Category: ಚಿಕ್ಕಮಗಳೂರು

  • ಶಿರವಾಸೆ ಮುಳ್ಳೇಗೌಡರು ಮಾದರಿ ಗ್ರಾಮಕ್ಕೆ ನಾಂದಿ

    ಶಿರವಾಸೆ ಮುಳ್ಳೇಗೌಡರು ಮಾದರಿ ಗ್ರಾಮಕ್ಕೆ ನಾಂದಿ

    ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕು ಇವುಗಳಿಗೆ ಆದ್ಯತೆಯನ್ನು ಕೊಡುವ ಸರ್ಕಾರ ಮತ್ತು ಜನಪ್ರತಿನಿಧಿ ನೆರವೇರಿಸಿದಾಗ ಮಾತ್ರ ಅಂತವರು ಜನಮಾನಸದಲ್ಲಿ ಉಳಿಯುತ್ತಾರೆಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು.

    ಅವರು ಇಂದು ಶಿರವಾಸೆ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ, ಸಂಸ್ಥಾಪಕರ ದಿನಾಚರಣೆ ಶಿವೈಕ್ಯ ಎಸ್.ಬಿ. ಮುಳ್ಳೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಲೆಯ ನೂತನ ಬಸ್ಸನ್ನು ಉದ್ಘಾಟಿಸಿ ಮಾತನಾಡಿ ಇತಿಹಾಸ ಇರುವ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆ ಇಂದು ಮಾದರಿಯಾಗಿದೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ತಾವು ಕನ್ನಡಪರ ಹೋರಾಟಗಳಲ್ಲಿಯೂ ಭಾಗವಹಿಸಿದ್ದ ಪರಿಣಾಮ ಸಾರ್ವಜನಿಕ ಬದುಕಿನಲ್ಲಿ ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದರು.

    ಶಿರವಾಸೆ ಮುಳ್ಳೇಗೌಡರು ಶಿರವಾಸೆಯನ್ನು ಮಾದರಿ ಗ್ರಾಮವನ್ನಾಗಿ ಮಾಡಿ, ಜನರ ಬದುಕಿಗೆ ಅಗತ್ಯವಾಗಿ ಬೇಕಾಗಿದ್ದ ಆಸ್ಪತ್ರೆ, ಸೊಸೈಟಿ, ಗ್ರಾಮ ಪಂಚಾಯಿತಿ, ಶಾಲೆಯನ್ನು ತೆರೆದು ಶಿಕ್ಷಣಕ್ಕೆ ಆದ್ಯತೆ ನೀಡಿದ ಪರಿಣಾಮ ಅವರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣ ಎಂದು ಬಣ್ಣಿಸಿದರು.
    ವೀರಶೈವ ಮಠಗಳು ಉಚಿತ ಶಿಕ್ಷಣ, ಉಚಿತ ಅನ್ನದಾಸೋಹ ನಡೆಸುವ ಮೂಲಕ ಸಮಾಜದಲ್ಲಿ ಮುಂಚೂಣಿಯಲ್ಲಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ೬೦ ಲಕ್ಷ ರೂ ವೆಚ್ಚದಲ್ಲಿ ಶಾಲೆಗೆ ವಾಹನ ಕೊಡುಗೆ ನೀಡಿದ್ದಾರೆ ಎಂದರು.

    ಎಲ್ಲಾ ವರ್ಗದ ನೌಕರರು, ವ್ಯಾಪಾರಸ್ಥರು ಪ್ರತಿಭಟನೆ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ರೈತರು ಕೃಷಿ ಕಾರ್ಯವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರೆ ಪ್ರಪಂಚ ಹಸಿವಿನಿಂದ ಸಾಯಬೇಕಾಗುತ್ತದೆ. ಇದನ್ನು ಮನಗಂಡು ಅನ್ನದಾತ ಬಂಧುಗಳಿಗೆ ಸರ್ಕಾರಗಳು ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಶಿಕ್ಷಣ ಹುಲಿಯ ಹಾಲಿದ್ದಂತೆ ಎಂದು ಹೇಳಿದ್ದಾರೆ. ಶ್ರಮಪಟ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಕಲಿತಾಗ ಮಾತ್ರ ಜೀವನದಲ್ಲಿ ಹುಲಿಮರಿಗಳಾಗಿ ಘರ್ಜಿಸುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲ್ಲೂಕಿನಲ್ಲಿ ನಿವೇಶನ ರಹಿತರಿಗೆ ಕಳೆದ ೨೦ ವರ್ಷಗಳಿಂದ ಮನೆ, ನಿವೇಶನ ನೀಡಲಾಗಿಲ್ಲ ಎಂದು ವಿಷಾಧಿಸಿದ ಅವರು, ಅದಕ್ಕಾಗಿ ಪ್ರತೀ ಪಂಚಾಯಿತಿಯಲ್ಲಿ ೫ ಎಕರೆ ಜಾಗವನ್ನು ಗುರ್ತಿಸಿ ಬಡವರಿಗೆ ಇನ್ನೊಂದು ವರ್ಷದಲ್ಲಿ ಸರ್ಕಾರದ ವತಿಯಿಂದ ಮನೆ, ನಿವೇಶನ ನೀಡುವುದಾಗಿ ಭರವಸೆ ನೀಡಿದರು.

    ಸಂಸ್ಥೆಯ ಅಧ್ಯಕ್ಷ ಬಿ.ಎಂ. ಭೋಜೇಗೌಡ ಮಾತನಾಡಿ, ದಾನಿಗಳು ಸಹಾಯ ಹಸ್ತ ನೀಡಿದರೆ ಶಿಕ್ಷಣ ಸಂಸ್ಥೆ ಯಶಸ್ವಿಯಾಗಿ ನಡೆಯುತ್ತದೆ ಎಂಬುದಕ್ಕೆ ವಿವೇಕಾನಂದ ವಿದ್ಯಾಸಂಸ್ಥೆ ಉದಾಹರಣೆಯಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ವ್ಯಾಸಂಗ ಮಾಡಿದ ಶಾಲೆಗೆ ಧನಸಹಾಯ ಮಾಡಿದರೆ ಸಂಸ್ಥೆ ಇನ್ನಷ್ಟು ಉತ್ತಮವಾಗಿ ಬೆಳೆಯುತ್ತದೆ ಎಂದು ಹೇಳಿದರು.

    ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ದೆವಣ್ಣಗೌಡ ಮಾತನಾಡಿ ೫೦ ವರ್ಷಗಳ ಹಿಂದೆ ಎಸ್.ಬಿ ಮುಳ್ಳೇಗೌಡ ರವರ ನೇತೃತ್ವದಲ್ಲಿ ದಾನಿಗಳ ಸಹಾಯದಿಂದ ವಿದ್ಯಾಸಂಸ್ಥೆ ಸ್ಥಾಪನೆ ಮಾಡಲಾಯಿತು, ಸಾವಿರಾರು ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸವನ್ನು ಪಡೆದಿದ್ದಾರೆ ಎಂದರು.

    ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ದೆವಣ್ಣಗೌಡ ಮಾತನಾಡಿದರು. ಕಾರ್ಯದರ್ಶಿ ಶ್ರೀಕಾಂತ್ ಸ್ವಾಗತಿಸಿದರು. ವೇದಿಕೆಯಲ್ಲಿ ಬೆಂಗಳೂರಿನ ಮಹಾಚಂದ್ರ ಪ್ರತಿಷ್ಠಾನ ಅಧ್ಯಕ್ಷರಾದ ಬಿ.ಎಂ. ರವಿಶಂಕರ್, ಸೋಮಶೇಖರ್, ಕೆ.ಆರ್. ಅಣ್ಣೇಗೌಡ, ಶ್ರೀಕಾಂತ್ ಶೆಟ್ಟಿ, ಹೆಚ್.ಪಿ. ಮಂಜೇಗೌಡ, ವೆಂಕಟಶೆಟ್ಟಿ, ಲೀಲಾ ಬಾಬುಪೂಜಾರಿ, ಶಾರದಾ ಎಸ್ ಶೆಟ್ಟಿ, ರಘುನಾಥ್, ಮಲ್ಲೇಶ್, ನರೇಂದ್ರ, ಪ್ರಭುಲಿಂಗಶಾಸ್ತ್ರಿ, ಬಿ.ಎನ್ ವಿಶ್ವನಾಥ್, ವಾಸುಪೂಜಾರಿ, ರಾಜು, ರಮೇಶ್, ಯೋಗೀಶ್, ಆದರ್ಶ್, ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು. ವಿಶ್ವನಾಥ್ ಸ್ವಾಗತಿಸಿ, ಪ್ರಸನ್ನ ನಿರೂಪಿಸಿ, ಸುಭಾಶ್ ವಂದಿಸಿದರು.

