Category: ಕ್ರೈಂ

  • ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

    ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

    ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ.

    ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ ಶಿಕ್ಷೆ, ಒಟ್ಟು 11.35 ಲಕ್ಷ ದಂಡ ಜೊತೆಗೆ ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಬಿದ್ದಿದೆ.

    ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ.

    ಯಾವ ಸೆಕ್ಷನ್‌ಗೆ ಎಷ್ಟು ದಂಡ?
    ಐಪಿಸಿ 376(2)(k), ಜೀವಾವಧಿ, 5 ಲಕ್ಷ
    ಐಪಿಸಿ 376(2)(n), – ಜೀವಾವಧಿ, 5 ಲಕ್ಷ
    ಐಪಿಸಿ 354(a) – 3 ವರ್ಷ ಕಠಿಣ ಜೈಲು, 25 ಸಾವಿರ ದಂಡ
    ಐಪಿಸಿ 354(b) – 7 ವರ್ಷ ಕಠಿಣ ಜೈಲು, 50ಸಾವಿರ ದಂಡ, ದಂಡ ಪಾವತಿಸದಿದ್ದಲ್ಲಿ 6 ತಿಂಗಳು ಸರಳ ಜೈಲು
    ಐಪಿಸಿ 354(c) – 3 ವರ್ಷ ಕಠಿಣ ಜೈಲು
    ಐಪಿಸಿ 506 – 2 ವರಗಷ ಕಠಿಣ ಜೈಲು 10 ಸಾವಿರ ದಂಡ
    ಐಪಿಸಿ 201 – 3ವರಗಷ ಕಠಿಣ ಜೈಲಿ, 25 ಸಾವಿರ ದಂಡ
    IT ACt 66(E) – 3 ವರ್ಷ ಕಠಿಣ, 25 ಸಾವಿರ ದಂಡ
    ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾ1ಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಈ ಆದೇಶ ಪ್ರಕಟಿಸಿದ್ದಾರೆ.

    ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು ನಿರಂತರ ಅತ್ಯಾ1ಚಾರ ಮತ್ತು ನೌಕರಿ ಮಾಡುತ್ತಿರುವ ಮಹಿಳೆಯ ಮೇಲೆ ನಡೆದ ಅತ್ಯಾ1ಚಾರಕ್ಕೆ ಸಂಬಂಧಪಟ್ಟದ್ದಾಗಿದೆ.

    ಮೊದಲ ಪ್ರಕರಣದಲ್ಲಿ ಮಾತ್ರವೇ ಪ್ರಜ್ವಲ್ ವಿರುದ್ಧ ತೀರ್ಪು ಪ್ರಕಟಗೊಂಡಿದ್ದು, ಇನ್ನೂ ಮೂರು ಪ್ರಕರಣಗಳು ಇದೇ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

    ಇನ್ನು ಈ ಮೂರು ಪ್ರಕರಣದ ಒಂದು ಪ್ರಕರಣದಲ್ಲಿ ಪ್ರಜ್ವಲ್ ತಂದೆ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ವಿರುದ್ಧ ಕೂಡ ಆರೋಪ ಇದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ.

    Former Hassan MP Prajwal Revanna sentenced to life imprisonment

  • ಹಕ್ಕಿಮಕ್ಕಿ ಗ್ರಾಮದಲ್ಲಿ ಮಗನಿಂದ ತಾಯಿಯ ಹತ್ಯೆ

    ಹಕ್ಕಿಮಕ್ಕಿ ಗ್ರಾಮದಲ್ಲಿ ಮಗನಿಂದ ತಾಯಿಯ ಹತ್ಯೆ

    ಆಲ್ದೂರು: ತಾಯಿಯನ್ನು ಮಗನೇ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಪವನ್ (28) ತಾಯಿಯನ್ನ ಕೊಂದ ಪಾಪಿ ಮಗ. ತಾಯಿ ಭವಾನಿ (52) ಅವರನ್ನು ಬೆಂಕಿ ಹಾಕಿ ಅರೆಬರೆ ಸುಟ್ಟು ಮನೆಯಲ್ಲೇ ಮಲಗಿದ್ದಾನೆ ಎಂದು ತಿಳಿದುಬಂದಿದೆ.

