Tag: Government’s pro-people scheme at people’s doorsteps

  • ಸರ್ಕಾರದ ಜನಪರ ಯೋಜನೆ ಜನರ ಮನೆ ಬಾಗಿಲಿಗೆ

    ಸರ್ಕಾರದ ಜನಪರ ಯೋಜನೆ ಜನರ ಮನೆ ಬಾಗಿಲಿಗೆ

    ಚಿಕ್ಕಮಗಳೂರು: ಜನಪರವಾದ ಆಡಳಿತದ ಮೂಲಕ ಜನರ ಮನೆಬಾಗಿಲಿಗೆ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

    ಅವರು ಇಂದು ಹಿರೇಕೊಳಲೆ ಗ್ರಾ.ಪಂ ವ್ಯಾಪ್ತಿಯ ಹೊಸಪುರ ಹಾಗೂ ಅಕ್ಕಪಕ್ಕದ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ‘ವಾಸಿಸುವವನೇ ಮನೆ ಒಡೆಯ’ ಯೋಜನೆಯಡಿ ಹಕ್ಕುಪತ್ರ, ಇ-ಸ್ವತು ವಿತರಿಸಿ ಮಾತನಾಡಿದರು.

    ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯಡಿ ೪ ಲಕ್ಷಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಭೈರೇಗೌಡ ಈ ಯೋಜನೆಗೆ ಚಾಲನೆ ನೀಡಿದ್ದು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ೩೫೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದ್ದು, ಒಟ್ಟು ೨೮೦೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಗುರಿಹೊಂದಲಾಗಿದೆ ಎಂದರು.

    ೧೯೭೭-೭೮ ರಲ್ಲಿ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜ್ ಅರಸ್ ಅವರ ಅವಧಿಯಲ್ಲಿ ‘ಉಳುವವನೇ ಭೂ ಒಡೆಯ’ ಎಂಬ ಕಾನೂನು ಜಾರಿಗೆ ತರಲಾಗಿತ್ತು. ಈ ಮೂಲಕ ಹಲವರಿಗೆ ಭೂಮಿ ಲಭಿಸಿತು ಎಂದು ಹೇಳಿದರು.

    ಜಾತಿ, ಪಕ್ಷ, ಧರ್ಮ ನೋಡದೆ ಈ ಯೋಜನೆಯನ್ನು ಜಾರಿಮಾಡಿ, ಶ್ರೀಮತಿ ಇಂದಿರಾ ಗಾಂಧಿಯವರು ೨೦ ಅಂಶಗಳ ಕಾರ್ಯಕ್ರಮಗಳ ಮೂಲಕ ದೇಶದ ದೀನದಲಿತರ, ಬಡವರ ಏಳಿಗೆಗಾಗಿ ಇಂತಹ ಜನಪರವಾದ ಯೋಜನೆಗಳನ್ನು ರೂಪಿಸಿದ್ದರು ಎಂದು ಸ್ಮರಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೃಷಿ ಕುಟುಂಬ, ರೈತ ಕಾರ್ಮಿಕ, ಮಧ್ಯಮ ವರ್ಗದವರ ಸಾಮಾನ್ಯ ಜನರ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಅದಕ್ಕೆ ಪೂರಕವಾಗಿ ನಿಮ್ಮ ಪ್ರತಿನಿಧಿಯಾಗಿದ್ದೇನೆ, ಬಡಜನರ ಕಷ್ಟ ಅರಿತು ಮುಖ್ಯಮಂತ್ರಿಗಳು ೫ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಸದೃಢರನ್ನಾಗಿಸಿಲು ಶ್ರಮಿಸುತ್ತಿದ್ದಾರೆಂದು ಶ್ಲಾಘಿಸಿದರು.

    ನಾಡು-ನುಡಿ, ನೆಲ-ಜಲ ಮುಂತಾದವುಗಳಿಗೆ ಮೊದಲ ಆದ್ಯತೆ ನೀಡುವುದರ ಮೂಲಕ ದೇಶಪ್ರೇಮಿಗಳಾಗಿ ಹಂತ ಹಂತವಾಗಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಕ್ಷೇತ್ರದ ೩೪ ಗ್ರಾಮ ಪಂಚಾಯಿತಿಗಳಲ್ಲಿ ತಲಾ ೬೦ ಲಕ್ಷ ರೂ ನೀಡುವ ಮೂಲಕ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಅದೇ ರೀತಿ ನಾರುಕಂತೆ ಮಠದ ರಸ್ತೆಗೆ ೫೦ ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಹಿರೇಕೊಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾಸುನಿಲ್, ತಾಲ್ಲೂಕು ಪಂಚಾಯಿತಿ ಇಓ ವಿಜಯ್‌ಕುಮಾರ್, ತಹಸೀಲ್ದಾರ್ ಕಚೇರಿಯ ಪ್ರಸನ್ನ, ಸಂತೋಷ್, ಹೆಚ್.ಪಿ ಮಂಜೇಗೌಡ, ಜಯರಾಜ್ ಅರಸ್, ಪ್ರವೀಣ್‌ಬೆಟ್ಟಗೆರೆ ಯಶ್ವಂತ್, ಶಿವಕುಮಾರ, ರವಿ,. ಸುರೇಶ, ಪ್ರಸನ್ನ, ಕೇಶವ, ಚಂದ್ರಮೌಳಿ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಪಿಡಿಓ ವಿಜಯ ಸ್ವಾಗತಿಸಿದರು.

    Government’s pro-people scheme at people’s doorsteps