Category: ಜಿಲ್ಲಾ ಸುದ್ದಿ

  • ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್-ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ

    ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್-ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ

    ಶೃಂಗೇರಿ: ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ.

    ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿ  ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ.

    ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ” ಎಂದು ಕಿಡಿಕಾರಿದರು.

    ರವಿಗೆ ಸಾಮಾನ್ಯ ಪರಿಜ್ಞಾನ ಇಲ್ಲ:

    ನಕ್ಸಲರ ಶಸ್ತ್ರಾಸ್ತ್ರ ವಿಚಾರವಾಗಿ ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಯಾರಾದರೂ ಮುಖ್ಯಮಂತ್ರಿಗಳ ಬಳಿ ಬಂದು ಶರಣಾಗುವಾಗ ಯಾರಾದರೂ ಬಂದೂಕು ಹಿಡಿದುಕೊಂಡು ಬರುತ್ತಾರಾ? ರವಿಗೆ ಇಷ್ಟು ಸಾಮಾನ್ಯ ಪ್ರಜ್ಞೆ ಇಲ್ಲವೇ? ವೀರಪ್ಪನ್ ಅವರಿಂದ ರಾಜಕುಮಾರ್ ಅವರನ್ನು ಕರೆ ತಂದಾಗ ಬಂದೂಕು ಸಮೇತ ಕರೆತರಲಾಗಿತ್ತೆ? ಈ ವಿಚಾರವನ್ನು ನಿಭಾಯಿಸಲು ಪೊಲೀಸ್ ಇಲಾಖೆ ಇದೆ. ಅವರು ಕೆಲವು ವಿಚಾರಗಳನ್ನು ಗೌಪ್ಯವಾಗಿತ್ತುಕೊಂಡು ಕರ್ತವ್ಯ ನಿಭಾಯಿಸುತ್ತಿದ್ದಾರೆ.

    ಅವರ ಕರ್ತವ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವಂತಿಲ್ಲ. ರಾಜ್ಯವನ್ನು ನಕ್ಸಲ್ ಮುಕ್ತ ಮಾಡಿರುವುದಕ್ಕೆ ಸಂತೋಷಪಡಬೇಕು. ಆದರೆ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ. ಚುನಾವಣೆಗೆ ಇನ್ನು ಸಮಯವಿದೆ. ಚುನಾವಣೆ ಬಂದಾಗ ರಾಜಕೀಯ ಮಾಡಲಿ. ಈಗ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡಿ, ರಾಜ್ಯ ಹಾಗೂ ದೇಶ ಉಳಿಸುವ ಕೆಲಸ ಮಾಡೋಣ” ಎಂದು ತಿರುಗೇಟು ನೀಡಿದರು.

    C.T. Ravi is a great drama master.

  • ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು

    ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು

    ಶೃಂಗೇರಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

    ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ 50 ವರ್ಷಗಳು ಪೂರೈಸಿರುವ ಶುಭ ಸಂವತ್ಸರದ ಸಂದರ್ಭದಲ್ಲಿ ಶೃಂಗೇರಿಯಲ್ಲಿ ಶನಿವಾರ ಏರ್ಪಡಿಸಿದ್ದ “ಸುವರ್ಣ ಭಾರತೀ ಮಹೋತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿದರು.

    “ನಮ್ಮ ಹಿರಿಯರು, ಮನೆ ಹುಷಾರು, ಮಠ ಹುಷಾರು ಎಂದು ಹೇಳಿದ್ದಾರೆ. ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ನಮ್ಮ ಮಠಗಳನ್ನು ಕಾಪಾಡಿಕೊಳ್ಳಬೇಕು. ಇದು ನಮ್ಮೆಲ್ಲರ ಕರ್ತವ್ಯ. ನೀವು ಇಲ್ಲಿಗೆ ಬಂದು ಹಾಗೇ ಹೋಗಬೇಡಿ. ನೀವು ನೂರು ರೂಪಾಯಿ ಸಂಪಾದನೆ ಮಾಡಿದರೆ, ಒಂದು ರೂಪಾಯಿಯಾದರೂ ಧರ್ಮ ಉಳಿಸುವ ಮಠಕ್ಕೆ ನೀಡಬೇಕು. ಆಗ ಮಾತ್ರ ಮಠ ಉಳಿಯಲು ಸಾಧ್ಯ” ಎಂದು ಕರೆ ನೀಡಿದರು.

    “ಪ್ರವಚನ ಕೇಳಿ ನೆಮ್ಮದಿ ಪಡೆಯಲು ಬಂದಿದ್ದೇನೆ”

    “ಇಲ್ಲಿ ಧರ್ಮ ಕಾಪಾಡುವ ಸಾಗರವೇ ಸೇರಿದೆ. ಇದು ಭಾಗ್ಯ ಇದು ಭಾಗ್ಯ, ಇದು ಭಾಗ್ಯವಯ್ಯ, ಪದುಮನಾಭನ ಪಾದ ಭಜನೆ ಪರಮ ಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ ಇಂತಹ ದೊಡ್ಡ ಭಕ್ತಿ ಸಾಗರದಲ್ಲಿ ವಿಧುಶೇಖರಭಾರತೀ ಮಹಾಸ್ವಾಮೀಜಿಗಳು ನೀಡಿರುವ ಪ್ರವಚನ ಕೇಳಿ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನೆಮ್ಮದಿ ಪಡೆದುಕೊಳ್ಳಲು ನಾನು ಭಾಗವಹಿಸಿರುವುದು ನನ್ನ ಭಾಗ್ಯವಾಗಿದೆ” ಎಂದರು.

    “ಭಾರತೀತೀರ್ಥ ಮಹಾಸ್ವಾಮೀಜಿಗಳು ಸಮಾಜದಲ್ಲಿ ಧರ್ಮವನ್ನು ಉಳಿಸಲು ಸನ್ಯಾಸತ್ವ ಸ್ವೀಕರಿಸಿ 50 ವರ್ಷಗಳು ಪೂರೈಸಿವೆ. ಇವರು ಶಾರದ ಪೀಠದ 36ನೇ ಅಧ್ಯಕ್ಷರಾಗಿ ನಮ್ಮ ಕಣ್ಣಿಗೆ ದೇವರ ರೂಪದಲ್ಲಿ ಕಾಣುತ್ತಿದ್ದಾರೆ. ಅವರಲ್ಲಿ ನಾವು ಶಂಕರಚಾರ್ಯರನ್ನು ಕಾಣುತ್ತಿದ್ದೇವೆ. ವಿಧುಶೇಖರಭಾರತೀ ಸ್ವಾಮೀಜಿಗಳು ದೇಶ ಸುತ್ತಿ ನಮ್ಮ ಧರ್ಮ ಕಾಪಾಡಲು ಮಾರ್ಗದರ್ಶನ ನೀಡುತ್ತಿದ್ದಾರೆ” ಎಂದು ತಿಳಿಸಿದರು.

