Category: ಜಿಲ್ಲಾ ಸುದ್ದಿ

  • ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವಕ್ಕೆ ಸಂಪೂರ್ಣ ಸಿದ್ದತೆ

    ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವಕ್ಕೆ ಸಂಪೂರ್ಣ ಸಿದ್ದತೆ

    ಚಿಕ್ಕಮಗಳೂರು: ತಾಲ್ಲೂಕಿನ ಬಿಂಡಿಗ ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಅಕ್ಟೋಬರ್ ೧೯ ರಿಂದ ೨೩ ರವರೆಗೆ ನಡೆಯಲಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಸಂಪೂರ್ಣ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ತಿಳಿಸಿದರು.

    ಅವರು ಇಂದು ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನಗಳ ಕಾಲ ಬೆಟ್ಟ ಹತ್ತಲು ಅವಕಾಶ ನೀಡಲಾಗಿದೆ ಎಂದು ಹೇಳಿ ದೀಪಾವಳಿಯ ಮೊದಲ ದಿನ ಅಕ್ಟೋಬರ್ ೧೯ ರಂದು ನರಕ ಚತುರ್ದಶಿ ಅಂಗವಾಗಿ ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ರವರೆಗೆ ಭಕ್ತರು ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯಬಹುದು, ಮರುದಿನ ಅಕ್ಟೋಬರ್ ೨೦ ರಂದು ಬೆಳಗ್ಗೆ ೮ ರಿಂದ ಸಂಜೆ ೩ ರವರೆಗೆ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ ಎಂದು ತಿಳಿಸಿದರು.

    ಅ.೧೮ ಮತ್ತು ೧೯ ರಂದು ಅತೀ ಹೆಚ್ಚು ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಬೆಟ್ಟ ಹತ್ತುವ ಭಕ್ತಾಧಿಗಳಿಗೆ ದಾರಿಯಲ್ಲಿ ಯಾವುದೇ ಅಡಚಣೆಯಾಗದಂತೆ ಜೊತೆಗೆ ಭೂಮಿ ಜರುಗುವ ಭಾಗದಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
    ಜನದಟ್ಟಣೆ ನಿಯಂತ್ರಣ ಮಾಡುವ ಸಲುವಾಗಿ ದೇವಸ್ಥಾನ ಸಮಿತಿ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಭಕ್ತಾಧಿಗಳಿಗೆ ಸೂಚನೆ ನೀಡುವ ಫಲಕಗಳನ್ನು ಬೆಟ್ಟದಲ್ಲಿ ಅಳವಡಿಸಲಾಗಿದ್ದು, ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿರುವುದು ಡ್ರೋನ್ ಸರ್ವೆ ಮತ್ತು ಸಿಸಿ ಕ್ಯಾಮೆರಾದಲ್ಲಿ ಪತ್ತೆಯಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

    ಈ ಬಾರಿ ರಾತ್ರಿ ವೇಳೆ ಬೆಟ್ಟ ಹತ್ತಲು ಅವಕಾಶವಿರುವುದಿಲ್ಲ ಎಂದ ಅವರು, ಗಿರಿ ಪ್ರದೇಶದಲ್ಲಿ ತುಂಬಾ ಮಲೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರಿಕೆ ಇದೆ. ರಾತ್ರಿ ವೇಳೆ ಬೆಟ್ಟ ಹತ್ತುವುದು ಅಪಾಯಕಾರಿಯಾಗಿದೆ. ಅದರಲ್ಲೂ ಮಹಿಳೆಯರಿಗೆ ಹೆಚ್ಚು ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ರಾತ್ರಿ ಬೆಟ್ಟ ಹತ್ತಲು ಅವಕಾಶ ಇರುವುದಿಲ್ಲ ಎಂದರು.

    ೧೫ ವರ್ಷದ ಒಳಗಿನ ಮಕ್ಕಳು, ೬೦ ವರ್ಷ ಮೇಲ್ಪಟ್ಟವರು ಮತ್ತು ಆರೋಗ್ಯದ ಸಮಸ್ಯೆ ಇರುವವರು ಬೆಟ್ಟ ಹತ್ತುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ತೀರ್ಮಾನಕ್ಕೆ ಬರಲಾಗಿದೆ ಇದೆಲ್ಲಾ ಕ್ರಮಗಳು ಭಕ್ತರ ಹಿತದೃಷ್ಠಿಯಿಂದ ಜಾರಿಗೆ ತರಲಾಗುತ್ತಿದೆ.
    ಭಕ್ತರ ನೂಕು ನುಗ್ಗಲು ತಪ್ಪಿಸಿ ಎಲ್ಲರಿಗೂ ದೇವಿ ದರ್ಶನ ಸುಗಮವಾಗಲಿ ಎನ್ನುವ ಕಾರಣಕ್ಕೆ ಎರಡು ದಿನಗಳ ಕಾಲ ಬೆಟ್ಟ ಹತ್ತಲು ಅವಕಾಶ ನೀಡಲಾಗತ್ತಿದೆ. ಈ ಕಾರಣಕ್ಕೆ ಭಕ್ತರು ರಾತ್ರಿ ವೇಳೆ ಬೆಟ್ಟ ಹತ್ತದೆ ದೇವಸ್ಥಾನ ಸಮತಿ ಮತ್ತು ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

    ಪ್ರತಿ ವರ್ಷದಂತೆ ಈ ಬಾರಿಯೂ ನರಕ ಚತುರ್ದಶಿಯ ದಿನ ಸಂಜೆ ೭ ಗಂಟೆಗೆ ಬೆಟ್ಟದಲ್ಲಿ ದೀಪೋತ್ಸವ ಜರುಗಲಿದೆ. ನಂತರ ಬೆಟ್ಟದ ತಪ್ಪಿಲಿನ ದೇವೀರಮ್ಮನವರ ದೇವಸ್ಥಾನದಲ್ಲಿ ಯಥಾ ಪ್ರಕಾರ ಮರುದಿನ ದೇವಿಯವರಿಗೆ ಉಡುಗೆ ಪೂಜೆ ಜೊತೆಗೆ ಸಂಜೆ ಎಣ್ಣೆ ಬಟ್ಟೆ ಸುಡುವ ಕಾರ್ಯಕ್ರಮ ಇರುತ್ತದೆ. ೨೨ ರಂದು ಕೆಂಡಾರ್ಚನೆ ಮತ್ತು ಜಾತ್ರಾ ಮಹೋತ್ಸವ ನಡೆಯಲಿದೆ.

    ಅಪಾಯದ ಜಾಗದಲ್ಲಿ ಹೋಗುವಹಾಗಿಲ್ಲ, ಸೆಲ್ಫಿ ತೆಗೆಯಲು ಅವಕಾಶವಿಲ್ಲ, ಬೆಟ್ಟದ ದಾರಿ ಹೊರತುಪಡಿಸಿ ಬೇರೆಲ್ಲೂ ಹೋಗಬಾರದು. ಉಪವಾಸದಿಂದ ಆಗಮಿಸುವ ಭಕ್ತರು ಓಆರ್‌ಎಸ್, ಚಾಕಲೇಟ್, ಗ್ಲೂಕೋಸ್-ಡಿ ಮುಂತಾದವುಗಳನ್ನು ಇಟ್ಟುಕೊಳ್ಳುವಂತೆ ಸೂಚನೆ ನೀಡಿದರು.