    ಇವರದು ಒಂಟಿ ಮನೆಯಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಟ್ಟದ ಮೇಲೆ ಇದ್ದು, ಜನವಸತಿ ಪ್ರದೇಶದಿಂದ ಹೊರಗೆ ವಾಸವಾಗಿದ್ದರು ಎನ್ನಲಾಗಿದೆ. ಮನೆಯಲ್ಲಿ ತಂದೆ ತಾಯಿ ಮಗ ಮೂವರು ವಾಸವಾಗಿದ್ದರು ಎನ್ನಲಾಗಿದೆ.

    ತಂದೆ ಮಗ ಇಬ್ಬರು ಮದ್ಯವ್ಯಸನಿಗಳಾಗಿದ್ದರು ಎನ್ನಲಾಗಿದೆ. ಪ್ರಕರಣದ ಬಗ್ಗೆ ತಂದೆಯೇ ಆಲ್ಲೂರು ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

    ಬುಧವಾರ ತಡರಾತ್ರಿಯಲ್ಲಿ ಪೊಲೀಸರು ಮತ್ತು ಸ್ಥಳೀಯರು ಮೃತದೇಹವನ್ನು ಕಿಲೋಮೀಟರ್ ಗಟ್ಟಲೇ ಹೊತ್ತು ತಂದಿದ್ದು ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಆಲ್ಲೂರು ಪಿಎಸ್‌ಐ ಹಾಗೂ ಇನ್ಸ್‌ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪವನ್‌ನನ್ನು ಬಂಧಿಸಿದ್ದಾರೆ.

    Mother murdered by son in Hakkimaki village

  • ಭದ್ರಾ ನದಿಗೆ ಬಿದ್ದು ಮಗ –  ಮನನೊಂದು ತಾಯಿ ಕೂಡ ಆತ್ಮಹತ್ಯೆ

    ಭದ್ರಾ ನದಿಗೆ ಬಿದ್ದು ಮಗ – ಮನನೊಂದು ತಾಯಿ ಕೂಡ ಆತ್ಮಹತ್ಯೆ

    ಚಿಕ್ಕಮಗಳೂರು: ಭದ್ರಾ ನದಿಗೆ ಪಿಕ್‌ಅಪ್‌ ವಾಹನ ಬಿದ್ದು ಮಗ ಕಣ್ಮರೆಯಾಗಿದ್ದರಿಂದ ಮನನೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಗಣಪತಿಕಟ್ಟೆ ಶಮಂತ್‌ (22)ಅವರು ಚಾಲನೆ ಮಾಡುತ್ತಿದ್ದ ಪಿಕ್‌ಅಪ್ ವಾಹನ ಕಳಸ– ಕಳಕೋಡು ರಸ್ತೆಯ ಕೊಳಮಗೆ ಬಳಿ ರಸ್ತೆ ಪಕ್ಕದಲ್ಲಿ ಹರಿಯುವ ಭದ್ರಾ ನದಿಗೆ ಗುರುವಾರ ಮಧ್ಯಾಹ್ನ ಉರುಳಿತ್ತು. ಸಂಜೆಯಾ ದರೂ ಶಮಂತ್ ಪತ್ತೆಯಾಗಿಲ್ಲ.

    ಅವರ ತಾಯಿ ರವಿಕಲಾ (45) ಅಪಘಾತ ನಡೆದ ಸ್ಥಳಕ್ಕೆ ತೆರಳಿ ಮಗನಿಗಾಗಿ ಹುಡುಕಾಡಿದ್ದರು. ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಕೆಲಸ ಮಾಡಿಸುವ ಮೇಸ್ತ್ರಿಯಾಗಿದ್ದ ರವಿಕಲಾ ಅವರು, ಇದೇ ಉದ್ದೇಶಕ್ಕೆ ಮಗನಿಗೆ ಪಿಕ್ಅಪ್ ವಾಹನವನ್ನು 6 ತಿಂಗಳ ಹಿಂದೆ ಕೊಡಿಸಿದ್ದರು. ಮಗ ವಾಹನದ ಸಮೇತ ಭದ್ರಾ ನದಿಗೆ ಬಿದ್ದಿರುವುದರಿಂದ ರವಿಕಲಾ ಆಘಾತಗೊಂಡಿದ್ದರು.