    “ಇಲ್ಲಿಗೆ ಬಂದಾಗ ನನಗೆ ಶಾಲೆಯಲ್ಲಿ ಕಲಿತ ಶ್ಲೋಕ ನೆನಪಾಯಿತು. ವಿದ್ಯಾ ದದಾತಿ ವಿನಯಂ ವಿನಯಾ ದದಾತಿ ಪಾತ್ರತಾಂ। ಪಾತ್ರತ್ವಂ ಧನಮಾಪ್ನೋತಿ ಧನಧರ್ಮಂ ತತಃ ಸುಖಮ್. ಅಂದರೆ ಮನುಷ್ಯನಿಗೆ ವಿದ್ಯೆ ಇದ್ದರೆ ವಿನಯ ಬರುತ್ತದೆ. ವಿನಯವಿದ್ದರೆ ಯೋಗ್ಯತೆ ಬರುತ್ತದೆ. ಯೋಗ್ಯತೆಯಿಂದ ಹಣ, ಹಣದಿಂದ ಧರ್ಮ, ಧರ್ಮದಿಂದ ಸುಖ ಪಡೆಯುತ್ತೇವೆ. ಅದರಂತೆ ಸುಖ ಪಡೆಯಲು ನಾವು ಇಲ್ಲಿಗೆ ಬಂದಿದ್ದೇವೆ. ನಾವು ನಮ್ಮ ಮನಸ್ಸಿನ ಶಾಂತಿ ಪಡೆಯಲು, ನಮ್ಮ ಕಷ್ಟಗಳ ನಿವಾರಣೆಗೆ ದೇವಾಲಯಕ್ಕೆ ಹೋಗುತ್ತೇವೆ. ಇಂತಹ ಪವಿತ್ರ ಶಾರದ ಪೀಠ ಸನ್ನಿದಿಯಲ್ಲಿ ನಾವೆಲ್ಲರೂ ಸೇರಿರುವುದು ನಮ್ಮ ಭಾಗ್ಯ” ಎಂದರು.

    “ಇಲ್ಲಿ ಶ್ರೀಗಳು ಹೇಳಿಕೊಟ್ಟ ಪಾಠ ಕಲಿತು, ಅವರು ಹೇಳಿದ ಸ್ತೋತ್ರಗಳನ್ನು ಅರ್ಥ ಮಾಡಿಕೊಂಡು ಬದುಕಿನಲ್ಲಿ ಬದಲಾವಣೆ ಮಾಡಿಕೊಳ್ಳಲು ಪ್ರಯತ್ನಿಸಿದ್ದೇವೆ. ನಾನು ಇಲ್ಲಿಗೆ ಬಂದಾಗ ಶ್ರೀಗಳು ಮಾತನಾಡುತ್ತಿದ್ದರು. ಮಾನವ ಧರ್ಮಕ್ಕೆ ಜಯವಾಗಲಿ, ವಿಶ್ವಕ್ಕೆ ಧರ್ಮದಿಂದ ಶಾಂತಿ ಸಿಗಲಿ ಎಂದು ಸಂದೇಶ ಸಾರಿದರು. ನಾನು ಗಂಟೆಗಟ್ಟಲೆ ಧರ್ಮದ ವಿಚಾರವಾಗಿ ಮಾತನಾಡಬಲ್ಲೆ. ನಮ್ಮ ಅನುಷ್ಠಾನ ಮಾಡುವಲ್ಲಿ ಮಠ ಕೆಲಸ ಮಾಡಿಕೊಂಡು ಬಂದಿದೆ” ಎಂದು ಹೇಳಿದರು.

    ಭಾರತೀತೀರ್ಥ ಮಹಾಸ್ವಾಮಿಗಳ ಪವಾಡ ಕಣ್ಣಾರೆ ಕಂಡಿದ್ದೇನೆ

    “ನಾನು ತಿರುಪತಿಗೆ ಹೋಗಿ ಮರಳುವಾಗ ನನ್ನ ಸ್ನೇಹಿತರು ಆದಿಕೇಶವಲು ಎಂಬುವವರ ಮನೆಗೆ ಭಾರತೀ ಶ್ರೀಗಳು ಹೋಗಿ ಅಲ್ಲಿ 2 ದಿನ ತಂಗಿದ್ದರು. ಅಲ್ಲಿ ದೇವಾಲಯದಲ್ಲಿ ಒಂದು ಹೂವಿನ ಹಾರ ಹಾಕಿದ್ದರು. 2 ದಿನಗಳ ನಂತರ ನಾನು ಕುಟುಂಬ ಸಮೇತರಾಗಿ ಹೋದಾಗ ಚಿತ್ತೂರಿನಲ್ಲಿ ಜನಸಾಗರವೇ ಸೇರಿತ್ತು. ಕಾರಣ ಅಲ್ಲಿ ಸ್ವಾಮೀಜಿಗಳು ಹಾಕಿದ್ದ ಹೂವಿನ ಹಾರ ಬೆಳೆಯುತ್ತಿತ್ತು. ಅದನ್ನು ನಾನು ಕಣ್ಣಾರೆ ಕಂಡಿದ್ದೆ. ಭಾರತೀ ಶ್ರೀಗಳ ಆ ಪವಾಡವನ್ನು ನಾನು ಕಣ್ಣಾರೆ ಕಂಡಿದ್ದೆ. ಅಷ್ಟು ದೊಡ್ಡ ಶಕ್ತಿ ಶಾರದ ಪೀಠದಲ್ಲಿದೆ” ಎಂದರು.

