Category: ಜಿಲ್ಲಾ ಸುದ್ದಿ

  • ವಿಜ್ಞಾನಿಗಳಿಗೆ ಸಮಾಜದಲ್ಲಿ ಬಹಳಷ್ಟು ಗೌರವ

    ವಿಜ್ಞಾನಿಗಳಿಗೆ ಸಮಾಜದಲ್ಲಿ ಬಹಳಷ್ಟು ಗೌರವ

    ಚಿಕ್ಕಮಗಳೂರು: – ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳಿಗೆ ಸಮಾ ಜದಲ್ಲಿ ಬಹಳಷ್ಟು ಗೌರವವಿದೆ. ಕೆಲವರು ಸಂಪೂರ್ಣ ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿ ಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇ ಶ್ ಹೇಳಿದರು.

    ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ ಭಾರತೀಯ ಬಾಹ್ಯಕಾಶ ಕೇಂದ್ರ, ಟೌನ್ ಮಹಿಳಾ ಸಮಾಜ ಸಮೂಹ ಶಿಕ್ಷಣ ಸಂಸ್ಥೆ, ತಕ್ಷ್ ಅಕಾಡೆಮಿ, ರೋಟರಿ ಸಂಸ್ಥೆ ಮತ್ತು ವ್ಹಿಲ್ ಸಂಸ್ಥೆ ಸಹಯೋಗದ ಲ್ಲಿ ಆಯೋಜಿಸಿದ್ಧ ವಿಶ್ವ ಬಾಹ್ಯಕಾಶ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಇತ್ತೀಚಿನ ದಿನಗಳಲ್ಲಿ ಯುವಜನತೆ ವಿಜ್ಞಾನ ಕ್ಷೇತ್ರಕ್ಕೆ ಒತ್ತು ನೀಡುತ್ತಿಲ್ಲ. ವೈಯಕ್ತಿಕ ಕುಟುಂಬದ ಆಲೋ ಚನೆಯಲ್ಲಿ ವೇತನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಇಸ್ರೋ ಸಂಸ್ಥೆ ವಿಜ್ಞಾನದ ಸಮಗ್ರ ಮಾಹಿತಿಗಳನ್ನು ಪರಿಚಯಿಸಲು ಸಪ್ತಾಹ ಆಚರಿಸಿ ಬಾಹ್ಯಕಾಶದ ಹಿನ್ನೆಲೆ ತಿಳಿಯಪಡಿಸುತ್ತಿರುವುದು ಹೆಮ್ಮೆ ಯ ಸಂಗತಿ ಎಂದರು.

    ೧೯೬೨ರಲ್ಲಿ ಮಾಜಿ ಪ್ರಧಾನಿ ನೆಹರು ಅವರು ಸಂಶೋಧಕರೊಂದಿಗೆ ಚರ್ಚಿಸಿ ಇಸ್ರೋ ಸಂಸ್ಥೆ ಪ್ರಾರ ಂಭಿಸಿದರು. ಇಂದಿಗೂ ಮಾನವ ಚಂದ್ರಯಾನ, ಮಂಗಳಯಾನ ಹಾಗೂ ರಾಕೇಟ್ ಉಡಾವಣೆಗಳಂಥ ಭೂಮಿಯಿಂದ ಹೊರಪ್ರಪಂಚಕ್ಕೆ ತೆರಳಲು ವಿಜ್ಞಾನಿಗಳ ಕಠಿಣ ಪರಿಶ್ರಮ ಹಾಗೂ ತಂತ್ರಜ್ಞಾನವೇ ಕಾರಣ ವಾಗಿದೆ ಎಂದು ತಿಳಿಸಿದರು.

    ಇಂದಿಗೂ ರಾಷ್ಟ್ರದ ಪ್ರಜೆಗಳಾದ ಸುಭಾಶ್ ಶುಕ್ಲ, ಸುನೀತಾ ವಿಲಿಯಂ ಸೇರಿದಂತೆ ಅನೇಕರು ಭೂಮಿ ಯ ಗುರುತ್ವಾಕರ್ಷಣೆ ಇಲ್ಲದಿರುವ ಪ್ರದೇಶಕ್ಕೆ ತೆರಳಿ ತಿಂಗಳುಗಟ್ಟಲೇ ಅಧ್ಯಯನ ನಡೆಸಿ ಮರಳಿ ಭೂಮಿ ಯತ್ತ ಬಂದು ಸಾಧನೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಯುವವಿಜ್ಞಾನಿಗಳು ಸಾಧಕರ ಬದುಕನ್ನು ಆದರ್ಶವಾಗಿ ಟ್ಟುಕೊಂಡು ವಿಜ್ಞಾನ ಜಗತ್ತಿಗೆ ಹೆಜ್ಜೆ ಹಾಕಬೇಕು ಎಂದರು.

    ಮಕ್ಕಳಿಗೆ ಪಠ್ಯದ ಚಟುವಟಿಕೆ ಜೊತೆಗೆ ಬಾಹ್ಯಕಾಶದ ಚಟುವಟಿಕೆಗಳನ್ನು ಪರಿಚಯಿಸಲು ಇಸ್ರೋ ಸಂ ಸ್ಥೆ ಮುಂದಾಗಿದ್ದು ಇವುಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ರಸಪ್ರಶ್ನೆ ಸ್ಪರ್ಧೆ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿಜೇತರಾಗಿ ಹೊರಹೊಮ್ಮಬೇಕು. ಈ ಸಾಧನೆಗೆ ಗುರುಗಳು, ಪಾಲಕರು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್.ರುದ್ರಪ್ಪ ಮಾತನಾಡಿ ಸಮಾಜದಲ್ಲಿ ವಿಜ್ಞಾನಿಗಳ ಸಂಖ್ಯೆ ಇಳಿಕೆಗೊಂಡು ವೈದ್ಯ ಹಾಗೂ ಇಂಜಿನಿಯರ್ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮಕ್ಕಳಲ್ಲಿ ಇಸ್ರೋ ಬಾಹ್ಯಕಾಶದ ಕುತೂ ಹಲವನ್ನು ಮೂಡಿಸಿ ಪ್ರೇರೇಪಿಸಬೇಕು. ಮೊಬೈಲ್ ರೀಲ್ಸ್‌ಗಳ ವ್ಯಕ್ತಿಗಳನ್ನು ಅನುಸರಿಸದೇ, ವಿಜ್ಞಾನ ಕ್ಷೇತ್ರ ದ ಸಾಧಕರನ್ನು ನಾಯಕರೆಂದು ಭಾವಿಸಬೇಕು ಎಂದರು.

    ಪ್ರಸ್ತುತ ದಿನದಲ್ಲಿ ಗೂಗಪ್‌ಪ್ಯಾಪ್ ತಂತ್ರಜ್ಞಾನವು ಕ್ಷಣಾರ್ಧದಲ್ಲಿ ದಾರಿ ತೋರಿಸುತ್ತದೆ. ವಿಶ್ವವಿಖ್ಯಾತ ವಿಶ್ವೇಶ್ವರಯ್ಯ ಅವರ ಮೆದುಳು ಸಹ ಶೇ.೨೨ ರಷ್ಟು ಬಳಕೆಯಲ್ಲಿದೆ ಎಂದು ಅಧ್ಯಯನಗಳು ತಿಳಿಸುತ್ತೇವೆ. ಆದರೆ ಇಂದಿನ ದಿನದಲ್ಲಿ ಯುವಸಮೂಹ ಕೇವಲ ಶೇ.೨ರಷ್ಟು ಮಾತ್ರ ಮೆದುಳು ಕೆಲಸ ಮಾಡುತ್ತಿದ್ದು ಈ ಬಗ್ಗೆ ಅವಲೋಕಿಸಬೇಕು ಎಂದು ಹೇಳಿದರು.

    ಭಾರತೀಯ ಬಾಹ್ಯಕಾಶ ಸಂಸ್ಥೆ ವಿಜ್ಞಾನಿ ಸೌಭಾಗ್ಯ ಮಾತನಾಡಿ ಮಾನವ ಸ್ಥಿತಿಯ ಸುಧಾರಣೆಗೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಳನ್ನು ಆಚರಿಸಲು ೧೯೯೯ರಲ್ಲಿ ವಿಶ್ವ ಬಾಹ್ಯಾಕಾಶ ದಿನ ಸ್ಥಾಪಿಸಿ, ವಿಶ್ವದ ಅತಿದೊಡ್ಡ ಬಾಹ್ಯಾಕಾಶ ಕಾರ್ಯಕ್ರಮ ರೂಪುಗೊಂಡಿತು ಎಂದು ಹೇಳಿದರು.

    ಬಾಹ್ಯಕಾಶ ಸಂಶೋಧನೆಯು ನಮ್ಮ ಜೀವನವನ್ನು ಸುಧಾರಿಸಲು ಹಾಗೂ ಅವಕಾಶಗಳನ್ನು ಸೃಷ್ಟಿಸ ಲು ಸಹಾಯಕ. ಬಾಹ್ಯಕಾಶ ವಿಜ್ಞಾನದಲ್ಲಿ ಯುವಕರ ಆಸಕ್ತಿಯನ್ನು ಉತ್ತೇಜಿಸಲು ವಿಶ್ವ ಬಾಹ್ಯಕಾಶ ಸಪ್ತಾ ಹ ಒಂದು ವೇದಿಕೆಯಾಗಿ ಯುವಪ್ರತಿಭೆಗಳನ್ನು ಬಾಹ್ಯಕಾಶ ಕ್ಷೇತ್ರಕ್ಕೆ ಆಕರ್ಷಿಸುವ ಒಂದು ಆಚರಣೆಯಾ ಗಿದೆ ಎಂದರು.

    ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು ಮಾತನಾಡಿ ವಿದ್ಯಾರ್ಥಿಗಳು ವಿಜ್ಞಾನದ ಜೊತೆಗೆ ಪರಿಸರ ಪ್ರಜ್ಞೆ ಮೂಡಿಸಿಕೊಳ್ಳಬೇಕು. ಪ್ರಸ್ತುತ ಮಾನವ ಆಹಾರ ಪದಾರ್ಥ, ಹಾಲು ಸೇರಿದಂತೆ ಎಲ್ಲವು ಕಲುಷಿತವಾಗುತ್ತಿದೆ. ಅಲ್ಲದೇ ಪ್ಲಾಸ್ಟಿಕ್ ಬಳಕೆ ಹೆಚ್ಚಳಗೊಳ್ಳುತ್ತಿರುವ ಪರಿಣಾಮ ಸ್ವಚ್ಚಂಧ ಪರಿಸರಕ್ಕೆ ಹಾನಿಯಾಗುತ್ತಿದ್ದು ಮುಂದಿನ ಯುವಜನತೆಗೆ ಸರಿಪಡಿಸುವ ಮಾರ್ಗ ತಿಳಿಸಬೇಕು ಎಂದರು.

    ಇದೇ ವೇಳೆ ವಿವಿಧ ಶಾಲೆಗಳಿಂದ ಆಗಮಿಸಿ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಸಪ್ರಶ್ನೆ, ಆಶುಭಾಷಣ, ಚಿತ್ರಕಲೆ ಹಾಗೂ ಜ್ಞಾಪಕಶಕ್ತಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಎನ್.ಪಿ. ಲಿಖಿತ್, ಟಿಎಂಎಸ್ ಕಾರ್ಯದರ್ಶಿ ಟಿ.ಈ.ಶುಭದ, ಪ್ರಾಂಶುಪಾಲ ಇಂದ್ರೇಶ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ|| ಚೇತನ್‌ಕುಮಾರ್, ಮುಖ್ಯೋಪಾಧ್ಯಾಯ ಎಂ.ಎಸ್.ನಟರಾಜ್, ವಿದ್ಯಾರ್ಥಿಗಳು ಉಪ ಸ್ಥಿತರಿದ್ದರು.

    Scientists are highly respected in society.

  • ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರಾಗಲು ಸಲಹೆ

    ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರಾಗಲು ಸಲಹೆ

    ಚಿಕ್ಕಮಗಳೂರು: ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ದತಿ ಅಳವಡಿಸಿಕೊಳ್ಳಬೇಕೆಂದು ಶಾಸಕಿ ನಯನ ಮೋಟಮ್ಮ ಕಿವಿಮಾತು ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

    ಬಾಣಂತಿಯರು ಮತ್ತು ಗರ್ಭಿಣಿಯರಿಗೆ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಸಾಕಷ್ಟು ಅರಿವು ಕಾರ್ಯಕ್ರಮವನ್ನು ಮೂಡಿಸುತ್ತಾ ಬಂದಿದ್ದರೂ ಜನರಲ್ಲಿ ಮಾತ್ರ ಬದಲಾವಣೆಗಳಾಗದಿರುವುದು ವಿಷಾದನೀಯ. ಇನ್ನೂ ಕೂಡ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಕಾಣುತ್ತಿದ್ದೇವೆ. ಜನರು ಮೂಢನಂಬಿಕೆಯನ್ನು ತೊಡೆದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ವೈಜ್ಞಾನಿಕ ಪದ್ದತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಅಲ್ಲದೇ ಮಹಿಳೆಯರುಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಮತ್ತು ಮಕ್ಕಳಿಗೆ ಶಿಸ್ತನ್ನು ಮನೆಯಿಂದಲೇ ಕಲುಹಿಸುವಂತೆ ತಿಳಿಸಿದರು.

    ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ ಪ್ರಾಸ್ತಾವಿಕ ಮಾತನಾಡಿ ಪೌಷ್ಟಿಕ ಕರ್ನಾಟಕವನ್ನು ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಪೋಷಣ್ ಅಭಿಯಾನ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ತಲೆತಲಾಂತರದಿಂದ ಭಾರತವನ್ನು ಕಾಡುತ್ತಿದ್ದ ಅಪೌಷ್ಟಿಕತೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಪ್ರಮುಖವಾಗಿ ೫ ಗುರಿಗಳನ್ನು ಹೊಂದಿದ್ದು, ಇದರಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು, ಕಿಶೋರಿಯರು ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವಿಕೆ, ಕುಂಠಿತ ಬೆಳವಣಿಗೆ, ಜನನ ತೂಕ ಕಡಿಮೆಯಾಗುವಿಕೆ ಇವುಗಳನ್ನು ಸುಧಾರಿಸುವ ನಿಟ್ಟಿನಲ್ಲಿ ೨೦೧೮ ಮಾರ್ಚ್ ೮ ರಂದು ಈ ಯೋಜನೆಗೆ ಚಾಲನೆ ನೀಡಲಾಗಿತ್ತು ಎಂದರು.

    ಪ್ರತಿ ವರ್ಷ ಸೆಪ್ಟಂಬರ್ ಮಾಹೆಯಲ್ಲಿ ಪೋಷಣ್ ಮಾಸಾಚರಣೆ ಎನ್ನುವ ಶೀರ್ಷಿಕೆಯಲ್ಲಿ ವಿವಿಧ ಉದ್ದೇಶಗಳೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಿ ಅಪೌಷ್ಟಿಕತೆ ನಿವಾರಣೆ ಹಾಗೂ ಉತ್ತಮ ಪೋಷಕಾಂಶ ಆಹಾರ ಪ್ರಾತ್ಯಕ್ಷಿಕೆಗಳನ್ನು ಜನರಿಗೆ ತೋರಿಸುವ ಮುಖೇನ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದರು.

    ೨೦೨೫ನೇ ಸಾಲಿನಲ್ಲಿ ಹಲವು ನಿಯತಾಂಶಗಳನ್ನು ಗುರಿಯಾಗಿಸಿಕೊಂಡು ಜಿಲ್ಲಾದ್ಯಂತ ಎಲ್ಲ್ಲ ಅಂಗನವಾಡಿ ಕೇಂದ್ರಗಳು, ಶಾಲೆ, ಗ್ರಾಮ ಪಂಚಾಯಿತಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅರಿವು ಕಾರ್ಯಕ್ರಮಗಳು ಹಾಗೂ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕೈಗೊಂಡು ಉತ್ತಮ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶವನ್ನು ಬಿತ್ತರಿಸುತ್ತಿದ್ದು, ಎಲ್ಲರೀ ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಆರೋಗ್ಯವಂತರಾಗಬೇಕು. ಇಲ್ಲಿನ ವಿಚಾರಗಳನ್ನು ತಮ್ಮ ಕುಟುಂಬದವರಿಗೂ ತಿಳಿಸಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿದ್ಯಾಸಾಗರ್ ಉಪನ್ಯಾಸ ನೀಡಿ ಆಧುನಿಕ ಸಮಾಜದಲ್ಲಿ ಜನರು ಹೆಚ್ಚು ತೊಂದರೆಗೆ ಓಳಗಾಗುತ್ತಿರುವುದು ಅವರು ಸೇವಿಸುತ್ತಿರುವ ಆಹಾರ ಕ್ರಮದಿಂದ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ, ಸುಲಭವಾಗಿ ಸಿಗುವ ಉತ್ತಮವಾದ ಪೋಷಕಾಂಶಯುಕ್ತ ಆಹಾರ ಕ್ರಮವನ್ನು ರೂಢಿಸಿಕೊಂಡಲ್ಲಿ ಆರೋಗ್ಯವಂತರಾಗಿ ಜೀವನ ನಡೆಸಬಹುದು ಎಂದರು.

    ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಊಟದಲ್ಲಿ ಮೊಳಕೆ ಕಾಳುಗಳು, ಸೊಪ್ಪು, ಬಣ್ಣ ಬಣ್ಣದ ತರಕಾರಿಗಳು ಹಾಗೂ ಹಣ್ಣುಗಳನ್ನು ಸೇವಿಸಬೇಕು. ದಿನಕ್ಕೆ ೩-೪ ಲೀಟರ್ ನೀರನ್ನು ಕುಡಿಯಬೇಕು. ಪ್ರತಿನಿತ್ಯ ವ್ಯಾಯಮ ಮಾಡಬೇಕು. ೮ ಗಂಟೆಗಳ ಕಾಲ ನಿದ್ರಿಸಬೇಕು ಎಂದು ತಿಳಿಸಿದರು. ಹದಿಹರೆಯದ ಹೆಣ್ಣು ಮಕ್ಕಳು ಉತ್ತುಮವಾದ ಆಹಾರವನ್ನು ಸೇವಿಸಬೇಕು, ಶುಚಿತ್ವದ ಕಡೆಗೆ ಹೆಚ್ಚಿನ ಮಹತ್ವ ನೀಡಬೇಕು. ಋತುಸ್ರಾವದ ಸಮಯದಲ್ಲಿ ಪ್ರತಿನಿತ್ಯ ಸ್ನಾನ ಮಾಡಬೇಕು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆ ಗಮನಹರಿಸಬೇಕು ಎಂದು ತಿಳಿಹೇಳಿದರು.

    ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ಎಷ್ಟೇ ಅರಿವು ಮೂಡಿಸಿದರೂ ಜನರಲ್ಲಿ ಅಪೌಷ್ಟಿಕತೆಯನ್ನು ದೂರ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನರ ಸಹಭಾಗಿತ್ವವೂ ಅತ್ಯಂತ ಮುಖ್ಯವಾದದ್ದು ಎಂದು ತಿಳಿಸಿ ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು ಎಲ್ಲರೂ ತಮ್ಮ ಸಮುದಾಯಕ್ಕೆ ತಿಳಿಸುವಂತೆ ಸಲಹೆ ನೀಡಿದರು.

    ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಮ್ಮ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರುಗಳಾದ ಮಲ್ಲಮ್ಮ, ವಿಜಯಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೆ.ರೂಪಾಕುಮಾರಿ, ಅಂಬಳೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ,ಎನ್.ಕೆ.ಶೋಭಾ, ಹಿರಿಯ ಮೇಲ್ವಿಚಾರಕಿ ಸಿ.ಎಂ.ಲೀಲಾವತಿ, ಪೋಷಣ್ ಅಭಿಯಾನದ ಯೋಜನಾ ಸಂಯೋಜಕಿ ಕೆ.ದಿವ್ಯ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

    Advice for people to get rid of superstitions in life

  • 20 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ

    20 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ

    ಚಿಕ್ಕಮಗಳೂರು:  ನಗರಕ್ಕೆ ಸುಮಾರು ೨೦ ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರ ಕಾಮಗಾರಿ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಿ ನೆರವೇರಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು.

    ಅವರು ಇಂದು ದಂಟರಮಕ್ಕಿ ಸಮೀಪ ಹಾಗೂ ಪಾಲಿಟೆಕ್ನಿಕ್ ಮುಂಭಾಗದಲ್ಲಿ ತಲಾ ೧೨ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಸ್ ತಂಗುದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ರಸ್ತೆ ಅಗಲೀಕರಣವಾದ ನಂತರ ಕೆ.ಎಂ ರಸ್ತೆಯಲ್ಲಿ ದಂಟರಮಕ್ಕಿ ಬಡಾವಣೆ ಸಮೀಪ ಚಿಕ್ಕಮಗಳೂರು, ಕಡೂರು ಮುಂತಾದ ಕಡೆ ಪ್ರಯಾಣ ಮಾಡುವ ಪ್ರಯಾಣಿಕರ ಅನುಕೂಲಕ್ಕಾಗಿ ಶಾಸಕರ ಅನುದಾನದಿಂದ ಹಣ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

    ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಕಣಿವೆ ರುದ್ರೇಶ್ವರ ದೇವಸ್ಥಾನದ ಬಳಿ ತಂಗುದಾಣ ನಿರ್ಮಾಣದ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರದಲ್ಲೇ ಸಾರ್ವಜನಿಕ ಸಮರ್ಪಣೆ ಮಾಡುವುದಾಗಿ ತಿಳಿಸಿದ ಅವರು, ಅತ್ಯಾಧುನಿಕ ಬಸ್ ತಂಗುದಾಣವನ್ನು ಜರ್ಮನಿ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಅಲ್ಲಿಂದಲೇ ಅದರ ಭಾವಚಿತ್ರ ತೆಗೆದು ಕೆಆರ್‌ಡಿಎಲ್ ಅಧಿಕಾರಿಗಳಿಗೆ ರವಾನಿಸಿರುವುದಾಗಿ ತಿಳಿಸಿದರು.

    ಪ್ರವಾಸದ ಸಂದರ್ಭದಲ್ಲಿ ವಿಶೇಷವಾದವು ನಮ್ಮ ಕ್ಷೇತ್ರದಲ್ಲಿ ಇರಬೇಕೆಂಬುದು ಆಸೆ ಮತ್ತು ಕನಸಾಗಿತ್ತು. ಜನರ ಬೇಡಿಕೆಗನುಗುಣವಾಗಿ ಅವರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ಬಸ್ ತಂಗುದಾಣಗಳನ್ನು ಈ ಭಾಗದ ಜನ ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿದರು.

    ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಅನುದಾನ ನೀಡಲು ಬದ್ಧವಾಗಿದೆ. ಈಗಾಗಲೇ ರಸ್ತೆ ಅಭಿವೃದ್ಧಿಗೆ ೧೦ ಕೋಟಿ ರೂ ಮಂಜೂರಾಗಿದೆ. ಅಲ್ಪಸಂಖ್ಯಾತರು ವಾಸಿಸುವ ಬಡಾವಣೆಯ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ೫ ಕೋಟಿ ರೂ ಬಿಡುಗಡೆಯಾಗಿದ್ದು, ಸದ್ಯದಲ್ಲೇ ೨೫ ಕೋಟಿ ರೂ ವೆಚ್ಚದಲ್ಲಿ ನಗರವನ್ನು ಅಭಿವೃದ್ಧಿಪಡಿಸಿ ವಿರೋಧಿ ಹೇಳಿಕೆ ನೀಡುವವರಿಗೆ ಕೆಲಸದ ಮೂಲಕ ಉತ್ತರ ನೀಡುತ್ತೇವೆ ಎಂದರು.

    ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತವಾದ ಅತ್ಯಾಧುನಿಕ ಬಸ್ ತಂಗುದಾಣ ನಿರ್ಮಾಣಕ್ಕೆ ಮುಂದಾಗಿರುವ ಶಾಸಕರನ್ನು ನಗರಸಭೆ ಪರವಾಗಿ ಅಭಿನಂದಿಸಿದರು. ಅ.೧೫ ರಂದು ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಸುಮಾರು ೧.೨೫ ಕೋಟಿ ರೂ ವೆಚ್ಚದಲ್ಲಿ ನಗರದ ರಸ್ತೆಗಳನ್ನು ಡಾಂಬರೀಕರಣ ಮಾಡಲು ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾನಾಯ್ಕ್, ಸದಸ್ಯ ಗುರುಮಲ್ಲಪ್ಪ,ಮಂಜುಳ ಲಕ್ಷ್ಮಣ. ರಾಜು.ಲಕ್ಷ್ಮಣ. ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶ್‌ಸ್ವಾಮಿ, ಪೌರಾಯುಕ್ತ ಬಿ.ಸಿ ಬಸವರಾಜ್, ಕೆಆರ್‌ಡಿಎಲ್ ಎಇಇ ಸಂತೋಷ್, ಗ್ರಾಮಸ್ಥರುಗಳಾದ ಸ್ವಾಮಿ, ಭದ್ರೇಗೌಡ, ಬೀರೇಗೌಡ, ನಿಂಗೇಗೌಡ, ಜಗದೀಶ್, ಸಂದೀಪ್ ಉಪಸ್ಥಿತರಿದ್ದರು.

    Construction of a well-equipped transport bus stand at a cost of Rs. 20 crore

  • ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಕರ್ತವ್ಯ

    ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಕರ್ತವ್ಯ

    ಚಿಕ್ಕಮಗಳೂರು: ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಪೂರ್ವಿಕರು ಉಳಿಸಿ ಹೋಗಿರುವ ಪ್ರಕೃತಿದತ್ತ ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ಅವರು ಇಂದು ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ಅರಣ್ಯ ಇಲಾಖೆ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವನ್ಯಜೀವಿ ಸಪ್ತಾಹ ೨೦೨೫ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಪರಿಸರ ಹಾನಿಯಾದರೆ ಮುಂದಿನ ದಿನಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಗಿಡಮರ ಚೆನ್ನಾಗಿದ್ದರೆ ಪ್ರಾಣಿ-ಪಕ್ಷಿಗಳು ಮತ್ತು ನಾಗರಿಕರ ಆರೋಗ್ಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

    ಅರಣ್ಯ ಮತ್ತು ಪರಿಸರ ಉಳಿದರೆ ಅತೀ ಹೆಚ್ಚು ಮಳೆ ಬೀಳುತ್ತದೆ. ದಟ್ಟ ಅರಣ್ಯ ಉಳಿಸಿ ಬೆಳೆಸಲು ಜಿಲ್ಲಾಡಳಿತ, ಅರಣ್ಯ ಇಲಾಖೆ, ಸರ್ಕಾರ ಎಲ್ಲಾ ಸಂಘ-ಸಂಸ್ಥೆಗಳು ಮುಂದಾಗಬೇಕೆಂದು ಸಲಹೆ ನೀಡಿ ಕಂದಾಯ ಭೂಮಿಯನ್ನು ಡೀಮ್ಡ್ ಅರಣ್ಯ ಎಂದು ಮಾಡಿರುವ ಬಗ್ಗೆ ವಿರೋಧಿಸಿದ ಅವರು, ಆಶ್ರಯ ಮನೆ, ಆಸ್ಪತ್ರೆ, ಸಮುದಾಯ ಭವನ ಇವುಗಳಿಗೆ ಆದ್ಯತೆ ಮೇಲೆ ಭೂಮಿ ಮೀಸಲಿಡಬೇಕು ಹಾಗೂ ೧-೩ ಎಕರೆ ವರೆಗಿನ ಶೋಷಿತರು ಮಾಡಿರುವ ಸಾಗುವಳಿ ಭೂಮಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ಕಾಡು ಇದ್ದರೆ ನಾಡು ಎಂಬಂತೆ ಜಗತ್ತು ಮತ್ತು ಭೂಮಿ ಇರುವುದು ಕೇವಲ ಮನುಷ್ಯರಿಗಾಗಿ ಅಲ್ಲ, ಎಲ್ಲಾ ಸಕಲ ಪ್ರಾಣಿ-ಪಕ್ಷಿಗಳು, ಸೂಕ್ಷ್ಮಾಣು ಜೀವಿಗಳು ಜೀವಿಸಲು ಅದರದೇ ಆದ ಸ್ಥಾನವನ್ನು ದೇವರು ಕಲ್ಪಿಸಿದ್ದಾನೆ ಎಂದು ಹೇಳಿದರು.