    ರಾತ್ರಿ 10.30ರ ವೇಳೆಗೆ ಮನೆಯ ಸಮೀಪದ ಕೆರೆಗೆ ರವಿಕಲಾ ಹಾರಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗನ ಸಾವಿನಿಂದ ಗಣಪತಿಕಟ್ಟೆ ಪ್ರದೇಶದಲ್ಲಿ ದುಃಖ ಆವರಿಸಿದೆ. ನೂರಾರು ಕಾರ್ಮಿಕರು ಶುಕ್ರವಾರ ಕೆಲಸಕ್ಕೆ ಹೋಗದೆ ರತ್ನಕಲಾ ಅವರ ಮನೆ ಬಳಿ ಜಮಾಯಿಸಿದ್ದರು.

    ಭದ್ರಾ ನದಿಯಲ್ಲಿ ಶಮಂತ್ ಶವ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿದ್ದ ಪಿಕ್‌ಅಪ್ ವಾಹನವನ್ನು ಮೇಲೆತ್ತಲಾಗಿದೆ. ಮಳೆಯ ನಡುವೆ ನೀರು ರಭಸವಾಗಿ ಹರಿಯುತ್ತಿರುವುದರಿಂದ ಶವ ಪತ್ತೆ ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

    Son falls into Bhadra river – heartbroken mother also commits suicide

  • ಚೀಟಿ ವ್ಯವಹಾರಕ್ಕೆ ಅಮೃತಾಪುರ ಗ್ರಾಮದಲ್ಲಿ ಯುವಕ ಕೊಲೆ

    ಚೀಟಿ ವ್ಯವಹಾರಕ್ಕೆ ಅಮೃತಾಪುರ ಗ್ರಾಮದಲ್ಲಿ ಯುವಕ ಕೊಲೆ

    ತರೀಕೆರೆ: ಚೀಟಿ ಹಣದ ವಿಚಾರವಾಗಿ ಯುವಕನನ್ನು ಹತ್ಯೆ ಮಾಡಿರುವ ಘಟನೆ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜುನಾಯ್ಕ (೨೬) ಎಂಬ ಯುವಕನನ್ನು ರುದ್ರೇಶ್ ನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ.

    ಕೊಲೆ ತಪ್ಪಿಸಲು ಬಂದ ಅವಿನಾಶ್ ಎಂಬಾತನಿಗೂ ರುದ್ರೇಶ್ ಕಚ್ಚಿ ಗಾಯಗೊಳಿಸಿದ್ದಾನೆ. ಅಮೃತಾಪುರ ಸೇವಾಲಾಲ್ ಸಂಘದಲ್ಲಿ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು, ಸಂಜುನಾಯ್ಕ ಚೀಟಿ ಸರಿಯಾಗಿ ಕಟ್ಟದೇ ಗಲಾಟೆ ಮಾಡುತ್ತಿದ್ದ. ಹೀಗಾಗಿ ಚೀಟಿ ಸದಸ್ಯರು ನೀನು ಈ ಚೀಟಿಗೆ ಬೇಡ ಎಂದು ವಾಪಸ್ ಕಳುಹಿಸಿದ್ದಾರೆ.

    ಮನೆಗೆ ಬಂದ ಸಂಜುನಾಯ್ಕ ಚೀಟಿ ಸದಸ್ಯರೊಂದಿಗೆ ಫೋನಿನಲ್ಲಿ ವಾಗ್ವಾದ ನಡೆಸಿದ್ದ, ಈ ವಾಗ್ವಾದ ಜಗಳಕ್ಕೆ ತಿರುಗಿದೆ. ಈ ವೇಳೆ ರುದ್ರೇಶ್‌ನಾಯ್ಕ ಎಂಬಾತ ಸಂಜುನಾಯ್ಕಗೆ ದೊಣ್ಣೆಯಲ್ಲಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೊಲೆ ಮಾಡಿದ ಆರೋಪಿ ರುದ್ರೇಶ್ ನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತರೀಕೆರೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೊಲೆಮಾಡಿದ್ದ ವ್ಯಕ್ತಿಯನ್ನು ೨ ಗಂಟೆಯೊಳಗೆ ಬಂಧಿಸಿದ್ದಾರೆ. ಅಮೃತಾಪುರದಲ್ಲಿ ಭಾನುವಾರ ರಾತ್ರಿ ೧೦ ಗಂಟೆಗೆ ರುದ್ರೇಶನಾಯ್ಕ ದೊಣ್ಣೆಯಿಂದ ಥಳಿಸಿ ಸಂಜುನಾಯ್ಕನನ್ನು ಕೊಲೆಮಾಡಿದ್ದು, ಈ ಕುರಿತು ಯಶವಂತ್‌ನಾಯ್ಕ ತರೀಕೆರೆ ಪೊಲೀಸರಿಗೆ ದೂರು ನೀಡಿದ್ದು, ಕೊಲೆ ಆರೋಪಿ ಬಂಧನಕ್ಕೆ ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ.ಜಯಕುಮಾರ್, ಡಿವೈಎಸ್ಪಿ ಹಾಲಮೂರ್ತಿರಾವ್ ಮಾರ್ಗದರ್ಶನದಲ್ಲಿ ವೃತ್ತನಿರೀಕ್ಷಕ ರಾಮಚಂದ್ರನಾಯಕ್ ನೇತೃತ್ವವದಲ್ಲಿ ೨ ತಂಡಗಳನ್ನು ರಚಿಸಲಾಗಿತ್ತು. ಕೊಲೆ ಪ್ರಕರಣ ದಾಖಲಾದ ೨ ಗಂಟೆಯೊಳಗೆ ಪರಾರಿಯಾಗುತ್ತಿದ್ದ ರುದ್ರೇಶನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ.

