Category: ಮೂಡಿಗೆರೆ

  • ಹೊರನಾಡು ಶ್ರೀ ಕ್ಷೇತ್ರದದಿಂದ ಸಮಾಜಮುಖಿಯಾಗಿ ಕಾರ್ಯ

    ಹೊರನಾಡು ಶ್ರೀ ಕ್ಷೇತ್ರದದಿಂದ ಸಮಾಜಮುಖಿಯಾಗಿ ಕಾರ್ಯ

    ಮೂಡಿಗೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಂi ಖಾಸಗಿ ದೇವಾಲಯವಾ ಗಿದ್ದರೂ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರು ೧೯೯೨ ರಿಂದಲೂ ಜಾರಿಗೆ ತಂದಿರುವ ವಿವಿಧ ಯೋಜನೆಗಳು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು. ಇಂಥಹ ಧಾರ್ಮಿಕ ಕಾರ್ಯವನ್ನು ಇತರೆ ಪುಣ್ಯ ಕ್ಷೇತ್ರಗಳು ಅಳವಡಿಸಿಕೊಂಡಲ್ಲಿ ಸರ್ಕಾರದ ಹೊರೆ ಇಳಿಸಿದಂತಾಗುತ್ತದೆ ಎಂದ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ತಿಳಿಸಿದರು

    ಕಳಸ ತಾಲ್ಲೂಕಿನ ಶ್ರೀಕ್ಷೇತ್ರ ಹೊರನಾಡು ಆಧಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೆಶ್ವರಿ ದೇವಾಲಯದ ಲಲಿತಕಲಾ ಮಂಟಪದಲ್ಲಿ ಶ್ರೀ ಕ್ಷೇತ್ರದ ಗ್ರಾಮೀಣಾಭಿವೃದ್ದಿ ಯೋಜನೆಗಳಡಿ ಯಲ್ಲಿ ಪರಿಕರಕ ಮತ್ತು ಹಣ್ಣಿನ ಗಿಡಗಳ ವಿತರಣಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು. ಶ್ರೀ ಕ್ಷೇತ್ರವು ಹಲವಾರು ವರ್ಷ ಗಳಿಂದ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಡಾ/ಜಿ.ಭೀಮೇಶ್ವರ ಜೋಷಿ ಮಾತನಾಡಿ. ಕರ್ನಾಟಕದಲ್ಲಿ ಪ್ರಪ್ರಥಮ ಶಾಲಾ ಮಕ್ಕಳಿಗೆ ಬಿಸಿಊಟ ಯೋಜನೆ ೧೯೫೮ ರಿಂದಲೇ ಶ್ರೀಕ್ಷೇತ್ರ ಪ್ರಾರಂಬಿಸಿದ್ದು ಮಾತ ಅನ್ನಪೂರ್ಣೇಶ್ವರಿ ಆಶಿರ್ವಾದ ಎಂದರೆ ತಪ್ಪಾಗಲಾರದು ಅಂದಿನಿಂದ ಇಂದಿನವರೆಗೂ ಮತ್ತು ಮುಂದೆಯೂ ಈ ಯೋಜನೆ ಮುಂದುವರೆಸಿಕೊಂಡು ಹೋಗುವುದಾಗಿ ಹಾಗೂ ಬಿಸಿ ಊಟಕ್ಕೆ ವಿದ್ಯಾರ್ಥಿಗಳ ಅನುಕೂಲ ವಾಗುವ ದೃಷ್ಠಿಯಿಂದ ತಟ್ಟೆ ಲೋಟಗಳನ್ನು ವಿತರಿಸುತ್ತಿದ್ದು. ತಮ್ಮ ಕ್ಷೇತ್ರದಲ್ಲಿ ೧೯೯೨ ರಿಂದ ೨೦೨೫ ರವರೆಗೆ ಧಾರ್ಮೀಕ ಯೋಜನೆ, ಧನ್ವಂತರಿ ಯೋಜನೆ, ಶೈಕ್ಷಣಿಕ ಯೋಜನೆ, ಸಾಮಾಜಿಕ ಯೋಜನೆ, ಸಾಂಸ್ಕೃತಿಕ ಯೋಜನೆ, ಸಾಮೂಹಿಕ ಉಪನಯನ, ಸಪ್ತಪದಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಆನಂದ ಜ್ಯೋತಿ ಯೋಜನೆ, ಅನ್ನದಾಸೋಹ ಯೋಜನೆಗಳಡಿಯಲ್ಲಿ ಕ್ಷೇತ್ರ ವತಿಯಿಂದ ೨೦ ಕೋಟಿರೂ ಗಳನ್ನು ವ್ಯಯಿಸಲಾಗಿದ್ದು. ಇನ್ನು ಮುಂದಿನ ದಿನಗಳಲ್ಲೂ ಸಹ ಯೋಜನೆಗಳನ್ನು ಹೆಚ್ಚಿನ ರೀತಿಯಲ್ಲಿ ಮುಂದುವರೆಸಿಕೊಂಡು ಬರುವುದಾಗಿ ತಿಳಿಸಿದರು.