    ಕಳೆದ ಬಾರಿಯಂತೆ ಆರ್‌ಜಿ ರಸ್ತೆ, ಐಜಿ ರಸ್ತೆ, ಎಂಜಿ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಖಾಸಗಿ ವಾಹನಗಳಲ್ಲಿ ಹೋಗುವ ಭಕ್ತರಿಗೆ ಮಲ್ಲೇನಹಳ್ಳಿ ಸರ್ಕಾರಿ ಕಾಲೇಜು ಬಳಿ ವಾಹನ ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ತರೀಕೆರೆ ಭಾಗದಿಂದ ಆಗಮಿಸುವ ಭಕ್ತರಿಗೆ ಕುಮಾರಗಿರಿ ಸಮೀಪ ಪಾರ್ಕಿಂಗ್ ಮಾಡಬೇಕು, ರಸ್ತೆ ಇಕ್ಕೆಲಗಳಲ್ಲಿ ಪಾರ್ಕಿಂಗ್ ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

    ಕೆಎಸ್‌ಆರ್‌ಟಿ ಬಸ್ ನಿಲ್ದಾಣದಿಂದ ಸುಮಾರು ೫೦ ಕ್ಕೂ ಹೆಚ್ಚು ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ೧೯ ರಂದು ಬೆಳಗ್ಗೆ ೭ ಗಂಟೆ ಹಾಗೂ ೨೦ ರಂದು ಬೆಳಗ್ಗೆ ೬.೩೦ ಕ್ಕೆ ಬಸ್‌ಗಳು ನಗರದ ಬಸ್ ನಿಲ್ದಾಣದಿಂದ ಹೊರಡಲಿದೆ ಎಂದು ವಿವರಿಸಿದರು.

    ಅಕ್ಟೋಬರ್ ಮತ್ತು ೨೦ ಹೊರತು ಪಡಿಸಿ ಉಳಿದೆಲ್ಲಾ ದಿನವೂ ನಿರಂತರವಾಗಿ ಭಕ್ತರಿಗೆ ಅನ್ನದಾನ ಮಾಡಲಾಗುತ್ತದೆ. ಬೆಟ್ಟದ ಮೇಲೆ ದೇವಿಗೆ ತೆಂಗಿನ ಕಾಯಿ ಒಡೆಯುವುದನ್ನು ನಿಷೇಧಿಸಲಾಗಿದೆ. ಪಾದರಕ್ಷೆ ಧರಿಸದೆ ಬರಿಗಾಲಿನಲ್ಲಿ ಭಕ್ತರು ಬೆಟ್ಟ ಹತ್ತಬೇಕು. ಬೆಟ್ಟ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯ ಎಸೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಉಪಸ್ಥಿತರಿದ್ದರು.

    Complete preparations for Sri Deviramma’s festival

  • ಮಹಿಳಾ – ಮಕ್ಕಳ ಅಭಿವೃದ್ದಿ ನಿಗಮಕ್ಕೆ ಸರ್ಕಾರದಿಂದ 32 ಕೋಟಿ ರೂ.

    ಮಹಿಳಾ – ಮಕ್ಕಳ ಅಭಿವೃದ್ದಿ ನಿಗಮಕ್ಕೆ ಸರ್ಕಾರದಿಂದ 32 ಕೋಟಿ ರೂ.

    ಚಿಕ್ಕಮಗಳೂರು: ರಾಜ್ಯ ಸರ್ಕಾರ ಈ ಬಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನಿಗಮಕ್ಕೆ ೩೨ ಕೋಟಿ ರೂ. ಅನುದಾನವನ್ನು ಒದಗಿಸಿದ್ದು, ಇದರಲ್ಲಿ ೧೫ ಕೋಟಿ ಅನುದಾನ ಉದ್ಯೋಗಕ್ಕಾಗಿ ಮೀಸಲಿಡಲಾಗಿದೆ ಎಂದು ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ತಿಳಿಸಿದರು.

    ಇಂದು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಮಾಜಿ ದೇವದಾಸಿಯರಿಗೆ ೨೦೦೦ ರೂ. ಮಾಸಾಶನ ನೀಡಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ೩೦ ಸಾವಿರ ಸಹಾಯ ಧನ, ಆಸಿಡ್ ದಾಳಿಗೆ ತುತ್ತಾದವರಿಗೆ ಜೀವನಾಧಾರಕ್ಕೆ ೧೦ ಸಾವಿರ ರೂ.ಗಳನ್ನು ಮಾಸಾಶನ ಹಾಗೂ ನಿಗಮದಿಂದ ೫ ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು.

    ಐದು ಯೋಜನೆ ಹೊಂದಿರುವ ಈ ಪುಟ್ಟ ನಿಗಮವು ಇದುವರೆವಿಗೂ ಸಾಕಷ್ಟು ಸಾಧನೆಗಳನ್ನು ಮಾಡಿಕೊಂಡು ಬರುತ್ತಿದೆ. ಕೆಳ ವರ್ಗ ಮತ್ತು ಮಧ್ಯಮ ವರ್ಗದ ಜನರಿಗೆ ಸಂಬಂಧಿಸಿದ ಉದ್ಯೋಗಿನಿ ಯೋಜನೆಯು ನಗರ ವ್ಯಾಪ್ತಿಯಲ್ಲಿ ಶೇ.೨೫ ಕೂಡ ಗುರಿ ತಲುಪಲು ಸಾಧ್ಯವಾಗುತ್ತಿಲ್ಲ. ಕೆಲವೊಂದು ತೊಡಕುಗಳಿದ್ದು, ಕಾರಣಾಂತರಗಳಿಂದ ಲೀಡ್ ಬ್ಯಾಂಕ್‌ಗಳಿಂದ ಸಕಾರ ದೊರಕುತ್ತಿಲ. ಆದರೂ ಜಿಲ್ಲೆಯಲ್ಲಿ ಶೇ.೭೫ ರಷ್ಟು ಗುರಿ ಸಾಧಿಸಲಾಗಿದೆ ಎಂದು ತಿಳಿಸಿದರು.

    ಸರ್ಕಾರಿ ಕೆಲಸ ನಮಗೆ ಉಸಿರಿರುವರೆಗೂ ಅನ್ನ ನೀಡುವ ಕೆಲಸವಾಗಿರುವುದರಿಂದ ಅಧಿಕಾರಿಗಳು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು. ಇಚ್ಛಾಶಕ್ತಿಯಿಂದ ಸ್ಪಂದಿಸಿ ಸಹಕರಿಸಿ ಜನರು ಜೀವನ ರೂಪಿಸಿಕೊಳ್ಳುವಂತಹ ಅವಕಾಶ ಕಲ್ಪ್ಪಿಸಿಕೊಡಬೇಕು. ಸಾರ್ವಜನಿಕರು ಇಲಾಖೆಯ ಕಚೇರಿಗೆ ಬಂದಾಗ ಸರ್ಕಾರದ ಸವಲತ್ತುಗಳನ್ನು ಅವರಿಗೆ ತಲುಪಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವಿರುವುದಿಲ್ಲ. ಅಂಥವರಿಗೆ ಅರಿವು ಮೂಡಿಸಿ ಸೌಲಭ್ಯ ಪಡೆದುಕೊಳ್ಳುವಂತೆ ಮಾಡಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸರ್ಕಾರ ಮತ್ತು ಸಾರ್ವಜನಿಕರ ಸೇತುವೆಯಾಗಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.

    ರಾಜ್ಯದಲ್ಲಿ ಎಷ್ಟು ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ ಎಂಬುದನ್ನು ಅರಿಯಲು ಮೊದಲ ಬಾರಿಗೆ ಈ ಸಮೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದ್ದು, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಈ ಸಮೀಕ್ಷೆಯ ಉದ್ದೇಶವಾಗಿದೆ. ಪ್ರತಿ ಜಿಲ್ಲೆಯಲ್ಲಿ ಸಮೀಕ್ಷೆ ಯಾವ ಹಂತಕ್ಕೆ ತಲುಪಿದೆ ಎಂಬುದನ್ನು ತಿಳಿಯಲು ಖುದ್ದಾಗಿ ಜಿಲ್ಲೆಗಳಿಗೆ ತೆರಳಿ ಪರಿಶೀಲನೆ ಮಾಡುತ್ತಿರುವುದಾಗಿ ತಿಳಿಸಿದರು.