    Youth murdered in Amritapura village over lottery ticket deal

  • ಮಗಳು ಸಹಿತ ಮೂವರ ಭೀಕರಹತ್ಯೆ ಮಾಡಿ ತಂದೆ ಆತ್ಮಹತ್ಯೆ

    ಮಗಳು ಸಹಿತ ಮೂವರ ಭೀಕರಹತ್ಯೆ ಮಾಡಿ ತಂದೆ ಆತ್ಮಹತ್ಯೆ

    ಬಾಳೆಹೊನ್ನೂರು: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮನನೊಂದು ಅತ್ತೆ, ನಾದಿನಿ ಹಾಗೂ 7ವರ್ಷದ ಮಗುವನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಕೌಟುಂಬಿಕ ಕಲಹದ ಕಾರಣಕ್ಕೆ ನಾಡ ಬಂದೂಕಿನಿಂದ ಮೂವರ ಹತ್ಯೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯ ಹೋಬಳಿಯ ಮಾಗಲುನಲ್ಲಿ‌ ನಡೆದಿದೆ. ರತ್ನಾಕರ್ ಎಂಬುವವನಿಂದ ಈ ಕೃತ್ಯ ನಡೆದಿದ್ದು, ಸ್ಥಳೀಯ ಖಾಸಗಿ ಶಾಲೆಯಲ್ಲಿ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರತ್ನಾಕರ್ ನನ್ನು ಆತನ ಹೆಂಡತಿ ಬಿಟ್ಟು ಎರಡು ವರ್ಷಗಳಾಗಿದ್ದು ಪತ್ನಿಯಿಂದ ದೂರವಿದ್ದನು.

    ಆ ಸಿಟ್ಟು ಅತ್ತೆ ಮತ್ತು ನಾದಿನಿ ಮೇಲೆ ತೋರಿಸಿದ್ದು ಇಬ್ಬರನ್ನೂ ಹತ್ಯೆಗೈಯುವ ಜೊತೆಗೆ ತನ್ನ ಮಗಳನ್ನು ಸಹ ಗುಂಡಿಕ್ಕಿ ಕೊಲೆಗೈದಿರುವ ಅಮಾನವೀಯ ಕೃತ್ಯ ನಡೆದಿದೆ

    ಕೃತ್ಯದ ನಂತರ ಆರೋಪಿ ಮನೆಯ ಹಿಂಬಾಗದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೆ ಶರಣಾಗುವ ಮುಂಚೆ ವಿಡಿಯೋ ಮಾಡಿದ್ದ ಆರೋಪಿ: ಮೂವರ ಕೊಲೆ ಮಾಡಿದ ಆರೋಪಿ ರತ್ನಾಕರ್ ತಾನು ಆತ್ಮಹತ್ಯೆಗೆ ಶರಣಾಗುವ ಮುನ್ನ ವಿಡಿಯೋ ಮಾಡಿದ್ದು, ತನ್ನ ಪತ್ನಿ ದೂರವಾದ ಬಳಿಕ ಎಲ್ಲರೂ ಮಗುವಿನ ಬಳಿ ತಾಯಿಯ ಬಗ್ಗೆ ಕೇಳುತ್ತಿದ್ದಾರೆ.