    ಈ ಬಾರಿ ಅನ್ನದಾಸೋಹ ಯೋಜನೆಯಡಿಯಲ್ಲಿ ಸರ್ಕಾರಿ ಹಿರಿಯ ಮತ್ತು ಕಿರಿಯ ೧೦೧ ಶಾಲೆಗಳಿಗೆ ಹಗೂ ೧೭ ದೇವಸ್ಥಾನಗಳಿಗೆ ೧೫ ಸಾವಿರ ತಟೆಟಗಳುಹಾಗೂ ಲೋಟಗಳು, ಶೈಕ್ಷಣಿಕ ಅಭಿವೃದ್ದಿ ಯೋಜನೆಯಡಿಯಲ್ಲಿ ೩೭ ಸರ್ಕಾರಿ ಶಾಳೆಗಳಿಗೆ ೧೨ ಸಾವಿರ ನೋಟ್ ಪುಸ್ತಕಗಳು, ಶೈಕ್ಷಣಿಕ ಅಭಿವೃದ್ದಿ ಯೋಜನೆಯಡಿಯಲ್ಲಿ ಕಳಸ ತಾಲ್ಲೂಕಿನ ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೨೪ -೨೫ ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ೧೫ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕೃಷಿ ಸಮೃದ್ಧಿ ಯೋಜನೆಯಡಿಯಲ್ಲಿ ೫೦ ಫಲಾನುಭವಿ ರೈತರಿಗೆ ಕಲ್ಪವೃಕ್ಷ ಸಸಿಗಳನ್ನು ವಿತರಿಸುವುದರೊಂದಿಗೆ, ಹೊರನಾಡು ಸರ್ಕಾರಿ ಹಿರಿಯ ಮತುತ ಪ್ರೌಢಶಾಲೆಯ ವಿಧ್ಯಾರ್ಥಿಗಳ ವಾರ್ಷಿಕ ಶಾಲಾ ಶುಲ್ಕ ಹಾಗೂ ಧ್ವನಿವರ್ಧಕ ಮತ್ತು ಪ್ರೊಜೆಕ್ಟರ್ ವಿತರಿಸಲಾಗಿದ್ದು. ಅರಣ್ಯ ಮತ್ತು ಪ್ರಕೃತಿ ಸಂರಕ್ಷಣಾ ಯೋಜನೆಯ ಅಂಗವಾಗಿ ೧೦ ಸಾವಿರ ಗಿಡಗಳನ್ನು ವಿತರಿಸಲಾಗಿದೆ ಎಂದರು.

    ಮುಖ್ಯ ಅತಿಥಿ ರೋಟರಿ ಸಂಸ್ಥೆ ಜಿಲ್ಲಾ ಗೌರ್‍ನರ್ -೨೦೨೫-೨೬ ಮಾತನಾಡಿ ಶ್ರೀಕ್ಷೇತ್ರದ ಧರ್ಮಕರ್ತರು ಮತ್ತವರ ಸಹೋದರರ ಸೇವೆ ಅಮೋಘವಾಗಿದ್ದು. ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಾ ಸಮಾಜಕ್ಕೆ ಅನನ್ಯ ಸೇವೆಯನ್ನು ಸಲ್ಲಿಸುತ್ತಿದೆ. ಎಂದರು.

    ಹೊರನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಮಧುಪ್ರಸಾದ್ ಜೈನ್ ಮಾತನಾಡಿ ಹೊರನಾಡು ಅಕ್ಕಪಕ್ಕದಲ್ಲಿ ಕುಗ್ರಾಮವಾಗಿದ್ದು. ಆ ಗ್ರಾಮಗಳಿಗೆ ಬೆಳಕನ್ನು ನೀಡುವ ಮೂಲಕ ಜನರ ಕಷ್ಟ ಸುಖಗಳಿಗೆ ಶ್ರೀಕ್ಷೇತ್ರ ಹಲವು ಅಭಿವೃದ್ದಿಗಳನ್ನು ಮಾಡವುದರ ಮೂಲಕ ಅಲ್ಲಿಯ ಜನರಿಗೆ ಜೀವನಾಧಾರವಾಗಿದೆ ಎಂದರೆ ತಪ್ಪಾಗಲಾರದು ಎಂದರು.

    ವೇದಿಕೆಯಲ್ಲಿ ರಾಮನಾರಾಯಣ ಜೋಷಿ,ರಾಜಗೋಪಾಲ್ ಜೋಷಿ, ಗಿರಿಜಾಶಂಕರ್ ಜೋಷಿ ಉಪಸ್ಥಿತರಿದ್ದರು.

    Working as a social worker from Horanadu Sri Kshetra

  • ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ

    ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ

    ಮೂಡಿಗೆರೆ: ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ ಎಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಜೆ.ಎಂ.ರಾಜಶೇಖರ್ ಹೇಳಿದರು.

    ಅವರು ಶನಿವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರ್ತವ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದೆ ನೈಜ ಸುದ್ದಿ ಮಾಡುವ ಪತ್ರಕರ್ತರನ್ನು ಹೋಲಿಸಿದರೆ ಇಂದು ಪತ್ರಿಕಾ ರಂಗ ಉದ್ಯಮವಾಗಿ ಬದಲಾಗಿದೆ. ಇದರಿಂದ ಕ್ರೀಯಾಶೀಲ ವರದಿಗಾರರು ಎಲೆಮರೆಕಾಯಿಯಂತೆ ಜೀವನ ನಡೆಸುವಂತಾಗಿದೆ. ಅಲ್ಲದೇ ಸರಕಾರ ಕೂಡ ಪತ್ರಕರ್ತರಿಗೆ ಯಾವುದೇ ಸವಲತ್ತು ಕೊಡುತ್ತಿಲ್ಲ. ಇದರಿಂದ ಪತ್ರಕರ್ತರು ಎಲ್ಲಾ ಸವಾಲು ಎದುರಿಸುವಂತಹ ಸ್ಥಿತಿ ಉಂಟಾಗಿದೆ ಎಂದು ಹೇಳಿದರು.

    ಉದ್ಯಮಿ ಮಂಚೇಗೌಡ ಮಾತನಾಡಿ, ಸಮಾಜದಲ್ಲಿ ನಡೆಯುವ ತಪ್ಪು ಬರೆದಾಗ ಪತ್ರಕರ್ತರು ವಿರೋಧಿಗಳ ರೀತಿ ಕಾಣುತ್ತಾರೆ. ಆದರೆ ಆ ಸುದ್ದಿ ಯಾಕೆ ಬರೆದಿದ್ದಾರೆಂದು ಮನವರಿಕೆ ಮಾಡಿಕೊಂಡು ಅದನ್ನು ಸರಿಪಡಿಸಿಕೊಂಡು ಹೋದರೆ ಈ ಸಮಾಜ ಉತ್ತಮ ಸ್ಥಿತಿಯಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