    Shiravase Mullegowdar was the beginning of a model village

  • ನಗರಸಭೆ ಅಧ್ಯಕ್ಷರಾಗಿ ಶೀಲಾ ದಿನೇಶ್ ಆಯ್ಕೆ ಬಹುತೇಕ ಖಚಿತ

    ನಗರಸಭೆ ಅಧ್ಯಕ್ಷರಾಗಿ ಶೀಲಾ ದಿನೇಶ್ ಆಯ್ಕೆ ಬಹುತೇಕ ಖಚಿತ

    ಚಿಕ್ಕಮಗಳೂರು: ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಜುಲೈ ೫ ರಂದು ಚುನಾವಣೆ ನಡೆಯಲಿದ್ದು, ಜನತಾದಳದ ಬಿ.ಶೀಲಾ ದಿನೇಶ್ ರವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷರಾಗಿದ್ದ ಬಿಜೆಪಿಯ ಸುಜಾತಶಿವಕುಮಾರ್‌ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸಂಧಾನ ನಡೆಸಿದ ಬಿಜೆಪಿ ಮತ್ತು ದಳದವರು ಸುಜಾತರವರ ರಾಜೀನಾಮೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಜು.೫ ರಂದು ಶನಿವಾರ ನಿಗದಿಪಡಿಸಲಾಗಿದೆ.

    ಬಿಜೆಪಿ ಮತ್ತು ದಳದ ಮೈತ್ರಿಯಿಂದಾಗಿ ಕೇವಲ ಮೂರು ಸದಸ್ಯರನ್ನು ಹೊಂದಿರುವ ಜನತಾದಳದವರಿಗೆ ಇದರಿಂದಾಗಿ ಭರ್ಜರಿ ಲಾಟರಿ ಹೊಡೆದಂತಾಗಿದೆ. ಕಳೆದ ಇಪ್ಪತ್ತೈದು ವ?ಗಳ ಹಿಂದೆ ನಗರಸಭೆಯ ಅಧಿಕಾರ ಹಿಡಿದಿದ್ದ ಜನತಾದಳಕ್ಕೆ ಬಯಸದೇ ಬಂದ ಭಾಗ್ಯವಾದರೆ. ದಿನೇಶ್ ಕುಟುಂಬದವರು ೧೫ನೇ ವಾರ್ಡಿನಿಂದ ಸತತ ಇಪ್ಪತ್ತೈದು ವ?ಗಳಿಂದ ನಗರಸಭೆಗೆ ಆಯ್ಕೆ ಆಗುತ್ತಿದ್ದಾರೆ. ದಿನೇಶ್ ಮೂರು ಬಾರಿ ನಗರಸಭೆಗೆ ಆಯ್ಕೆಯಾಗುತ್ತಿದ್ದರು. ಇವರ ಸಹೋದರಿ ದ್ರಾಕ್ಷಾಯಿಣಿ ಮತ್ತು ಪ್ರಸ್ತುತ ಬಿ. ಶೀಲಾ ದಿನೇಶ್ ಆಯ್ಕೆಯಾಗಿರುವುದು ವಿಶೇಷ

    ವಾರ್ಡ್‌ನ ಸದಸ್ಯರಾಗಿ ಸದಾ ಕಾಲವೂ ಸೇವೆ ಮಾಡುತ್ತಿರುವುದರಿಂದ ನಗರಸಭೆ ಚುಕ್ಕಾಣಿ ಹಿಡಿಯುವ ಅದೃ? ಒದಗಿಬಂದಿದೆ.
    ೩೦ ತಿಂಗಳ ಅವಧಿಗೆ ಮೊದಲ ೧೦ ತಿಂಗಳ ಅವಧಿಯನ್ನು ಬಿಜೆಪಿಯ ಸುಜಾತ ಶಿವಕುಮಾರ್‌ರವರಿಗೆ ಬಿಟ್ಟುಕೊಡಲಾಗಿದೆ. ಎರಡನೇ ೧೦ ತಿಂಗಳ ಅಧಿಕಾರವನ್ನು ಜೆಡಿಎಸ್‌ಗೆ, ಉಳಿದ ೧೦ ತಿಂಗಳ ಅವಧಿಯನ್ನು ಪುನಃ ಬಿಜೆಪಿಗೆ ಅಧಿಕಾರ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ.

    ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಮತ್ತು ಎಸ್.ಎಲ್. ಭೋಜೇಗೌಡ ಇವರುಗಳ ಸಮ್ಮುಖದಲ್ಲಿ ಮಾತುಕತೆ ನೆಡೆದಿದ್ದು, ಈಗ ಜೆಡಿಎಸ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇರುವ ಈ ಮೂರು ಅವಧಿಯಲ್ಲಿ ಶೀಲಾದಿನೇಶ್ ಒಬ್ಬರೇ ಮಹಿಳೆ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಕಚಿತವಾಗಿದೆ.

    ಒಟ್ಟು ೩೫ ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿಯ ೧೮ ಸದಸ್ಯರಿದ್ದರು. ಮಾಜಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದ್ದು, ಇದರಿಂದಾಗಿ ಬಿಜೆಪಿಯ ಸಂಖ್ಯೆ ೧೭ಕ್ಕೆ ಕುಸಿದಿದೆ. ಜೆಡಿಎಸ್‌ನ ಇಬ್ಬರು ಮತ್ತು ಜೆಡಿಎಸ್ ಬೆಂಬಲಿತ ಒಬ್ಬರು ಸೇರಿ ಒಟ್ಟು ೨೦ ಸದಸ್ಯ ಬಲವನ್ನು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಹೊಂದಿದೆ.

    ಬಿಜೆಪಿ ೧೭ ಸದಸ್ಯ ಬಲ ಇದ್ದರೂ ಒಪ್ಪಂದದಂತೆ ಜೆಡಿಎಸ್‌ಗೆ ಅಧಿಕಾರ ಬಿಟ್ಟುಕೊಡುತ್ತಿದೆ. ಬಿಜೆಪಿ-ಜೆಡಿಎಸ್ ರಾಷ್ಟ್ರೀಯ ಮಟ್ಟದಲ್ಲಿ ಹೊಂದಾಣಿಕೆಯಾಗಿ ಒಗ್ಗಟ್ಟಾಗಿರುವುದರಿಂದ ಕಾಂಗ್ರೆಸ್ ಇದರ ಲಾಭ ಪಡೆಯಲು ಮುಂದಾಗಿಲ್ಲ, ಶಾಸಕ ಹೆಚ್.ಡಿ. ತಮ್ಮಯ್ಯ ಸೇರಿ ಕಾಂಗ್ರೆಸ್‌ನ ೧೨ ಸದಸ್ಯರು, ಎಸ್‌ಡಿಪಿಐನ ಒಬ್ಬರು, ಪಕ್ಷೇತರರು ಒಬ್ಬರು, ಬಿಜೆಪಿಯಿಂದ ಅಮಾನತುಗೊಂಡಿರುವ ಒಬ್ಬರು ಸೇರಿ ಒಟ್ಟು ೧೬ ಮತಗಳ ಬಲ ಇದೆ.

    Sheila Dinesh’s election as Municipal Council President is almost certain

  • ಸಂಸ್ಕಾರದ ಜೊತೆಗೆ ವಿಶೇಷ ಜ್ಞಾನ ಬಿತ್ತುವುದೇ ಅಕ್ಷರಾಭ್ಯಾಸ

    ಸಂಸ್ಕಾರದ ಜೊತೆಗೆ ವಿಶೇಷ ಜ್ಞಾನ ಬಿತ್ತುವುದೇ ಅಕ್ಷರಾಭ್ಯಾಸ

    ಚಿಕ್ಕಮಗಳೂರು: ಮಕ್ಕಳಿಗೆ ಸಂಸ್ಕಾರವನ್ನು ಕೊಡುವ ಜೊತೆಗೆ ವಿಶೇಷ ಜ್ಞಾನವನ್ನು ಬಿತ್ತುವ ಕಾರ್ಯಕ್ರಮ ಅಕ್ಷರ ಅಭ್ಯಾಸ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.

    ಅವರು ಇಂದು ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜೆವಿಎಸ್ ಶಾಲೆ ವತಿಯಿಂದ ಏರ್ಪಡಿಸಲಾಗಿದ್ದ ನರ್ಸರಿ, ಪ್ರೈಮರಿ, ಹೈಯರ್ ಪ್ರೈಮರಿ ಮತ್ತು ಜೆವಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ನಿಮ್ಮ ಮಗುವಿನ ಭದ್ರ ಬುನಾದಿಯ ಪ್ರಾರಂಭ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

    ಜಿಲ್ಲಾ ಒಕ್ಕಲಿಗರ ಸಂಘ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಆ ಮೂಲಕ ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮತ್ತು ಸಂಸ್ಕಾರ ಕೊಡುವ ಕಾರ್ಯವನ್ನು ನಡೆಸುತ್ತಾ ಬರುತ್ತಿದೆ ಎಂದು ಶ್ಲಾಘಿಸಿ ಜ್ಞಾನಕ್ಕೆ ಧರ್ಮ, ಜಾತಿ ಇಲ್ಲ, ನೀರು, ಗಾಳಿ, ಭೂಮಿ, ಆಕಾಶ, ಅಗ್ನಿ ಈ ಪಂಚಭೂತಗಳಿಗೂ ಧರ್ಮ-ಜಾತಿ ಇಲ್ಲ. ಅಕ್ಷರಕ್ಕೂ ಯಾವುದೇ ಜಾತಿ-ಧರ್ಮದ ಹಂಗು ಇಲ್ಲ, ಸಂಸ್ಕಾರ ಮತ್ತು ಸಂಸ್ಕೃತಿ ಮೂಲಕ ಹರಿಶಿಣ ಕೊಂಬಿನಿಂದ ಪೂರ್ವಿಕರು ಅಕ್ಷರಾಭ್ಯಾಸ ಮಾಡುತ್ತಾ ಬಂದಿರುವುದೇ ಮುಂದುವರೆದ ಈ ಅಕ್ಷರಭ್ಯಾಸ. ಮಕ್ಕಳಲ್ಲಿ ಒಳ್ಳೆಯ ಭಾವನೆ ಬೆಳೆಸಿ ಶಿಕ್ಷಣವಂತರಾದಾಗ ಪೋಷಕರ ಶ್ರಮ ಸಾರ್ಥಕ ಎಂದು ಹೇಳಿದರು.

    ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ಕೊಟ್ಟಾಗ ಸಂಸ್ಕಾರ-ಸಂಸ್ಕೃತಿ ಬೆಳೆದು ಉತ್ತಮ ಸಮಾಜ ಕಟ್ಟುವ ವ್ಯಕ್ತಿಯಾಗಿ ರೂಪುಗೊಳ್ಳುತ್ತಾರೆ. ಹರಿಶಿಣ ಕೊಂಬಿನಲ್ಲಿ ಓಂಕಾರ ಬರೆಸುತ್ತಿರುವುದು ಚೈತನ್ಯ ಪ್ರಣವ ಸ್ವರೂಪಿಯಾಗಿದೆ ಎಂದರು.

    ಹರಿಶಿಣ ಭಗವಂತನ ಸೃಷ್ಟಿ, ಭೂಮಿಯಿಂದ ಬಂದ ಇದು ಅತ್ಯಂತ ಶ್ರೇಷ್ಠವಾಗಿದ್ದು, ಅದರ ಮೂಲಕ ಅಕ್ಷರಾಭ್ಯಾಸ ಮಾಡಿಸುತ್ತಿರುವುದು ವಿದ್ಯಾರ್ಥಿಗಳ ಮುಂದಿನ ಜೀವನ ಹಸನ್ಮುಖಿಯಾಗಿ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ವಿವರಿಸಿದರು.

    ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಮಾತನಾಡಿ, ಇಂದು ನಡೆಸುತ್ತಿರುವ ಅಕ್ಷರಾಭ್ಯಾಸ ಮಕ್ಕಳ ಜೀವನದಲ್ಲಿ ಮರೆಯಲಾಗದ ಕ್ಷಣ. ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿ ವಿದ್ಯೆ, ಬುದ್ದಿ, ಸಂಸ್ಕಾರ, ಸಂಸ್ಕೃತಿ ಈ ನಾಡಿನ ಬಗ್ಗೆ ಗೌರವವನ್ನು ಬೆಳೆಸಲಿ ಎಂದು ಹಾರೈಸಿದರು.

    ಜೆವಿಎಸ್ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ರಾಷ್ಟ್ರಕಟ್ಟುವ ಕೆಲಸಕ್ಕೆ ಮುಂದಾಗಲಿ, ಈ ಶಾಲೆಯಲ್ಲಿ ಉತ್ತಮವಾದ ಶಿಕ್ಷಕ ವೃಂದ ಇದ್ದು, ಜೊತೆಗೆ ತಾಯಂದಿರ ಪಾತ್ರ ಅತೀ ಮುಖ್ಯ ಎಂದು ಹೇಳಿದರು. ಹಿರಿಯರನ್ನು ಗೌರವಿಸುವುದನ್ನು ಪೋಷಕರು ಮಕ್ಕಳಲ್ಲಿ ಮನವರಿಕೆ ಮಾಡುವ ಜೊತೆಗೆ ವಿವಿಧತೆಯಲ್ಲಿ ಏಕತೆ-ಐಕ್ಯತೆಯನ್ನು ಹೊಂದಿರುವ ಭಾರತದಲ್ಲಿ ಹಿಂದೂ-ಮುಸ್ಲಿಂ-ಕ್ರೈಸ್ತರು ಈ ದೇಶದ ಬೆನ್ನೆಲುಬು ಎಂದರು.

    ಎಲ್ಲಾ ಧರ್ಮಗಳನ್ನು ಗೌರವಿಸುವಂತೆ ಜೆವಿಎಸ್ ಶಾಲೆಯನ್ನು ಜಿಲ್ಲಾ ಒಕ್ಕಲಿಗರ ಸಂಘ ನಡೆಸುತ್ತಿದೆ. ವಿದ್ಯಾರ್ಥಿಗಳು ಕೇವಲ ಶಿಕ್ಷಣಕ್ಕೆ ಸೀಮಿತರಾಗದೆ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು, ದೈರ್ಯಶಾಲಿಗಳಾಗಿ ನಾಗಲೋಟದಲ್ಲಿ ಓಡುತ್ತಿರುವ ಜಗತ್ತಿನಲ್ಲಿ ಎಲ್ಲಾ ರೀತಿಯ ಕೌಶಲ್ಯಗಳನ್ನು ಕಲಿಯುವುದು ಅಗತ್ಯ ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ವಕೀಲ ಎಸ್.ಎಸ್. ವೆಂಕಟೇಶ್ ಇದು ವಿಶಿಷ್ಟ, ವಿನೂತನ ಮಾದರಿಯಾದ ಕಾರ್ಯಕ್ರಮವನ್ನು ಕಳೆದ ನಾಲ್ಕು ವರ್ಷಗಳಿಂದ ಜೆವಿಎಸ್ ಶಾಲೆ ನಡೆಸುತ್ತಾ ಬರುತ್ತಿದೆ ಎಂದರು. ಹಿಂದೆ ಗುರುಕುಲಗಳಲ್ಲಿ ಅಕ್ಷರಾಭ್ಯಾಸ ಮಾಡಿಸುತ್ತಿದ್ದರು, ನಂತರದ ದಿನಗಳಲ್ಲಿ ಆಧುನಿಕ ಶಿಕ್ಷಣವಾಗಿ ಮಾರ್ಪಟ್ಟಿತ್ತು. ಆದರೆ, ಸಂಸ್ಕೃತಿಯ ಮೂಲ ಬೇರು ಮರೆಯಬಾರದೆಂಬುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ಹೇಳಿದರು.

    ಶಿಕ್ಷಣ, ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು, ಮಕ್ಕಳಿಗೆ ಶಿಕ್ಷಣ ಕೊಟ್ಟರೆ ಸಾಲದು, ಅದರೊಟ್ಟಿಗೆ ಸಂಸ್ಕಾರವನ್ನೂ ಕಲಿಸಬೇಕು, ಈ ನಿಟ್ಟಿನಲ್ಲಿ ಜೆವಿಎಸ್ ಶಿಕ್ಷಣ ಸಂಸ್ಥೆ ನಡೆಸುತ್ತಿರುವುದನ್ನು ಶ್ಲಾಘಿಸಿದರು. ವಿಜ್ಞಾನ ಎಷ್ಟೇ ಮುಂದುವರೆದರೂ ವಿಶ್ವದಲ್ಲಿ ಭಾರತದ ಸಂಸ್ಕೃತಿಗೆ ಅದರದೇ ಆದ ಅತೀ ದೊಡ್ಡ ಮಹತ್ವವಿದೆ, ಅದನ್ನು ಮರೆಯಬಾರದು. ಆ ಸಂಸ್ಕೃತಿ ಇದ್ದಾಗ ನಮ್ಮ ಮಕ್ಕಳು ಸಮರ್ಪಕವಾಗಿ ಅಭಿವೃದ್ಧಿ ಹೊಂದುತ್ತಾರೆಂದು ಅಭಿಪ್ರಾಯಿಸಿದರು.

    ಸಂಸ್ಕೃತಿಯ ಬೇರು ಗಟ್ಟಿಯಾದಾಗ ಮಾತ್ರ ನಾಗರಿಕತೆ ಹೆಮ್ಮರವಾಗಿ ಬೆಳೆಯಲು ಸಾಧ್ಯ. ಇಂತಹ ಕಾರ್ಯಕ್ರಮಗಳು ಮಕ್ಕಳ ಚಿಕ್ಕ ವಯಸ್ಸಿನಲ್ಲಿಯೇ ಸಂಸ್ಕೃತಿ ಬಿತ್ತಲು ಸಹಕಾರಿಯಾಗಲಿದೆ ಎಂದು ಹೇಳಿದರು.

    ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಟಿ.ಡಿ. ಮಲ್ಲೇಶ್, ಕಾರ್ಯದರ್ಶಿ ಎಂ.ಎಸ್. ಪ್ರದೀಪ್ ಕುಮಾರ್, ಸಹ ಕಾರ್ಯದರ್ಶಿ ರತೀಶ್ ಕುಮಾರ್, ನಿರ್ದೇಶಕರುಗಳಾದ ಬಿ.ಸಿ. ಲೋಕಪ್ಪಗೌಡ, ಹರಿಣಾಕ್ಷಿ ನಾಗರಾಜ್, ಪವಿತ್ರರತೀಶ್, ಪಿ.ರಾಜು, ಪ್ರಕಾಶ್, ಸಲಹಸಮಿತಿ ಸದಸ್ಯರಾದ ಹೆಚ್.ಜಿ. ಸುರೇಂದ್ರ, ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ರೀನಾ ಸುಚೇಂದ್ರ, ಸಿಇಓ ಕುಳ್ಳೇಗೌಡ, ಪ್ರಾಂಶುಪಾಲ ವಿಜಿತ್, ವ್ಯವಸ್ಥಾಪಕರಾದ ತೇಜಸ್ ಶಿಕ್ಷಕಿಯರಾದ ಪ್ರಮೀಳಾ ಲೀಲಾವತಿ ಉಪಸ್ಥಿತರಿದ್ದರು.ಮೊದಲಿಗೆ ಶಿಕ್ಷಕಿ ನಾಗವೇಣಿ ಸ್ವಾಗತಿಸಿ ರತೀಶ್ ಕುಮಾರ್ ವಂದಿಸಿದರು.