    ಆದ್ರೆ ಆಕೆ ಬಿಟ್ಟು ಹೋಗಿ 2 ವರ್ಷ ಆಗಿದೆ. ನನ್ನ ಕುಟುಂಬದವರಿಗೆ ಯಾರಿಗೂ ತಿಳಿಸದೆ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು 47 ಸೆಕೆಂಡ್ ಗಳ ವಿಡಿಯೋ ಮಾಡಿದ್ದಾನೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ, ಬಾಳೆಹೊನ್ನೂರು ಪೊಲೀಸ್ ಠಾಣೆಯ PSI ರವೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    The father who did not commit the gruesome murder of three people, including his daughter

  • ಅಜ್ಜಂಪುರ ತಾಲೂಕಿನಲ್ಲಿ ಲವ್ ಜಿಹಾದ್ ಪ್ರಕರಣದ ಆರೋಪ

    ಅಜ್ಜಂಪುರ ತಾಲೂಕಿನಲ್ಲಿ ಲವ್ ಜಿಹಾದ್ ಪ್ರಕರಣದ ಆರೋಪ

    ಚಿಕ್ಕಮಗಳೂರು: ಕಾಫಿನಾಡಲ್ಲೊಂದು ಲವ್ ಜಿಹಾದ್ ನಡೆದಿರುವ ಬಗ್ಗೆ ಆರೋಪವಿದ್ದು, ಅಪ್ರೋಜ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋದ ಘಟನೆ ಅಜ್ಜಂಪುರ ತಾಲೂಕಿನ ದಂದೂರು ಗ್ರಾಮದಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಹಾಸ್ಟೆಲ್ ನಲ್ಲಿದ್ದು ಪ್ಯಾರಾ ಮೆಡಿಕಲ್ ಓದುತ್ತಿದ್ದ 17 ವರ್ಷದ ಅಪ್ರಾಪ್ತಯನ್ನು ಯುವಕ ಅಪ್ರೋಜ್ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ ಎಂದು ಆರೋಪಿಸಲಾಗಿದೆ.

    ಭಾಲಕಿಯ ಪೋಷಕರಿಗೆ ಆಕೆ ಅಪ್ರೋಜ್ ಎಂಬ ಯುವಕನ ಜೊತೆ ಓಡಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಆ ನಂತರ ಪೋಷಕರು ಆಕೆಯನ್ನು ಕಾಲೇಜು ಬಿಡಿಸಿ ಮನೆಗೆ ಕರೆತಂದು ಸಂಬಂಧಿಕರ ಮನೆಯಲ್ಲಿರಲು ಬಿಟ್ಟಿದ್ದರು.

    ಮೂರು ತಿಂಗಳಿಂದ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪ್ರೋಜ್ ಆ ಮನೆಯಿಂದ ಅಪಹರಿಸಿದ್ದಾನೆ ಎಂದು ಆರೋಪಿಸಲಾಗಿದೆ. ದೋರನಾಳು ಗ್ರಾಮದಲ್ಲಿ ಸಂಬಂಧಿಯೊಬ್ಬರ ಸಾವಿಗೆ ಸಂಬಂಧಿಕರು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

    ಅಪ್ರೋಜ್ ಮೇಲೆ ಆರೋಪಿಸಿ ಬಾಲಕಿಯ ತಂದೆಯಿಂದ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿ ಚಿಕ್ಕಮಗಳೂರು ಪೋಕೋ ಕೋರ್ಟ್ ಗೆ ಹಾಜರಾಗುವ ಸಾಧ್ಯತೆ ಇದೆ.

    Allegation of love jihad case in Ajjampur taluk

  • ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ವೃದ್ದೆ ಬಲಿ

    ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ವೃದ್ದೆ ಬಲಿ

    ಚಿಕ್ಕಮಗಳೂರು: ಸಿಡಿಲು ಬಡಿದು ವೃದ್ದೆ ಬಲಿಯಾಗಿರುವ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ನಡೆದಿದೆ.

    ನಾಗಮ್ಮ (65) ಸಿಡಿಲು ಬಡಿದು ಮೃತಪಟ್ಟ ವೃದ್ದೆ. ಬೇಲೂರು ಮೂಲದ ನಾಗಮ್ಮ ಮಗಳ ಮನೆಯಲ್ಲಿ ಶುಂಠಿ ನಾಟೆ ಮಾಡಲು ಬಂದಿದ್ದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

    ಶುಂಠಿ ನಾಟಿ ಮಾಡುವ ಕೆಲಸ ಇದ್ದಿದ್ದರಿಂದ ನಾಗಮ್ಮ ದಂಪತಿಗಳನ್ನು ಅಳಿಯನೇ ಹೋಗಿ ಕರೆದುಕೊಂಡು ಬಂದಿದ್ದ.