    ಜಿಲ್ಲೆಯಲ್ಲಿ ೧೩೬ ತೃತೀಯ ಲಿಂಗಿಗಳಿದ್ದಾರೆ. ಸಮೀಕ್ಷೆಗೆ ಒಳಪಟ್ಟಲ್ಲಿ ಮನೆಯವರ ವಿಶ್ವಾಸ ಕಳೆದುಕೊಂಡು ಮನೆಯಿಂದ ದೂರ ಉಳಿಯಬೇಕಾಗುತ್ತದೆ ಎಂಬ ಕಾರಣದಿಂದ ಮಿಕ್ಕ ೨೨ ಜನರು ಸಮೀಕ್ಷೆಗೆ ಸಹಕರಿಸುತ್ತಿಲ್ಲ. ಅಂಥವರ ಮನವೊಲಿಸಿ ಸಮೀಕ್ಷೆಗೆ ಒಳಪಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ನಿಗಮದ ಜಂಟಿ ನಿರ್ದೇಶಕಿ ಅಕ್ಕಮಹಾದೇವಿ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ಸಹಿತ ವಸತಿ ಕಲ್ಪಿಸಲು ಪ್ರಸತ್ತ ಸಾಲಿನಲ್ಲಿ ವಿಶೇ? ವರ್ಗದ ವಸತಿ ಯೋಜನೆಯಡಿಯಲ್ಲಿ ನಗರಾಭಿವೃದ್ಧಿ ಕೋಶ, ಪುರಸಭೆ, ನಗರಸಭೆಗಳಿಗೆ ಒಟ್ಟು ೨೩ ಅರ್ಜಿಗಳನ್ನು ಕಳುಹಿಸಿ ಮಂಜೂರಾತಿಗೆ ಕ್ರಮ ವಹಿಸಲಾಗಿದೆ. ಎರಡು ಅರ್ಜಿಗಳು ಮಂಜೂರಾತಿ ಹಂತದಲ್ಲಿವೆ.

    ೬ ಜನರಿಗೆ ನಗರಸಭೆಯ ಜಿ+೨ ಮನೆಗಳು ಮಂಜೂರಾತಿ ಹಂತದಲ್ಲಿವೆ. ಜಿಲ್ಲೆಯಲ್ಲಿ ಈಗಾಗಲೇ ೨೮ ಲಿಂಗತ್ವ ಅಲ್ಪಸಂಖ್ಯಾತರು ಟಿ.ಜಿ. ಕಾರ್ಡ್ ಹೊಂದಿದ್ದಾರೆ. ೨೪ ಜನ ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಜಿಲ್ಲೆಯಲ್ಲಿನ ೭ ಆಸಿಡ್ ದಾಳಿ ಪ್ರಕರಣಗಳಲ್ಲಿ ನಾಲ್ವರು ಪಲಾನುಭವಿಗಳಿಗೆ ನಿಗಮದ ಗೆಳತಿ ಯೋಜನೆಯಡಿ ತಲಾ ೫ ಲಕ್ಷ ರೂ. ಸಾಲ ಮತ್ತು ಸಹಾಯಧನ ಮಂಜೂರಾಗಿದೆ. ಮೂವರಿಗೆ ದಾಖಲಾತಿಗಳು ಲಭ್ಯವಿಲ್ಲದ ಕಾರಣ ಮಂಜೂರಾಗಿಲ್ಲ ಎಂದರು.

    ಉದ್ಯೋಗಿನಿ ಯೋಜನೆಯಡಿ ಶಾಸಕರ ಆಯ್ಕೆ ಸಮಿತಿಯ ಭೌತಿಕ ಗುರಿ ೧೮. ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿ ಭೌತಿಕ ಗುರಿ ೯. ಗುರಿಯನುಸಾರ ಆಯ್ಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಬ್ಯಾಂಕುಗಳಿಗೆ ಕಳುಹಿಸಿದ್ದು ಒಟ್ಟು ೨೦ ಅರ್ಜಿಗಳಿಗೆ ಇದುವರೆಗೆ ಸಾಲ ಮಂಜೂರಾತಿ ದೊರಕಿದೆ. ಸಹಾಯಧನ ಬಿಡುಗಡೆ ಸಲುವಾಗಿ ೧೭ ಅರ್ಜಿಗಳನ್ನು ನಿಗಮಕ್ಕೆ ಸಲ್ಲಿಸಲಾಗಿದೆ. ಉಳಿದ ೭ ಅರ್ಜಿಗಳಿಗೆ ಸಾಲ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

    ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ, ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್. ಎಲ್ಲಾ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು

    The government has allocated Rs. 32 crore to the Women and Child Development Corporation.

  • ಪ್ರಾಧಿಕಾರದ ಸವಲತ್ತು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ

    ಪ್ರಾಧಿಕಾರದ ಸವಲತ್ತು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ

    ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು.

    ಶಿವಮೊಗ್ಗ ಜಿಲ್ಲೆಯ ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

    ಭದ್ರಾ ಕಾಡಾ ಪ್ರಾಧಿಕಾರದಿಂದ ರೈತರಿಗೆ ಅನೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೆಚ್ಚು ನೀರು ಬಳಕೆಯಿಂದ ಭೂಮಿ ಹದಗೆಡುವ ಸಾಧ್ಯತೆಯಿದ್ದು, ಆದ್ದರಿಂದ ನಿಯಮಿತ ನೀರು ಬಳಸಿಕೊಂಡು ಭೂಮಿ ಫಲವವತ್ತೆ ಕಾಪಾಡಿಕೊಳ್ಳಬೇಕು ಎಂದರು.

    ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಿದ್ದು, ಮುಂದಿನ ದಿನಗಳಲ್ಲಿ ಹೊಸದಾಗಿ ಆಹಾರದ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

    ದೇಶದ ಬೆನ್ನಲುಬಾಗಿರುವ ರೈತರಿಗೆ ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ ಎಂದರು.

    ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ‘ಪಂಚ ನದಿಗಳ ಉಗಮ ಸ್ಥಾನವಾದ ಜಿಲ್ಲೆಗೆ ವಿಶೇಷ ಗೌರವವಿದೆ. ಅಲ್ಲದೇ ಜಿಲ್ಲೆಯಿಂದ ಹರಿಯುವ ನೀರು ಶಿವಮೊಗ್ಗದತ್ತ ಸಾಗಿ ಲಕ್ಷಾಂತರ ಜನರಿಗೆ ಕುಡಿಯಲು ಬಳಕೆ ಆಗುತ್ತಿದೆ’ ಎಂದರು.

    ಗ್ಯಾರಂಟಿ ಯೋಜನೆ ಹಾಗೂ ಸಮರ್ಪಕ ನೀರು ಬಳಸುವ ಸಂಬಂಧ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು. ಶಿವಮೊಗ್ಗದಲ್ಲೂ ಈ ರೀತಿಯ ಕಾರ್ಯ ಚಟುವಟಿಕೆಗಳನ್ನು ಕೈಗೊಂಡರೆ ಉಪಯೋಗಿಯಾಗಲಿದೆ. ಜನರಿಂದ ತೆರಿಗೆ ಪಡೆದು ಜನರಿಗಾಗಿ ವ್ಯಯಿಸುವ ಕೆಲಸವನ್ನು ಗ್ಯಾರಂಟಿ ಯೋಜನೆ ಮೂಲಕ ಸರ್ಕಾರ ಮಾಡುತ್ತಿದೆ ಎಂದರು.

    ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆ ಜಿಲ್ಲೆಯಲ್ಲಿ ಅನುಷ್ಠಾನಗೊಂಡು ಶೇ 98.5 ರಷ್ಟು ಪ್ರಗತಿ ಸಾಧಿಸಿದೆ. ಉದ್ಯೋಗ ಮೇಳ ನಡೆಸಿ ಶೇ 90ರಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದೆ ಎಂದು ಮಾಹಿತಿ ನೀಡಿದರು.