    Literacy is the sowing of special knowledge along with culture.

  • ಶಿಕ್ಷಣ ಪಡೆದ ಶಾಲೆಯ ಋಣ ತೀರಿಸಿದ ಶಾಸಕ ತಮ್ಮಯ್ಯ

    ಶಿಕ್ಷಣ ಪಡೆದ ಶಾಲೆಯ ಋಣ ತೀರಿಸಿದ ಶಾಸಕ ತಮ್ಮಯ್ಯ

    ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಭಾಗವಾದ ಹಿರೇಮಗಳೂರಿನಲ್ಲಿ ಜೂ.೨೧ ರಂದು ಸಂಭ್ರಮವೋ ಸಂಭ್ರಮ. ಕಾರಣ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಡಿ.ತಮ್ಮಯ್ಯನವರ ಹುಟ್ಟುಹಬ್ಬ ಹಿರೇಮಗಳೂರಿನವರೇ ಆದ ಅವರು, ತಾನು ವ್ಯಾಸಂಗ ಮಾಡಿದ ಶತಮಾನದ ಅಂಚಿನಲ್ಲಿರುವ ಶಾಲೆಗೆ ಹೊಸಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಸಂಭ್ರಮದಲ್ಲಿ ಇಡೀ ಊರಿಗೆ ಊರೇ ಸಂತಸದಲ್ಲಿ ಮುಳುಗಿತ್ತು. ಕ್ಷೇತ್ರದ ಅಭಿಮಾನಿಗಳು, ಹಿರಿಯರು ಕೂಡ ಇಲ್ಲಿಗೆ ಬಂದು ಆಶಿರ್ವದಿಸುತ್ತಿದ್ದ ಆ ಸಮಯ ಹಬ್ಬದೋಪಾದಿಯಲ್ಲಿ ಕಂಗೊಳಿಸುತ್ತಿತ್ತು.

    ಹಿರೇಮಗಳೂರು ಎಂದಾ ಕ್ಷಣ ಇತಿಹಾಸ ಮತ್ತು ಪ್ರಸ್ತುತಗಳನ್ನು ನೆನಪಿಸಿಕೊಳ್ಳಬೇಕು. ಸಖರಾಯಪಟ್ಟಣದ ರಾಜರುಕ್ಮಾಂಗದವರು ತನ್ನ ಹಿರಿಯಮಗಳನ್ನು ಹಿರೇಮಗಳೂರಿಗೂ, ಕಿರಿಯಮಗಳನ್ನು ಚಿಕ್ಕಮಗಳೂರಿಗೂ ಕೊಟ್ಟು ಮದುವೆ ಮಾಡಿದ ಕಾರಣಕ್ಕೆ ಹಿರೇಮಗಳೂರು ಮತ್ತು ಚಿಕ್ಕಮಗಳೂರೆಂದು ಕರೆಯಲಾಗುತ್ತಿದೆ ಎಂಬ ಐತಿಹ್ಯವಿದೆ. ಕೋದಂಡ ರಾಮನ ದೇವಸ್ಥಾನ ನಾಡಿನ ಜನರನ್ನು ಕೈಬೀಸಿ ಕರೆಯುತ್ತದೆ. ಇದರ ಪೂಜಾರಿ ಕಣ್ಣನ್ ಮಾಮ ಕನ್ನಡದ ಪೂಜಾರಿ ಎಂದೇ ಪ್ರಖ್ಯಾತಿಗೊಂಡಿರುವುದು ಪ್ರಸ್ತುತ ವಿಶೇಷ.

    ಈ ಊರಿನಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ತಮ್ಮಯ್ಯ ಪೂರ್ವ ಶಿಕ್ಷಣವನ್ನು ತನ್ನೂರಿನ ೧೯೩೬ ರಲ್ಲಿ ಆರಂಭವಾದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ೧೯೭೪-೭೫ನೇ ಸಾಲಿನಲ್ಲಿ ಓದಲು ಆರಂಭಿಸುತ್ತಾರೆ. ಶಾಲೆಯ ದಾಖಲೆಯ ಪ್ರಕಾರ ಅವರ ನೊಂದಣಿ ಸಂಖ್ಯೆ ೦೨ ಆಗಿರುತ್ತದೆ. ಈ ಶಾಲೆ ಸುಮಾರು ೦೨ ಎಕರೆ ವಿಸ್ತೀರ್ಣವಿರುವ ಹಿರೇಮಗಳೂರಿನ ಮುಖ್ಯರಸ್ತೆಗೆ ಹೊಂದಿಕೊಂಡಿದೆ. ಹಳೆಯ ಕಟ್ಟಡ ಬಹಳ ಶಿಥಿಲಗೊಂಡಿತ್ತು. ಕಾಂಪೌಂಡ್ ಇಲ್ಲದೆ ಶಾಲೆಗೆ ಭಂಗ ತರುತ್ತಿತ್ತು. ಹಲವಾರು ಎಡರು ತೊಡರುಗಳೊಂದಿಗೆ ಇದುವರೆಗೆ ದುಡಿದ ಶಿಕ್ಷಕರು ಮತ್ತು ಊರಿನವರ ಸಹಕಾರದಿಂದ ಶಾಲೆಯ ಜಾಗ ಹಾಗೆಯೇ ಉಳಿದಿದ್ದು ವಿಶೇಷ

    ಶಾಸಕರಾದ ತಮ್ಮಯ್ಯನವರಿಗೆ ಸ್ವಾಭಾವಿಕವಾಗಿ ಹುಟ್ಟೂರು ಅಭಿವೃದ್ಧಿ ಅನಿವಾರ್ಯವೆನಿಸದೆ ಇರಲಾರದು. ಈ ಹಿಂದೆ ನಗರಸಭೆ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಅಧ್ಯಕ್ಷರಾಗಿ ಊರಿನ ರಸ್ತೆ, ಚರಂಡಿ, ಯಾತ್ರಿ ನಿವಾಸ ಮುಂತಾದ ಚಟಿವಟಿಕೆಗಳೊಂದಿಗೆ ಎಲ್ಲರ ಮನೆಯ ಮಗನಂತೆ ಪ್ರೀತಿ ಔದಾರ್ಯಗಳಿಂದ ಇದ್ದವರಿಗೆ ನೆನಪಾದದ್ದು ತಾನು ಓದಿದ ಶಾಲೆ. ಅತ್ಯಂತ ದುರಸ್ಥಿಗೊಂಡಿರುವ ಶಾಲೆಗೆ ಕಾಯಕಲ್ಪ ಕೊಡಬೇಕೆಂದು ಆಲೋಚನೆ ಬಂದಿದ್ದು ೨೦೨೫ ರ ಆರಂಭದಲ್ಲಿ. ಕಟ್ಟಡವನ್ನು ಸಂಪೂರ್ಣ ಕೆಡವಿ ಹೊಸಕಟ್ಟಡ ನಿರ್ಮಿಸಲು ಯೋಜನೆ ರೂಪಿಸಿದರು.

    ಕೋಟಿ ರೂಪಾಯಿಗಳನ್ನು ಸರ್ಕಾರದಿಂದ ತಂದು ಹೊಸ ಕಟ್ಟಡ ನಿರ್ಮಾಣ ಕ?ದ ಕೆಲಸ. ಹೀಗಾಗಿ ದುರಸ್ಥಿಗೆ ಮುಂದಾಗಬೇಕೆಂಬ ಆಲೋಚನೆಯಲ್ಲಿದ್ದವರಿಗೆ ಹೊಳೆದದ್ದು ಹೆಸರೇಳಲು ಇಚ್ಚಿಸದ ಆಮಿತ್ರನ ಸಹಕಾರದ ಮಾತು ಹಿಂದೆ ಸಹಾಯ ಪಡೆದುಕೊಂಡಿದ್ದ ಸ್ನೇಹಿತರೊಬ್ಬರು ಶಾಸಕರಿಗೆ ಋಣ ತೀರಿಸಲು ತವಕದಲ್ಲಿದ್ದರು. ಇದನ್ನು ಸದುಪಯೋಗಪಡಿಸಿಕೊಂಡ ತಮ್ಮಯ್ಯನವರು ಅವರ ಸಿ.ಎಸ್.ಆರ್. ಫಂಡ್ನಲ್ಲಿ ಶಾಲೆ ಕಟ್ಟಲು ಮುಂದಾದರು.