    ಒಂದಕ್ಕೊಂದು ಪೂರಕವಾಗಿದ್ದು, ಒಂದು ನಾಶಮಾಡಿ ಇನ್ನೊಂದು ಬದುಕಲಾಗದು ಎಂಬುದು ತಾತ್ಕಾಲಿಕ ಮಾತ್ರ. ಎಲ್ಲಾ ಜೀವಸಂಕುಲ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಈ ಎಲ್ಲವನ್ನು ಸಮತೋಲನವಾಗಿಡುವ ಪ್ರಾಕೃತಿಕ ವ್ಯವಸ್ಥೆಯನ್ನು ಉಳಿಸಿ ಗೌರವಿಸಬೇಕು ಎಂದರು.

    ದುರಾಸೆಯಿಂದ ಇಂದು ಪರಿಸರ ನಾಶವಾಗುತ್ತಿದೆ. ಮುಂದೊಂದು ದಿನ ನಮ್ಮ ನಾಶಕ್ಕೆ ನಾವೇ ಕಾರಣವಾಗುತ್ತೇವೆ ಎಂದು ಎಚ್ಚರಿಸಿದ ಅವರು, ಈ ವನ್ಯಜೀವಿ ಸಪ್ತಾಹ ಎಲ್ಲಾ ಜೀವಿಗಳಿಗೆ ಬದುಕುವ ಹಕ್ಕಿದೆ ಎಂದು ಭಾವಿಸುವ ಅಗತ್ಯವಿದೆ ಎಂದು ಹೇಳಿದರು.

    ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಕರ್ತವ್ಯವನ್ನು ಅರಿತು ಮುಂದಿನ ಪೀಳಿಗೆಗೆ ಪರಿಸರದ ಮಹತ್ವ ತಿಳಿಸಬೇಕಾಗಿದೆ. ಹಿಂದೆ ವಾಹನಗಳು ಇರಲಿಲ್ಲ, ಅದಕ್ಕಾಗಿ ರಸ್ತೆಬದಿ ನೆರಳಿಗಾಗಿ ಸಾಲುಮರ ನೆಡುತ್ತಿದ್ದರು. ಹಕ್ಕಿಪಕ್ಷಿಗಳಿಗಾಗಿ ಹಣ್ಣಿನ ಮರಗಳಿದ್ದವು. ಇಂದು ಒಂದೇ ಒಂದು ಆ ರೀತಿಯ ಹಣ್ಣಿನ ಮರಗಳಿಲ್ಲ ಎಂದು ವಿಷಾಧಿಸಿದರು.

    ರಾಜ್ಯಸರ್ಕಾರ ಅಕೇಶಿಯಾ ಮತ್ತು ನೀಲಿಗಿರಿಯನ್ನು ಬೇರು ಸಹಿತ ತೆಗೆಯಬೇಕೆಂದು ಆದೇಶ ಮಾಡಿದ್ದರೂ ಇದುವರೆಗೆ ಈ ಕಾರ್ಯ ಸಾಧ್ಯವಾಗಿಲ್ಲ. ಆಗುಂಬೆಯನ್ನು ಮಲೆನಾಡಿನ ಚಿರಾಪುಂಜಿ ಎಂದು ಕರೆಯುತ್ತೇವೆ. ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಾದ ಕುದುರೆಮುಖ ರಾಷ್ಟ್ರೀಯ ಉದ್ಯಾನ, ಶಿರಾಡಿಘಾಟ್, ಕೊಪ್ಪ-ಶೃಂಗೇರಿ ಹೋಗುವ ರಸ್ತೆ ಇಕ್ಕೆಲಗಳಲ್ಲಿ ಈ ಮರಗಳನ್ನು ಕಾಣಬಹುದಾಗಿದ್ದು, ತಿನ್ನಲು ಏನೂ ಸಿಗದ ಕಾರಣ ಮಂಗಗಳು ಪ್ರವಾಸಿಗರು ನೀಡುವ ಕಾಯಿ-ಬಾಳೇಹಣ್ಣಿಗಾಗಿ ಪರಿತಪಿಸುತ್ತಿರುವುದು ಕರುಣಾಜನಕವಾಗಿದೆ ಎಂದು ಹೇಳಿದರು.

    ಮಾನವ-ವನ್ಯ ಪ್ರಾಣಿಗಳ ಸಂಘರ್ಷ ದಿನನಿತ್ಯ ಕಾಣುತ್ತಿದ್ದೇವೆ. ಚಿರತೆ, ಕಾಡಾನೆ, ಹುಲಿ ಮುಂತಾದವುಗಳು ಆಹಾರವನ್ನು ಅರಸಿ ನಾಡಿಗೆ ಬರುತ್ತಿರುವುದು ಪ್ರಮುಖ ಕಾರಣವಾಗಿದ್ದು, ಅವುಗಳ ನೆಮ್ಮದಿ ಜೀವನಕ್ಕೆ ಅವಕಾಶ ಇಲ್ಲದಂತಾಗಿದೆ ಎಂದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಎಸಿಎಫ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

    It is everyone’s duty to preserve nurture and protect the environment.

  • ಅ.18ರವರೆಗೆ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ

    ಅ.18ರವರೆಗೆ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ

    ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಸಮೀಕ್ಷೆ) ಅವಧಿಯನ್ನು ಅ. 18ರವರೆಗೆ ವಿಸ್ತರಿಸಲಾಗಿದೆ.

    ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ವಿಡಿಯೊ ಸಂವಾದ ನಡೆಸಿದರು.

    ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ಸಮೀಕ್ಷಕ ರಾಗಿರುವ ಶಿಕ್ಷಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಹಿಂದೇಟು ಹಾಕುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದರು.

    ‘ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ದಸರಾ ರಜೆಯನ್ನು 10 ದಿನ ವಿಸ್ತರಿಸುವಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿ ಹೆಚ್ಚುವರಿಯಾಗಿ ಎಂಟು ಕೆಲಸದ ದಿನ, ಅಂದರೆ ಅ. 18ರವರೆಗೆ ರಜೆ ಘೋಷಿಸಲಾಗಿದೆ. ರಜೆ ಮುಗಿದ ನಂತರ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸಲಿದ್ದಾರೆ. ಅ. 19ರೊಳಗೆ ಸಮೀಕ್ಷೆ ಮುಗಿಯಲಿದೆ’ ಎಂದು ಹೇಳಿದರು.

    ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಬಿಟ್ಟು ರಾಜ್ಯದಾದ್ಯಂತ ಸೆ. 22ರಂದು ಆರಂಭಗೊಂಡಿರುವ ಈ ಸಮೀಕ್ಷೆಯು ಮಂಗಳವಾರ ( ಅ.7) ಮುಗಿಯಬೇಕಿತ್ತು. ಆದರೆ, ನಿಗದಿಯಂತೆ ಪೂರ್ಣಗೊಂಡಿಲ್ಲ. ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆಯ ಪ್ರಗತಿಯಲ್ಲಿ ವ್ಯತ್ಯಾಸವಿದೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97ರಷ್ಟು ಪೂರ್ಣ ಗೊಂಡಿದ್ದರೆ, ದಕ್ಷಿಣ ಕನ್ನಡದಲ್ಲಿ ಕೇವಲ ಶೇ 67ರಷ್ಟು ಪ್ರಗತಿ ಕಂಡಿದೆ’ ಎಂದು ಹೇಳಿದರು.

    Socio-Educational Survey Period Extended Until October 18th

  • ತಾಲ್ಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

    ತಾಲ್ಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

    ಚಿಕ್ಕಮಗಳೂರು:  ರಾಜ್ಯದ ತಾಲ್ಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರುಗಳನ್ನು ಕಡ್ಡಾಯವಾಗಿ ನೇಮಕ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ತಾಯಿ ಮಗುವಿನ ಆರೋಗ್ಯಕ್ಕೆ ಆದ್ಯತೆ ನೀಡಿದೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ತಿಳಿಸಿದರು.

    ಕೊಪ್ಪ ಪಟ್ಟಣದಲ್ಲಿ ೧೪ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂದು ಮಾತನಾಡಿದ ಅವರು, ತಲಾ ಇಬ್ಬರಂತೆ ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ಅರಿವಳಿಕೆ ತಜ್ಞರು, ಒಬ್ಬರು ರೆಡಿಯಾಲಾಜಿಸ್ಟ್ ಅನ್ನು ನೇಮಿಸಿಕೊಳ್ಳಲಾಗುವುದು. ಜನರಿಗೆ ಅಗತ್ಯ ಸೇವೆ ಪೂರೈಸಲು ಸರ್ಕಾರ ಬದ್ಧವಾಗಿದ್ದು, ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.

    ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಯನ್ನು ಕೇವಲ ಮೂರು ತಿಂಗಳಲ್ಲಿ ಅನುಷ್ಠಾನಕ್ಕೆ ತಂದರು. ಸರ್ಕಾರ ನುಡಿದಂತೆ ನಡೆದಿದ್ದು, ದೇಶದ ಜನರಿಗೆ ಅಚ್ಚರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇದೆ. ಮಹಿಳಾ ಸಬಲೀಕರಣಕ್ಕೆ ಒತ್ತು ಕೊಟ್ಟಿದೆ. ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆತ್ಮ ಗೌರವ ಸಿಕ್ಕಿದೆ ಎಂದರು.

    ೧೦೦ ಹಾಸಿಗೆಗಳ ಆಸ್ಪತ್ರೆ ಮಂಜೂರು ಮಾಡಿ ಶೃಂಗೇರಿಯ ಋಣ ತೀರಿಸುವ ಕೆಲಸ ಮಾಡಿದ್ದು, ಇನ್ನು ಆರೇಳು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಬೇಕಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿಯೇ ಉದ್ಘಾಟನೆಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇಂದು ವಾಲ್ಮೀಕಿ ಜಯಂತಿ, ರಾಮಾಯಣವು ಭಾರತದ ಬೆಳವಣಿಗೆಗೆ ಸ್ಫೂರ್ತಿಯಾಗಿದೆ ಎಂದು ಈ ಸಂದರ್ಭದಲ್ಲಿ ಸ್ಮರಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೂತನ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಬರೆದ ರಾಮಾಯಣವನ್ನು ಭಾರತ ಮಾತ್ರವಲ್ಲ ಇಡೀ ಪ್ರಪಂಚವೇ ಶ್ಲಾಘಿಸುತ್ತದೆ. ಅಯೋಧ್ಯೆಯ ರಾಮನ ಆದರ್ಶ ಕೊಟ್ಟ ಮಾತನ್ನು ಪಾಲಿಸಲು ಮಾತ್ರವೇ ಹೊರತು ಅಧಿಕಾರಕ್ಕಾಗಿ ಅಲ್ಲ. ರಾಮಾಯಣ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲಾ ಧರ್ಮದವರಿಗೂ ದಾರಿದೀಪ ಎಂದು ಹೇಳಿದರು.

    ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ’ಗ್ಯಾರಂಟಿ ಯೋಜನೆಗೆ ೫೦-೬೦ ಸಾವಿರ ಕೋಟಿ ರೂ. ಕೊಟ್ಟರೂ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಬಿದ್ದಿಲ್ಲ. ಅಭಿವೃದ್ಧಿ ನಿಟ್ಟಿನಲ್ಲಿ ರೂ.೧೪.೬೯ ಕೋಟಿ ವೆಚ್ಚದಲ್ಲಿ ಇಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣವಾಗಿದೆ. ಆಸ್ಪತ್ರೆ ಮುಂದುವರಿದ ಅಭಿವೃದ್ಧಿ ಕಾಮಗಾರಿಗೆ ಸಚಿವರನ್ನು ಕೇಳಿದ ಕೂಡಲೇ ರೂ.೧.೩೪ ಕೋಟಿ ಮಂಜೂರು ಮಾಡಿದ್ದಾರೆ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತುಕೊಟ್ಟು ಕೆಲಸ ಮಾಡುತ್ತಿದೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವಾಲ್ಮೀಕಿ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಉಪ ವಿಭಾಗಾಧಿಕಾರಿ ಸುದರ್ಶನ್, ಆರೋಗ್ಯ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಮಲ್ಲಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್‌ಬಾಬು, ತಹಶೀಲ್ದಾರ್ ಲಿಖಿತಾ ಮೋಹನ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಚ್.ಆರ್.ರೇಖಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್, ಆರೋಗ್ಯ ಶಿಕ್ಷಣಾಧಿಕಾರಿ ಸುಧಾಕರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ಬಗರ್ ಹುಕುಂ ಸಮಿತಿ ಸದಸ್ಯರು, ಕೆಡಿಪಿ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

    Decision to appoint specialist doctors for taluk hospitals

     

  • ಜಿಲ್ಲೆಗೆ 20 ಹೊಸ ಆರೋಗ್ಯ ಕ್ಷೇಮ ಕೇಂದ್ರ ಮಂಜೂರು

    ಜಿಲ್ಲೆಗೆ 20 ಹೊಸ ಆರೋಗ್ಯ ಕ್ಷೇಮ ಕೇಂದ್ರ ಮಂಜೂರು

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೆ ಸುಮಾರು ೧೨.೫  ಕೋಟಿ ರೂ. ವೆಚ್ಚದಲ್ಲಿ ೨೦ ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಸಹ ನಡೆದಿರುವುದಾಗಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀ ದಿನೇಶ್ ಗುಂಡೂರಾವ್ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಶೃಂಗೇರಿ ತಾಲ್ಲೂಕು ಅಡ್ಡಗದ್ದೆ ಗ್ರಾ.ಪಂ. ವ್ಯಾಪ್ತಿಯ ಬೆಳಂದೂರು ಗ್ರಾಮದ ಹೊನ್ನವಳ್ಳಿಯಲ್ಲಿ ಇಂದು ನೂರು ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು  ಮಾತನಾಡಿದರು.

    ಶೃಂಗೇರಿ ತಾಲ್ಲೂಕಿಗೆ ತೀರಾ ಅಗತ್ಯವಿರುವ ಮಹತ್ವಪೂರ್ಣವಾದ ಯೋಜನೆ ಇದಾಗಿದ್ದು. ಒಟ್ಟು ೩೭.೬೫ ಕೋಟಿ ರೂ. ವೆಚ್ಚದ ಇಲ್ಲಿನ ಉದ್ದೇಶಿತ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಕ್ಷಿಪ್ರಗತಿಯಲ್ಲಿ ನಿರ್ವಹಿಸಿ ಮಳೆ ಬಿಡುವು ನೀಡಿದ ಮುಂದಿನ ಆರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರಲ್ಲದೆ, ಇನ್ನು ಹಲವು ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಹೇಳಿದರು. ಈಗಾಗಲೇ ಬಾಳೆಹೊನ್ನೂರಿಗೆ ೫೦ ಹಾಸಿಗೆಯ ಆಸ್ಪತ್ರೆ ಕಟ್ಟಡಕ್ಕೆ ಬೇಡಿಕೆ ಬಂದಿದ್ದು, ಈ ತಕ್ಷಣಕ್ಕೆ ಈ ಯೋಜನೆಗೆ ಅವಕಾಶವಾಗದಿದ್ದರೂ ಮುಂದಿನ ಆಯವ್ಯಯದಲ್ಲಿ ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

    ಇಲ್ಲಿನ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾರ್ಯ ಮೊದಲೇ ಆರಂಭವಾಗಬೇಕಿತ್ತು. ಆದರೆ ಸ್ಥಳದ ಸಮಸ್ಯೆ ಹಾಗೂ ಮಳೆಗಾಲದ ಕಾರಣದಿಂದಾಗಿ ಕಾಮಗಾರಿ ಆರಂಭಕ್ಕೆ ಹಿನ್ನಡೆಯಾಗಿದೆ. ಗ್ರಾಮೀಣ ಪ್ರದೇಶದ ಜನಸಾಮಾನ್ಯರು ಮತ್ತು ಬಡಜನತೆಯ ಆರೋಗ್ಯ ರಕ್ಷಣೆಗೆ ಮೂಲ ಸೌಕರ್ಯದ ಅವಶ್ಯಕತೆ ಇದ್ದು, ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕಾಗಿದ್ದರೂ ಖಾಸಗಿ ಆಸ್ಪತ್ರೆಗಳು ದುಬಾರಿಯಾಗಿ ಗ್ರಾಮೀಣ ಪ್ರದೇಶದ ಜನರಿಗೆ ತೀರಾ ಸಮಸ್ಯೆಯಾಗುತ್ತಿರುವುದರಿಂದ ಈ ಆಸ್ಪತ್ರೆಯ ಅವಶ್ಯಕತೆ ಇಲ್ಲಿಗೆ ಇತ್ತು. ಈ ನಿಟ್ಟಿನಲ್ಲಿ ಯೋಜನೆ ಕಾರ್ಯಗತವಾಗುವ ಕಾಲ ಸನ್ನಿಹಿತವಾಗಿದೆ ಎಂದರು.

    ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆಯನ್ನು ಮಾನ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರು ನೆರವೇರಿಸಿದರು.

    ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಎರಡು ಬಾರಿ ಕಾರ್ಯಕ್ರಮ ನಿಗದಿಯಾಗಿತ್ತು. ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಇದೀಗ ಶಂಕುಸ್ಥಾಪನೆ ನೆರವೇರಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ. ಆಸ್ಪತ್ರೆ ಕಟ್ಟಡಕ್ಕೆ ಸಂಬಂಧಿಸಿದಂತೆ
    ಈ ಭಾಗದ ಬಹುದಿನಗಳ ಬೇಡಿಕೆಯಾದ ಒತ್ತುವರಿ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ. ರಸ್ತೆ ಮಲೆನಾಡಿನಲ್ಲಿ ಬಹಳಷ್ಟು ರಸ್ತೆಗಳು ಗುಂಡಿ ಬಿದ್ದಿವೆ.