    ವಿಧುಶೇಖರಭಾರತೀ ಸ್ವಾಮೀಜಿಗಳ ಪಾಂಡಿತ್ಯಕ್ಕೆ ಶರಣಾಗಿದ್ದೇನೆ

    “ಯಾರ ಮಾತಿಗೂ ನಾವು ಅಂಜುವ ಅಗತ್ಯವಿಲ್ಲ. ನಾವು ಯಾರ ಅಣತಿಯಂತೆ ಇರುವುದು ಬೇಡ. ಯಾರನ್ನೂ ನಂಬಿ ನಾವು ಬದುಕುವುದು ಬೇಡ. ನಮ್ಮ ಜೀವನವನ್ನು ನಾವು ನಂಬೋಣ. ನಮ್ಮ ಧರ್ಮ, ದೇವರಲ್ಲಿ ವಿಶ್ವಾಸವಿಟ್ಟು ಬದುಕಿದಾಗ ಒಳ್ಳೆಯದಾಗುತ್ತದೆ. ಭಾರತೀ ಶ್ರೀಗಳು ಅನೇಕ ಶಿಷ್ಯಕೋಟಿಗಳನ್ನು ಬೆಳೆಸಿದ್ದಾರೆ, ವಿಧುಶೇಖರಭಾರತೀ ಸ್ವಾಮೀಜಿಗಳ ವಯಸ್ಸಿಗೆ ಅವರಲ್ಲಿರುವ ಪಾಂಡಿತ್ಯಕ್ಕೆ ನಾನು ಶರಣಾಗಿದ್ದೇನೆ. ಶ್ರೀಗಳ ಪಾದಗಳಿಗೆ ಸಾಷ್ಟಾಂಗ ನಮಸ್ಕಾರಗಳು. ಮುಂದಿನ ಐವತ್ತು ಅರವತ್ತು ವರ್ಷಗಳ ಕಾಲ ಈ ಮಠವನ್ನು ಇನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಿ, ಧರ್ಮ ಕಾಪಾಡುವ ಕೆಲಸ ಮುಂದುವರಿಯಲಿ. ನಮ್ಮ ಸಂಸ್ಕೃತಿ ಈ ದೇಶದ ಆಸ್ತಿ. ಅದನ್ನು ಕಾಪಾಡುವ ಕೆಲಸ ಮಠದಿಂದ ಆಗಲಿ. ನಾನು ಕೂಡ ಶ್ರೀಗಳ ಭಕ್ತನಾಗಿ ಅವರ ಪಾದಗಳ ಮುಂದೆ ಕೂತಿದ್ದೇನೆ” ಎಂದರು.

    We should protect monasteries like we protect our homes.

  • ವೈಕುಂಠ ಏಕಾದಶಿಗೆ ದೇವಾಲಯಗಲ್ಲಿ ಜನಸಾಗರ

    ವೈಕುಂಠ ಏಕಾದಶಿಗೆ ದೇವಾಲಯಗಲ್ಲಿ ಜನಸಾಗರ

    ಚಿಕ್ಕಮಗಳೂರು: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ಹಿರೇಮಗಳೂರು ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸಾವಿರಾರು ಭಕ್ತರು ಸರತಿಯಲ್ಲಿ ಬಂದು ಉತ್ತರ ದಿಕ್ಕಿನ ಬಾಗಿಲ ಮೂಲಕ ವೈಕುಂಠ ದ್ವಾರವನ್ನು ಹಾದು ರಾಮನದರ್ಶನ ಪಡೆದರು.

    ಸಂಜೆವರೆಗೆ ಭಕ್ತಗಣ ನಿರಂತವಾಗಿ ಹರಿದು ಬರುತ್ತಲೇ ಇತ್ತು. ಕನ್ನಡದಲ್ಲೇ ಪ್ರಾರ್ಥನೆ, ಭಜನೆ ಮಾಡಿ, ಪೂಜೆ, ಪುನಸ್ಕಾರಗಳನ್ನು ನೆರವೇರಿಸಿದರು. ಉತ್ಸವ ಮೂರ್ತಿಗೆ ಪ್ರದಕ್ಷಿಣೆ ಹಾಕಿ, ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ನೇತೃತ್ವದ ತಂಡವು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿತು.

    ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಳಗ್ಗೆ ೫ ಗಂಟೆಗೆ ಶ್ರೀ ಕೋದಂಡರಾಮಚಂದ್ರಸ್ವಾಮಿಗೆ ಸುಪ್ರಭಾತ ಸೇವೆ, ವೇದಪಠಣ, ಅಭಿಷೇಕ, ವಿಶೇಷ ಪೂಜೆ, ಅಲಂಕಾರ ನಡೆಯಿತು. ಮಹಾಮಂಗಳಾರತಿ ನಂತರ ಬೆಳಗ್ಗೆ ೫.೩೦ ಕ್ಕೆ ಗರ್ಭಗುಡಿಯಿಂದ ಉತ್ಸವ ಮೂರ್ತಿಯನ್ನು ಹೊರತಂದು ದೇವಾಲಯದ ಪ್ರಾಂಗಣದಲ್ಲಿ ಮೆರವಣಿಗೆ ಮಾಡಲಾಯಿತು. ವೈಕುಂಠ ದ್ವಾರಕ್ಕೆ ಪೂಜೆ ಸಲ್ಲಿಸಿದ ಬಳಿಕ ವೈಕುಂಠ ದ್ವಾರದ ಮೂಲಕ ಉತ್ಸವ ಮೂರ್ತಿಯನ್ನು ಕೊಂಡೊಯ್ದು ಮೇಲ್ಬಾಗದಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು.

    ವರ್ಷಕ್ಕೊಮ್ಮೆ ಮಾತ್ರ ವೈಕುಂಠದ್ವಾರದ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲ ಗ್ರಾಮ ಹಾಗೂ ರಾಜ್ಯದ ವಿವಿಧ ಭಾಗದಿಂದ ಭಕ್ತರು ಆಗಮಿಸಿದ್ದರು. ಮೈಕೊರೆವ ಮಾಗಿ ಚಳಿಯನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ ಕಾಯುತ್ತಾ ನಿಂತು ವೈಕುಂಠ ದ್ವಾರ ತೆರೆಯುತ್ತಿದ್ದಂತೆ ಉತ್ಸವ ಮೂರ್ತಿಯೊಂದಿಗೆ ದ್ವಾರವನ್ನು ಪ್ರವೇಶಿಸಿದರು.

    ಭಕ್ತರಿಂದ ಭಜನೆ, ಭಗವದ್ಗೀತೆಯ ಪಠಣ, ನಾಮ ಸಂಕೀರ್ತನೆ ಜರುಗಿತು. ಸಹಸ್ರಾರು ಭಕ್ತರು ರಾಮನಾಮ ಲಿಪಿ ಬರೆದು ರಾಮನಾಮ ಲಿಪಿ ಮಂಟಪಕ್ಕೆ ಸಮರ್ಪಿಸಿದರು. ದೇವಾಲಯದ ವತಿಯಿಂದ ಭಕ್ತರಿಗೆ ಪೊಂಗಲ್ ಪ್ರಸಾದ ವಿತರಿಸಲಾಯಿತು. ಬೆಳಗಿನಿಂದ ರಾತ್ರಿಯವರೆಗೆ ನಗರ ಮತ್ತು ಸುತ್ತಮುತ್ತಲ ಗ್ರಾಮಗಳ ಭಕ್ತರು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ವೈಕುಂಠ ದ್ವಾರವನ್ನು ಪ್ರವೇಶಿಸಿ ಸಂಭ್ರಮಿಸಿದರು.