    ಬಹಳ ಆಶ್ಚರ್ಯವೆಂದರೆ ಕೇವಲ ಮೂರೇ ತಿಂಗಳಲ್ಲಿ ಹೊಸ ೬ ಕೊಠಡಿಗಳು, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ, ಕಾಂಪೌಂಡ್ ಎಲ್ಲವೂ ಅಚ್ಚುಕಟ್ಟಾಗಿ ನಿರ್ಮಾಣಗೊಂಡಿವೆ. ವಿಶೇ?ವೆಂದರೆ ನೀರಿನನಲ್ಲಿ, ಶೌಚಾಲಯದ ಸಲಕರಣೆಗಳೆಲ್ಲಾ ಪ್ರತಿಷ್ಠಿತ ಜಾಗ್ವಾರ್ ಕಂಪನಿಗೆ ಸೇರಿದ್ದವಾಗಿವೆ. ಶಾಲೆಯ ಎತ್ತರದ ಅಚ್ಚುಕಟ್ಟಾದ ಚಾವಣಿ, ನೆಲಹಾಸಿಗೆ, ವಿಶಾಲ ಕೊಠಡಿಗಳು ಅಬ್ಬಾ ಇದೆಲ್ಲಾ ಸಾಧ್ಯವೇ ಸೋಜಿಗ ಅನಿಸುತ್ತದೆ ಆದರೂ ಸತ್ಯ.

    ಪ್ರಸ್ತುತ ೮೧ ಮಕ್ಕಳು ೧ ರಿಂದ ೭ನೇ ತರಗತಿವರೆಗೆ ಶಿಕ್ಷಣ ಪಡೆಯುತ್ತಿದ್ದಾರೆ. ೫ ಶಿಕ್ಷಕರು ಇದ್ದಾರೆ. ಇನ್ನುಮುಂದೆ ಹೆಚ್ಚು ಮಕ್ಕಳನ್ನು ಆಕರ್ಷಿಸುತ್ತದೆ ಎನ್ನುವ ಮುಖ್ಯ ಶಿಕ್ಷಕಿ ಶಿವಮ್ಮ, ಮುಂದಿನ ದಿನಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಬೇಕು ಎನ್ನುತ್ತಾರೆ.
    ಬೋರ್ವೆಲ್, ಕಲ್ಲುಬೆಂಚು, ದಾಸೋಹ ಕೊಠಡಿ ದುರಸ್ಥಿ, ಗಾರ್ಡನ್‌ಗಳು ನಮ್ಮ ಮುಂದಿರುವ ಸವಾಲುಗಳು. ಇದೆಲ್ಲಾ ಮಾಡಿರುವ ಶಾಸಕರು ಮತ್ತು ದಾನಿಗಳು ಇವೆಲ್ಲವನ್ನೂ ಒದಗಿಸುತ್ತಾರೆ ಎಂದು ಆಶಯ ವ್ಯಕ್ತಪಡಿಸಿದ ಶಿಕ್ಷಕಿ, ಜಿಲ್ಲಾನೌಕರರ ಸಂಘದ ಉಪಾಧ್ಯಕ್ಷೆ ವಿಲ್ಮಾ ಅವರು ಇದೆಲ್ಲಾ ಕನಸಿನಂತೆ ನಡೆದುಹೋಯಿತು ಎಂದು ಹ? ವ್ಯಕ್ತಪಡಿಸುತ್ತಾರೆ.

    ನಾನು ಓದಿದಶಾಲೆಯನ್ನು ನನಗೆ ಅವಕಾ ಮತ್ತು ಅಧಿಕಾರಸಿಕ್ಕಾಗಲೂ ಸರಿಪಡಿಸಿದ್ದರೆಹೇಗೆ, ಮನೆಗೆದ್ದು ಮಾರುಗೆಲ್ಲು ಅನ್ನುತ್ತಾರೆ ಹಿರಿಯರು. ಆ ಕೆಲಸಮಾಡಿದ್ದೇನೆ ಎನ್ನುತ್ತಾರೆ ತಮ್ಮಯ್ಯ. ಕ್ಷೇತ್ರದಲ್ಲಿ ಕೂಡ ನನ್ನ ಕೆಲಸ ಹೀಗೆಯೆ ಮುಂದುವರೆಯುತ್ತದೆ ಎನ್ನುವ ಅವರು ಸಿ.ಎಸ್.ಆರ್. ಫಂಡ್ ನೀಡಿದ ಗೆಳೆಯರ ಹೆಸರನ್ನು ಬಹಿರಂಗಪಡಿಸದೆ ಮತ್ತೊಮ್ಮೆ ಅವರಿಗೆ ಕೃತಜ್ಞತೆ ಹೇಳುವುದನ್ನು ಮರೆಯಲಿಲ್ಲ.

    MLA Thammayya pays off the debt of the school he studied at

  • ಜು.11 ರಂದು ಚಿಕ್ಕಮಗಳೂರು-ತಿರುಪತಿ ರೈಲಿಗೆ ಸಚಿವರಿಂದ ಚಾಲನೆ

    ಜು.11 ರಂದು ಚಿಕ್ಕಮಗಳೂರು-ತಿರುಪತಿ ರೈಲಿಗೆ ಸಚಿವರಿಂದ ಚಾಲನೆ

    ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ಸಂಚರಿಸುವ ರೈಲಿಗೆ ಜು.೧೧ ರಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

    ದೆಹಲಿಯ ಕಚೇರಿಯಲ್ಲಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ರೈಲು ಸಂಚಾರಕ್ಕೆ ಅನುಮತಿ ದೊರಕಿಸಿಕೊಟ್ಟ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನರ ಪರವಾಗಿ ಗೌರವಿಸಿ, ಕೃತಜ್ಞತೆ ತಿಳಿಸಿದ್ದ ಸಂದರ್ಭದಲ್ಲಿ ರೈಲಿಗೆ ಚಾಲನೆ ನೀಡಲು ಆಗಮಿಸುವಂತೆ ಮನವಿ ಮಾಡಿಕೊಂಡಿದ್ದಕ್ಕೆ ಸಚಿವರು ಸ್ಪಂದಿಸಿದ್ದಾರೆ ಎಂದು ಅವರು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಜು.೧೧ ರಂದು ಬೆಳಗ್ಗೆ ೧೧ ಗಂಟೆಗೆ ವಿಶೇಷ ರೈಲಿನಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರು ನಿಲ್ಲಾಣಕ್ಕೆ ಆಗಮಿಸುವ ಸಚಿವರು ಚಿಕ್ಕಮಗಳೂರು ಮತ್ತು ತಿರುಪತಿ ನಡುವೆ ಸಂಚರಿಸುವ ರೈಲು ಗಾಡಿಗೆ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
    ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಚಿವರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ ಎಂದರು

    ಕಾರ್ಯಕ್ರಮದ ಆನಂತರ ಸಚಿವರು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಬಳಿಕ ವಿಶೇಷ ರೈಲಿನಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

    ಚಿಕ್ಕಮಗಳೂರು-ತಿರುಪತಿ ನಡುವೆ ರೈಲು ಸಂಚಾರಕ್ಕೆ ಅನುಮತಿ ದೊರಕಿಸಿಕೊಟ್ಟ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ದೆಹಲಿಯ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

    Minister to flag off Chikkamagaluru-Tirupati train on July 11

  • ಕರ್ನಾಟಕ ಗ್ರಾಮೀಣ ಬ್ಯಾಂಕ್ 2500 ಕೋಟಿ ರೂ ವ್ಯವಹಾರ

    ಕರ್ನಾಟಕ ಗ್ರಾಮೀಣ ಬ್ಯಾಂಕ್ 2500 ಕೋಟಿ ರೂ ವ್ಯವಹಾರ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ೫೨ ಶಾಖೆಗಳನ್ನು ಹೊಂದಿದ್ದು, ಈ ಮೂಲಕ ೨೫೦೦ ಕೋಟಿ ರೂಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಶ್ರೀರಾಮಪ್ಪ ತಿಳಿಸಿದರು.

    ಅವರು ಬ್ಯಾಂಕಿನಲ್ಲಿ ವ್ಯವಸ್ಥಾಪಕರಾಗಿ ಕಳೆದ ೪೦ ವರ್ಷಗಳ ಸುದೀರ್ಘ ಸೇವೆಯಿಂದ ನಿವೃತ್ತಿ ಹೊಂದಿರುವ ನಾರಾಯಣ್ ನಾಯಕ್‌ರವರಿಗೆ ಬೀಳ್ಕೊಡುಗೆ ನೀಡಿ ಗೌರವಿಸಿ ಮಾತನಾಡಿದರು.

    ಕರ್ನಾಟಕ ಗ್ರಾಮೀಣ ಬ್ಯಾಂಕ್ ಈವರೆಗೆ ಶೇ.೯೦ ರಷ್ಟು ರೈತರಿಗೆ ಸಾಲಸೌಲಭ್ಯಗಳನ್ನು ನೀಡಲಾಗಿದ್ದು, ಜಿಲ್ಲೆಯ ಎಲ್ಲಾ ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

    ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ದೊರೆಯುವ ಸಾಲಸೌಲಭ್ಯಗಳ ಮಾದರಿಯಲ್ಲಿ ಕಾರು, ಮನೆ, ಶಿಕ್ಷಣ ಸಾಲ, ಬೆಳೆಸಾಲ, ಅಭಿವೃದ್ಧಿ ಸಾಲ ತಮ್ಮ ಬ್ಯಾಂಕಿನಲ್ಲೂ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಉತ್ತಮ ಗ್ರಾಹಕ ಸೇವೆಯೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕಿನ ೫೨ ಶಾಖೆಗಳಲ್ಲಿಯೂ ವಿಸ್ತರಿಸಲಾಗಿದೆ ಎಂದರು.