    ವಸ್ತಾರೆಯಿಂದ ಶೃಂಗೇರಿಗೆ ೯೫ ಕೋಟಿ ರೂ.ಗಳು, ಜಯಪುರದಿಂದ ಕೊಪ್ಪಕ್ಕೆ ರಸ್ತೆ ಅಗಲೀಕರಣವೂ ಸೇರಿದಂತೆ ಗುಂಡಿ ಮುಚ್ಚಲು ೧೧ ಕೋಟಿ ರೂ.ಗಳು, ಕೋರ್ಲುಕೊಪ್ಪದಿಂದ ಕೊಪ್ಪಕ್ಕೆ ಸುಮಾರು ೧೯.೫ ಕೋಟಿ ರೂ.ಗಳನ್ನು ಉಸ್ತುವಾರಿ ಸಚಿವರು ಒದಗಿಸಿದ್ದಾರೆ. ಮಳೆ ಮುಗಿದ ಬಳಿಕ ಈ ಕಾಮಗಾರಿ ನಿರ್ವಹಿಸಲಾಗುವುದು. ನೀರು ನುಗ್ಗುತ್ತಿರುವ ಗಾಂಧಿ ಮೈದಾನದಲ್ಲಿ ತಡೆಗೋಡೆ ನಿರ್ಮಿಸಲು ಸಹ ಹಣವನ್ನು ಒದಗಿಸಿದ್ದಾರೆ.

    ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಆರೋಗ್ಯ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಮಲ್ಲಿಕಾ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್,ಎಸ್,ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್‌ಬಾಬು, ಉಪವಿಭಾಗಾಧಿಕಾರಿ ಸುದರ್ಶನ್ ಮತ್ತು ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

    20 new health and wellness centers sanctioned for the district

  • ಮಹರ್ಷಿ ವಾಲ್ಮೀಕಿ ಅಗಣಿತ ಗುಣಗಳ ಗಣಿ

    ಮಹರ್ಷಿ ವಾಲ್ಮೀಕಿ ಅಗಣಿತ ಗುಣಗಳ ಗಣಿ

    ಚಿಕ್ಕಮಗಳೂರು: ರಾಮ ಹೇಗೆ ಗುಣಗಳ ಗಣಿಯೋ ಹಾಗೇ ಆ ರಾಮನ ವ್ಯಕ್ತಿತ್ವವನ್ನು ಮರೆಯದಂತೆ ನಮ್ಮ ಹೃದಯದಲ್ಲಿ ಅಚ್ಚಾಗುವಂತೆ ಮಾಡಿರುವ ಮಹರ್ಷಿ ವಾಲ್ಮೀಕಿಯವರು ಅಗಣಿತ ಗುಣಗಳ ಗಣಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

    ರಾಮಾಯಣ ಮತ್ತು ಮಹಾಭಾರತ ಭಾರತದ ಚಾರಿತ್ರಿಕ ಮಹಾಕಾವ್ಯಗಳು, ರಾಮನ ವ್ಯಕ್ತಿತ್ವ. ಆದರ್ಶ, ರಾಮಾಯಣದ ಕಾಲಘಟ್ಟವನ್ನು ಸಾವಿರಾರು ವರ್ಷಗಳ ನಂತರವೂ ನಮ್ಮ ಹೃದಯದಲ್ಲಿ ಉಳಿಯಲು ಮಹರ್ಷಿ ವಾಲ್ಮೀಕಿಯವರು ಕಾರಣೀಭೂತರಾಗಿದ್ದಾರೆ ಎಂದರು.

    ಮಹರ್ಷಿ ವಾಲ್ಮೀಕಿ ಅವರು ತಮ್ಮ ಕಾವ್ಯದ ಮೂಲಕ ಸಾಮರಸ್ಯ, ಪ್ರೀತಿ, ತ್ಯಾಗ ಮತ್ತು ಅಭಿವೃದ್ಧಿ ಆಧಾರಿತ ಆಡಳಿತವನ್ನು ಪ್ರಪಂಚದಾದ್ಯಂತ ಹರಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದ ಅವರು, ಪ್ರತಿಭೆ ಹುಟ್ಟಿನ ಉಡುಗೊರೆ ಅಲ್ಲ, ಸಾಧನೆಯ ಗಳಿಕೆ ಎನ್ನುವುದನ್ನು ರಾಮಾಯಣ ಮಹಾಕಾವ್ಯ ಬರೆದು ತೋರಿಸಿದ ದಲಿತ ಪ್ರತಿಭೆ, ಆದಿ ಕವಿ ವಾಲ್ಮೀಕಿಯವರ ಬದುಕು ಮತ್ತು ಸಾಧನೆ ನಮಗೆಲ್ಲ ಪ್ರೇರಣೆಯಾಗಬೇಕು. ಕಟ್ಟುಕತೆಗಳಿಂದ ಹುಟ್ಟಿಕೊಂಡಿರುವ ಪೂರ್ವಗ್ರಹಗಳನ್ನು ಪಕ್ಕಕ್ಕಿಟ್ಟು ಈ ಸಾಧಕನ ನೈಜ ಜೀವನಗಾಥೆಯ ಅಧ್ಯಯನ ತಳ ಸಮುದಾಯಗಳ ಕೋಟ್ಯಂತರ ಪ್ರತಿಭೆಗಳಿಗೆ ಸ್ಫೂರ್ತಿ ಮತ್ತು ಆತ್ಮವಿಶ್ವಾಸವನ್ನು ಹುಟ್ಟಿಸಬಹುದು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಹೆಚ್.ಡಿ.ತಮ್ಮಯ್ಯ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಒಬ್ಬ ಮಹಾನ್ ವ್ಯಕ್ತಿ ಮಹರ್ಷಿ ವಾಲ್ಮೀಕಿಯವರು. ಅವರನ್ನು ಅತ್ಯಂತ ಗೌರವದಿಂದ ಆದಿಕವಿ ಎನ್ನಲಾಗುತ್ತದೆ. ದೇಶದಲ್ಲಿ ರಾಮಾಯಣ, ಮಹಾಭಾರತ ಎಲ್ಲರ ಬದುಕಿಗೆ ಆದರ್ಶದ ಮಹಾ ಕಾವ್ಯಗಳಾಗಿವೆ. ರಾಮಾಯಣ ರಚಿಸಿದ್ದು ವಾಲ್ಮೀಕಿಯಾದರೆ, ಮಹಾಭಾರತ ರಚಿಸಿದ್ದು ವೇದ ವ್ಯಾಸರು. ಈ ಮಹಾನ್ ಗ್ರಂಥಗಳನ್ನು ರಚಿಸಿದ ಇವರಿಬ್ಬರೂ ಶೋಷಿತ ವರ್ಗದಿಂದ ಬಂದವರು ಎಂಬುದು ಹೆಮ್ಮೆಯ ವಿಷಯ ಎಂದರು.

    ಸರ್ಕಾರ ಹಲವಾರು ಯೋಜನೆಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡುತ್ತಿದೆ. ಸಕಾಲದಲ್ಲಿ ಕೆಲವೊಂದು ಯೋಜನೆಗಳು ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ ಎಂಬುದನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದ ಅವರು, ವಾಲ್ಮೀಕಿ ಭವನಕ್ಕೆ ಪೀಠೋಪಕರಣಗಳನ್ನು ಒದಗಿಸಲು ೧೦ ಲಕ್ಷ ರೂ.ಗಳನ್ನು ಮೀಸಲಿಟ್ಟಿರುವುದಾಗಿ ತಿಳಿಸಿದರು.

    ಹೊಸನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಪತಿ ಹಳಗುಂದ ಮಹರ್ಷಿ ವಾಲ್ಮೀಕಿರವರ ಕುರಿತು ಉಪನ್ಯಾಸ ನೀಡಿ, ರಾಮಾಯಣ ಎಂದರೆ ವಾಲ್ಮೀಕಿ ನೆನಪಾಗುವುದು ಸಹಜ. ವಾಲ್ಮೀಕಿ ಕೆತ್ತಿದ ನೂರಾರು ಪಾತ್ರಗಳಿಗೆ ದೇವರ ಮಂದಿರವಿದೆ. ಗುಡಿ ಗೋಪುರಗಳಿವೆ. ಆದರೆ ವಾಲ್ಮೀಕಿಗೆ ಮಾತ್ರ ದೇವಾಲಯವಿಲ್ಲ. ಆತ ಕೆತ್ತಿದ ರಾಮ ದೇವನಾದ, ವಾಲ್ಮೀಕಿ ಮಹಾನ್ ದೇವನಾಗಿ ಇವತ್ತು ನಮ್ಮ ಮುಂದೆಯಿದ್ದಾರೆ ಎಂದ ಅವರು ರಾಮ ನಿಮ್ಮ ಪಾಲಿಗೆ ಋಷಿಯಾಗಿರಬಹುದು,ವಾಲ್ಮೀಕಿ ಮಾಹನ್ ಋಷಿ, ಮಹರ್ಷಿಯಾಗಿದ್ದಾನೆ ಎಂದು ಹೇಳಿದರು. ವಾಲ್ಮೀಕಿಯವರು ಒಬ್ಬ ಋಷಿ ಹಾಗೂ ಸಂಸ್ಕೃತ ಕವಿ. ರಾಮಾಯಣ ಮಹಾಕಾವ್ಯದ ಕರ್ತೃ. ಮೊದಲ ಮಹಾಕಾವ್ಯ ರಚಿಸಿದ ಕಾರಣ ವಾಲ್ಮೀಕಿಯವರನ್ನು ಆದಿಕವಿ ಎಂದು ಕರೆಯಲಾಗಿದೆ ಎಂದು ಹೇಳಿದರು.

