ. ಇನ್ನೆರಡುವರೆ ವರ್ಷ ತಾಳಿಕೊಳ್ಳಿ ನೀವು ಹಾಕಿರುವ ಎಲ್ಲಾ ಕೇಸುಗಳನ್ನು ವಾಪಾಸ್ ತೆಗೆಸುತ್ತೇವೆ ಎಂದರು.

    ಮುಂದೆ ನಮ್ಮ ಸರ್ಕಾರ ಬಂದ ನಂತರ ಜಿಲ್ಲೆಗೊಂದು ಜೆಸಿಬಿ ಪಡೆ ತಯಾರು ಮಾಡುತ್ತೇವೆ. ಅಲ್ಲೇ ಡ್ರಾ, ಅಲ್ಲೇ ಬಹುಮಾನ ಎನ್ನುವಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಕಲ್ಲು ಹೊಡೆದರೆ ಜೆಸಿಬಿ ಬರುತ್ತದೆ. ಇವರಾರು ಶಾಶ್ವತವಾಗಿ ಇರುವುದಿಲ್ಲ ಎಂದರು.

    ಜಿಲ್ಲಾಡಳಿತ ಅಕ್ರಮ ಕಸಾಯಿ ಕೇಂದ್ರಗಳನ್ನು ಬಂದ್ ಮಾಡಿಸಬೇಕು. ಇಲ್ಲವಾದಲ್ಲಿ ನೆಲದ ಕಾನೂನು, ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಹಿಂದೂ ಸಮಾಜ ಹಿಂದುಳಿಯುವುದಿಲ್ಲ. ನಮಗೆ ಖಾಜಿ ನ್ಯಾಯ ಬೇಡ, ಅಂಬೇಡ್ಕರ್ ಕೊಟ್ಟ ಸಂವಿಧಾನದ ಪ್ರಕಾರ ನ್ಯಾಯ ಕೊಡಿ ಎಂದು ಒತ್ತಾಯಿಸಿದರು.

    ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ತಾಯಿಯ ಸಮಾನವಾದ ಗೋಮಾತೆಯ ಮೇಲೆ ದಾಳಿಗಳು ನಡೆದಾಗ ಯಾವ ತ್ಯಾಗಕ್ಕಾದರೂ ಸಿದ್ಧರಿರಬೇಕು. ನಾವೂ ಸಹ ರಾಜೀನಾಮೆ ಕೊಟ್ಟು ಹೊರಬರಲು ಸಿದ್ಧರಿದ್ದೇವೆ ಎಂದರು.

    ರಾಷ್ಟ್ರೀಯ ಸ್ವಯಂ ಸೇವಕ ಸಂಘವು ನಮಗೆ ದೇಶಭಕ್ತಿಯನ್ನೇ ಹೇಳಿಕೊಟ್ಟಿದೆ. ನಮಗೆ ಹಿಂದುತ್ವ, ದೇಶ ಮೊದಲು ಮಿಕ್ಕೆಲ್ಲವೂ ಗೌಣ ಎಂದು ಹೇಳಿದರು.
    ಹಿಂದೂಗಳು ಸಂಘಟಿತರಾಗಿ ಪ್ರತಿ ಮನೆಯಿಂದ ಹೋರಾಟಗಳಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಿ ಬೀದಿಗೆ ಬರಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಹಿಂದೆ ಔರಂಗಜೇಬನ ಆಡಳಿತದಲ್ಲಿ ತುಘಲಕ್ ದರ್ಬಾರ್ ಇತ್ತು ತಲೆಗಂದಾಯ ಕೊಟ್ಟರೆ ಮಾತ್ರ ಹಿಂದೂಗಳು ಬದುಕಲು ಅವಕಾಶವಿತ್ತು. ಅದೇ ರೀತಿ ಆಡಳಿತವನ್ನು ರಾಜ್ಯದಲ್ಲೂ ಮುಖ್ಯಮಂತ್ರಿಗಳು ತರಲು ಹೊರಟಿದ್ದಾರೆ. ಹಿಂದೂ ಎಂದು ಹೇಳಿಕೊಳ್ಳು ಆಗದ ಸ್ಥಿತಿ ಬಂದಿದೆ.

    ಗೋವಿಗೆ ಬೆಂಕಿ ಕೊಟ್ಟು ವಿಕೃತಿ ಮೆರೆದ ಕೃತ್ಯ ನಗರದಲ್ಲಿ ನಡೆದಿದೆ. ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಅಪ್ರಾಪ್ತನಿಂದ ಈ ಕೆಲಸ ನಡೆದಿದ್ದರೆ ಅದಕ್ಕೆ ಕುಮ್ಮಕ್ಕು ಕೊಟ್ಟವರನ್ನು ಯಾಕೆ ಬಂಧಿಸಿಲ್ಲ ಹಾಗಿದ್ದರೆ ಗೋವಿನ ಹಿಂಸೆಯನ್ನು ತಡೆದವರ ಮೇಲೆ ಏಕೆ ಕೇಸು ದಾಖಲಿಸಿದ್ದೀರಿ ಎಂದು ಪ್ರಶ್ನಿಸಿದರು.

    ನಗರದ ಕತ್ರಿಮಾರಮ್ಮ ದೇವಸ್ಥಾನದ ಬಳಿ ಗೋಪೂಜೆ ನೆರವೇರಿಸುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಸಿ.ಟಿ.ರವಿ ಚಾಲನೆ ನೀಡಿದರು. ಆಜಾದ್ ಪಾರ್ಕ್‌ವರೆಗೆ ಭಗವಾಧ್ವಜ ಹಿಡಿದು ಪ್ರತಿಭಟನೆ ನಡೆಸಲಾಯಿತು. ಗೋಹಂತಕರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

    ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರಿಕಾಂತ್ ಪೈ, ಬಜರಂಗದಳದ ಶ್ಯಾಂ ವಿ.ಗೌಡ, ರಂಗನಾಥ್, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

    Hindu society is tasked with keeping cow killers in check.

  • ವಿದ್ಯೆ-ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ

    ವಿದ್ಯೆ-ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ

    ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

    ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.

    ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ ಎಂದರು. ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ‌ ಎಂದರು.

    ಬಹಳ ಹಿಂದೆಯೇ ಬಸವಾದಿ ಶರಣರು ಮೌಡ್ಯ , ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ, ಇವತ್ತಿಗೂ ಮೌಡ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಡ್ಯವನ್ನು ಬಿತ್ತುತ್ತಾರೆ ಎಂದರು.

    ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಡ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಡ್ಯ ಮತ್ತು ಮೌಡ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು. ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ‌ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ದಾಂತ, ಗ್ರಹಚಾರಗಳನ್ನೆಲ್ಲಾ ನಂಬುತ್ತಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಪ್ರಶ್ನಿಸಿದರು.

    ದೇಶದ ಪ್ರಧಾನಿ ಆಗಿದ್ದ ಜವಾಹರಲಾಲ್ ನೆಹರೂ ಅವರು ದೇಶದ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ ಎನ್ನುವ ದೂರದೃಷ್ಟಿ ಹೊಂದಿದ್ದರು. ಇದಕ್ಕೆ ಅಗತ್ಯವಾದ ಶೈಕ್ಷಣಿಕ ಸಾಧನೆಗಳಿಗೆ ಕಾರಣರಾಗಿದ್ದರು ಎಂದು ವಿವರಿಸಿದರು. 52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಈ ಕೊಡಲು ಸಿದ್ದವಿದೆ ಎಂದು ಘೋಷಿಸಿದರು.

    ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

    Education and talent are not the property of anyone’s father’s house.