    ನಿವೃತ್ತರಾದ ನಾರಾಯಣ ನಾಯಕ್ ರವರಿಗೆ ಆಯುಷ್ಯ, ಆರೋಗ್ಯ ಮತ್ತು ನೆಮ್ಮದಿಯನ್ನು ಕೊಡುವಂತೆ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

    ನಿವೃತ್ತರಾದ ನಾರಾಯಣ್‌ನಾಯಕ್ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸೇವೆಯಲ್ಲಿದ್ದು, ಮಾತನಾಡಲು ಇಂದು ಇದು ಕೊನೆಯ ಅವಕಾಶ. ೧೯೮೫ ರ ಫೆ.೧೯ ರಂದು ಚಿಕ್ಕಮಗಳೂರು-ಕೊಡಗು ಗ್ರಾಮೀಣ ಬ್ಯಾಂಕಿಗೆ ನೇಮಕವಾದೆ. ಬಡತನದಲ್ಲಿ ಶಿಕ್ಷಣ ಮುಗಿಸಿದ ನನಗೆ ಈ ಬ್ಯಾಂಕಿನಲ್ಲಿ ಉದ್ಯೋಗ ಸಿಗಲು ಎಸ್‌ಬಿಐನಲ್ಲಿ ಉದ್ಯೋಗದಲ್ಲಿದ್ದ ಸ್ನೇಹಿತ ಆನಂದ ಎಂಬುವವರು ನನಗೆ ಸಹಾಯ ಮಾಡಿದರು ಎಂದು ಸ್ಮರಿಸಿದರು.

    ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ನಾನು ಕ್ರೀಡಾ ರಂಗದಲ್ಲೇ ಮುಂದುವರೆಯಬೇಕೆಂದುಕೊಂಡಿದ್ದೆ. ಆದರೆ, ಸ್ನೇಹಿತರ ಸಹಾಯದಿಂದ ಬ್ಯಾಂಕಿನಲ್ಲಿ ಉದ್ಯೋಗ ಪಡೆದು ಇಂದಿಗೆ ೪೦ ವರ್ಷ, ಮೂರು ತಿಂಗಳು ಹನ್ನೆರಡು ದಿನಗಳ ಬ್ಯಾಂಕಿನ ಸೇವೆ ತೃಪ್ತಿ ತಂದಿದೆ, ಜಿಲ್ಲೆಯ ೩೨ ಶಾಖೆಗಳಲ್ಲಿ ಪರಿಶೀಲನೆ ಮಾಡಿರುವುದಾಗಿ ಹೇಳಿದರು.

    ಇಂದಿನ ಯುವಕರು ಸಮಯ ಪಾಲನೆ ಅಳವಡಿಸಿಕೊಳ್ಳುವ ಜೊತೆಗೆ ಆರ್ಥಿಕ ಶಿಸ್ತು ಇಟ್ಟುಕೊಂಡಾಗ ಜೀವನದಲ್ಲಿ ಮುಂದೆ ಬರಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.

    ಕೆನರಾ ಬ್ಯಾಂಕ್ ಮೌಲ್ಯಮಾಪಕರ ಸಂಘದ ರಾಜ್ಯಾಧ್ಯಕ್ಷ ರುದ್ರಯ್ಯಾಚಾರ್ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಮಾತನಾಡಿ, ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಿಬ್ಬಂದಿಗಳೊಂದಿಗೆ ಸೌಹಾರ್ದತೆಯಿಂದ ನವಯುವಕನಾಗಿ ೪೦ ವರ್ಷಗಳ ಸುದೀರ್ಘ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ನಾರಾಯಣ್ ನಾಯಕ್ ಅವರಿಗೆ ಸಂಘದ ವತಿಯಿಂದ ಗೌರವ ಸಮರ್ಪಣೆ ಮಾಡುವುದಾಗಿ ತಿಳಿಸಿದರು.

    Karnataka Gramin Bank’s business is Rs 2500 crore

  • ಜುಲೈ 4 ರಂದು “ಕ್ಯಾಪಿಟಲ್ ಸಿಟಿ” ಸಿನಿಮಾ ರಿಲೀಸ್

    ಜುಲೈ 4 ರಂದು “ಕ್ಯಾಪಿಟಲ್ ಸಿಟಿ” ಸಿನಿಮಾ ರಿಲೀಸ್

    ಚಿಕ್ಕಮಗಳೂರು: ಜಿಂದಗಿ ಖ್ಯಾತಿಯ ರಗಡ್ ಸ್ಟಾರ್ ರಾಜೀವ್ ಹಾಗೂ ಖ್ಯಾತ ಖಳನಟ ರವಿಶಂಕರ್ ಅಭಿನಯದ ಕ್ಯಾಪಿಟಲ್ ಸಿಟಿ ಸಿನಿಮಾ ಜುಲೈ 4 ರಂದು ಅತಿಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ, ಎಂದು ಚಿತ್ರತಂಡ ಮಾಧ್ಯಮ ಘೋಷ್ಠಿಯಲ್ಲಿ ತಿಳಿಸಿದರು.

    ಜಿಂದಗಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದೇನೆ. ಸುದೀಪ್ ನಟನೆಯ ಮಸ್ತ ಮಜಾ ಮಾಡಿ ನೋಡಿ, ಶಿವರಾಜ್ ಕುಮಾರ್ ಅಭಿನಯದ ನಂದಾ ಅತಿಹೆಚ್ಚು ಸಕ್ಸಸ್ ನೀಡಿದ ನಿರ್ದೇಶಕ ಅನಂತ್ ರಾಜು ಕ್ಯಾಪಿಟಲ್ ಸಿಟಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಅಕ್ಕ- ತಮ್ಮ, ತಂದೆ- ಮಗಳ ಸೆಂಟಿಮೆಂಟ್ ನೊಂದಿಗೆ ಬೆಂಗಳೂರಿನ ಭೂಗತ ಲೋಕದ ಕಥೆಯನ್ನು ಕ್ಯಾಪಿಟಲ್ ಸಿಟಿ ಯಲ್ಲಿ ಪ್ರೇಕ್ಷಕರಿಗೆ ಹೆಚ್ಚು ಎಂಟರ್ ಟೇನ್ ಮೆಂಟ್ ನೀಡಲಿದೆ, ಎಂದು ರಗಡ್ ಸ್ಟಾರ್ ರಾಜೀವ್ ಹೇಳಿದರು.

    ಕ್ಯಾಪಿಟಲ್ ಸಿಟಿ ನನ್ನ 11 ನೇ ಸಿನಿಮಾ. ಈ ಸಿನಿಮಾ ಆಕ್ಷನ್ ಓರಿಯೆಂಟೆಡ್ ಸಿನಿಮಾವಾದರು ಸಮಾಜಕ್ಕೆ ಅತ್ಯತ್ತುಮ ಸಂದೇಶವಿದೆ. ಕ್ಯಾಪಿಟಲ್ ಸಿನಿಮಾ 5 ಭಾಷೆಗಳಲ್ಲಿ ಮೂಡಿ ಬಂದಿದ್ದು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡಲಿದ್ದೇವೆ. ನಂತರ 5 ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು ಮೊದಲು ಕನ್ನಡಿಗರು ಸಿನಿಮಾ ನೋಡಿ ಎಂದು ಅನಂತರಾಜು ತಮ್ಮ ಸಿನಿಮಾ ಬಗ್ಗೆ ಮಾತನಾಡಿದರು.

    ಕ್ಯಾಪಿಟಲ್ ಸಿನಿಮಾದಲ್ಲಿ ರವಿಶಂಕರ್, ತೆಲುಗಿನ ಸುಮಂತ್ , ಶರತ್ ಲೋಹಿತಾಶ್ವ, ಕಾಮೆಡಿ ಕಿಲಾಡಿಗಳು ಖ್ಯಾತಿಯ ರಿತೇಶ್ ಸೇರಿದಂತೆ ದೊಡ್ಡ ತಾರ ಬಳಗವಿದೆ. ಕನ್ನಡ ಭಾಷೆಯಲ್ಲಿ 200 ಕ್ಕೂ ಹೆಚ್ಚು ಚಿತ್ರಂದಿರಗಳಲ್ಲಿ ರಿಲೀಸ್ ಆಗಲಿದ್ದು ಪ್ರೇರಣಾ ಸಿನಿಮಾದ ನಾಯಕಿಯಾಗಿ ಪ್ರತಿಭೆ ತೋರಿಸಿದ್ದಾರೆ.