    ಯುರೇಕಾ ಅಕಾಡೆಮಿ ಸ್ಥಾಪಕ ಅಧ್ಯಕ್ಷ ದೀಪಕ್ ದೊಡ್ಡಯ್ಯ ಮಾತನಾಡಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸರಿಯಾದ ದಿಕ್ಕಿನಲ್ಲಿ ನಡೆಯುವ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸುವ ಸಲುವಾಗಿ ೪ ನೇ ಅಂಗವಾಗಿ ಪತ್ರಿಕಾರಂಗ ಕಾರ್ಯ ನಿರ್ವಹಿಸುತ್ತಿದೆ. ಪತ್ರಕರ್ತರಿಗೆ ಆಳುವ ಸರಕಾರಗಳು ರಕ್ಷಣೆ ನೀಡಬೇಕು. ಜತೆಗೆ ಸ್ಥಳೀಯ ಶಾಸಕರು ಇಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಂದೀಶ್ ಬಂಕೇನಹಳ್ಳಿ, ಡಾ.ಬಿ.ಎಲ್.ರಂಗನಾಥಗೌಡ, ಶಿಕ್ಷಕ ಶಿವರಾಮೇಗೌಡ. ಬಿ.ಜಯರಾಂ ನಲ್ಲಿತಾಯ, ವಕೀಲ ಸಿದ್ದಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾಥಿಗಳಿಗೆ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಬಿಜಿಎಸ್ ಶಾಲೆಯ ಸಾಹಿತ್ಯ ಮತ್ತು ಮಾನ್ವಿ, ದ್ವಿತೀಯ ಬಾಳೂರು ಐಜಿಆರ್‌ಎಸ್ ಶಾಲೆಯ ಸಂಚಯ್ ಮತ್ತು ಚಿರಂತನ್, ತೃತೀಯ ಸ್ಥಾನವನ್ನು ನಜರತ್ ಶಾಲೆ ಕೃಪನ್ ಮತ್ತು ಪ್ರಥಮ್ ಪಡೆದರು. ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಬಿಜಿಎಸ್ ಶಾಲೆ ಮೌಲ್ಯ, ದ್ವಿತೀಯ ಎಂಡಿಆರ್‌ಎಸ್ ಶಾಲೆಯ ಸೃಷ್ಟಿ, ತೃತೀಯ ಸ್ಥಾನ ನಳಂದ ಶಾಲೆಯ ಮಹಮ್ಮದ್ ಸಫ್ವಾನ್ ಪಡೆದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ತವ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ವಹಿಸಿದ್ದರು. ರೈತ ಮಹಿಳೆ ಅಶ್ವಿನಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜೆ.ಎಸ್.ರಘು, ಜಿಲ್ಲಾ ಡಿಶಾ ಕಮಿಟಿ ಸದಸ್ಯ ಮನೋಜ್ ಹಳೆಕೋಟೆ, ಪಿಎಸ್‌ಐ ಶ್ರೀನಾಥ್‌ರೆಡ್ಡಿ ಮತ್ತಿತರರಿದ್ದರು.

    Journalism in the hands of capitalism is fatal to society

  • ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು-ಆರೋಪಿಗಳು ಪರಾರಿ

    ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು-ಆರೋಪಿಗಳು ಪರಾರಿ

    ಚಿಕ್ಕಮಗಳೂರು: ಟ್ರೋಲ್ ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಸುಮಾರು ೨ ಸಾವಿರ ಲೀಟರ್ ಪೆಟ್ರೋಲ್ ಕಳ್ಳತನವಾಗಿದ್ದು, ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಲಾರಿ ಪತ್ತೆಯಾಗಿದೆ.

    ಕಳ್ಳತನದ ಲಾರಿಗೆ ನಂಬರ್ ಪ್ಲೇಟ್ ಕೂಡ ಇಲ್ಲ. ಲಾರಿ ಬಿಟ್ಟು ಪೆಟ್ರೋಲ್ ಕಳ್ಳರು ಪರಾರಿಯಾಗಿದ್ದಾರೆ.ಮೂಡಿಗೆರೆ ತಾಲೂಕಿನಲ್ಲಿ ಪೆಟ್ರೋಲ್ ಪೈಪ್‌ಲೈನ್ ಕೊರೆದ ಮಾಹಿತಿ ಇಲ್ಲದಿದ್ದು,

    ಬೇರೆ ಕಡೆ ಪೈಪ್ ಕೊರೆದು ಪೆಟ್ರೋಲ್ ಕದ್ದು ಸಾಗಿಸುತ್ತಿರುವ ಅನುಮಾನ ಬಂದಿದೆ. ಲಾರಿಯನ್ನ ವಶಕ್ಕೆ ಪಡೆದಿರುವ ಗೋಣಿಬೀಡು ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ

    Petrol stolen by drilling pipeline – accused flee

  • ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

    ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

    ಕೊಟ್ಟಿಗೆಹಾರ : ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಬಂಧಿಸಲಾಗಿದೆ.
    ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ, ಇವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕರು, ಮೂಡಿಗೆರೆ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಜೀರ್ ಅಹ್ಮದ್ ಅಲಿಯಾಸ್ ಶೇಕ್ ಅಬ್ದುಲ್ಲ ಬಿನ್ ಲೇಟ್ ಅಲಿಜಾನ್ (27), ಜೆಎಂ ರಸ್ತೆ, ಮೂಡಿಗೆರೆ ಎಂಬುವವನು ತನ್ನ ವ್ಯಾಗನಾರ್ ಕಾರು (ನಂ. ಕೆಎ 19 ಎನ್ 5049) ನಲ್ಲಿ 1.975 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.
    ಆರೋಪಿಯನ್ನು ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕರಾದ ಶೇಖರ್ ಎಂ.ಆರ್, ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಸಿಬ್ಬಂದಿಗಳಾದ ರಮೇಶ್ ತುಳಜಣ್ಣನವರ್, ಶಂಕರ ಗುರವ ಹಾಗೂ ವಾಹನ ಚಾಲಕರಾದ ಪ್ರವೀಣ್ ಅವರು ಭಾಗವಹಿಸಿದ್ದರು. ಪ್ರಕರಣವನ್ನು ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಮೂಡಿಗೆರೆ ಉಪ ವಿಭಾಗ ಇವರು ದಾಖಲಿಸಿದ್ದಾರೆ.
    Illegal marijuana trafficking – Youth arrested in Mudigere
  • ವಿಜೃಂಭಣೆಯಿಂದ ಜರುಗಿದ ಹೊರನಾಡಿನ ಅನ್ನಪೂರ್ಣೇಶ್ವರಿ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಹೊರನಾಡಿನ ಅನ್ನಪೂರ್ಣೇಶ್ವರಿ ರಥೋತ್ಸವ

    ಮೂಡಿಗೆರೆ: ಕಳಸ ತಾಲ್ಲೂಕಿನ ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವದ ರಥೋತ್ಸವವು ಭಾನುವಾರ ವಿಜೃಂಭಣೆಯಿಂದ ನೆರೆವೇರಿತು.

    ಭಾನುವಾರ ಬೆಳಿಗ್ಗೆ ಪೂಜೆಯ ನಂತರ ಉತ್ಸವ ಮೂರ್ತಿಯ ಸುತ್ತು ಸೇವೆ ನಡೆದು ನಂತರ ಸ್ತುತಿ ಪಾಠಕರು ಸ್ತುತಿ ಘೋಷಗಳನ್ನು ಪಟಿಸುತ್ತಾ,ಛತ್ರಿ ಛಾಮರ ಮಂಗಳವಾದ್ಯಗಳೊಂದಿಗೆ ಹೂವಿನ ಅಲಂಕಾರದೊಂದಿಗೆ ಸಿಂಗರಿಸಿ ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೊತ್ತುಕೊಂಡು ಸುಂದರವಾಗಿ ಅಲಂಕರಿಸಿದ ಬ್ರಹ್ಮರಥದ ಬಳಿ ದೇವರನ್ನು ತರಲಾಯಿತು. ರಥದಬಳಿ ಬಂದ ಜಗನ್ಮಾತೆ ಅನ್ನಪೂರ್ಣೇಶ್ವರಿಯನ್ನು ಭವ್ಯ ರಥದಲ್ಲಿ ಕುಳ್ಳಿರಿಸಿ ಪೂಜೆಯನ್ನು ಮಾಡಲಾಯಿತು.

    ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತ ಡಾ.ಜಿ.ಭೀಮೇಶ್ವರ ಜೋಷಿ ಮಾತನಾಡಿ ವರ್ಷವಿಡಿ ಗರ್ಭಗುಡಿಯಲ್ಲಿ ರುವ ದೇವರು ಬರುವಂತ ಭಕ್ತರಿಗೆ ದರ್ಶನ ಕೊಡುತ್ತಾಳೆ. ರಥೋತ್ಸವದ ವಿಷೇಶ ದಿನದಲ್ಲಿ ಜಗನ್ಮಾತೆಯು ಹೊರಬಂದು ದಿವ್ಯ ರಥದಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡುವುದೇ ರಥೋತ್ಸವದ ವಿಷೇಶವಾಗಿದೆ ಎಂದು ತಿಳಿಸಿದರು.