    ವಾಲ್ಮೀಕಿಯ ಜೀವನದ ಕುರಿತಾಗಿ ಅನೇಕ ದಂತಕಥೆಗಳಿವೆ. ಅದರಲ್ಲಿ ಒಂದು ಕಥೆಯ ಪ್ರಕಾರ, ವಾಲ್ಮೀಕಿ ಋಷಿಯಾಗುವ ಮೊದಲು ರತ್ನಾಕರನೆಂಬ ಒಬ್ಬ ಬೇಡನಾಗಿದ್ದ. ನಾರದ ಮುನಿಯ ಪ್ರೇರಣೆಯಿಂದ ರಾಮ ಭಕ್ತನಾಗಿ, ರಾಮಾಯಣ ರಚಿಸಿದ ಮೊದಲ ಕವಿಯಾಗಿ ಪ್ರಸಿದ್ಧರಾದರು. ಸಂಸ್ಕೃತ ಸಾಹಿತ್ಯದಲ್ಲಿ ಅವರ ಮಹತ್ವವನ್ನು, ಅವರು ರಚಿಸಿದ ರಾಮಾಯಣದ ಶ್ರೇಷ್ಠತೆಯನ್ನು ಮತ್ತು ಸಮಾಜಕ್ಕೆ ಅವರ ಕೊಡುಗೆಯನ್ನು ಎತ್ತಿ ತೋರಿಸಲಾಗಿದೆ.

    ಒಮ್ಮೆ ಜೋಡಿ ಕ್ರೌಂಚ ಪಕ್ಷಿಗಳನ್ನು ನೋಡುತ್ತಿದ್ದಾಗ, ಬೇಟೆಗಾರನೊಬ್ಬ ಒಂದು ಹಕ್ಕಿಯನ್ನು ಕೊಂದಾಗ, ವಾಲ್ಮೀಕಿ ಕೋಪಗೊಂಡು ಬೇಟೆಗಾರನಿಗೆ ಶಾಪ ನೀಡುತ್ತಾನೆ. ಇದರಿಂದಾಗಿ ಅವರೊಳಗಿನ ಕವಿತಾ ಪ್ರತಿಭೆ ಹೊರಹೊಮ್ಮುತ್ತದೆ, ಇದು ರಾಮಾಯಣ ಬರೆಯಲು ಸ್ಫೂರ್ತಿ ನೀಡುತ್ತದೆ. ಮಹರ್ಷಿ ವಾಲ್ಮೀಕಿಯನ್ನು ಸಂಸ್ಕೃತ ಸಾಹಿತ್ಯದ ಮೊದಲ ಕವಿ ಎಂದು ಕೂಡ ಹೇಳಲಾಗುತ್ತದೆ ಮತ್ತು ಅವರು ರಚಿಸಿದ ರಾಮಾಯಣವು ಸಂಸ್ಕೃತದ ಮೊದಲ ಮಹಾಕಾವ್ಯವಾಗಿದೆ. ವಾಲ್ಮೀಕಿ ಜಯಂತಿಯನ್ನು ಆಚರಿಸುವ ಸಂಭ್ರಮದಲ್ಲಿ ನಾವು ಅವರ ಜೀವನ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಮಾರ್ಗ ಅನುಸರಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ., ಪದವಿ ಸೇರಿದಂತೆ ವಾಲ್ಮೀಕಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಧನ ನೀಡುವ ಮೂಲಕ ಸನ್ಮಾನಿಸಲಾಯಿತು.

    ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಬಿ.ಕೆ.ಭೀಮಪ್ಪ, ಜಿಲ್ಲಾ ವಾಲ್ಮೀಕಿ ಯುವಕ ಸಂಘದ ಜಗದೀಶ್ ಕೋಟೆ, ಜಿ.ಪಂ. ಉಪಕಾರ್ಯದರ್ಶಿ ಶಂಕರ್ ಕೊರವರ, ತಾಲ್ಲೂಕು ತಹಸೀಲ್ದಾರ್ ರೇಷ್ಮಾಶೆಟ್ಟಿ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ವಾಲ್ಮೀಕಿ ಸಂಘದ ಉಪಕಾರ್ಯದರ್ಶಿ ಮಧುಕುಮಾರ್, ಐ ಟಿ ಡಿ ಪಿ ಜಿಲ್ಲಾ ಅಧಿಕಾರಿ ರಮೇಶ್ ಸ್ವಾಗತಿಸಿದರು. ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

    ಕಾರ್ಯಕ್ರಮಕ್ಕೆ ಮುನ್ನ ನಗರದ ತಾಲ್ಲೂಕು ಕಚೇರಿಯಿಂದ ಕಲಾಮಂದಿರದವರೆಗೆ ಮೆರವಣಿಗೆ ಗಮನ ಸೆಳೆಯಿತು.

    Maharishi Valmiki is a mine of innumerable qualities.

  •  ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ

     ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ

    ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ಅ.12ರವರೆಗೆ ವಿಸ್ತರಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅ.24ರವರೆಗೂ ಸಮೀಕ್ಷೆ ನಡೆಯಲಿದೆ.

    ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿ ಬಿಟ್ಟು, ರಾಜ್ಯದಾದ್ಯಂತ ಸೆ. 22ರಿಂದ ಸಮೀಕ್ಷೆ ಆರಂಭಗೊಂಡಿದ್ದು, ಮಂಗಳವಾರ (ಅ.7) ಅಂತ್ಯ ಆಗಬೇಕಿತ್ತು. ಸೋಮವಾರದವರೆಗೆ (ಅ. 6) ಶೇಕಡಾ 80.39ರಷ್ಟು ಪೂರ್ಣಗೊಂಡಿದೆ. ಮಂಗಳವಾರ ಕೊನೆಯ ದಿನ ಆಗಿರುವ ಕಾರಣ, ಅವಧಿಯನ್ನು ವಿಸ್ತರಿಸಲಾಗಿದೆ.

    ದಸರಾ ರಜೆಯ ಬಳಿಕ ಅ. 8ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಹೀಗಾಗಿ, ಸಮೀಕ್ಷೆಯಲ್ಲಿ ತೊಡಗಿಸಿ ಕೊಂಡಿರುವ ಶಿಕ್ಷಕರಿಗೆ ಅನುಕೂಲ ಕಲ್ಪಿಸಲು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯವನ್ನು ಮರು ನಿಗದಿ ಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಸುರಳ್ಕರ್‌ ವಿಕಾಸ್ ಕಿಶೋರ್‌ ಅವರು ರಾಜ್ಯದ ಎಲ್ಲ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

    ‘ಜಿಬಿಎ ವ್ಯಾಪ್ತಿಯಲ್ಲಿ ಶನಿವಾರದಿಂದ (ಅ. 4) ಸಮೀಕ್ಷೆ ಶುರುವಾಗಿದೆ. ಎರಡು ದಿನಗಳ ಅವಧಿಯಲ್ಲಿ ಗುರಿ ನಿಗದಿ ಪಡಿಸಿರುವ ಒಟ್ಟು 39.82 ಲಕ್ಷ ಮನೆಗಳ ಪೈಕಿ, 2,60,900 ಮನೆಗಳಲ್ಲಿ ದತ್ತಾಂಶ ಸಂಗ್ರಹಿಸಲಾಗಿದೆ’ ಎಂದು ಹಿಂದುಳಿದ ವರ್ಗಗಳ ಆಯೋಗದ ಮೂಲಗಳು ತಿಳಿಸಿವೆ.

    ರಾಜ್ಯದಾದ್ಯಂತ ಆರಂಭದ 3–4 ದಿನ ಮೊಬೈಲ್‌ ಆ್ಯಪ್‌ನಲ್ಲಿ ತಾಂತ್ರಿಕ ದೋಷ, ನೆಟ್‌ವರ್ಕ್‌ ಸಮಸ್ಯೆ ಹೀಗೆ ನಾನಾ ಕಾರಣಗಳಿಂದ ಆಮೆಗತಿಯಲ್ಲಿ ಸಮೀಕ್ಷೆ ಸಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನಂತರ ಈ ಕಾರ್ಯ ಚುರುಕು ಪಡೆದಿತ್ತು.