    ಕ್ಯಾಪಿಟಲ್ ಸಿಟಿ ಸಿನಿಮಾ ನಿರ್ಮಾಣಕ್ಕೆ ಇನ್ ಫಿನಿಟಿ ಕ್ರಿಯೇಷನ್ಸ್ ಬ್ಯಾನರ್ ಹಲವು ನಿರ್ಮಾಪಕರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಶಿವಪ್ಪ ಕುಡ್ಲೂರು ಈ ಸಿನಿಮಾಕ್ಕೆ ಕೈ ಜೋಡಿಸಿ ಖಳನಟನಾಗಿ ಅಭಿನಯಿದ್ದಾರೆ. ಬಾಬು ರೆಡ್ಡಿ, ಆನೇಕಲ್ ನಾಗರಾಜ್, ಕೃಷ್ಣಮೂರ್ತಿ, ಕೆ.ಟಿ.ಮುನಿರಾಜು,ಹಾಗೂ ಗುಣಶೇಖರನ್ ಕ್ಯಾಪಿಟಲ್ ಸಿನಿಮಾದಲ್ಲಿ ಅಭಿನಯಿಸಿ, ನಿರ್ಮಾಣದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾಸನದ ಹುಲಿ ವಸಂತ ಮಾಧವನ್ ಸಿನಿಮಾದಲ್ಲಿ ಅಭಿನಯಿಸಿ, ಸಹ ನಿರ್ಮಾಪಕರಾಗಿದ್ದಾರೆ. ಹಾಸನದ ಕೆ.ಎಮ್.ಶ್ರೀನಿವಾಸ್ ಕ್ಯಾಪಿಟಲ್ ಸಿಟಿ ಸಿನಿಮಾದ ಪ್ರಮೋಷನ್ ನಲ್ಲಿ ಭಾಗವಹಿಸಿದ್ದಾರೆ.

    “Capital City” movie release on July 4th

  • ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ

    ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ

    ಚಿಕ್ಕಮಗಳೂರು: ವೈದ್ಯಕೀಯ ಲೋಕದಲ್ಲಿ ಚಿಕಿತ್ಸೆಗೆ ಅನುಕೂಲವಾಗಲು ಹೊಸ ವಿಭಾಗಗಳನ್ನು ಸ್ಥಾಪಿಸುವ ಮೂಲಕ ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

    ನಗರದ ಆಶ್ರಯ ಆಸ್ಪತ್ರೆಯಲ್ಲಿ ನರವಿಜ್ಞಾನ ವಿಭಾಗದ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತ ನಾಡಿದ ಅವರು ಆಧುನಿಕತ ಜಗತ್ತಿನಲ್ಲಿ ರೋಗಿಗಳ ಆರೋಗ್ಯ ಸುಧಾರಿಸಲು ಹೊಸ ತಂತ್ರಜ್ಞಾನದಡಿ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

    ಜಿಲ್ಲೆಯಲ್ಲೇ ಮೊಟ್ಟಮೊದಲ ರೋಗಿಗಳ ಅನುಕೂಲಕ್ಕೆ ಸಕಲ ಸಲವತ್ತು ಹಾಗೂ ವ್ಯವಸ್ಥೆಯಿತ ರೂಪ ದಲ್ಲಿ ಆರೈಕೆ ನೀಡುತ್ತಿರುವ ಆಶ್ರಯ ಆಸ್ಪತ್ರೆ ಎಂದ ಅವರು ಇದೀಗ ನೂತನವಾಗಿ ನರರೋಗಿಗಳ ಚಿಕಿತ್ಸೆಗೆ ಅನುಕೂಲವಾಗಲು ನರವಿಜ್ಞಾನ ಕೇಂದ್ರ ಸ್ಥಾಪಿಸಿರುವುದು ಜನತೆಗೆ ಬಹಳಷ್ಟು ಒಳಿತಾಗಲಿದೆ ಎಂದರು.

    ಜನಸಾಮಾನ್ಯರು ಆರೋಗ್ಯದ ವಿಷಯದಲ್ಲಿ ಅಸಡ್ಡೆ ವಹಿಸದೇ ಜವಾಬ್ದಾರಿಯಾಗಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಆಕಸ್ಮಿಕವಾಗಿ ಜರುಗುವ ಕೆಲವು ಅನಾರೋಗ್ಯ ಸಮಸ್ಯೆಗಳಿಗೆ ಸ್ಥಳೀಯವಾಗೇ ಚಿಕಿತ್ಸೆಗಳು ಲಭ್ಯವಾದರೆ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

    ಮನುಷ್ಯನ ಪ್ರಾಣ ಉಳಿಸುವ ವೈದ್ಯರನ್ನು ದೇವರಿಗೆ ಒಲಿಸುತ್ತೇವೆ. ವೈದ್ಯರು ಹಣ ಗಳಿಕೆ ಎನ್ನದೇ ಸೇವಾ ಮನೋಭಾವದಲ್ಲಿ ಕಾರ್ಯನಿರ್ವಹಿಸಬೇಕು. ಈ ಹಿಂದೆ ಕೋವಿಡ್ ಸಮಯದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿರುವ ವೈದ್ಯರು, ದಾದಿಯರು ಸೇವೆ ಮರೆಯುವಂತಿಲ್ಲ ಎಂದು ಸ್ಮರಿಸಿದರು.

    ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಅಶ್ವಥ್‌ಬಾಬು ಮಾತನಾಡಿ ಬಹುತೇಕ ಚಿಕಿತ್ಸೆಯ ಎಲ್ಲಾ ವಿಭಾಗಗಳ ನ್ನು ಸ್ಥಾಪಿಸುವ ಮೂಲಕ ಆಶ್ರಯ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿಯಾಗಿ ಪರಿವರ್ತನೆಯಾಗಿದೆ. ಜೊತೆಗೆ ಸ್ವಚ್ಚತೆ, ವೈದ್ಯರು, ಸಿಬ್ಬಂದಿಗಳ ಸೇವೆ ಉತ್ತಮವಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಆಶಿಸಿದರು.

    ನರರೋಗ ತಜ್ಞ ಡಾ|| ಎಂ.ಎಸ್.ಸುಮುಖ್ ಮಾತನಾಡಿ ನರರೋಗ ಎಂಬುದು ಬಹುದಿನಗಳ ಕಾಡು ವ ಕಾಯಿಲೆಯಾದ ಕಾರಣ ದೂರದೂರಿಗಳಿಗೆ ಚಿಕಿತ್ಸೆ ತೆರಳಲು ಜಿಲ್ಲೆಯ ಜನತೆಗೆ ಕಷ್ಟಸಾಧ್ಯ. ತಾವು ಕೂ ಡಾ ಇದೇ ಜಿಲ್ಲೆಯವರಾದ ಕಾರಣ ನರರೋಗ ಸಮಸ್ಯೆಗಳಿಗೆ ಚಿಕಿತ್ಸೆ ನೀಡಿದರೆ ಸ್ಥಳೀಯರಿಗೆ ಅನುಕೂಲ ವಾಗಲಿದೆ ಎಂದು ತಿಳಿಸಿದರು

    ಆಶ್ರಯ ಆಸ್ಪತ್ರೆ ಸಂಸ್ಥಾಪಕ ಡಾ|| ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ ಪ್ರಸ್ತುತ ಆಸ್ಪತ್ರೆ ೮೮ರ ಕಾಲ ಘಟ್ಟದಲ್ಲಿ ಕೇವಲ ೧೫ ಬೆಡ್‌ಗಳೊಂದಿಗೆ ಆರಂಭಿಸಿ ಇದೀಗ ೧೫೦ ಬೆಡ್‌ಗಳು ಸ್ಥಾಪಿಸಿ ಚಿಕಿತ್ಸೆ ಪೂರಕವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತನೆಯಾಗುವ ಮೂಲಕ ಜನತೆಯ ಅವಶ್ಯಕತೆಗೆ ಅನುಗುಣವಾ ಗಿ ಚಿಕಿತ್ಸೆ ನೀಡುತ್ತಿದೆ ಎಂದರು.

    ಆಸ್ಪತ್ರೆಯ ಡಾ|| ಅನಿಕೇತ್ ಮಾತನಾಡಿ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಳ ಅನುಕೂಲಕ್ಕೆ ಒಟ್ಟು ೧೬ ವಿಭಾಗಗಳು ಚಾಲ್ತಿಯಲ್ಲಿದ್ದು, ಇದೀಗ ಸೂಪರ್ ಸ್ಪೆಷಾಲಿಟಿಯಡಿ ೯ನೇ ವಿಭಾಗವಾಗಿ ನರವಿಜ್ಞಾನ ಕೇಂದ್ರ ಸ್ಥಾಪಿಸುವ ಮುಖೇನಾ ಆಸ್ಪತ್ರೆ ಹಂತ ಹಂತವಾಗಿ ಮೇಲ್ದಜೇಗೇರುತ್ತಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್, ಆಸ್ಪತ್ರೆಯ ಸಂಸ್ಥಾ ಪಕರಾದ ಡಾ|| ಶುಭ ವಿಜಯ್, ಆಡಳಿತ ವ್ಯವಸ್ಥಾಪಕ ಜಿ.ಪುರುಷೋತ್ತಮ್, ವಿವಿಧ ವಿಭಾಗದ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

    Greater importance is given to comprehensive treatment of shelter hospital patients.

  • 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

    2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

    ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕಿನ ಬಗ್ಗೆ ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ಕಾಂಗ್ರೆಸ್ ಸರ್ಕಾರದ ಗುರಿ ಮತ್ತು ಉದ್ದೇಶ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

    ಅವರು ಇಂದು ಕ್ಷೇತ್ರದ ವ್ಯಾಪ್ತಿಯ ದೇವಗೊಂಡನಹಳ್ಳಿ, ಬೆಳವಾಡಿ, ಕಳಸಾಪುರ, ಮಾಚಗೊಂಡನಹಳ್ಳಿ, ಜೋಡಿಲಿಂಗದಹಳ್ಳಿ ಈ ಗ್ರಾಮ ಪಂಚಾಯಿತಿಗಳ ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ಗ್ರಾಮಗಳ ರಸ್ತೆ ಅಭಿವೃದ್ಧಿ ಬೀದಿದೀಪ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ದೇಶಕ್ಕೆ ಮಾದರಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನಪ್ರಿಯಗೊಂಡಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹದಿನಾರು ವರೆ ವರ್ಷಗಳ ಸುದೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಎಂದು ಬಣ್ಣಿಸಿದರು.