    ಸಭೆಯಲ್ಲಿ ಭದ್ರಾ ಕಾಡಾ ಪ್ರಾಧಿಕಾರದ ಆಡಳಿತಾಧಿಕಾರಿ ಆರ್.ಸತೀಶ, ಭೂ ಅಭಿವೃದ್ದಿ ಬ್ಯಾಂಕ್ ಅಧಿಕಾರಿ ತಾಂತ್ರಿಕ್, ಪ್ರಭಾರ ಕೃಷಿ ಅಧಿಕಾರಿ ಕೆ.ಪ್ರಶಾಂತ್, ಭೂ ಅಭಿವೃದ್ದಿ ಅಧಿಕಾರಿ ನಾಗೇಶ್ ಡೊಂಗ್ರೆ, ಚಿಕ್ಕಮಗಳೂರು-ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

    The responsibility of bringing the benefits of the authority to the homes of the members lies with them.

  • ಅ.19 ರಿಂದ 23 ರವರೆಗೆ ದೇವೀರಮ್ಮ ದೀಪೋತ್ಸವ

    ಅ.19 ರಿಂದ 23 ರವರೆಗೆ ದೇವೀರಮ್ಮ ದೀಪೋತ್ಸವ

    ಚಿಕ್ಕಮಗಳೂರು: ತಾಲ್ಲೂಕು ಮಲ್ಲೇನಹಳ್ಳಿ ಬಿಂಡಿಗ ಆದಿಶಕ್ತ್ಯಾತ್ಮಕ ಶ್ರೀ ದೇವೀರಮ್ಮನವರ ದೀಪೋತ್ಸವ ಅ.೧೯ ರಿಂದ ೨೩ ರವರೆಗೆ ನಡೆಯಲಿದ್ದು, ಬೆಟ್ಟ ಹತ್ತಲು ರಾತ್ರಿ ಹೊರತುಪಡಿಸಿ ೨ ದಿನ ಅವಕಾಶ ಕಲ್ಪಿಸಲಾಗಿದೆ ಎಂದು ದೇವೀರಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಕುಲಶೇಖರ್ ತಿಳಿಸಿದರು.

    ಅವರು ಇಂದು ದೇವಸ್ಥಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಅ.೧೯ ರಂದು ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಹಾಗೂ ಅ.೨೦ ರಂದು ಬೆಳಗ್ಗೆ ೭ ಗಂಟೆಯಿಂದ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ಗಿರಿಪ್ರದೇಶದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ರಾತ್ರಿ ಬೆಟ್ಟ ಹತ್ತಲು ನಿಷೇಧಿಸಲಾಗಿದೆ ಎಂದರು.

    ಅ.೧೯ ರಂದು ಬೆಳಗ್ಗೆ ೭ ಗಂಟೆಗೆ ಬೆಟ್ಟದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ೯ ರಿಂದ ೫ ಗಂಟೆಯವರೆಗೆ ದೇವೀರಮ್ಮ ದೇವಿಯವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ೨೦ ರಂದು ೩ ಗಂಟೆಯವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿದ್ದು, ಸಂಜೆ ೭ ಗಂಟೆಗೆ ದೀಪೋತ್ಸವ ನಡೆಯಲಿದೆ ಎಂದರು.

    ೨೧ ರಂದು ದೇವೀರಮ್ಮ ದೇವಸ್ಥಾನದಲ್ಲಿ ದೇವಿಯವರಿಗೆ ಉಡುಗೆ ಪೂಜೆ, ಸಂಜೆ ೬.೩೦ ಕ್ಕೆ ಬೆಣ್ಣೆಬಟ್ಟೆ ಸುಡುವುದು ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೨೨ ರಂದು ಮಹಾಗಣಪತಿ ಪೂಜೆ, ಕುಂಕುಮಾರ್ಚನೆ ಇತ್ಯಾದಿ. ೨೩ ರಂದು ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥಪ್ರಸಾದ ವಿನಿಯೋಗ.

    ಶ್ರೀ ಕ್ಷೇತ್ರದಲ್ಲಿ ನಡೆಯುವ ಪ್ರಸಾದ ವಿನಿಯೋಗಕ್ಕೆ ಅಕ್ಕಿ, ಬೇಳೆ, ಎಣ್ಣೆ ಹಾಗೂ ಧನಸಹಾಯ ಮಾಡುವವರು ಕ್ಷೇತ್ರಕ್ಕೆ ತಂದು ಒಪ್ಪಿಸಬಹುದಾಗಿದೆ. ಬೆಟ್ಟದ ಮೇಲೆ ತೆಂಗಿನಕಾಯಿ ಒಡೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

    ದೇವಿಯ ದರ್ಶನವಾದ ಬಳಿಕ ಬೆಟ್ಟದ ಮೇಲೆ ಕುಳಿತುಕೊಳ್ಳದೆ ಕೆಳಗೆ ಇಳಿಯಬೇಕು, ಬೆಟ್ಟದ ಹಾಗೂ ದೇವಸ್ಥಾನದ ಸುತ್ತಮುತ್ತ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆಯಬಾರದು, ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ತರೀಕೆರೆ, ಬೀರೂರು, ಕಡೂರು, ಚಿಕ್ಕಮಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

    ಬೆಟ್ಟದಲ್ಲಿ ಪಟಾಕಿ ಒಡೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಭಕ್ತರು ಸ್ವಚ್ಚತೆ ಕಾಪಾಡುವ ಜೊತೆಗೆ ಪರಿಸರದ ಕಾಳಜಿಯನ್ನು ಹೊಂದಬೇಕು ಎಂದು ಹೇಳಿದರು.

    Deviramma Deepotsava from 19th to 23rd October

  • ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ

    ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ

    ಚಿಕ್ಕಮಗಳೂರು:  ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ. ಆಸಕ್ತಿ ಯುಳ್ಳ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಜೊತೆಗೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಲು ಸದಾಬದ್ಧ ವಾಗಿದ್ದೇವೆ ಎಂದು ಗಾಲ್ಪ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಸಂಜಯ್ ನಾಡಗೌಡ ಹೇಳಿದರು.

    ತಾಲ್ಲೂಕಿನ ಅಲ್ಲಂಪುರ ಸಮೀಪದ ಗಾಲ್ಪ್ ಕ್ಲಬ್‌ನಲ್ಲಿ ರಾಜ್ಯ ಗಾಲ್ಪ್ ಅಸೋಸಿಯೇಷನ್ ಹಾಗೂ ಮೈ ಸೂರು ಸ್ಯಾಂಡಲ್ ಸೋಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ಧ ರಾಜ್ಯಮಟ್ಟದ ಗಾಲ್ಪ್ ಕ್ರೀಡಾ ಸ್ಪರ್ಧೆ ಯ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಸಂಜೆ ಭಾಗವಹಿಸಿ ಅವರು ಮಾತನಾಡಿದರು.

    ಗಾಲ್ಪ್ ಅಂತರಾಷ್ಟ್ರೀಯ ಕ್ರೀಡೆಯಾಗಿದೆ. ಹೀಗಾಗಿ ಸ್ಥಳೀಯವಾಗಿ ಯುವಜನತೆಗೆ ಕ್ರೀಡೆಯ ಪರಿಚ ಯಿಸಲು ಸಲುವಾಗಿ ವರ್ಷಕ್ಕೊಮ್ಮೆ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಿ ಕ್ರೀಡೆಗೆ ಪ್ರೋತ್ಸಾಹಿಸಲಾಗು ತ್ತಿದೆ. ಅಲ್ಲದೇ ಬಡವರ್ಗದ ಕ್ರೀಡಾಸಕ್ತ ಯುವಕರಿಗೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಹಕರಿಸಲಾಗುತ್ತಿದೆ ಎಂದು ತಿಳಿಸಿದರು.