    ಶ್ರೀ ಕ್ಷೇತ್ರದ ಹೊರನಾಡು ಅನ್ನಪೂರ್ಣೆಶ್ವರಿ ಅಮ್ಮನವರ ದಿವ್ಯ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ರಥೋತ್ಸವದ ವಿವರಣೆ ನೀಡಿದ ಅವರು. ಶ್ರೀಕ್ಷೇತ್ರ ದಲ್ಲಿ ನಡೆಯುವ ರಥೋತ್ಸವದಲ್ಲಿ ಭಕ್ತರಿಗೆ ದೇವರ ದರ್ಶನ, ದೇವತಾ ಸಾನಿದ್ಯ ಮತ್ತು ದೇವರ ಸೇವಾ ಕಾರ್ಯವು ನೇರ ವಾಗಿ ಲಭಿಸುವುದು. ಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬ ಭಕ್ತರು ಏಕ ಮನಸ್ಸಿನಿಂದ ಜಾತಿ ಭೇದ ಮರೆತು ಭಕ್ತಿ ಪ್ರಧಾನವಾಗಿ ರಥವನ್ನು ಎಳೆ ಯುವುದರೊಂದಿಗೆ ದೇವರ ಕೃಪೆಗೆ ಪಾತ್ರರಾಗುತ್ತಾನೆ ಎಂದರು.

    ರಥೋತ್ಸವಗಳಿಗೂ ಮಾನವ ಜೀವನದ ರಥಕ್ಕೂ ಒಂದಕ್ಕೊಂದು ಸಂಭಂಧವಿದೆ. ಜೀವನ-ಬದುಕು ಎಂಬ ರಥದಲ್ಲಿ ಸಂಸಾರದ ಒಳಗಿ ರುವ ಎಲ್ಲರು. ಏಕ ಮನಸ್ಸಿನಿಂದ ರಥವನು ಎಳೆದಾಗ ಹೇಗೆ ನಿರ್ದಿಷ್ಟ ಗುರಿ ತಲುಪಲು ಸಾಧ್ಯವೋ ಹಾಗೆಯೇ ದೇವರ ರಥವನ್ನು ನಿಶ್ಕಲ್ಮಷದಿಂದ ಭಕ್ತಿಭಾವದಿಂದ ಎಳೆದಲ್ಲಿ ಒಳಗಿನ ಪರಮಾತ್ಮನನ್ನು ಕಾಣಲು ಸಾಧ್ಯ ಎಂದರು.

    ರಥಗಳಲ್ಲಿ ದೇವರು ಕುಳಿತಾಗ ಅದು ಪ್ರತಿಯೊಬ್ಬ ಮನುಷ್ಯನು ಹಂತಹಂತವಾಗಿ ಗುರಿ ತಲುಪುವುದರ ಮೂಲಕ ಎತ್ತರಕ್ಕೆ ಬೆಳೆಯ ಬೇಕೆಂಬ ಸಂದೇಶವನ್ನು ನೀಡುತ್ತದೆ. ರಥೋತ್ಸವ ಎಂದರೆ ಅದು ಒಂದು ಹಬ್ಬದ ವಾತವಾರಣ. ರಥೋತ್ಸವಕ್ಕೆ ಬರುವ ಭಕ್ತರು ರಥೋತ್ಸವದ ನೆನಪಿಗಾಗಿ ದೇವಾಲಯದ ಸುತ್ತಲು ವಸ್ತುಗಳನ್ನು ಖರಿದಿಸುವುದು ಒಂದು ವಿಶೇಷ .ರಥೋತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಅಮ್ಮನವರ ಕೃಪೆಗೆ ಪಾತ್ರರಾದರು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಅಂಕರಕಣ ಗಣಪತಿ ದೇವಾಲಯದ ಧರ್ಮಕರ್ತ ರಾಮನಾರಾಯಣ ಜೋಷಿ, ರಾಜಗೋಪಾಲ ಜೋಷಿ, ಗಿರೀಜಾ ಶಂಕರ್ ಜೋಷಿ ಕುಟುಂಬ ಪಾಲ್ಗೊಂಡು ರಥೋತ್ಸವವನು ಯಶಸ್ವಿಗೊಳಿಸಿದರು. ರಾಜಲಕ್ಷೀ ಭಿ ಜೋಸಿ ಮತ್ತು ಕುಟುಂಬವರ್ಗದವರು ಮಹಿಳೆಯರಿಗೆ ಬಳೆ ಮತ್ತು ರವಿಕೆ ಕಣವನ್ನು ವಿತರಿಸಿದರು.