    ಸಮೀಕ್ಷೆ– ಪರಿಷ್ಕೃತ ವೇಳಾಪಟ್ಟಿ: ರಾಜ್ಯದಲ್ಲಿ ಅ.8ರಿಂದ 12ರವರೆಗೆ (ಜಿಬಿಎ ವ್ಯಾಪ್ತಿ ಬಿಟ್ಟು), ಶಾಲಾ ತರಗತಿ; ಬೆಳಿಗ್ಗೆ 8ರಿಂದ 1ರವರೆಗೆ, ಸಮೀಕ್ಷೆ ಅವಧಿ;1 ಗಂಟೆಯ ನಂತರ,  ಸಮೀಕ್ಷೆ ಅಂತ್ಯ; ಅ. 12

    Extension of the period for socio-educational survey

  • ಪ್ರಾಚೀನ ಸನಾತನ ಧರ್ಮ ಜಗತ್ತಿಗೆ ಆಧಾರ

    ಪ್ರಾಚೀನ ಸನಾತನ ಧರ್ಮ ಜಗತ್ತಿಗೆ ಆಧಾರ

    ಚಿಕ್ಕಮಗಳೂರು: ಅತ್ಯಂತ ಶ್ರೇಷ್ಠ ಪ್ರಾಚೀನವಾದ ಸನಾತನ ಧರ್ಮ ಜಗತ್ತಿಗೆ ಆಧಾರವಾಗಿದ್ದು, ಈ ನಿಟ್ಟಿನಲ್ಲಿ ಧರ್ಮದ ಸಾರವನ್ನು ಚೆನ್ನಾಗಿ ಅಧ್ಯಯನ ಮಾಡಿ ತಿಳಿದುಕೊಳ್ಳಬೇಕಾದ ಅಗತ್ಯ ಇದೆ ಎಂದು ಶೃಂಗೇರಿ ಶಾರದಾ ಪೀಠದ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮಿಗಳು ಹೇಳಿದರು.

    ಅವರು ಇಂದು ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಧಾರ್ಮಿಕ ದತ್ತಿ ಇಲಾಖೆ, ತಾಲ್ಲೂಕು ಆಡಳಿತ ಮುಜುರಾಯಿ ಇಲಾಖೆ ಇವರುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಸಂಕಷ್ಟಹರ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಮತ್ತು ನೂತನ ಗೋಪುರ ಕುಂಭಾಭಿಷೇಕ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

    ಧರ್ಮ ಅತ್ಯಂತ ಉತ್ಕೃಷ್ಟವಾದ ಸೂಕ್ಷ್ಮ ವಿಚಾರ. ಈ ಬಗ್ಗೆ ಆಳವಾದ ಅಧ್ಯಯನ ಮಾಡಿ ತಿಳಿದುಕೊಳ್ಳಬೇಕಾದ ಗಂಭೀರ ವಿಚಾರಕ್ಕೆ ಪ್ರಮಾಣದ ಅವಶ್ಯಕತೆ ಇಲ್ಲ ಎಂದು ತಿಳಿಸಿ ಧರ್ಮದ ಅಂಗವಾಗಿರುವ ಭೂಮಿ ನಾಶವಾದರೆ ಧರ್ಮವೂ ನಾಶವಾಗುತ್ತದೆ. ಇದಕ್ಕೆ ಅವಕಾಶ ನೀಡದಂತೆ ಸರ್ವರೂ ಧರ್ಮರಕ್ಷಣೆಯನ್ನು ಮಾಡುವ ಮೂಲಕ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.

    ಜಿಜ್ಞಾಸೆ, ಪ್ರಮಾಣದ ಬಗ್ಗೆ ಸ್ಪಷ್ಟನೆ ನೀಡಲು ಧರ್ಮಕ್ಕೆ ವೈದಿಕ ಎಂದು ಹೇಳಿದರು. ವೇದಕ್ಕೆ ಪ್ರಮಾಣವಾಗಿರುವ ಧರ್ಮ ಇದಕ್ಕೆ ಆಧಾರ ಎಂಬ ಅರ್ಥ ಇದೆ. ಯಾವುದು ಈ ಜಗತ್ತಿಗೆ ಆಧಾರವಾಗಿದೆಯೋ ಅದನ್ನು ಧರ್ಮ ಎಂದು ಹೇಳುತ್ತೇವೆ ಎಂದರು. ಮಕ್ಕಳಿಗೆ ಉತ್ತಮವಾದ ಸಂಸ್ಕಾರ ನೀಡಿ ಒಳ್ಳೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ. ವಯಸ್ಸಾದ ತಂದೆ-ತಾಯಿಗೆ ಯಾವುದೇ ಕುಂದುಕೊರತೆಗಳಾಗದಂತೆ ಮಕ್ಕಳು ಚೆನ್ನಾಗಿ ನೋಡಿಕೊಳ್ಳುವುದೇ ಆಧಾರ ಎಂದು ವ್ಯಾಖ್ಯಾನಿಸಿದರು.

    ಎಲ್ಲರಿಗಿಂತ ಹೆಚ್ಚಾಗಿ ನನಗೆ ಉತ್ಕೃಷ್ಟವಾದ ಸುಖ ಶಾಶ್ವತವಾಗಿ ಪಡೆಯಬೇಕೆಂಬ ಆಸೆಪಟ್ಟವನು ಮತ್ತು ಕಡಿಮೆ ಸುಖ ಸಿಕ್ಕಿರುವ ವ್ಯಕ್ತಿಯ ಮಧ್ಯೆ ಹೋರಾಟ ನಡೆದು ಲೋಪಗಳನ್ನು ಸರಿಪಡಿಸಿಕೊಂಡು ಸಮಾನ ಸುಖ ಪಡೆಯುವಲ್ಲಿ ಯಶಸ್ವಿಯಾಗುತ್ತಾನೆ ಎಂದರು.

    ಈ ರೀತಿಯ ಬಯಕೆಗೆ ತಕ್ಕ ಫಲ ಸಿಗುತ್ತಿಲ್ಲ, ದುಖಃ ಬೇಡವೆಂದರು ನಿಲ್ಲುತ್ತಿಲ್ಲ. ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡುವ ಅಗತ್ಯ ಇದೆ ಎಂದು ಹೇಳಿದರು.
    ಪ್ರಪಂಚದಲ್ಲಿ ಶಾಶ್ವತ ಸುಖ ಸಿಗಬೇಕಾದರೆ ಧರ್ಮಾಚರಣೆ ಬಹಳ ಮುಖ್ಯ, ಇದಕ್ಕೆ ಧರ್ಮದ ಒಪ್ಪಿಗೆ ಬೇಕು. ಇತ್ತೀಚೆಗೆ ಜನರಲ್ಲಿ ಧರ್ಮದ ಬಗ್ಗೆ ತಿಳಿವಳಿಕೆ ಕಡಿಮೆಯಾಗುತ್ತಿರುವ ಕುರಿತು ವಿಷಾಧ ವ್ಯಕ್ತಪಡಿಸಿದರು.

    ಶಾಸಕ ಹೆಚ್.ಡಿ. ತಮ್ಮಯ್ಯ ಸ್ವಾಗತಿಸಿ ಮಾತನಾಡಿ, ತಾಲ್ಲೂಕು ಕಚೇರಿ ಆವರಣದಲ್ಲಿ ಇಂದು ಪುನರ್ ಪ್ರತಿಷ್ಠಾಪನೆಯಾಗಿರುವ ಗಣಪತಿಯು ಇನ್ನುಮುಂದೆ ಸಂಕಷ್ಟಹರ ಗಣಪತಿಯಾಗಲಿದೆ ಎಂದು ಹೇಳಿದರು. ಹಿಂದೆ ಕಡೂರು ಜಿಲ್ಲೆ ಇದ್ದಾಗ ವಸ್ತಾರೆ ತಾಲ್ಲೂಕು ಆಗಿತ್ತು, ಅಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯನ್ನು ಚಿಕ್ಕಮಗಳೂರು ಜಿಲ್ಲೆ ಘೋಷಣೆಯಾದಾಗ ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿತ್ತು ಎಂದು ವಿವರಿಸಿದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ವಿಶ್ವದಲ್ಲಿ ಇರುವುದೊಂದೇ ಧರ್ಮ ಅದು ಹಿಂದೂ ಧರ್ಮ. ಉಳಿದೆಲ್ಲವು ಮಠ ಮತ್ತು ಪಂಥಗಳು. ಹಿಂದೂ ಧರ್ಮ ಉಳಿದಿರುವುದೇ ಈ ರೀತಿಯ ಮಠಮಾನ್ಯಗಳಿಂದ ಎಂದು ಅಭಿಪ್ರಾಯಿಸಿದರು.

    ಸಮಾರಂಭದಲ್ಲಿ ನಗರಸಭಾಧ್ಯಕ್ಷೆ ಶೀಲಾದಿನೇಶ್, ಉಪಾಧ್ಯಕ್ಷೆ ಲಲಿತಾನಾಯ್ಕ, ಮಾಜಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಡಾ. ಜೆ.ಪಿ ಕೃಷ್ಣೇಗೌಡ, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ ಶಿವಾನಂದಸ್ವಾಮಿ, ತಾತ್ಕಾಲಿಕ ದೇವಸ್ಥಾನ ಸಮಿತಿ ಅಧ್ಯಕ್ಷ ಪೂಜಾರ್ ಮಂಜಪ್ಪ, ಸದಸ್ಯರುಗಳಾದ ಸಿ.ಎಸ್. ಕುಬೇರ, ಕೆ. ಮೋಹನ್‌ಕುಮಾರ್, ತಹಶೀಲ್ದಾರ್ ರೇಷ್ಮಾ ಹಾಗೂ ನಗರಸಭೆ ಸದಸ್ಯರುಗಳು ಉಪಸ್ಥಿತರಿದ್ದರು.

    The ancient Sanatana Dharma is the foundation of the world.