    ಪ್ರಸ್ತುತ ರಾಜ್ಯದಲ್ಲಿ ಸುಮಾರು ೧೬ ಜಿಲ್ಲೆಗಳಲ್ಲಿ ಗಾಲ್ಪ್ ಸಂಸ್ಥೆ ಅಸ್ಥಿತ್ವದಲ್ಲಿದೆ. ಅನೇಕ ಯುವಕರು, ಶಾ ಲಾ ವಿದ್ಯಾರ್ಥಿಗಳಿಗೆ ಗಾಲ್ಪ್ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಲಾಗುತ್ತಿದೆ. ಭಾರತದಲ್ಲಿ ಅತಿಹೆಚ್ಚು ಗಾಲ್ಪ್ ಆಟ ಗಾರರಿದ್ದು ಈ ಕ್ರೀಡಾಪಟುಗಳು ಒಲಂಪಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜಯ ಸಾಧಿಸುವುದೇ ಅಸೋಸಿ ಯೇಷನ್ ಗುರಿಯಾಗಿದೆ ಎಂದರು.

    ಭಾರತದಲ್ಲಿ ಕರ್ನಾಟಕ ಗಾಲ್ಪ್ ಕ್ರೀಡೆಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗಾಲ್ಪ್ ಕ್ರೀಡೆಯಲ್ಲಿ ಕಠಿಣ ಪರಿಶ್ರಮದಿಂದ ತೊಡಗಿಸಿಕೊಳ್ಳುವ ಆಸಕ್ತಿ ಕ್ರೀಡಾಪಟುಗಳಿಗೆ ಸಮಗ್ರ ತರಬೇತಿಗಾಗಿ ಅಸೋಸಿಯೇ ಷನ್ ಕೋಟ್ಯಾಂತರ ಹಣವನ್ನು ಇರಿಸಿದ್ದು ಒಟ್ಟಾರೆ ಗಾಲ್ಪ್ ಕ್ರೀಡೆಯನ್ನು ದೇಶದಲ್ಲಿ ಮುಂಚೂಣಿಗೆ ತರು ವುದೇ ಮೂಲಧ್ಯೇಯ ಎಂದು ತಿಳಿಸಿದರು.

    ಗಾಲ್ಪ್ ಕ್ರೀಡಾ ಸ್ಪರ್ಧೆಯಲ್ಲಿ ಮೂರು ವಿಭಾಗಗಳಾಗಿ ವಿಂಗಡಿಸಿದ್ದು ಓಪನ್ ತಂಡದಲ್ಲಿ ಬೆಂಗಳೂರು ಗ್ಲಾಲ್ಪ್ ಕ್ಲಬ್ ಎ ತಂಡ ಪ್ರಥಮ, ಬಿ ತಂಡ ದ್ವೀತಿಯ. ಗಾಲ್ಪ್ ಹ್ಯಾಂಡಿಕ್ರಾಫ್ಟ್ ತಂಡದಲ್ಲಿ ಎಂಇಜಿ ಆರ್ಮಿ ತಂಡ ಪ್ರಥಮ, ಕೆಜಿಎಫ್ ಜಿಮ್‌ಖಾನಾ ದ್ವೀತಿಯ ಹಾಗೂ ಸಿಂಗಲ್ ಸ್ಪರ್ಧೆಯಲ್ಲಿ ಮೈಸೂರು ಶ್ರೀಧರ್ ಸಿಂಗ್ ಪ್ರಥಮ. ಬೆಂಗಳೂರು ಆಯಾನ್‌ಜಂಗ್ ದ್ವೀತಿಯ ಪಡೆದುಕೊಂಡರು.

    ಗಾಲ್ಪ್ ಕ್ಲಬ್ ಸಂಸ್ಥಾಪಕ ಸುದರ್ಶನ್ ಮಾತನಾಡಿ ಗಾಲ್ಪ್ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡುವ ಸಲುವಾ ಗಿ ವಿಶಾಲವಾದ ಆಟದ ಮೈದಾನವನ್ನು ನಿರ್ಮಿಸಿ, ಸ್ಪರ್ಧಾಳುಗಳಿಗೆ ಪ್ರೋತ್ಸಾಹಿಸುತ್ತಿದೆ. ಇಂದು ರಾಜ್ಯಾದ್ಯ ಂತ ವಿವಿಧ ಜಿಲ್ಲೆಗಳಿಂದ ಕ್ರೀಡಾಸಕ್ತರು ಜಿಲ್ಲೆಗಾಗಮಿಸಿ ಸ್ಫರ್ಧೆಯಲ್ಲಿ ಭಾಗವಹಿಸಿರುವುದು ಅತ್ಯಂತ ಹೆಮ್ಮೆ ಯ ಸಂಗತಿ ಎಂದರು.

    ಈ ಸಂದರ್ಭದಲ್ಲಿ ರಾಜ್ಯ ಗಾಲ್ಪ್ ಅಸೋಸಿಯೇಷನ್ ಕಾರ್ಯದರ್ಶಿ ರಾಮ್‌ನಾಗಪ್ಪ, ಚಿಕ್ಕಮಗಳೂ ರು ಗಾಲ್ಪ್ ಕ್ಲಬ್ ನಾಯಕ ರವಿಶಂಕರ್, ಸ್ಪರ್ಧೆ ಆಯೋಜಕರಾದ ಹೆಚ್.ಡಿ.ವಿನಯ್‌ರಾಜ್, ರವಿಮುತ್ತಪ್ಪ, ಹೇಮಂತ್, ಶಿವಪ್ರಕಾಶ್, ಸಿ.ಜೆ.ಗೌತಮ್, ಹೆಚ್.ಕೆ.ಕೃತಿ, ಸ್ಪರ್ಧಾಳುಗಳು ಮತ್ತಿತರರು ಉಪಸ್ಥಿತರಿದ್ದರು.

    It is a misconception that golf is a rich man’s sport

  • ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು

    ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು

    ಬೆಂಗಳೂರು:  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ  ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ.

    ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುತ್ತದೆ. ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು . ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

    BJP members absent from GBA meeting are opponents of Bengaluru’s development

  • ಮಾದಕ ವಸ್ತುಗಳ ಕಡಿವಾಣ ಹಾಕುವಲ್ಲಿ ಪೊಲೀಸರ ಪಾತ್ರ ಪ್ರಮುಖ

    ಮಾದಕ ವಸ್ತುಗಳ ಕಡಿವಾಣ ಹಾಕುವಲ್ಲಿ ಪೊಲೀಸರ ಪಾತ್ರ ಪ್ರಮುಖ

    ಚಿಕ್ಕಮಗಳೂರು: ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳ ಕಡಿವಾಣ ಹಾ ಕುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.

    ನಗರದ ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರ, ಜಿಲ್ಲಾ ಪೊಲೀಸ್ ಇಲಾಖೆ, ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಂಯುಕ್ರಾಶ್ರಯದಲ್ಲಿ ಆಯೋಜಿಸಿದ್ಧ ಪೊಲೀಸ್ ಸಿಬ್ಬಂದಿಗಳಿಗೆ ಮಾದಕ ವಸ್ತು ವಿನ ನಿಯಂತ್ರಣ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾ ತನಾಡಿದರು.