    ಗುಜರಾತ್ ರಾಜ್ಯದ ಮಾದರಿಯಲ್ಲಿ ಕರ್ನಾಟಕವನ್ನು ಅಭಿವೃದ್ಧಿ ಮಾಡುತ್ತೇವೆ ಎಂಬುದನ್ನು ಜಾಹಿರಾತು ಮೂಲಕ ನೋಡಿದ್ದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಗ್ಯಾರಂಟಿ ಯೋಜನೆಯ ಮಾದರಿ ನೋಡಿ ಉತ್ತರ ಭಾರತ, ಹರಿಯಾಣ, ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಸಿವೆ ಎಂದು ಹೇಳಿದರು.

    ೨೦ ಅಂಶಗಳ ಕಾರ್ಯಕ್ರಮದ ಮೂಲಕ ಶೋಷಿತ, ಬಡ ವರ್ಗದ ಎಲ್ಲಾ ಜನರನ್ನು ಸಮಾನವಾಗಿ ಕಂಡು ಸರ್ವರೂ ಸಮಾಜದ ಮುನ್ನಲೆಗೆ ತರಬೇಕೆಂಬ ಪರಿಕಲ್ಪನೆಯನ್ನು ಇಂದಿರಾ ಗಾಂಧಿಯವರು ಹೊಂದಿದ್ದರು ಎಂದು ತಿಳಿಸಿದರು.

    ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತಂದು ಇಂದಿರಾ ಗಾಂಧಿ, ಡಿ. ದೇವರಾಜ್ ಅರಸ್ ಭೂ ರಹಿತರಿಗೆ ಭೂಮಿಯನ್ನು ಮಂಜೂರು ಮಾಡಿದ್ದರು ಎಂದು ವಿವರಿಸಿದರು.

    ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಂದಾಯ ಗ್ರಾಮಗಳನ್ನು ಆಯ್ಕೆಮಾಡುವ ಮೂಲಕ ವಾಸಿಸುವವನಿಗೆ ಹಕ್ಕುಪತ್ರ ನೀಡಿ ಮನೆ ಕೊಡುವ ಭರವಸೆಯನ್ನು ಕೊಟ್ಟು, ವಾಸಿಸುವವನೇ ಮನೆಯ ಒಡೆಯ ಎಂಬ ಕಾನೂನು ಜಾರಿಗೆ ತಂದವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಭೈರೇಗೌಡ ಎಂದು ತಿಳಿಸಿದರು.

    ವಿರೋಧ ಪಕ್ಷದ ಆರೋಪಗಳಿಗೆ ಜನ ಮೆಚ್ಚುವ ರೀತಿ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಜಾತ್ಯಾತೀತ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮದವರನ್ನು ಸಮಾನವಾಗಿ ಪ್ರೀತಿಯಿಂದ ಕಾಣುತ್ತದೆ ಎಂದು ತಿಳಿಸಿದರು.

    ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಸುಮಾರು ೨ ಕೋಟಿ ರೂ ವೆಚ್ಚದ ಅನುದಾನದಲ್ಲಿ ಬೀದಿದೀಪ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಸರ್ಕಾರದ ಈ ಸೌಲಭ್ಯವನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
    ಸರ್ಕಾರ ಬಂದು ಎರಡು ವರ್ಷಗಳಾಗಿದ್ದು, ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಈ ರೀತಿಯ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಮೂಲಕ ತಕ್ಕ ಉತ್ತರ ನೀಡುತ್ತಿದ್ದೇವೆ ಎಂದು ಹೇಳಿದರು.

    ಕಳೆದ ೨೫ ವರ್ಷಗಳಿಂದ ಅಭಿವೃದ್ಧಿ ಕಾಣದೇ ಇದ್ದ ಈ ರಸ್ತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಹೆಚ್.ಡಿ. ತಮ್ಮಯ್ಯ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದಾರೆ. ಚುನಾವಣಾ ಪೂರ್ವದಲ್ಲಿ ಜೋಡಿ ಲಿಂಗದಹಳ್ಳಿ ದೇವಗೊಂಡನಹಳ್ಳಿ, ಬೆಳವಾಡಿ, ಕಳಸಾಪುರ, ಮಾಚಗೊಂಡನಹಳ್ಳಿ, ಗ್ರಾಮಸ್ಥರು ನೀಡಿದ ಪ್ರೀತಿ, ವಿಶ್ವಾಸ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರ ಆಯ್ಕೆಗೆ ಶ್ರಮಿಸಿದ ಕಾರ್ಯಕರ್ತರನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.

    ಈ ಸಂದರ್ಭದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಕೃಷ್ಣಮೂರ್ತಿ, ಅಮೀರ್, ಜಗದೀಶ್, ಶಾಂತಕುಮಾರ್, ಸಂತೋಷ್, ಕುಮಾರ್, ಗುರು, ಮಧು, ಯೋಗೀಶ್, ಹರ್ಷದ್, ಪ್ರವೀಣ ಮತ್ತಿತರರು ಉಪಸ್ಥಿತರಿದ್ದರು.

    Road development at a cost of Rs 2 crore

  • ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ

    ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ

    ಚಿಕ್ಕಮಗಳೂರು: ಇದುವರೆಗೆ ನಾನು ಅಪೇಕ್ಷೆ ಪಟ್ಟು ಪಕ್ಷದಲ್ಲಿ ಯಾವುದೇ ಹುದ್ದೆ ಪಡೆದಿಲ್ಲ. ಹಾಗೆ ಈಗಲೂ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯೂ ಅಲ್ಲ. ಪಕ್ಷ ಯಾರಿಗೆ ಜವಾಬ್ದಾರಿ ಕೊಡುತ್ತದೆಯೋ ಅವರ ಜೊತೆಗೆ ಕೆಲಸ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಕಟ್ಟಲು ನಾವು ಒಂದು ಟೀಮ್ ಆಗಿ ಕೆಲಸ ಮಾಡಬೇಕು. ಹೀಗಾಗಿ ನಾವು ಟೀಮ್ ಆಗಿ ಕೆಲಸ ಮಾಡುತ್ತೇವೆ. ಬಿ.ವೈ.ವಿಜಯೇಂದ್ರ ಅವರು ನಮ್ಮ ರಾಜ್ಯಾಧ್ಯಕ್ಷರು ಎಂದು ತಿಳಿಸಿದರು.

    ನಾವು ವಿಚಾರದ ಜೊತೆ ಇದ್ದೇವೆ. ಪಕ್ಷ ಸಂಘಟನೆಗೆ ನಾವು ಸದಾ ಸಿದ್ದರಿದ್ದೇವೆ. ಒಂದು ತಂಡವಾಗಿ ನಾವು ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಹೇಳಿದರು. ಬಿ.ವೈ.ವಿಜಯೇಂದ್ರ ಅವರು ನಮ್ಮ ರಾಜ್ಯಾಧ್ಯಕ್ಷರು. ಪಕ್ಷ ಕಟ್ಟಲು ನಾವು ಒಂದು ಟೀಮ್ ಆಗಿ ಕೆಲಸ ಮಾಡುತಿದ್ದೇವೆ. ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

    ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಇತ್ತೀಚೆಗೆ ದೆಹಲಿ ಹೋಗಿ ವರಿಷ್ಟರ‌ನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ ಅದೊಂದು ಜವಾಬ್ದಾರಿ. ಯಾವ ಕಾಲಕ್ಕೆ ಯಾರಿಗೆ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಯಾರೆ ಅಧ್ಯಕ್ಷರಾದರು ಅವರ ಜೊತೆ ಇದ್ದು ನಾನು ಕೆಲಸ ಮಾಡುತ್ತೇವೆ.

    ರಾಜಣ್ಣ ಅವರು ಯಾವ ಉದ್ದೇಶದಿಂದ ಕ್ರಾಂತಿ ಪದ ಬಳಸಿದ್ದಾರೆಯೋ ಗೊತ್ತಿಲ್ಲ. ಒಂದು ವೇಳೆ ಅದು ಸಂಕ್ರಾಂತಿ ಆದರೆ ಎಲ್ಲರಿಗೂ ಒಳ್ಳೆಯದೇ ಆಗುತ್ತದೆ. ಅದು ಸಂಕ್ರಾಂತಿ ಆಗದಿದ್ದರೆ ನಾಡಿಗೂ ಒಳ್ಳೆಯದಾಗುವುದಿಲ್ಲ. ಜೊತೆಗೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಆದರೆ ಪ್ರತಿದಿನ ಭ್ರಷ್ಟಾಚಾರ, ಹಗರಣ ಪ್ರತಿ ದಿನ ಕಾಡುತ್ತಿವೆ. ಇದು ಮುಂದುವರೆದರೆ ಜನರೇ ಕ್ರಾಂತಿಗೆ ಮುನ್ನುಡಿ ಬರೆಯಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    I am not a candidate for any position.