    Crowds throng temples on Vaikuntha Ekadashi

  • ಸಾಂಪ್ರದಾಯಿಕ ಕೈಗಾರಿಕೆಗಳ ಪುನರುತ್ಪಾದನೆ ಯೋಜನೆಗೆ ನಿಧಿ ಬಿಡುಗಡೆ ಮಾಡಲು ಪ್ರಸ್ತಾವನೆ

    ಸಾಂಪ್ರದಾಯಿಕ ಕೈಗಾರಿಕೆಗಳ ಪುನರುತ್ಪಾದನೆ ಯೋಜನೆಗೆ ನಿಧಿ ಬಿಡುಗಡೆ ಮಾಡಲು ಪ್ರಸ್ತಾವನೆ

    ಚಿಕ್ಕಮಗಳೂರು:  ರಾಜ್ಯದಲ್ಲಿ ಕಾಳು ಮೆಣಸು, ಕಾಫಿ ಅಡಿಕೆ, ಇವುಗಳ ಸಂಸ್ಕರಣೆಗಾಗಿ ಚಿಕ್ಕಮಗಳೂರಿನಲ್ಲಿಯೇ ಸಂಸ್ಕರಣೆ ಘಟಕವನ್ನು ಸ್ಥಾಪಿಸಲು ಕೇಂದ್ರ ಸರ್ಕಾಕರಕ್ಕೆ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉಡುಪಿ ಚಿಕ್ಕಮಗಳೂರು  ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
    ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ  ಇಂದು  ನಡೆದ  ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕಾರ್ಯಕ್ರಮದ ಸಾಂಪ್ರದಾಯಿಕ ಕೈಗಾರಿಕೆಗಳ ಪುನರುತ್ಪಾದನೆಗಾಗಿ  ನಿಧಿಯ ಯೋಜನೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಕೆಂದ್ರ ಸರ್ಕಾರದಿಂದ  ಶೇಕಡಾ ೯೦% ಅನುದಾನ  ಪಡೆದು ಉಳಿದ ಶೇಕಾಡ ೧೦%  ಅನುದಾನವನ್ನು  ಫಲಾನುಭವಿಗಳು ಭರಿಸಿ ಒಟ್ಟು ೨.೫೦ ಕೋಟಿಯಿಂದ ೫ ಕೋಟಿಯ ಯೋಜನೆ ಇದಾಗಿದೆ. ಇನ್ನು ಈ ಯೋಜನೆಯಡಿ ಕಾಳು ಮೆಣಸು, ತೆಂಗು, ಕಾಫಿ,  ಅಡಿಕೆ, ಖಾದಿ ಕೈಗಾರಿಕೆ, ಗ್ರಾಮ ಕೈಗಾರಿಕೆ, ಕಾಯರ್ ಇಂಡಸ್ಟ್ರೀಸ್ , ಇಂತಹ ಸಂಪ್ರದಾಯಿಕ ಕೈಗಾರಿಕೆಗಳು ಈ ಯೋಜನೆಯ ವ್ಯಾಪ್ತಿಗೆ ಬರುತ್ತವೆ ಎಂದ ಅವರು ಈ ಯೋಜನೆಯ ಮೂಲ ಉದ್ದೇಶ ಸಾಂಪ್ರದಾಯಿಕ ಕೈಗಾರಿಕೆ ಮತ್ತು ಕುಶಲಕರ್ಮಿಗಳನ್ನು ಸಾಮೂಹಿಕವಾಗಿ ಸಂಘಟಿಸಲು ಅವರನ್ನು ಸ್ಪರ್ಧಾತ್ವಕವಾಗಿಸಲು ಹಾಗೂ ಅವರ ಧೀರ್ಘಾವಧಿಯ ಸುಸ್ಥಿರತೆ ಹಾಗೂ ಪ್ರಮಾಣ ಆರ್ಥಿಕತೆಗೆ ಬೆಂಬಲವನ್ನು ಒದಗಿಸುವುದು.
    ಸಾಂಪ್ರಾದಾಯಿಕ ಉದ್ಯಮದ ಕುಶಲಕರ್ಮಿಗಳು ಮತ್ತು ಉತ್ಪಾದಕರಿಗೆ ನಿರಂತರ ಉದ್ಯೋಗವನ್ನು ಒದಗಿಸುವುದಲ್ಲದೇ ಹೊಸ ಉತ್ಪನ್ನಗಳಿಗೆ ಬೆಂಬಲ ನೀಡುವುದು. ಸುಧಾರಿತ ಪ್ಯಾಕೇಜಿಂಗ್ ಮತ್ತು ಮಾರ್ಕೆಟಿಂಗ್ ಮೂಲಸೌಕರ್ಯವನ್ನು ಸುಧಾರಿಸುವ ಮೂಲಕ ಅಂತಹ ಕ್ಲಷ್ಟರ್‌ಗಳ ಸಾಮೂಹಿಕ ಉತ್ಪನ್ನಗಳ ಮಾರುಕಟ್ಟೆ ಸಾಮರ್ಥ್ಯವನ್ನು ಹೆಚ್ಚಿಸುವುದು ಈ ಯೋಜನೆ ಒಳಗೊಂಡಿದೆ ಎಂದು ಹೇಳಿದರು.
    ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತ, ಉಪನಿರ್ದೇಶಕ ವೆಂಕಟೇಶ್ ಚೌಹಾಣ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
    Traditional Industries Regeneration Project
  • ಎ.ಎನ್ ಮಹೇಶ್ ಗೆ ಪ್ರೈಡ್ ಆಫ್ ಕರ್ನಾಟಕ ವಾರ್ಷಿಕ ಪ್ರಶಸ್ತಿ

    ಎ.ಎನ್ ಮಹೇಶ್ ಗೆ ಪ್ರೈಡ್ ಆಫ್ ಕರ್ನಾಟಕ ವಾರ್ಷಿಕ ಪ್ರಶಸ್ತಿ

    ಚಿಕ್ಕಮಗಳೂರು: ಬೆಂಗಳೂರಿನ ಪ್ರೆಸ್ ಕ್ಲಭ್ ಆಫ್ ಬೆಂಗಳೂರು ಸಂಸ್ಥೆ ಕೊಡಮಾಡುವ ಪ್ರತಿಷ್ಟಿತ ಪ್ರೈಡ್ ಆಫ್ ಕರ್ನಾಟಕ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಪರಿಸರ ಮೌಲ್ಯಮಾಪನ ತಜ್ಞರ ಸಮಿತಿಯ ಅಧ್ಯಕ್ಷರಾಗಿರುವ ಎ.ಎನ್ ಮಹೇಶ್ ಆಯ್ಕೆಯಾಗಿದ್ದಾರೆ.

    ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆಯಾದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ದೇಶದ ಅತ್ಯುನ್ನತ ಪ್ರತಿಷ್ಠಿತ ಕ್ಲಬ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ೫೫ ವರ್ಷಗಳ ಇತಿಹಾಸವಿರುವ ಬೆಂಗಳೂರು ಪ್ರೆಸ್‌ಕ್ಲಬ್ ಪ್ರತಿವರ್ಷ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದ್ದು,ಈಬಾರಿ ಎ.ಎನ್ ಮಹೇಶ್‌ರವರನ್ನು ಆಯ್ಕೆಮಾಡಿದೆ.

    ಜ.ರಂದು ೧೧ ರ ಶನಿವಾರದಂದು ಸಂಜೆ ೫.೩೦ ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ನಡೆಯುವ ವರ್ಣರಂಜಿತ ಹಾಗೂ ಸುಂದರ ಸಮಾರಂಭದಲ್ಲಿ ಸರ್ಕಾರದ ಆನೇಕ ಸಚಿವರು ಹಾಗೂ ಅತಿಥಿ ಗಣ್ಯರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಿ ಅಭಿನಂದಿಸಲಿದ್ದಾರೆ.

    ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಭಾರತರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿತ ಡಾ.ಸಿ.ಎನ್.ಆರ್ ರಾವ್, ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಲೋಕಾಯುಕ್ತ ಎನ್. ವೆಂಕಟಾಚಲಯ್ಯ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್, ಪದ್ಮಶ್ರೀ ಪುರಸ್ಕೃತ ಡಾ. ಸಿ.ಎನ್. ಮಂಜುನಾಥ್, ಅಂತರರಾಷ್ಟ್ರೀಯ ಕ್ರಿಕೆಟ್ ಪಟು ಅನಿಲ್ ಕುಂಬ್ಳೆ, ಔಟ್‌ಲುಕ್ ಪತ್ರಿಕೆಯ ಸಂಪಾದಕ ಕೃಷ್ಣ ಪ್ರಸಾದ್, ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತೆ ಕುಮಾರಿ ಅಶ್ವಿನಿ ಅಕ್ಕುಂಜೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರ, ಸಾಮಾಜಿಕ ಹೋರಾಟಗಾರ, ಪರಿಸರವಾದಿ, ಸಮಾಜ ಪರಿವರ್ತನ ಸಮುದಾಯ ಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್. ಹಿರೇಮಠ, ಇಸ್ರೋ ಅಧ್ಯಕ್ಷ ಡಾ.ಕೆ. ರಾಧಾಕೃಷ್ಣನ್, ೨೦೧೭ರ ಶತಮಾನದ ಶ್ರೀಗಳು ಕಾಯಕಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ, ಇನ್ಫೋಸಿಸ್ ಪ್ರತಿಷ್ಠಾನ ಅಧ್ಯಕ್ಷರಾದ ಶ್ರೀಮತಿ ಸುಧಾಮೂರ್ತಿ, ವಿಪ್ರೊ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅಜೀಂ ಪ್ರೇಮ್‌ಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೆಂದ್ರ ಹೆಗ್ಗಡೆ, ಸೇರಿದಂತೆ ಅನೇಕ ಗಣ್ಯಾತಿಗಣ್ಯರಿಗೆ ಸಾಧಕರಿಗೆ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದೆ.

    A.N.Mahesh receives Pride of Karnataka Annual Award

  • ದಾಸ ಸಾಹಿತ್ಯ ಪರಿಷತ್ತಿನ ಲಾಂಛನ, ಆಹ್ವಾನ ಪತ್ರಿಕೆ ಬಿಡುಗಡೆ

    ದಾಸ ಸಾಹಿತ್ಯ ಪರಿಷತ್ತಿನ ಲಾಂಛನ, ಆಹ್ವಾನ ಪತ್ರಿಕೆ ಬಿಡುಗಡೆ

    ಚಿಕ್ಕಮಗಳೂರು: – ಜಿಲ್ಲಾ ದಾಸ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾ ಘಟಕದ ಪದಗ್ರಹ ಣ ಸಮಾರಂಭದ ಆಹ್ವಾನ ಪತ್ರಿಕೆ ಹಾಗೂ ಲಾಂಛನವನ್ನು ಹಿರೇಮಗಳೂರಿನಲ್ಲಿ ಕನ್ನಡಪೂಜಾರಿ ಕಣ್ಣನ್ ಗುರುವಾರ ಸಂಜೆ ನಿವಾಸದಲ್ಲಿ ಬಿಡುಗಡೆ ಮಾಡಿದರು.

    ಬಳಿಕ ಮಾತನಾಡಿದ ಕಣ್ಣನ್ ದಾಸ ಸಾಹಿತ್ಯ ವೈಚಾರಿಕ ನೆಲೆಯಲ್ಲಿ ಬಂದಿರುವುದರಿಂದ ಶಾಶ್ವತವಾಗಿ ಉಳಿದಿದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನ ಹಾಗೂ ಪರಿಸರ ಎಲ್ಲವೂ ಒಳಗೊಂಡಂತೆ ಮನುಕುಲದ ಹಿತ ಸಹಿ ತವಾದ ವೈಚಾರಿಕೆಯ ಚಿಲುಮೆಯೇ ದಾಸ ಸಾಹಿತ್ಯ. ಅಚ್ಚಕನ್ನಡದಲ್ಲಿ ನಿತ್ಯ ನೆಲೆಯುವ, ಮಡಿವಂತಿಕೆಯಿ ಲ್ಲದೇ ನುಡಿವಂತಿಕೆಯಾಗಬೇಕು ಎಂದರು.

    ಪ್ರತಿ ಕುಟುಂಬದಲ್ಲಿ ಚಿಕ್ಕಮಕ್ಕಳು, ವೃದ್ದರು ದಿನಗೊಂದ ದಾಸ ಸಾಹಿತ್ಯ, ವಚನಗಳು ಪಠಿಸುವಂತಾ ಗಬೇಕು. ದಾಸ ಸಂಸ್ಕೃತಿ, ಪರಂಪರೆ ಪಸರಿಸುವ ಕೆಲಸ ಮಾಡಬೇಕು. ಅಲ್ಲದೇ ಮುಂದಿನ ಪೀಳಿಗೆಗೆ ದಾಸ ಸಾಹಿತ್ಯ ಪರಿಮಳವನ್ನು ಎಲ್ಲೆಡೆ ಹಬ್ಬಿಸುವಂತೆ ಮಾಡಿದರೆ ಪೂರ್ವಿಕರು ಕಟ್ಟುಬೆಳೆಸಿದ ಪರಂಪರೆ ಶಾಶ್ವತ ವಾಗಿ ಮನಸ್ಸಿನಲ್ಲಿ ನೆಲೆಯೂರಲು ಸಾಧ್ಯ ಎಂದರು.