    ಸಮಾಜದಿಂದ ಮಾದಕ ವಸ್ತುಗಳಿಗೆ ಕಡಿವಾಣಕ್ಕೆ ವಿವಿಧ ಸಮಿತಿಗಳನ್ನು ರಚಿಸಿ ಮಾರ್ಗಸೂಚಿ ನೀಡ ಲಾಗುತ್ತಿದೆ. ಈ ನಡುವೆ ದೇಶದ ನಾಗರೀಕರು ಹಾಗೂ ವ್ಯಸನಿಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳು ದುಶ್ಚ ಟಕ್ಕೆ ಒಳಗಾಗಿರುವ ವ್ಯಕ್ತಿಗಳನ್ನು ನಶಮುಕ್ತಗೊಳಿಸಲು ವ್ಯಸನಿಗಳನ್ನು ಚಿಕಿತ್ಸಾ ಕೇಂದ್ರಗಳಲ್ಲಿ ಕಳುಹಿಸುವ ವ್ಯ ವಸ್ಥೆ ಮಾಡಬೇಕು ಎಂದರು.

    ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಪೆಟ್ಟಿಗೆ ಅಂಗಡಿಗಳಲ್ಲಿ ನಶೆ ಪದಾರ್ಥಗಳು ಸಲೀಸಾಗಿ ಲ ಭ್ಯವಾಗುತ್ತಿದೆ. ಈ ಬಗ್ಗೆ ಸರ್ಕಾರ ಹಾಗೂ ಕಾನೂನು ಸೇವೆ ಪ್ರಾಧಿಕಾರ ಎಚ್ಚರಿಕೆ ವಹಿಸುವುದು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡು ಯುವಜನತೆಯಲ್ಲಿ ಅರಿವು ಮೂಡಿಸುತ್ತಿದ್ದು ಎಲ್ಲರೂ ಕೈಜೋಡಿಸಿದಾಗ ಮಾತ್ರ ಶಾಶ್ವತವಾಗಿ ವ್ಯಸನದ ವ್ಯವಸ್ಥೆ ದೂರಗೊಳಿಸಬಹುದು ಎಂದರು.

    ವ್ಯಸನಿಗಳ ನಿಯಂತ್ರಿಸಲು ಅರಿವಿನ ಜೊತೆಗೆ ಜ್ಞಾನದ ಅವಶ್ಯವಿದೆ. ಆ ನಿಟ್ಟಿನಲ್ಲಿ ಬ್ರಹ್ಮಕುಮಾರೀಸ್ ಸಂ ಸ್ಥೆ ಸಕ್ರಿಯವಾಗಿ ತೊಡಗಿಸಿಕೊಂಡು ವ್ಯಸನಿಗಳನ್ನು ನಾಡಿನ ಸತ್ರ್ಪಜೆಗಳಾಗಿಸಲು ಮುಂದಾಗಿರುವುದು ಹೆಮ್ಮೆ ಯ ಸಂಗತಿ. ಜೊತೆಗೆ ಪೊಲೀಸ್ ಇಲಾಖೆ ನಿತ್ಯವು ಈ ರೀತಿಯ ಪ್ರಕರಣಗಳು ದಾಖಲಾಗುತ್ತಿದ್ದು, ವ್ಯಸನಿ ಗಳ ಮನಪರಿವರ್ತಿಸಲು ಪ್ರೇರೇಪಿಸಬೇಕು ಎಂದು ಸಲಹೆ ಮಾಡಿದರು.

    ಉಪ ಪೊಲೀಸ್ ಅಧೀಕ್ಷಕ ತಿಪ್ಪೇಸ್ವಾಮಿ ಮಾತನಾಡಿ ಮಾದಕ ವಸ್ತುಗಳ ಶಾರೀರಿಕ ಹಾಗೂ ದೈಹಿಕ ವಾಗಿ ಆರೋಗ್ಯ ಹದೆಗೆಡಿಸುತ್ತದೆ. ಇದರಿಂದ ದೇಶದಲ್ಲಿ ಪ್ರತಿದಿನ ಸುಮಾರು ೧೦ ಮಂದಿ ವ್ಯಸನದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ ೨೦೧೮-೧೯ನೇ ಸಾಲಿನಲ್ಲಿ ಲಕ್ಷಾಂತರ ಯುವಸಮೂಹ ದುಶ್ಚಟಕ್ಕೆ ಬಲಿಯಾಗಿ ಜೀವ ಕಳೆದುಕೊಳ್ಳುತ್ತಿದ್ದು ಪೊಲೀಸ್ ಸೇರಿದಂತೆ ನಾಗರೀಕರು ಒಟ್ಟಾಗಿ ಈ ವಿರುದ್ಧ ಕಾರ್ಯಪ್ರವೃತ್ತರಾಗ ಬೇಕು ಎಂದರು.

    ರಾಜ್ಯಮಟ್ಟದ ಸಮನ್ವಯ ಸಂಸ್ಥೆ ಕೋಆಡಿನೇಟರ್ ಶೈಲಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿ ಯುವಜನ ತೆಯನ್ನು ನಶಮುಕ್ತಗೊಳಿಸಲು ಕೇಂದ್ರ ಸರ್ಕಾರ ನಶಮುಕ್ತ ಭಾರತ ಅಭಿಯಾನ ಜಾರಿಗೊಳಿಸಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಈ ಅಭಿಯಾನವು ನಡೆಯುತ್ತಿದ್ದು ಎಸ್ಪಿ ಸೇರಿದಂತೆ ಹಾಗೂ ಸ್ವಯಂ ಸೇವಕರು ಈ ಅಭಿಯಾನದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ ಎಂದರು.

    ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರದ ಯೋಜನಾ ನಿರ್ದೇಶಕ ಡಾ|| ಅನೀತ್ ಕುಮಾರ್ ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳಿಂದ ಬಳಲುತ್ತಿರುವ ಯುವಸಮೂಹವನ್ನು ಹತೋಟಿಗೆ ತರಲು ಎಲ್ಲರೂ ಮುಂದಾದರೆ ಮಾತ್ರ ಸ್ವಾಸ್ಥ್ಯ ಸಮಾಜಕ್ಕೆ ನಾಂದಿಯಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ರಾಜ್ಯಮಟ್ಟದ ಸಮನ್ವಯ ಸಂಸ್ಥೆ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಕೃಷ್ಣರಾಜು, ರೋಟರಿ ಅಧ್ಯಕ್ಷ ಎನ್.ಪಿ.ಲಿಖಿತ್, ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ನೇತ್ರ ವೆಂಕಟೇಶ್, ಪ್ರಜಾಪಿತ ಬ್ರಹ್ಮಕುಮಾರಿಸ್ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ, ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರ ವ್ಯವಸ್ಥಾಪಕ ಮಂಜುನಾಥ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

    The police have a key role in curbing drug abuse.

  • ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ

    ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ

    ಚಿಕ್ಕಮಗಳೂರು: ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

    ಅವರು ಇಂದು ನಗರದ ಬಸವೇಶ್ವರ ರಸ್ತೆ ಬಸವತತ್ವ ಪೀಠದ ಮುಂಭಾಗದಲ್ಲಿ ಹಾಗೂ ಕಣಿವೆ ರುದ್ರೇಶ್ವರ ದೇವಸ್ಥಾನದ ಸಮೀಪ ತಲಾ ೧೨ ಲಕ್ಷ ರೂ ವೆಚ್ಚದಲ್ಲಿ ಶಾಸಕರ ನಿಧಿಯಿಂದ ನಿರ್ಮಿಸಲಾಗಿರುವ ಸುಸಜ್ಜಿತ ಅತ್ಯಾಧುನಿಕ ಬಸ್ ತಂಗುದಾಣಗಳನ್ನು ಸಾರ್ವಜನಿಕ ಸಮರ್ಪಣೆಗೊಳಿಸಿ ಮಾತನಾಡಿದರು.

    ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೨೦.೫೦ ಕೋಟಿ ರೂ ವೆಚ್ಚದಲ್ಲಿ ಡಿಸೆಂಬರ್‌ನಿಂದ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.

    ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನವೀನವಾದ ಅತ್ಯಾಧುನಿಕ ಮಾದರಿಯಲ್ಲಿ ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಬೇಕೆಂಬ ಕನಸು ಕಂಡಿದ್ದು, ಅದರಂತೆ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮದಲ್ಲಿ ಲೈಫ್‌ಲೈನ್ ಫಿಡ್ಸ್ ಮಾದರಿಯಾಗಿದೆ ಎಂದರು.

    ಜನರ ಬೇಡಿಕೆಗನುಗುಣವಾಗಿ ಹತ್ತರಲ್ಲಿ ಮೂರನ್ನಾದರೂ ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವಂತೆ ಕಾಮಗಾರಿಗಳನ್ನು ಕೈಗೊಂಡು ಅಭಿಲಾಷೆ ಮತ್ತು ಸದುದ್ದೇಶ ಹೊಂದಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ಕಣಿವೆ ರುದ್ರೇಶ್ವರ ದೇವಸ್ಥಾನದ ಸಮೀಪ, ಕಲ್ಯಾಣ ನಗರದಲ್ಲಿ, ಹೌಸಿಂಗ್ ಬೋರ್ಡ್‌ನಲ್ಲಿ ಮತ್ತು ದೊಡ್ಡ ಕುರುಬರಹಳ್ಳಿಯಲ್ಲಿ ಈಗಾಗಲೇ ಈ ನಾಲ್ಕು ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದ ಅವರು, ನೂತನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಂಟರಮಕ್ಕಿ ಬಡಾವಣೆಯಲ್ಲಿ ಮತ್ತು ಪಾಲಿಟೆಕ್ನಿಕ್ ಬಳಿ ನೂತನ ಅತ್ಯಾಧುನಿಕ ಬಸ್ ತಂಗುದಾಣ ನಿರ್ಮಾಣ ಮಾಡಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.

    ವಿದೇಶ ಪ್ರವಾಸ ಸಂದರ್ಭದಲ್ಲಿ ಜರ್ಮನಿಯಲ್ಲಿ ಈ ರೀತಿಯ ಅತ್ಯಾಧುನಿಕ ಬಸ್ ತಂಗುದಾಣಗಳನ್ನು ನಿರ್ಮಿಸಿರುವುದನ್ನು ಗಮನಿಸಿ ಇದೇ ಮಾದರಿಯಲ್ಲಿ ಕ್ಷೇತ್ರದಲ್ಲಿಯೂ ಅಳವಡಿಸಿಕೊಳ್ಳಬೇಕೆಂದು ನಿರ್ಧರಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಬಸ್ ತಂಗುದಾಣ ನಿರ್ಮಿಸಲಾಗಿದೆ ಎಂದು ಹೇಳಿದರು.

    ಕ್ಷೇತ್ರದಲ್ಲಿ ಮುಂದೆಯೂ ಪಕ್ಷಾತೀತವಾಗಿ ಜಾತ್ಯಾತೀತವಾಗಿ ನಡೆದುಕೊಳ್ಳಬೇಕೆಂದು ತೀರ್ಮಾನಿಸಿದ್ದು, ಜನರ ಅವಶ್ಯಕತೆಗೆ ತಕ್ಕಂತೆ ಸೌಲಭ್ಯ ಕಲ್ಪಿಸಲು ಮುಂದಾಗಿರುವುದಾಗಿ ಭರವಸೆ ನೀಡಿದರು.

    ಸುಮಾರು ೨೦ ಕೋಟಿ ರೂ ವೆಚ್ಚದಲ್ಲಿ ಮುಂದಿನ ತಿಂಗಳು ಕೆಎಸ್‌ಆರ್‌ಟಿಸಿ ಸುಸಜ್ಜಿತ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಗರದಲ್ಲಿ ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇವರುಗಳನ್ನು ಆಹ್ವಾನಿಸಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಹೇಳಿದರು.

    ಈ ಬಾರಿ ಅತೀ ಹೆಚ್ಚು ಮಳೆ ಬಿದ್ದ ಪರಿಣಾಮ ನಗರದಲ್ಲಿ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಯುಜಿಡಿ ಮತ್ತು ಅಮೃತ್ ಯೋಜನೆಯಿಂದ ಹಾನಿಯಾಗಿರುವ ರಸ್ತೆಗಳನ್ನು ಡಿಸೆಂಬರ್‌ನಿಂದ ಡಾಂಬರೀಕರಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

    ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ಪ್ರಯಾಣಿಕರ ಅವಶ್ಯಕತೆಗೆ ತಕ್ಕಂತೆ ಬಸ್ ತಂಗುದಾಣ ನಿರ್ಮಾಣ ಮಾಡಿ ಇಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡುತ್ತಿರುವ ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ಅಭಿನಂದಿಸುವುದಾಗಿ ಹೇಳಿದರು.

    ನಗರಸಭೆ ಸದಸ್ಯ ಅರುಣ್ ಕುಮಾರ್‌ಮಾತನಾಡಿ, ಕಲ್ಯಾಣ ನಗರದ ಟ್ರಸ್ಟ್ ಜೊತೆ ಸೇರಿ ವಾರ್ಡ್‌ನ್ನು ಸ್ವಚ್ಚತೆಗೊಳಿಸುತ್ತಿದ್ದೇವೆ ಜೊತೆಗೆ ಇದನ್ನು ಮಾದರಿ ವಾರ್ಡ್ ಆಗಿಸಲು ಗುರಿ ಹೊಂದಲಾಗಿದ್ದು, ಶಾಸಕರು ನಗರಸಭೆಯೊಂದಿಗೆ ಕೈಜೋಡಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

    ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ರಸ್ತೆಗಳ ಡಾಂಬರೀಕರಣ, ಬೀದಿನಾಯಿಗಳ ಉಪಟಳ ಸಮಸ್ಯೆ ಇದ್ದು, ಇದಕ್ಕೆ ಅಗತ್ಯ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ನಗರಸಭೆ ಉಪಾಧ್ಯಕ್ಷೆ ಲಲಿತಾನಾಯ್ಕ, ಲೈಫ್‌ಲೈನ್ ಫೀಡ್ಸ್ ಮಾಲೀಕರಾದ ಕಿಶೋರ್‌ಕುಮಾರ್ ಹೆಗ್ಡೆ, ಸದಸ್ಯರಾದ ಗುರುಮಲ್ಲಪ್ಪ, ಎ.ಸಿ. ಕುಮಾರ್, ನಾಮಿನಿ ಸದಸ್ಯ ಕೀರ್ತಿಶೇಠ್, ಆಯುಕ್ತರಾದ ಬಸವರಾಜ್ ಸಿಡಿಎ ಆಯುಕ್ತರಾದ ನಾಗರತ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ಪ್ರವೀಣ್, ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

    Priority given to all-round development of the city

  • ಮಲ್ಲೇನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ದಿಲೀಪ್‌ಕುಮಾರ್ ಅವಿರೋಧ ಆಯ್ಕೆ

    ಮಲ್ಲೇನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ದಿಲೀಪ್‌ಕುಮಾರ್ ಅವಿರೋಧ ಆಯ್ಕೆ

    ಚಿಕ್ಕಮಗಳೂರು:  ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದಿಲೀಪ್‌ಕುಮಾರ್ ಅವಿರೋಧ ಆಯ್ಕೆಯಾದರು.

    ಇಂದು ನಡೆದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ದಿಲೀಪ್‌ಕುಮಾರ್‌ರವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರುದ್ರಪ್ಪ ಘೋಷಿಸಿದರು.