    ಭಾನುವಾರ ಮಧ್ಯಾಹ್ನ ಮಳೆಯ ಬರುತ್ತಿದ್ದ ಸಂದರ್ಭದಲ್ಲಿ ಹೊಲದಲ್ಲಿ 12 ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ ನಾಗಮ್ಮ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸುರಿದ ಮೊದಲ ಮಳೆ ವೃದ್ದೆಯನ್ನು ಬಲಿ ಪಡೆದುಕೊಂಡಿದೆ.

    Elderly woman killed in lightning strike in Kurubarahalli

  • ಸ್ಕೂಟಿಗೆ ಪೊಲೀಸ್ ಜೀಪ್ ಡಿಕ್ಕಿ-ಚಾಲಕ ಸಾವು

    ಸ್ಕೂಟಿಗೆ ಪೊಲೀಸ್ ಜೀಪ್ ಡಿಕ್ಕಿ-ಚಾಲಕ ಸಾವು

    ಚಿಕ್ಕಮಗಳೂರು: ಜೀವರಕ್ಷಣೆ ಮಾಡಬೇಕಾದ ಪೊಲೀಸರೇ ಸ್ಕೂಟಿಯಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಸಂಭವಿಸಿದ್ದು ವೇಗವಾಗಿ ಬಂದ ಪೊಲೀಸ್ ಜೀಪ್ ಹಿಂಬದಿಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ನಿಲ್ಲಿಸಿದೆ ಎಸ್ಕೆಪ್ ಆಗಿದ್ದಾರ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಜೀವ ರಕ್ಷಣೆ ಮಾಡಬೇಕಾದ ಪೊಲೀಸರು ಮಾನವೀಯತೆ ಮರೆತು ವರ್ತಿಸಿರುವ ಘಟನೆ ನಡೆದಿದೆ. ಪೊಲೀಸ್ ಜೀಪ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಈ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಸ್ಕೂಟರ್ ಚಾಲಕನನ್ನು ಗಂಗಾಧರ್ (೪೯) ಎಂದು ಗುರುತಿಸಲಾಗಿದೆ.

    ಸಿಂಗಟಗೆರೆ ಪೊಲೀಸ್ ಠಾಣೆಗೆ ಸೇರಿದ ಜೀಪ್ ವೇಗವಾಗಿ ಬಂದು ಸ್ಕೂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಪೊಲೀಸರು ಜೀಪ್ ನಿಲ್ಲಿಸದೆ ಪರಾರಿಯಾಗಿದ್ದಾರೆ. ಈ ಘಟನೆ ಕಡೂರು – ಮರವಂಜಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಮೃತದೇಹ ತೆಗೆಯಲು ಬಿಡುತ್ತಿಲ್ಲ. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.

    ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಸ್ಕೂಟರ್ ಗೆ ಡಿಕ್ಕಿ ಹೊಡೆದು, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಜೀಪ್ ಚಾಲಕ ಶಿವಕುಮಾರ್ ಅಪಘಾತದ ನಂತರ ವಾಹನ ನಿಲ್ಲಿಸದೆ ಪರಾರಿಯಾಗಿದ್ದನು ಈ ಹಿನ್ನೆಲೆಯಲ್ಲಿ ಆತನನ್ನು ಅಮಾನತ್ತು ಮಾಡಿ ಎಸ್‌ಪಿ ವಿಕ್ರಮ್ ಅಮ್ಮೆ ಆದೇ ಹೊರಡಿಸಿದ್ದಾರೆ.

    ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಅವರ ಆದೇಶದ ಮೇರೆಗೆ ಜೀಪ್ ಚಾಲಕ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಪೊಲೀಸರು ಜೀಪ್ ಅನ್ನು ವಶಕ್ಕೆ ಪಡೆದು ಶಿವಕುಮಾರ್ ನನ್ನು ಬಂಧಿಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Police jeep collides with scooty driver dies