    ಮಾನವನರ ಅಜ್ಞಾನ, ಅಂಧಕಾರ ಅಳಿಸಿ, ದೇಹ, ಮನಸ್ಸು ಆತ್ಮಗಳಲ್ಲಿ ಕೆಟ್ಟ ಭಾವನೆಗಳನ್ನು ಹೋಗ ಲಾಡಿಸಿ, ಲೋಕದ ಅಂಕುಡೊಂಕುಗಳನ್ನು ತಿದ್ದಿ, ವರ್ಗಬೇಧ ರಹಿತದ ಹೊಸ ಸಮಾಜವನ್ನು ಕಟ್ಟಲು ಹಿರಿ ದಾಸರು ವೈಚಾರಿಕೆ ಹೊನಲು ಹರಿಸಿದ್ದು ದಾಸರ ಸಮಗ್ರ ಚಿಂತನೆಗಳ ಸಾರವನ್ನು ದಾಸ ಸಾಹಿತ್ಯದಲ್ಲಿ ವೈಚಾರಿತೆ ಗ್ರಂಥದಲ್ಲಿ ಹುದುಗಿದೆ ಎಂದರು.

    ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ಜನ ಸಾಮಾನ್ಯರನ್ನು ಉನ್ನತ ಜೀವನದತ್ತ ಪ್ರೇರೇಪಿಸಿ, ಜಾತಿ, ಮತ , ಪಂಥಗಳನ್ನು ಮೀರಿ ಲೋಕದ ಮಧ್ಯನಿಂತು ಮೌನವೀಯ ಮೌಲ್ಯಗಳನ್ನು ಹರಿ ದಾಸರು ನೀಡಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಟೇಶ್, ಜಿಲ್ಲಾ ದಾಸ ಸಾಹಿ ತ್ಯ ಪರಿಷತ್ತಿನ ಅಧ್ಯಕ್ಷ ಹಿರೇನಲ್ಲೂರು ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷೆ ಮಹಾಲಕ್ಷ್ಮೀ, ಕಸಾಪ ಮಹಿಳಾ ಅಧ್ಯಕ್ಷೆ ವಿಜಯಲಕ್ಷ್ಮೀ, ಉಪನ್ಯಾಸಕಿ ರೂಪನಾಯ್ಕ್ ಹಾಜರಿದ್ದರು.

    Dasa Sahitya Parishad logo invitation letter released

     

  • ಮಾನಸಿಕ-ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ

    ಮಾನಸಿಕ-ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ

    ಚಿಕ್ಕಮಗಳೂರು: ಸರ್ಕಾರಿ ಕರ್ತವ್ಯದ ಒತ್ತಡಗಳನ್ನು ಮರೆತು ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್ ಮೀನಾನಾಗರಾಜ್ ಕ್ರೀಡಾಪಟುಗಳಿಗೆ ತಿಳಿಸಿದರು.
    ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಪಂಚಾಯಿತಿ ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ೨೦೨೪-೨೫ ನ್ನು ಉದ್ಘಾಟಿಸಿ ಮಾತನಾಡಿದರು.
    ಇಂದು ನಡೆಯುತ್ತಿರುವ ಕ್ರೀಡಾಕೂಟದಲ್ಲಿ ತುಂಬಾ ಉತ್ಸಾಹದಿಂದ ಭಾಗವಹಿಸಿರುವ ಕ್ರೀಡಾಪಟುಗಳು ವರ್ಷವಿಡೀ ಇಲಾಖೆಗಳಲ್ಲಿ ನಡೆಯುವ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕರೆನೀಡಿದ ಅವರು ಎರಡುದಿನ ಒಟ್ಟಾಗಿ ಸೇರಿ ಕ್ರೀಡಾಕೂಟದಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಎಂದು ಶುಭ ಹಾರೈಸಿದರು.
    ಕಳೆದ ಬಾರಿ ಆರ್‌ಡಿಬಿಆರ್ ಕ್ರೀಡಾಕೂಟ ಅತ್ಯಂತ ಅದ್ದೂರಿಯಾಗಿ ನಡೆದಿತ್ತು, ಈ ಬಾರಿ ಅದಕ್ಕಿಂತ ಹೆಚ್ಚು ಉತ್ಸಾಹದಿಂದ ಭಾಗವಹಿಸಿದ್ದೀರಿ, ಸರ್ಕಾರಿ ಸೇವೆಯಲ್ಲಿ ಇರುವವರು ಇಷ್ಟು ದೊಡ್ಡ ಮಟ್ಟದಲ್ಲಿ ಕ್ರೀಡಾಪಟುಗಳು ಇದ್ದಾರೆಂದು ಭಾವಿಸಿರಲಿಲ್ಲ ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್ ಕೀರ್ತನ ಮಾತನಾಡಿ, ಕಳೆದ ವರ್ಷ ಸಿಇಓ ಗೋಪಾಲಕೃಷ್ಣ ಅವರು ಹಾಕಿಕೊಟ್ಟ ಈ ಕ್ರೀಡಾಕೂಟ ಇಂದು ಅವರ ಮಾರ್ಗದರ್ಶನದಲ್ಲಿ ಸಾಗುತ್ತಿದ್ದೇವೆ. ಇದರ ಯಶಸ್ವಿಗೆ ಶಕ್ತಿಮೀರಿ ಶ್ರಮಿಸಬೇಕೆಂದು ಹೇಳಿದರು.
    ಸರ್ಕಾರಿ ಕೆಲಸಕಾರ್ಯಗಳ ಒತ್ತಡವನ್ನು ಮರೆತು ತುಂಬಾ ಸಂತೋಷದಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿಸಿ ಎಂದು ಶುಭ ಹಾರೈಸಿದರು. ಕ್ರೀಡಾಕೂಟವನ್ನು ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಮಾತನಾಡಿ, ಕ್ರೀಡಾಕೂಟಗಳು ಒಂದು ತಂಡದ ಕ್ರಿಯಾಶೀಲ ಚಟುವಟಿಕೆಗೆ ಪೂರಕವಾಗಿದ್ದು, ಈ ಸಂದರ್ಭದಲ್ಲಿ ಮಕ್ಕಳ ಮನಸ್ಸಿನ ರೀತಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಕಿವಿಮಾತು ಹೇಳಿದರು.
    ಕ್ರೀಡೆಯಲ್ಲಿ ಮಾತ್ರ ಆಸಕ್ತಿಯಿಂದ ಸ್ಪರ್ಧೆ ಮಾಡಬೇಕು, ಬೇರೆಯವರ ಬಗ್ಗೆ ಗಮನಹರಿಸದೆ ಎಲ್ಲರೂ ಸೇರಿ ಒಟ್ಟಿಗೆ ಕೆಲಸ ಮಾಡಲು ತಂಡ ಬೇಕು. ಅದಕ್ಕಾಗಿ ಈ ಕ್ರೀಡಾಕೂಟವನ್ನು ಆಯೋಜಿಸಿದ್ದಾರೆ ಎಂದರು.
    ಇದೇ ಸ್ಪೂರ್ತಿಯಿಂದ ಆಟ ಆಡಿ ಜಿಲ್ಲೆ, ತಾಲ್ಲೂಕು, ಹೋಬಳಿಗಳಿಗೆ ಹೆಸರು ಕೀರ್ತಿ ತನ್ನಿ ಎಂದು ಆಶಿಸುತ್ತ ಶುಭ ಹಾರೈಸಿದರು.
    ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಕೃಷ್ಣನಾಯಕ್.ಹೆಚ್, ಉಪ ಕಾರ್ಯದರ್ಶಿ(ಆಡಳಿತ) ಕೋರವರ್ ಎಸ್.ಜಿ, ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್ ಟಿ.ಆರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್.ಎನ್, ಯೋಜನಾ ನಿರ್ದೇಶಕರಾದ ನಯನ ಮತ್ತಿತರರು ಉಪಸ್ಥಿತರಿದ್ದರು.
    ಮೊದಲಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಯೋಗೀಶ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
    Rural Development and Panchayat Raj Sports Meet
  • ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಕೋಟೆ ರಂಗನಾಥ್ ಅವಿರೋಧ ಆಯ್ಕೆ

    ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಕೋಟೆ ರಂಗನಾಥ್ ಅವಿರೋಧ ಆಯ್ಕೆ

    ಚಿಕ್ಕಮಗಳೂರು-ನಗರದ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಕೋಟೆ ರಂಗನಾಥ್ ಮೂರನೇ ಬಾರಿಗೆ ಹಾಗೂ ಉಪಾಧ್ಯಕ್ಷರಾಗಿ ವಾಜುವಳ್ಳಿ ರಮೇಶ್ ಮುಂದಿನ ಐದು ವರ್ಷಗಳ ಅವಧಿಗೆ ಅವಿರೋಧ ಆಯ್ಕೆಯಾಗಿದ್ದಾರೆ.

    .೨೯ ರಿಂದ ನಡೆದ ಚುನಾವಣೆಯಲ್ಲಿ ನಿರ್ದೇಶಕರುಗಳಾಗಿ ೧೫ ಜನ ಅವಿರೋಧ ಆಯ್ಕೆಯಾಗಿದ್ದು, ಇಂದು ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದು ಅಧ್ಯಕ್ಷರಾಗಿ ಕೋಟೆ ರಂಗನಾಥ್, ಉಪಾಧ್ಯಕ್ಷರಾಗಿ ವಾಜುವಳ್ಳಿ ರಮೇಶ್ ಆಯ್ಕೆಯಾಗಿದ್ದಾರೆಂದು ಸಹಕಾರ ಇಲಾಖೆಯ ಸಹಾಯಕ ಉಪ ನಿಬಂಧಕರಾದ ಚುನಾವಣಾಧಿಕಾರಿ ತ್ರಿವೇಣಿ ಅವರು ಘೋಷಿಸಿದರು.

    ಬಿಜೆಪಿ ಮುಖಂಡ ಈಶ್ವರಹಳ್ಳಿ ಮಹೇಶ್ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಬ್ಯಾಂಕನ್ನು ಕಳೆದ ಸಾಲಿನಲ್ಲಿ ಇಡೀ ರಾಜ್ಯದಲ್ಲೇ ಅಭಿವೃದ್ಧಿಪಡಿಸಿ ಶೇ.೩ ರ ಬಡ್ಡಿ ದರದಲ್ಲಿ ೧೦ ಕೋಟಿಗೂ ಹೆಚ್ಚು ರೈತರಿಗೆ ಅಗತ್ಯ ಸಾಲಸೌಲಭ್ಯ ನೀಡಲಾಗಿದೆ ಎಂದರು.

    ೨೦೨೪-೨೫ನೇ ಸಾಲಿನ ಪ್ರಸಕ್ತ ಅವಧಿಯಲ್ಲಿ ರಾಜ್ಯ ಬ್ಯಾಂಕಿನಿಂದ ಹಣವನ್ನು ಪಡೆದು ತಾಲ್ಲೂಕಿನ ರೈತರಿಗೆ ಹೆಚ್ಚಿನ ಕೃಷಿ ಸಾಲ ವಿತರಿಸಲು ಮುಂದಾಗಬೇಕೆಂದು ಸಲಹೆ ನೀಡಿದ ಅವರು, ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.

    ನೂತನ ಅಧ್ಯಕ್ಷ ಕೋಟೆ ರಂಗನಾಥ್ ಮಾತನಾಡಿ, ಬ್ಯಾಂಕಿನ ಹಿಂದಿನ ಪದಾಧಿಕಾರಿಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗುತ್ತಿದ್ದೇವೆ. ರೈತರ ಸಂಕಷ್ಟಗಳಿಗೆ ನೆರವಾಗಿ ಅವರ ಅಡಿಕೆ, ಕಾಫಿ, ತೆಂಗಿನ ತೋಟ ಬರಗಾಲದಿಂದ ಒಣಗಿ ಹೋದ ಸಂದರ್ಭದಲ್ಲಿ ರೈತರಿಗೆ ತೊಂದರೆ ನೀಡದೆ ಸಾಲ ವಸೂಲಿಗೆ ಮುಂದಾಗದಂತೆ ಅಧಿಕಾರಿ ಸಿಬ್ಬಂದಿಗಳನ್ನು ತಡೆಯಲಾಗಿತ್ತು ಎಂದು ಹೇಳಿದರು.

    ಈ ಅವಧಿಯಲ್ಲಿ ಸುಮಾರು ೫ ಕೋಟಿ ರೂ ಸಾಲ ವಿತರಿಸಲು ಗುರಿಹೊಂದಲಾಗಿದೆ. ರಾಜ್ಯದ ೧೭೨ ಬ್ಯಾಂಕ್‌ಗಳಲ್ಲಿ ಚಿಕ್ಕಮಗಳೂರಿನ ಬ್ಯಾಂಕ್ ಮೊದಲ ಸ್ಥಾನದಲ್ಲಿದೆ. ಇದಕ್ಕೆ ಕಾರಣರಾದ ರೈತರು, ಶ್ರಮಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಅವರು ತಮ್ಮ ಮೂರನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಲ್ಲಿ ಬಿಜೆಪಿ ಪಕ್ಷದ ಮುಖಂಡರು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಯವರಿಗೆ ಕೃತಜ್ಞತೆ ಸಲ್ಲಿಸಿದರು.