    ನೂತನ ಅಧ್ಯಕ್ಷ ದಿಲೀಪ್‌ಕುಮಾರ್ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್‌ರವರು ನೀಡಿದ ಸಂವಿಧಾನದ ಆಶಯದಂತೆ ಇಂದು ಸರ್ವಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು, ಸಿಕ್ಕಿರುವ ಅಲ್ಪಾವಧಿಯಲ್ಲಿ ಕುಡಿಯುವ ನೀರು, ಸ್ವಚ್ಚತೆ, ನಿವೇಶನ, ಮನೆ ರಹಿತ ಬಡವರ ಪರವಾಗಿ ಆದ್ಯತೆ ಮೇಲೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

    ಈ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳ ಜನರ ಸೇವೆಗೆ ಸದಾ ಸಿದ್ದವಿದ್ದು, ಅವರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಾಯಿ ದೇವಿರಮ್ಮನ ಮೇಲೆ ಪ್ರಮಾಣ ಮಾಡಿದರು. ಮಾಜಿ ಅಧ್ಯಕ್ಷ ಸತೀಶ್ ಮತನಾಡಿ, ಸಿಕ್ಕಿರುವ ಕಡಿಮೆ ಅವಧಿಯಲ್ಲಿ ನೂತನ ಅಧ್ಯಕ್ಷರು ಉತ್ತಮ ಕೆಲಸ ಮಾಡಲಿ ಎಂದು ಆಶಿಸುತ್ತ ಶುಭ ಹಾರೈಸುತ್ತೇನೆ ಎಂದರು.

    ಗ್ರಾಮ ಪಂಚಾಯಿತಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿ ಜನಪರ ಆಡಳಿತ ನೀಡಲು ಸಲಹೆ ನೀಡಿದ ಅವರು, ಕುಡಿಯುವ ನೀರು, ಸ್ವಚ್ಚತೆ ಹಾಗೂ ಸರ್ಕಾರದ ಮೇಲೆ ಒತ್ತಡವನ್ನು ನಿವೇಶನ ಮತ್ತು ಮನೆ ರಹಿತರಿಗೆ ಸ್ಪಂದಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ಮಾಜಿ ಉಪಾಧ್ಯಕ್ಷೆ ಪಲ್ಲವಿ ನಿವೇಶ್‌ಗೌಡ ಮಾತನಾಡಿ, ತಾವು ಅಧಿಕಾರದ ಅವಧಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ನೂತನ ಅಧ್ಯಕ್ಷರು ಪೂರ್ಣಗೊಳಿಸುತ್ತಾರೆಂಬ ವಿಶ್ವಾಸವಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಪಂಚಾಯಿತಿಯಲ್ಲಿ ೨೦೦ ಮನೆ ಮಂಜೂರಾಗಿದ್ದು, ಹಾಲಿ ರಾಜ್ಯಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ ಎಂದು ಹೇಳಿದರು. ಬೀದಿದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪಂಚಾಯಿತಿ ಅಧ್ಯಕ್ಷರು ಶ್ರಮಿಸಲಿ ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕಾವ್ಯ ಮೋಹನ್‌ಕುಮಾರ್, ಸದಸ್ಯರುಗಳಾದ ಲಲಿತಾ, ಪುಟ್ಟಮ್ಮ, ತಮ್ಮೇಗೌಡ, ದಿನೇಶ್ ಎಂ.ಕೆ, ಯತೀಶ್, ಅನುಷಾ, ಸಂದೀಪ್, ದಿಲೀಪ್‌ಕುಮಾರ್, ಶಶಿಕಲಾ ಪಟ್ಟಸ್ವಾಮಿ, ಪ್ರೇಮ ಶಿವಕುಮಾರ್, ಕೆ.ಆರ್ ರವಿಕುಮಾರ್, ಸುನೀತ ಸ್ವಾಮಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶ್ಮಿತಾಗೌಡ ಉಪಸ್ಥಿತರಿದ್ದರು.

    Dilip Kumar elected unopposed as the new president of Mallenahalli Gram Panchayat

  • ದೈಹಿಕ-ಮಾನಸಿಕ ಸದೃಢವಾಗಿದ್ದಾಗ ಪರಿಪೂರ್ಣ ಆರೋಗ್ಯ

    ದೈಹಿಕ-ಮಾನಸಿಕ ಸದೃಢವಾಗಿದ್ದಾಗ ಪರಿಪೂರ್ಣ ಆರೋಗ್ಯ

    ಚಿಕ್ಕಮಗಳೂರು:  ಸಮಾಜದಲ್ಲಿ ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢ ಆರೋಗ್ಯವಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆನೀಡಿದರು.

    ಅವರು ಇಂದು ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ, ಯುವ ರೆಡ್‌ಕ್ರಾಸ್ ಘಟಕ, ಐಡಿಎಸ್‌ಜಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ದೇಹಕ್ಕೆ ಕಾಯಿಲೆ ಅಥವಾ ತೊಂದರೆಯಾದಾಗ ಚಿಕಿತ್ಸೆಗೆ ಮುಂದಾಗುತ್ತೇವೆ, ಬಿಪಿ, ಶುಗರ್, ಥೈರಾಯ್ಡ್ ಮುಂತಾದ ಕಾಯಿಲೆಗಳ ಬಗ್ಗೆ ಬೇರೆಯವರೊಂದಿಗೆ ಹಂಚಿಕೊಳ್ಳುತ್ತೇವೆ, ಈ ನಿಟ್ಟಿನಲ್ಲಿ ಸಮುದಾಯದ ಆರೋಗ್ಯ ಸಹ ಅವಶ್ಯಕವಾಗಿದೆ ಎಂದರು.

    ತುರ್ತುಪರಿಸ್ಥಿತಿ, ಯುದ್ಧಗಳಲ್ಲಿ ಭಾಗವಹಿಸುವ ವ್ಯಕ್ತಿಗಳಿಗೆ ಬರುವ ನೋವು, ಮಾನಸಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಲು ಘೋಷವಾಕ್ಯವನ್ನು ನೀಡಲಾಗಿದ್ದು, ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಆರೋಗ್ಯವಂತರಾಗಿದ್ದಾರೆಂಬುದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಉದ್ದೇಶ ಎಂದು ಹೇಳಿದರು.

    ಶೇ.೮ ಕ್ಕಿಂತ ಹೆಚ್ಚು ಪ್ರಪಂಚದಲ್ಲಿ ವಿವಿಧ ರೀತಿಯ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ, ಮೊಬೈಲ್ ಗೀಳು ಹೆಚ್ಚಿಸಿಕೊಂಡವರು ಕೂಡ ಮಾನಸಿಕ ಕಾಯಿಲೆಗೆ ಒಳಗಾಗಿದ್ದಾರೆ ಎಂದು ಅರ್ಥೈಸಲಾಗುತ್ತಿದೆ ಎಂದು ತಿಳಿಸಿದರು.

    ಕಾನೂನಿನಲ್ಲಿ ಕರುಣೆ ಇಲ್ಲ, ಸರ್ಕಾರ ನಿಗದಿಪಡಿಸಿರುವ ಅವದಿಗಿಂತ ಮೊದಲು ಮದುವೆಯಾಗಿದ್ದರೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗುತ್ತದೆ. ಎಫ್‌ಎಸ್‌ಎಲ್ ವರದಿಯಲ್ಲಿ ಗರ್ಭಿಣಿಯಾಗಿರುವುದು ದೃಢಪಟ್ಟರೆ ಕನಿಷ್ಟ ೨೦ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲರಾದ ತಸ್ನಿಮ್ ಕೌಸರ್ ಮನಿಯಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ, ಮಾನಸಿಕ ತಜ್ಞ ಡಾ. ವಿನಯ್ ಕುಮಾರ್, ಆರ್.ಸಿ.ಹೆಚ್ ಅಧಿಕಾರಿ ಡಾ. ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಅನಿಕೇತ್, ಹರ್ಷ, ವೈ.ಎಂ ಲಲಿತ, ಗಣೇಶ್, ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಆರೋಗ್ಯ ಇಲಾಖೆಯ ಬೇಬಿ ಸ್ವಾಗತಿಸಿದರು.

    Perfect health is when you are physically and mentally fit.