  • ಬೈಕ್ ಕಳ್ಳತನ ಆರೋಪಿ ಬಂಧನ

    ಬೈಕ್ ಕಳ್ಳತನ ಆರೋಪಿ ಬಂಧನ

    ಚಿಕ್ಕಮಗಳೂರು: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೧೦.೫೦ಲಕ್ಷ ರೂ. ಮೌಲ್ಯದ ಹನ್ನೊಂದು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ನಗರದ ನಯಾಜ್ ಪಾಷ ಎಂಬುರು ಬೈಕ್ ಕಳ್ಳತನವಾಗಿದ್ದು, ಅವರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು ಹಾಸನ ಹುಣಸಿನಕೆರೆ ನಿವಾಸಿ ಸೈಯದ್ ಇಮ್ಹಾದ್ (೨೩) ಈತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಹನ್ನೊಂದು ಬೈಕ್‌ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಬಂಧಿತನಿಂದ ಕಳ್ಳತನವಾಗಿದ್ದ ಹನ್ನೊಂದು ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇವುಗಳ ಪೈಕಿ ಆರು ಬೈಕ್‌ಗಳು ಚಿಕ್ಕಮಗ ಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ದೂರು ದಾಖಲಾಗಿದ್ದು ಅವುಗಳಿಗೆ ಸಂಬಂಧಿಸಿದ್ದಾಗಿವೆ. ಒಂದು ಬೈಕ್‌ಗಳು ಬೆಂಗಳೂರು ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.

    ಉಳಿದಂತೆ ನಾಲ್ಕು ಬೈಕ್‌ಗಳು ಬೆಂಗಳೂರು ಒಂದು ಮೈಸೂರು ಒಂದು, ಹಾಸನ ಹೊಳೆನರಸೀಪುರ ಪಟ್ಟಣ ವ್ಯಾಪ್ತಿಯ ಒಂದು, ಒಂದು ಬೈಕ್ ಬೇಲೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಶ್ಲಾಘೀಸಿದ್ದಾರೆ.

    Bike theft suspect arrested

     

  • ಭದ್ರಾನದಿಯಲ್ಲಿ ಮುಳುಗಿ ರಾಜಸ್ತಾನಿ ಯುವಕರ ಸಾವು

    ಭದ್ರಾನದಿಯಲ್ಲಿ ಮುಳುಗಿ ರಾಜಸ್ತಾನಿ ಯುವಕರ ಸಾವು

    ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ರಾಜಸ್ತಾನಿ ಯುವಕರ ಪೈಕಿ ಇಬ್ಬರು ಭದ್ರಾನದಿಯಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

    ಭದ್ರಾನದಿಯ ವಶಿಷ್ಠಾಶ್ರಮದ ಸಂಜೀವ ಮೆಟ್ಟಿಲಿನ ತೂಗುಸೇತುವೆ ಬಳಿ ದುರ್ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಚಿನ್ನದ ಕೆಲಸ ಮಾಡುವ ರಾಜಸ್ತಾನ ಮೂಲದ ಯುವಕರಾದ ಜಗದೀಶ್(೩೩) ಮತ್ತು ಚೋಟಾ ಸಿಂಗ್(೨೮) ಮೃತಪಟ್ಟಿದ್ದಾರೆ. ಹೋಳಿ ಹಬ್ಬ ರಜೆ ಹಿನ್ನಲೆ ೧೨ ಜನ ಯುವಕರು ಎರಡು ಕಾರಿನಲ್ಲಿ ಶನಿವಾರ ಕಳಸಕ್ಕೆ ಬಂದಿದ್ದರು.

    ಕಳಸ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿದ ಯುವಕರು ಭಾನುವಾರ ಬೆಂಗಳೂರಿಗೆ ಮರಳುವ ಮೊದಲು ವಿಶಿಷ್ಠಾಶ್ರಮದ ತೂಗು ಸೇತುವೆ ನೋಡಲು ತೆರಳಿದ್ದರು. ೧೦ಜನ ಸ್ನೇಹಿತರು ತೂಗುಸೇತುವೆ ನೋಡಲು ತೆರಳಿದ್ದ ವೇಳೆ ಇಬ್ಬರು ಯುವಕರು ನೀರಿನಲ್ಲಿ ಈಜಾಡಲು ತೆರಳಿದ್ದಾರೆ.

    ಈಜು ಬಾರದೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಳುಗುತಜ್ಞ ಭಾಸ್ಕರ್ ನೆರವಿನಿಂದ ಇಬ್ಬರ ಮೃತದೇಹವನ್ನು ಹೊರತಗೆಯಲಾಗಿದ್ದು, ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Rajasthani youth dies after drowning in Bhadra river