    ಉಪಾಧ್ಯಕ್ಷ ವಾಜುವಳ್ಳಿ ರಮೇಶ್ ಮಾತನಾಡಿ, ನನ್ನನ್ನು ಆಯ್ಕೆ ಮಾಡಿರುವ ನಿರ್ದೇಶಕರು, ಪಕ್ಷದ ಮುಖಂಡರು ಹಾಗೂ ಮತದಾರರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

    ನೂತನ ಸಾಲಿಗೆ ನಿರ್ದೇಶಕರುಗಳಾಗಿ ದಾನಿಹಳ್ಳಿ ಮಂಜುನಾಥ್, ಮಹೇಶ್ ಈ.ಆರ್, ರವೀಶ್. ಎ.ಎನ್, ಸತೀಶ್‌ಗೌಡ ಕೆ.ಪಿ, ಸುನಿಲ್ ಎಂ.ಟಿ, ರಾಜು ಎಂ.ಈ, ಗೌರಮ್ಮ, ಶಶಿ ಚಂದ್ರೇಗೌಡ, ದಿನೇಶ್ ಟಿ.ಈ, ಹೇಮಾವತಿ, ದಿನೇಶ್ ಎ.ಎಲ್, ಈಶ್ವರಪ್ಪ ಎಲ್.ಆರ್, ರಮೇಶ್ ವಿ.ಎನ್, ಸರ್ಕಾರದ ನಾಮಿನಿ ಸದಸ್ಯ ಚಂದ್ರಶೇಖರ್ ಜೆ.ವೈ ಇವರುಗಳು ಆಯ್ಕೆಯಾಗಿದ್ದಾರೆ.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್‌ಶೆಟ್ಟಿ, ಎಂ.ಎಸ್ ನಿರಂಜನ್, ಚಂದ್ರೇಗೌಡ, ಕೆ.ಪಿ ವೆಂಕಟೇಶ್, ಪರಮೇಶ್, ಪ್ರಭು ಹಾಗೂ ಬ್ಯಾಂಕಿನ ವ್ಯವಸ್ಥಾಪಕರಾದ ಎಂ.ಕೆ ಗೀತಾ ಉಪಸ್ಥಿತದ್ದರು.

    Kote Ranganath elected unopposed as PLD Bank Chairman

  • ಕಾಡುಕೋಣ ದಾಳಿಯಿಂದ ಕಾರ್ಮಿಕ ಮಹಿಳೆ ಸಾವು

    ಕಾಡುಕೋಣ ದಾಳಿಯಿಂದ ಕಾರ್ಮಿಕ ಮಹಿಳೆ ಸಾವು

    ಚಿಕ್ಕಮಗಳೂರು: ಕಾಫಿ ಕೊಯ್ದು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮೂಡಿಗೆರೆ ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳೆಗ್ಗೆ ಘಟನೆ ನಡೆದಿದೆ.

    ಇಲ್ಲಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್‌ರವರ ಶಾರದಾಂಭ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಬಸೂರಿ ಬೀಬಿ (೪೨ ವರ್ಷ) ಸಾವನ್ನಪ್ಪಿರುವ ದುರ್ದೈವಿ.

    ಇಂದು ಬೆಳಿಗ್ಗೆ ಅಸ್ಸಾಂ ಮೂಲದ ಕಾರ್ಮಿಕರು ರಮೇಶ್ ಅವರ ತೋಟದಲ್ಲಿ ಕಾಫಿ ಕೊಯ್ದು ಮಾಡುವುದರಲ್ಲಿ ನಿರತರಾಗಿದ್ದರು. ಸುಮಾರು ೧೧ ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ವಿವಾಹಿತ ಮಹಿಳಾ ಕಾರ್ಮಿಕರೊಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಕಾಡುಕೋಣ ಮಹಿಳೆಯ ಹೊಟ್ಟೆ ಮತ್ತು ಎದೆಯ ಭಾಗದಕ್ಕೆ ತಮ್ಮ ಕೊಂಬಿನಿಂದ ತಿವಿದಿದ್ದು, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

    ಮಹಿಳೆಯ ಸಾವಿನಿಂದ ಅವರ ಜೊತೆಯಲ್ಲಿದ್ದ ಕುಟುಂಬದವರು ಮತ್ತು ಸಂಬಂಧಿಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಮಲೆನಾಡು ಭಾಗದಲ್ಲಿ ಕಾಡುಕೋಣಗಳು ವಿಪರೀತ ಸಂಖ್ಯೆಯಲ್ಲಿದ್ದು, ನಿರಂತರವಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಕಾಫಿ ತೋಟಗಳಲ್ಲಿ ಗಿಡಗಳನ್ನು ಕಿತ್ತು ಹಾಕುವುದಲ್ಲದೇ, ಈ ರೀತಿಯ ಜೀವ ಹಾನಿಗೂ ಕಾರಣವಾಗುತ್ತಿವೆ. ಕಾಡುಕೋಣಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿದ್ದಾರೆ.

    Woman worker dies in wild buffalo attack

  • ಕಡೂರು ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಕಡೂರು ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಚಿಕ್ಕಮಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

    ಡಾ.ಉಮೇಶ್ ೧೯೯೫ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ನೇಮಕವಾಗಿದ್ದು, ೨೦೨೩ ರಿಂದ ಕಡೂರು ತಾಲೂಕು ವೈದ್ಯಾಧಿ ಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಇವರು ೨೦೨೦ ರಿಂದ ೨೦೨೩ ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ೧೯೯೫ ರಿಂದ ಸೇವೆಗೆ ಸೇರಿದಲ್ಲಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪ ಯೋಗ ಮಾಡಿಕೊಂಡು ಕಾನೂನು ಬದ್ದ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಚಿರಾಸ್ಥಿ ಹಾಗೂ ಚರಾಸ್ಥಿ ಸಂಪಾದನೆ ಮಾಡಿದ್ದಾರೆ ಆರೋಪವಿದೆ.

    ಪತ್ನಿ ಟಿ.ಎಸ್.ಮಂಜುಳ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿ ಮಾಡಿದ್ದಾರೆ. ಇಬ್ಬರು ಮಕ್ಕಳು ರಾಯಚೂರು ಮತ್ತು ದಾವಣಗೆರೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Lokayukta raids Kadur Taluk Medical Officer’s house