    ಅಲಂಕೃತಗೊಂಡ ಭವ್ಯ ಬ್ರಹ್ಮ ರಥವನ್ನು ಶ್ವೇತ ವಸ್ತ್ರದಾರಿಗಳಾದ ಭಕ್ತಾದಿಗಳು ಎಳೆದರು.ರಥವೇರಿ ಕುಳಿತ ದೇವರೂ ತನ್ಮಯರಾಗಿ,ಚಿನ್ಮಯ ಮೂರ್ತಿಯಾಗಿ ಕಂಗೊಳಿಸುತ್ತಿದ್ದರು.ಈ ಒಂದು ಸುಂದರ ದೃಶ್ಯವನ್ನು ಭಕ್ತರು ಭಕ್ತಿಯಿಂದ ಕಣ್ತುಂಬಿಸಿಕೊಂಡರು

    Horanadu Annapoorneshwari Chariot Festival

  • ಕಾಡುಕೋಣ ದಾಳಿಯಿಂದ ಕಾರ್ಮಿಕ ಮಹಿಳೆ ಸಾವು

    ಕಾಡುಕೋಣ ದಾಳಿಯಿಂದ ಕಾರ್ಮಿಕ ಮಹಿಳೆ ಸಾವು

    ಚಿಕ್ಕಮಗಳೂರು: ಕಾಫಿ ಕೊಯ್ದು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮೂಡಿಗೆರೆ ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳೆಗ್ಗೆ ಘಟನೆ ನಡೆದಿದೆ.

    ಇಲ್ಲಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್‌ರವರ ಶಾರದಾಂಭ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಬಸೂರಿ ಬೀಬಿ (೪೨ ವರ್ಷ) ಸಾವನ್ನಪ್ಪಿರುವ ದುರ್ದೈವಿ.

    ಇಂದು ಬೆಳಿಗ್ಗೆ ಅಸ್ಸಾಂ ಮೂಲದ ಕಾರ್ಮಿಕರು ರಮೇಶ್ ಅವರ ತೋಟದಲ್ಲಿ ಕಾಫಿ ಕೊಯ್ದು ಮಾಡುವುದರಲ್ಲಿ ನಿರತರಾಗಿದ್ದರು. ಸುಮಾರು ೧೧ ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ವಿವಾಹಿತ ಮಹಿಳಾ ಕಾರ್ಮಿಕರೊಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಕಾಡುಕೋಣ ಮಹಿಳೆಯ ಹೊಟ್ಟೆ ಮತ್ತು ಎದೆಯ ಭಾಗದಕ್ಕೆ ತಮ್ಮ ಕೊಂಬಿನಿಂದ ತಿವಿದಿದ್ದು, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

    ಮಹಿಳೆಯ ಸಾವಿನಿಂದ ಅವರ ಜೊತೆಯಲ್ಲಿದ್ದ ಕುಟುಂಬದವರು ಮತ್ತು ಸಂಬಂಧಿಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಮಲೆನಾಡು ಭಾಗದಲ್ಲಿ ಕಾಡುಕೋಣಗಳು ವಿಪರೀತ ಸಂಖ್ಯೆಯಲ್ಲಿದ್ದು, ನಿರಂತರವಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಕಾಫಿ ತೋಟಗಳಲ್ಲಿ ಗಿಡಗಳನ್ನು ಕಿತ್ತು ಹಾಕುವುದಲ್ಲದೇ, ಈ ರೀತಿಯ ಜೀವ ಹಾನಿಗೂ ಕಾರಣವಾಗುತ್ತಿವೆ. ಕಾಡುಕೋಣಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿದ್ದಾರೆ.

    Woman worker dies in wild buffalo attack